Homeಅಂತರಾಷ್ಟ್ರೀಯಉಕ್ರೇನ್ ಮೇಲೆ ಯುದ್ಧ ಸಾರಿದ ರಷ್ಯಾ; ವಿವಿಧ ರಾಷ್ಟ್ರಗಳ ಮುಖಂಡರು ಹೇಳಿದ್ದೇನು?

ಉಕ್ರೇನ್ ಮೇಲೆ ಯುದ್ಧ ಸಾರಿದ ರಷ್ಯಾ; ವಿವಿಧ ರಾಷ್ಟ್ರಗಳ ಮುಖಂಡರು ಹೇಳಿದ್ದೇನು?

ಉಕ್ರೇನ್ ಬಿಕ್ಕಟ್ಟಿನ ಬಗ್ಗೆ ಭಾರತವು ತಟಸ್ಥ ನಿಲುವನ್ನು ಹೊಂದಿದೆ.

- Advertisement -
- Advertisement -

ರಷ್ಯಾ ಅಧ್ಯಕ್ಷ ವ್ಲಾದಿಮರ್ ಪುಟಿನ್ ಉಕ್ರೇನ್ ಮೇಲೆ ಯುದ್ಧ ಸಾರಿದ್ದಾರೆ. ರಷ್ಯಾದ ಪಡೆಗಳು ಉಕ್ರೇನ್ ನೆಲ ತಲುಪಿದ್ದು ಮಿಲಿಟರಿ ಕಾರ್ಯಾಚರಣೆ ಆರಂಭಿಸಿವೆ. ಉಕ್ರೇನ್ NATOಗೆ ಸದಸ್ಯ ರಾಷ್ಟ್ರವಾಗಲು ಮುಂದಾಗಿರುವುದನ್ನು ವಿರೋಧಿಸಿ ಮತ್ತು ಉಕ್ರೇನ್‌ ದೇಶದ ಪೂರ್ವದಲ್ಲಿನ ಡಾನ್‌ಬಾಸ್ ಎಂದು ಕರೆಯಲ್ಪಡುವ ಪ್ರದೇಶದಲ್ಲಿನ ರಷ್ಯಾ ಬೆಂಬಲಿತ ಪ್ರತ್ಯೇಕತಾವಾದಿಗಳನ್ನು ರಕ್ಷಿಸಲು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಯುದ್ದ ಅನಿವಾರ್ಯ ಎಂದಿದ್ದಾರೆ. ಈ ಕುರಿತು ಬೇರೆ ಬೇರೆ ರಾಷ್ಟ್ರಗಳ ಮುಖಂಡರು ಹೇಳಿದ್ದು ಇಲ್ಲಿದೆ.

ರಷ್ಯಾ ರಕ್ತಪಾತ ಮತ್ತು ವಿನಾಶದ ಮಾರ್ಗವನ್ನು ಆರಿಸಿಕೊಂಡಿದೆ – ಇಂಗ್ಲೆಂಡ್

ಉಕ್ರೇನ್‌ನಲ್ಲಿನ ಭೀಕರ ಘಟನೆಗಳಿಂದ ದಿಗ್ಭ್ರಮೆಗೊಂಡಿದ್ದೇನೆ ಮತ್ತು ಮುಂದಿನ ಹಂತಗಳನ್ನು ಚರ್ಚಿಸಲು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಾತನಾಡಿದ್ದೇನೆ. ರಷ್ಯಾ ಅಧ್ಯಕ್ಷ ಪುಟಿನ್ ಉಕ್ರೇನ್ ಮೇಲೆ ಈ ಅಪ್ರಚೋದಿತ ದಾಳಿಯನ್ನು ನಡೆಸುವ ಮೂಲಕ ರಕ್ತಪಾತ ಮತ್ತು ವಿನಾಶದ ಮಾರ್ಗವನ್ನು ಆರಿಸಿಕೊಂಡಿದ್ದಾರೆ. ಇಂಗ್ಲೆಂಡ್ ಮತ್ತು ನಮ್ಮ ಮಿತ್ರರಾಷ್ಟ್ರಗಳು ಈ ಕುರಿತು ನಿರ್ಣಾಯಕವಾಗಿ ಪ್ರತಿಕ್ರಿಯಿಸುತ್ತವೆ”. – ಬೋರಿಸ್ ಜಾನ್ಸನ್, ಇಂಗ್ಲೆಂಡ್ ಪ್ರಧಾನಿ.

ಅಂತರರಾಷ್ಟ್ರೀಯ ಸಂಬಂಧದ ಅಡಿಪಾಯವನ್ನು ಅಲುಗಾಡಿಸುತ್ತದೆ- ಜಪಾನ್

“ಉಕ್ರೇನ್ ಮೇಲಿನ ರಷ್ಯಾದ ದಾಳಿಯು ಅಂತರರಾಷ್ಟ್ರೀಯ ಸಂಬಂಧದ ಅಡಿಪಾಯವನ್ನು ಅಲುಗಾಡಿಸುತ್ತದೆ. ನಾವು ರಷ್ಯಾವನ್ನು ಬಲವಾಗಿ ಖಂಡಿಸುತ್ತೇವೆ. ಇಂತಹ ಯಥಾಸ್ಥಿತಿಯನ್ನು ಬದಲಾಯಿಸುವ ಏಕಪಕ್ಷೀಯ ಪ್ರಯತ್ನಗಳನ್ನು ಅನುಮತಿಸುವುದಿಲ್ಲ. ಇದನ್ನು ತಡೆಯಲು ಅಮೆರಿಕ ಸೇರಿದಂತೆ ಅಂತರರಾಷ್ಟ್ರೀಯ ಸಮುದಾಯದೊಂದಿಗೆ ಸೇರಿ ಪ್ರಯತ್ನಗಳನ್ನು ಸಂಘಟಿಸುತ್ತೇವೆ ಮತ್ತು ಇದನ್ನು ತ್ವರಿತವಾಗಿ ನಿಭಾಯಿಸುತ್ತೇವೆ” – ಫ್ಯೂಮಿಯೊ ಕಿಶಿಡಾ, ಜಪಾನ್ ಪ್ರಧಾನಿ.

ರಷ್ಯಾದ ಮೇಲೆ ಆರ್ಥಿಕ ನಿರ್ಬಂಧ ವಿಧಿಸುತ್ತೇವೆ – ಆಸ್ಟ್ರೇಲಿಯಾ

“ರಷ್ಯಾ ಯುದ್ಧವನ್ನು ಆಯ್ಕೆ ಮಾಡಿದೆ. ಇಂತಹ ಕ್ರೂರ ಆಕ್ರಮಣ ಮತ್ತು ಏಕಪಕ್ಷೀಯ ಪ್ರತಿಕೂಲ ಕ್ರಮಗಳನ್ನು ನಾವು ಖಂಡಿಸುತ್ತೇವೆ. ಕೂಡಲೇ ರಷ್ಯಾ ತನ್ನ ಸೇನೆಯನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತೇನೆ. ಈ ಅತಿರೇಕದ ಕೃತ್ಯಗಳಿಗೆ ರಷ್ಯಾದ ಅಧಿಕಾರಿಗಳು ಮತ್ತು ಘಟಕಗಳನ್ನು ನಾವು ಹೊಣೆಗಾರರನ್ನು ಗುರುತಿಸುತ್ತೇವೆ ಮತ್ತು ಆಸ್ಟ್ರೇಲಿಯಾವು ರಷ್ಯಾ ವಿರುದ್ಧ ಮತ್ತಷ್ಟು ಆರ್ಥಿಕ ನಿರ್ಬಂಧಗಳನ್ನು ವಿಧಿಸುತ್ತದೆ” – ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್

ಫ್ರಾನ್ಸ್ ಖಂಡಿಸುತ್ತದೆ

“ಉಕ್ರೇನ್ ವಿರುದ್ಧ ಯುದ್ಧ ಮಾಡುವ ರಷ್ಯಾದ ನಿರ್ಧಾರವನ್ನು ಫ್ರಾನ್ಸ್ ದೃಢವಾಗಿ ಖಂಡಿಸುತ್ತದೆ. ರಷ್ಯಾ ತನ್ನ ಎಲ್ಲಾ ಮಿಲಿಟರಿ ಕಾರ್ಯಾಚರಣೆಗಳನ್ನು ತಕ್ಷಣವೇ ಕೊನೆಗೊಳಿಸಬೇಕು.- ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್

ಉಕ್ರೇನ್ ಜನರೊಂದಿಗೆ ನಿಲ್ಲುತ್ತೆನೆ- ಅಮೆರಿಕ

ರಷ್ಯಾದ ಮಿಲಿಟರಿ ಪಡೆಗಳಿಂದ ಅಪ್ರಚೋದಿತ ಮತ್ತು ನ್ಯಾಯಸಮ್ಮತವಲ್ಲದ ದಾಳಿಯಿಂದ ಬಳಲುತ್ತಿರುವ ಉಕ್ರೇನ್ ಜನರೊಂದಿಗೆ ನಿಲ್ಲುತ್ತೇನೆ. ಈ ದಾಳಿಯು ತರುವ ಸಾವು ಮತ್ತು ವಿನಾಶಕ್ಕೆ ರಷ್ಯಾ ಮಾತ್ರ ಕಾರಣವಾಗಿದೆ ಮತ್ತು ಪ್ರಪಂಚವು ರಷ್ಯಾವನ್ನು ಹೊಣೆಗಾರರನ್ನಾಗಿ ಮಾಡುತ್ತದೆ. ಇದಕ್ಕೆ ಅಮೆರಿಕ ಮತ್ತು ಅದರ ಮಿತ್ರರಾಷ್ಟ್ರಗಳು ಮತ್ತು ಪಾಲುದಾರರು ಒಗ್ಗಟ್ಟಿನಿಂದ ಮತ್ತು ನಿರ್ಣಾಯಕ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ”. ಜೋ ಬೈಡನ್, ಅಮೆರಿಕ ಅಧ್ಯಕ್ಷ

ಅನ್ಯಾಯ ಮತ್ತು ಅಸಮರ್ಥನೀಯ- ಇಟಲಿ

ಉಕ್ರೇನ್ ಮೇಲಿನ ರಷ್ಯಾದ ದಾಳಿಯ ಅನ್ಯಾಯ ಮತ್ತು ಅಸಮರ್ಥನೀಯ. ಇಟಲಿ ಸರ್ಕಾರವು ಉಕ್ರೇನ್ ಮೇಲೆ ರಷ್ಯಾದ ದಾಳಿಯನ್ನು ಖಂಡಿಸುತ್ತದೆ. ಈ ನಾಟಕೀಯ ಕ್ಷಣದಲ್ಲಿ ಇಟಲಿ ಉಕ್ರೇನಿಯನ್ ಜನರು ಮತ್ತು ಸಂಸ್ಥೆಗಳಿಗೆ ಬೆಂಬಲ ನೀಡುತ್ತದೆ. ನಾವು ಯುರೋಪಿಯನ್ ಮತ್ತು ನ್ಯಾಟೋ ಮಿತ್ರರಾಷ್ಟ್ರಗಳೊಂದಿಗೆ ತಕ್ಷಣವೇ ಪ್ರತಿಕ್ರಿಯಿಸಲು, ಏಕತೆ ಮತ್ತು ನಿರ್ಣಯದೊಂದಿಗೆ ಕೆಲಸ ಮಾಡುತ್ತಿದ್ದೇವೆ” ಇಟಾಲಿಯನ್ ಪ್ರಧಾನಿ ಮಾರಿಯೋ ಡ್ರಾಘಿ

ಎಂತಹ ಸಂಭ್ರಮದ ಕ್ಷಣದಲ್ಲಿ ನಾನಿಲ್ಲಿಗೆ ಬಂದಿದ್ದೇನೆ- ಪಾಕ್ ಪ್ರಧಾನಿ ಇಮ್ರಾನ್ ಖಾನ್

ಎರಡು ದಶಕಗಳ ನಂತರ ಪಾಕ್ ಪ್ರಧಾನಿಯೊಬ್ಬರು ರಷ್ಯಾಗೆ ಭೇಟಿ ನೀಡಿದ್ದಾರೆ. ಆ ಸಮಯದಲ್ಲಿ ರಷ್ಯಾ ಉಕ್ರೇನ್ ಮೇಲೆ ಯುದ್ಧ ಘೋಷಿಸಿದೆ. ಈ ಸಂದರ್ಭದಲ್ಲಿ ಮೊದಲ ಬಾರಿಗೆ ಭೇಟಿ ನೀಡಿದ ಪಾಕ್ ಪಿಎಂ ಇಮ್ರಾನ್ ಖಾನ್ “ಎಂತಹ ಸಂಭ್ರಮದ ಕ್ಷಣದಲ್ಲಿ ನಾನಿಲ್ಲಿಗೆ ಬಂದಿದ್ದೇನೆ” ಎಂದು ರಷ್ಯಾ ಅಧಿಕಾರಿಗಳಿಗೆ ಹೇಳುವ ವಿಡಿಯೋವೊಂದು ಸಾಮಾಜಿಕ ಜಾಲತಾನಗಳಲ್ಲಿ ವೈರಲ್ ಆಗಿದೆ.

ಭಾರತದ ನಿಲುವು ಏನು?

ರಷ್ಯಾದ ಯುದ್ಧದ ನಿರ್ಧಾರವನ್ನು ಕಟುವಾಗಿ ಟೀಕಿಸದ ಕೆಲವೇ ದೇಶಗಳಲ್ಲಿ ಭಾರತವೂ ಒಂದು. ಯುಎನ್ ತುರ್ತು ಸಭೆಯಲ್ಲಿ ಭಾರತವು ಎರಡು ಯುರೋಪಿಯನ್ ರಾಷ್ಟ್ರಗಳ ನಡುವಿನ ಉದ್ವಿಗ್ನತೆಯ ಬಗ್ಗೆ ಮಾತ್ರ ಪ್ರಸ್ತಾಪಿಸಿದೆ ಮತ್ತು ಎರಡು ರಾಷ್ಟ್ರಗಳು ಅತ್ಯಂತ ಸಂಯಮ  ಕಾಯ್ದುಕೊಳ್ಳುವಂತೆ ಕರೆ ನೀಡಿದೆ. ಇದೇ ಸಂದರ್ಭದಲ್ಲಿ ರಷ್ಯಾ ಮತ್ತು ಭಾರತದ ನಡುವಿನ ಪಾಲುದಾರಿಕೆ ಸಂಬಂಧ ಮುಂದುವರಿಯುತ್ತದೆ ಎಂದು ರಷ್ಯಾದ ರಾಯಭಾರಿ ಕಚೇರಿಯ ಉಸ್ತುವಾರಿ ರೋಮನ್ ಬಾಬುಶ್ಕಿನ್ ಹೇಳಿದ್ದಾರೆ.

“ಉಕ್ರೇನ್ ಬಿಕ್ಕಟ್ಟಿನ ಬಗ್ಗೆ ಭಾರತವು ತಟಸ್ಥ ನಿಲುವನ್ನು ಹೊಂದಿದೆ. ಅದನ್ನು ನಾವು ಸ್ವಾಗತಿಸುತ್ತೇವೆ. ರಷ್ಯಾ ಮತ್ತು ಭಾರತವು ಪರಸ್ಪರ ದೊಡ್ಡ ಯೋಜನೆಗಳನ್ನು ಹೊಂದಿದ್ದೇವೆ. ನಮ್ಮ ಪಾಲುದಾರಿಕೆಯು ಈಗ ಯಾವ ಮಟ್ಟದ್ದಲ್ಲಿದೆಯೋ, ಮುಂದೆಯೂ ಹಾಗೆಯೇ ಇರುತ್ತದೆ ಎಂದು ನಾವು ಭಾವಿಸುತ್ತೇವೆ. ಉಕ್ರೇನ್ ಜೊತೆಗಿನ ಬಿಕ್ಕಟ್ಟು ರಕ್ಷಣಾ ಕ್ಷೇತ್ರಗಳನ್ನು ಒಳಗೊಂಡಂತೆ ಭಾರತ-ರಷ್ಯಾ ಸಂಬಂಧಗಳ ಮೇಲೆ ಪರಿಣಾಮ ಬೀರುವುದಿಲ್ಲ. ಮುಂದಿನ ತಿಂಗಳು ಗುಜರಾತ್‌ನಲ್ಲಿ ನಡೆಯಲಿರುವ ಡೆಫ್ ಎಕ್ಸ್ಪೋದಲ್ಲಿ ರಷ್ಯಾದ ಭಾಗವಹಿಸುತ್ತದೆ” ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ರಷ್ಯಾದಿಂದ ಉಕ್ರೇನ್ ಮೇಲೆ ದಾಳಿ ಸಂದರ್ಭದಲ್ಲಿ ರಷ್ಯಾಗೆ ಪಾಕ್ ಪಿಎಂ ಇಮ್ರಾನ್ ಖಾನ್ ಭೇಟಿ: ಅಮೆರಿಕ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...