Homeಅಂತರಾಷ್ಟ್ರೀಯಉಕ್ರೇನ್ ಮೇಲೆ ಯುದ್ಧ ಸಾರಿದ ರಷ್ಯಾ; ವಿವಿಧ ರಾಷ್ಟ್ರಗಳ ಮುಖಂಡರು ಹೇಳಿದ್ದೇನು?

ಉಕ್ರೇನ್ ಮೇಲೆ ಯುದ್ಧ ಸಾರಿದ ರಷ್ಯಾ; ವಿವಿಧ ರಾಷ್ಟ್ರಗಳ ಮುಖಂಡರು ಹೇಳಿದ್ದೇನು?

ಉಕ್ರೇನ್ ಬಿಕ್ಕಟ್ಟಿನ ಬಗ್ಗೆ ಭಾರತವು ತಟಸ್ಥ ನಿಲುವನ್ನು ಹೊಂದಿದೆ.

- Advertisement -
- Advertisement -

ರಷ್ಯಾ ಅಧ್ಯಕ್ಷ ವ್ಲಾದಿಮರ್ ಪುಟಿನ್ ಉಕ್ರೇನ್ ಮೇಲೆ ಯುದ್ಧ ಸಾರಿದ್ದಾರೆ. ರಷ್ಯಾದ ಪಡೆಗಳು ಉಕ್ರೇನ್ ನೆಲ ತಲುಪಿದ್ದು ಮಿಲಿಟರಿ ಕಾರ್ಯಾಚರಣೆ ಆರಂಭಿಸಿವೆ. ಉಕ್ರೇನ್ NATOಗೆ ಸದಸ್ಯ ರಾಷ್ಟ್ರವಾಗಲು ಮುಂದಾಗಿರುವುದನ್ನು ವಿರೋಧಿಸಿ ಮತ್ತು ಉಕ್ರೇನ್‌ ದೇಶದ ಪೂರ್ವದಲ್ಲಿನ ಡಾನ್‌ಬಾಸ್ ಎಂದು ಕರೆಯಲ್ಪಡುವ ಪ್ರದೇಶದಲ್ಲಿನ ರಷ್ಯಾ ಬೆಂಬಲಿತ ಪ್ರತ್ಯೇಕತಾವಾದಿಗಳನ್ನು ರಕ್ಷಿಸಲು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಯುದ್ದ ಅನಿವಾರ್ಯ ಎಂದಿದ್ದಾರೆ. ಈ ಕುರಿತು ಬೇರೆ ಬೇರೆ ರಾಷ್ಟ್ರಗಳ ಮುಖಂಡರು ಹೇಳಿದ್ದು ಇಲ್ಲಿದೆ.

ರಷ್ಯಾ ರಕ್ತಪಾತ ಮತ್ತು ವಿನಾಶದ ಮಾರ್ಗವನ್ನು ಆರಿಸಿಕೊಂಡಿದೆ – ಇಂಗ್ಲೆಂಡ್

ಉಕ್ರೇನ್‌ನಲ್ಲಿನ ಭೀಕರ ಘಟನೆಗಳಿಂದ ದಿಗ್ಭ್ರಮೆಗೊಂಡಿದ್ದೇನೆ ಮತ್ತು ಮುಂದಿನ ಹಂತಗಳನ್ನು ಚರ್ಚಿಸಲು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಾತನಾಡಿದ್ದೇನೆ. ರಷ್ಯಾ ಅಧ್ಯಕ್ಷ ಪುಟಿನ್ ಉಕ್ರೇನ್ ಮೇಲೆ ಈ ಅಪ್ರಚೋದಿತ ದಾಳಿಯನ್ನು ನಡೆಸುವ ಮೂಲಕ ರಕ್ತಪಾತ ಮತ್ತು ವಿನಾಶದ ಮಾರ್ಗವನ್ನು ಆರಿಸಿಕೊಂಡಿದ್ದಾರೆ. ಇಂಗ್ಲೆಂಡ್ ಮತ್ತು ನಮ್ಮ ಮಿತ್ರರಾಷ್ಟ್ರಗಳು ಈ ಕುರಿತು ನಿರ್ಣಾಯಕವಾಗಿ ಪ್ರತಿಕ್ರಿಯಿಸುತ್ತವೆ”. – ಬೋರಿಸ್ ಜಾನ್ಸನ್, ಇಂಗ್ಲೆಂಡ್ ಪ್ರಧಾನಿ.

ಅಂತರರಾಷ್ಟ್ರೀಯ ಸಂಬಂಧದ ಅಡಿಪಾಯವನ್ನು ಅಲುಗಾಡಿಸುತ್ತದೆ- ಜಪಾನ್

“ಉಕ್ರೇನ್ ಮೇಲಿನ ರಷ್ಯಾದ ದಾಳಿಯು ಅಂತರರಾಷ್ಟ್ರೀಯ ಸಂಬಂಧದ ಅಡಿಪಾಯವನ್ನು ಅಲುಗಾಡಿಸುತ್ತದೆ. ನಾವು ರಷ್ಯಾವನ್ನು ಬಲವಾಗಿ ಖಂಡಿಸುತ್ತೇವೆ. ಇಂತಹ ಯಥಾಸ್ಥಿತಿಯನ್ನು ಬದಲಾಯಿಸುವ ಏಕಪಕ್ಷೀಯ ಪ್ರಯತ್ನಗಳನ್ನು ಅನುಮತಿಸುವುದಿಲ್ಲ. ಇದನ್ನು ತಡೆಯಲು ಅಮೆರಿಕ ಸೇರಿದಂತೆ ಅಂತರರಾಷ್ಟ್ರೀಯ ಸಮುದಾಯದೊಂದಿಗೆ ಸೇರಿ ಪ್ರಯತ್ನಗಳನ್ನು ಸಂಘಟಿಸುತ್ತೇವೆ ಮತ್ತು ಇದನ್ನು ತ್ವರಿತವಾಗಿ ನಿಭಾಯಿಸುತ್ತೇವೆ” – ಫ್ಯೂಮಿಯೊ ಕಿಶಿಡಾ, ಜಪಾನ್ ಪ್ರಧಾನಿ.

ರಷ್ಯಾದ ಮೇಲೆ ಆರ್ಥಿಕ ನಿರ್ಬಂಧ ವಿಧಿಸುತ್ತೇವೆ – ಆಸ್ಟ್ರೇಲಿಯಾ

“ರಷ್ಯಾ ಯುದ್ಧವನ್ನು ಆಯ್ಕೆ ಮಾಡಿದೆ. ಇಂತಹ ಕ್ರೂರ ಆಕ್ರಮಣ ಮತ್ತು ಏಕಪಕ್ಷೀಯ ಪ್ರತಿಕೂಲ ಕ್ರಮಗಳನ್ನು ನಾವು ಖಂಡಿಸುತ್ತೇವೆ. ಕೂಡಲೇ ರಷ್ಯಾ ತನ್ನ ಸೇನೆಯನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತೇನೆ. ಈ ಅತಿರೇಕದ ಕೃತ್ಯಗಳಿಗೆ ರಷ್ಯಾದ ಅಧಿಕಾರಿಗಳು ಮತ್ತು ಘಟಕಗಳನ್ನು ನಾವು ಹೊಣೆಗಾರರನ್ನು ಗುರುತಿಸುತ್ತೇವೆ ಮತ್ತು ಆಸ್ಟ್ರೇಲಿಯಾವು ರಷ್ಯಾ ವಿರುದ್ಧ ಮತ್ತಷ್ಟು ಆರ್ಥಿಕ ನಿರ್ಬಂಧಗಳನ್ನು ವಿಧಿಸುತ್ತದೆ” – ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್

ಫ್ರಾನ್ಸ್ ಖಂಡಿಸುತ್ತದೆ

“ಉಕ್ರೇನ್ ವಿರುದ್ಧ ಯುದ್ಧ ಮಾಡುವ ರಷ್ಯಾದ ನಿರ್ಧಾರವನ್ನು ಫ್ರಾನ್ಸ್ ದೃಢವಾಗಿ ಖಂಡಿಸುತ್ತದೆ. ರಷ್ಯಾ ತನ್ನ ಎಲ್ಲಾ ಮಿಲಿಟರಿ ಕಾರ್ಯಾಚರಣೆಗಳನ್ನು ತಕ್ಷಣವೇ ಕೊನೆಗೊಳಿಸಬೇಕು.- ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್

ಉಕ್ರೇನ್ ಜನರೊಂದಿಗೆ ನಿಲ್ಲುತ್ತೆನೆ- ಅಮೆರಿಕ

ರಷ್ಯಾದ ಮಿಲಿಟರಿ ಪಡೆಗಳಿಂದ ಅಪ್ರಚೋದಿತ ಮತ್ತು ನ್ಯಾಯಸಮ್ಮತವಲ್ಲದ ದಾಳಿಯಿಂದ ಬಳಲುತ್ತಿರುವ ಉಕ್ರೇನ್ ಜನರೊಂದಿಗೆ ನಿಲ್ಲುತ್ತೇನೆ. ಈ ದಾಳಿಯು ತರುವ ಸಾವು ಮತ್ತು ವಿನಾಶಕ್ಕೆ ರಷ್ಯಾ ಮಾತ್ರ ಕಾರಣವಾಗಿದೆ ಮತ್ತು ಪ್ರಪಂಚವು ರಷ್ಯಾವನ್ನು ಹೊಣೆಗಾರರನ್ನಾಗಿ ಮಾಡುತ್ತದೆ. ಇದಕ್ಕೆ ಅಮೆರಿಕ ಮತ್ತು ಅದರ ಮಿತ್ರರಾಷ್ಟ್ರಗಳು ಮತ್ತು ಪಾಲುದಾರರು ಒಗ್ಗಟ್ಟಿನಿಂದ ಮತ್ತು ನಿರ್ಣಾಯಕ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ”. ಜೋ ಬೈಡನ್, ಅಮೆರಿಕ ಅಧ್ಯಕ್ಷ

ಅನ್ಯಾಯ ಮತ್ತು ಅಸಮರ್ಥನೀಯ- ಇಟಲಿ

ಉಕ್ರೇನ್ ಮೇಲಿನ ರಷ್ಯಾದ ದಾಳಿಯ ಅನ್ಯಾಯ ಮತ್ತು ಅಸಮರ್ಥನೀಯ. ಇಟಲಿ ಸರ್ಕಾರವು ಉಕ್ರೇನ್ ಮೇಲೆ ರಷ್ಯಾದ ದಾಳಿಯನ್ನು ಖಂಡಿಸುತ್ತದೆ. ಈ ನಾಟಕೀಯ ಕ್ಷಣದಲ್ಲಿ ಇಟಲಿ ಉಕ್ರೇನಿಯನ್ ಜನರು ಮತ್ತು ಸಂಸ್ಥೆಗಳಿಗೆ ಬೆಂಬಲ ನೀಡುತ್ತದೆ. ನಾವು ಯುರೋಪಿಯನ್ ಮತ್ತು ನ್ಯಾಟೋ ಮಿತ್ರರಾಷ್ಟ್ರಗಳೊಂದಿಗೆ ತಕ್ಷಣವೇ ಪ್ರತಿಕ್ರಿಯಿಸಲು, ಏಕತೆ ಮತ್ತು ನಿರ್ಣಯದೊಂದಿಗೆ ಕೆಲಸ ಮಾಡುತ್ತಿದ್ದೇವೆ” ಇಟಾಲಿಯನ್ ಪ್ರಧಾನಿ ಮಾರಿಯೋ ಡ್ರಾಘಿ

ಎಂತಹ ಸಂಭ್ರಮದ ಕ್ಷಣದಲ್ಲಿ ನಾನಿಲ್ಲಿಗೆ ಬಂದಿದ್ದೇನೆ- ಪಾಕ್ ಪ್ರಧಾನಿ ಇಮ್ರಾನ್ ಖಾನ್

ಎರಡು ದಶಕಗಳ ನಂತರ ಪಾಕ್ ಪ್ರಧಾನಿಯೊಬ್ಬರು ರಷ್ಯಾಗೆ ಭೇಟಿ ನೀಡಿದ್ದಾರೆ. ಆ ಸಮಯದಲ್ಲಿ ರಷ್ಯಾ ಉಕ್ರೇನ್ ಮೇಲೆ ಯುದ್ಧ ಘೋಷಿಸಿದೆ. ಈ ಸಂದರ್ಭದಲ್ಲಿ ಮೊದಲ ಬಾರಿಗೆ ಭೇಟಿ ನೀಡಿದ ಪಾಕ್ ಪಿಎಂ ಇಮ್ರಾನ್ ಖಾನ್ “ಎಂತಹ ಸಂಭ್ರಮದ ಕ್ಷಣದಲ್ಲಿ ನಾನಿಲ್ಲಿಗೆ ಬಂದಿದ್ದೇನೆ” ಎಂದು ರಷ್ಯಾ ಅಧಿಕಾರಿಗಳಿಗೆ ಹೇಳುವ ವಿಡಿಯೋವೊಂದು ಸಾಮಾಜಿಕ ಜಾಲತಾನಗಳಲ್ಲಿ ವೈರಲ್ ಆಗಿದೆ.

ಭಾರತದ ನಿಲುವು ಏನು?

ರಷ್ಯಾದ ಯುದ್ಧದ ನಿರ್ಧಾರವನ್ನು ಕಟುವಾಗಿ ಟೀಕಿಸದ ಕೆಲವೇ ದೇಶಗಳಲ್ಲಿ ಭಾರತವೂ ಒಂದು. ಯುಎನ್ ತುರ್ತು ಸಭೆಯಲ್ಲಿ ಭಾರತವು ಎರಡು ಯುರೋಪಿಯನ್ ರಾಷ್ಟ್ರಗಳ ನಡುವಿನ ಉದ್ವಿಗ್ನತೆಯ ಬಗ್ಗೆ ಮಾತ್ರ ಪ್ರಸ್ತಾಪಿಸಿದೆ ಮತ್ತು ಎರಡು ರಾಷ್ಟ್ರಗಳು ಅತ್ಯಂತ ಸಂಯಮ  ಕಾಯ್ದುಕೊಳ್ಳುವಂತೆ ಕರೆ ನೀಡಿದೆ. ಇದೇ ಸಂದರ್ಭದಲ್ಲಿ ರಷ್ಯಾ ಮತ್ತು ಭಾರತದ ನಡುವಿನ ಪಾಲುದಾರಿಕೆ ಸಂಬಂಧ ಮುಂದುವರಿಯುತ್ತದೆ ಎಂದು ರಷ್ಯಾದ ರಾಯಭಾರಿ ಕಚೇರಿಯ ಉಸ್ತುವಾರಿ ರೋಮನ್ ಬಾಬುಶ್ಕಿನ್ ಹೇಳಿದ್ದಾರೆ.

“ಉಕ್ರೇನ್ ಬಿಕ್ಕಟ್ಟಿನ ಬಗ್ಗೆ ಭಾರತವು ತಟಸ್ಥ ನಿಲುವನ್ನು ಹೊಂದಿದೆ. ಅದನ್ನು ನಾವು ಸ್ವಾಗತಿಸುತ್ತೇವೆ. ರಷ್ಯಾ ಮತ್ತು ಭಾರತವು ಪರಸ್ಪರ ದೊಡ್ಡ ಯೋಜನೆಗಳನ್ನು ಹೊಂದಿದ್ದೇವೆ. ನಮ್ಮ ಪಾಲುದಾರಿಕೆಯು ಈಗ ಯಾವ ಮಟ್ಟದ್ದಲ್ಲಿದೆಯೋ, ಮುಂದೆಯೂ ಹಾಗೆಯೇ ಇರುತ್ತದೆ ಎಂದು ನಾವು ಭಾವಿಸುತ್ತೇವೆ. ಉಕ್ರೇನ್ ಜೊತೆಗಿನ ಬಿಕ್ಕಟ್ಟು ರಕ್ಷಣಾ ಕ್ಷೇತ್ರಗಳನ್ನು ಒಳಗೊಂಡಂತೆ ಭಾರತ-ರಷ್ಯಾ ಸಂಬಂಧಗಳ ಮೇಲೆ ಪರಿಣಾಮ ಬೀರುವುದಿಲ್ಲ. ಮುಂದಿನ ತಿಂಗಳು ಗುಜರಾತ್‌ನಲ್ಲಿ ನಡೆಯಲಿರುವ ಡೆಫ್ ಎಕ್ಸ್ಪೋದಲ್ಲಿ ರಷ್ಯಾದ ಭಾಗವಹಿಸುತ್ತದೆ” ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ರಷ್ಯಾದಿಂದ ಉಕ್ರೇನ್ ಮೇಲೆ ದಾಳಿ ಸಂದರ್ಭದಲ್ಲಿ ರಷ್ಯಾಗೆ ಪಾಕ್ ಪಿಎಂ ಇಮ್ರಾನ್ ಖಾನ್ ಭೇಟಿ: ಅಮೆರಿಕ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....