Homeಮುಖಪುಟಉಕ್ರೇನ್ ಯುದ್ಧ ಟೀಕಿಸಿದ ರಷ್ಯಾದ ಪತ್ರಕರ್ತನಿಗೆ 8 ವರ್ಷ ಜೈಲು ಶಿಕ್ಷೆ!

ಉಕ್ರೇನ್ ಯುದ್ಧ ಟೀಕಿಸಿದ ರಷ್ಯಾದ ಪತ್ರಕರ್ತನಿಗೆ 8 ವರ್ಷ ಜೈಲು ಶಿಕ್ಷೆ!

- Advertisement -
- Advertisement -

ಉಕ್ರೇನ್‌ನಲ್ಲಿ ನಾಗರಿಕರ ಮೇಲೆ ರಷ್ಯಾ ನಡೆಸುತ್ತಿರುವ ದಾಳಿಯ ಕುರಿತು ತನ್ನ ಪತ್ರಿಕೆಯಲ್ಲಿ ವರದಿ ಮಾಡಿದ ರಷ್ಯಾದ ವಾರ್ತಾಪತ್ರಿಕೆಯ ಪ್ರಕಾಶಕರೊಬ್ಬರನ್ನು ಶುಕ್ರವಾರ ಸೈಬೀರಿಯಾದ ನ್ಯಾಯಾಲಯ ತಪ್ಪಿತಸ್ಥನೆಂದು ಘೋಷಿಸಿ ಎಂಟು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ವರದಿಗಳು ಹೇಳಿವೆ.

ಗೊರ್ನೊ-ಅಲ್ಟೈಸ್ಕ್ ನಗರದ ನ್ಯಾಯಾಲಯವು ಅಲ್ಟಾಯ್‌ನ ಸೈಬೀರಿಯನ್ ಪ್ರದೇಶದ ಪ್ರಮುಖ ಪತ್ರಕರ್ತ ಮತ್ತು ಸ್ಥಳೀಯ ಪತ್ರಿಕೆಯಾದ ಲಿಸ್ಟಾಕ್ ಅಥವಾ ರಷ್ಯನ್ ಭಾಷೆಯ “ಕರಪತ್ರ” ದ ಪ್ರಕಾಶಕ ಸೆರ್ಗೆಯ್ ಮಿಖೈಲೋವ್ ಅವರನ್ನು ರಷ್ಯಾ ಸೈನ್ಯದ ಬಗ್ಗೆ “ಸುಳ್ಳು ಮಾಹಿತಿ ಹರಡಿದ” ಅಪರಾಧಿ ಎಂದು ತೀರ್ಪು ನೀಡಿದೆ ಎಂದು ನೆಟ್ ಫ್ರೀಡಮ್ಸ್ ಹಕ್ಕುಗಳ ಗುಂಪು ಹೇಳಿರುವುದಾಗಿ ವರದಿಗಳು ತಿಳಿಸಿವೆ.

ಫೆಬ್ರವರಿ 2022 ರಲ್ಲಿ ರಷ್ಯಾ ಉಕ್ರೇನ್ ಅನ್ನು ಆಕ್ರಮಿಸಿದ ಕೆಲ ದಿನಗಳ ನಂತರ ಅಳವಡಿಸಿಕೊಂಡ ಹೊಸ ಕಾನೂನಿನ ಪ್ರಕಾರ, ರಷ್ಯಾದಲ್ಲಿ ಯುದ್ಧವನ್ನು ಟೀಕಿಸುವುದು ಕ್ರಿಮಿನಲ್ ಅಪರಾಧವಾಗಿದೆ. ಅನೇಕ ಪತ್ರಕರ್ತರು ಸೇರಿದಂತೆ ನೂರಾರು ರಷ್ಯನ್ನರನ್ನು ಈ ಕಾನೂನಡಿ ವಿಚಾರಣೆಗೆ ಒಳಪಡಿಸಲಾಗಿದೆ.

ರಾಜಕೀಯ ಬಂಧನಗಳನ್ನು ಪತ್ತೆಹಚ್ಚುವ ರಷ್ಯಾದ ಪ್ರಮುಖ ಹಕ್ಕುಗಳ ಗುಂಪುಗಳಲ್ಲಿ ಒಂದಾಗಿರುವ OVD-Info ಪ್ರಕಾರ, ಫೆಬ್ರವರಿ 2022ರಲ್ಲಿ ಅಳವಡಿಸಿಕೊಂಡ ಕಾನೂನಡಿ, ಯುದ್ಧ ವಿರೋಧಿಸಿದ ಕಾರಣಕ್ಕೆ 1000ಕ್ಕೂ ಹೆಚ್ಚು ಜನರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.

ನೆಟ್ ಫ್ರೀಡಮ್ಸ್ ಪ್ರಕಾರ, ಉಕ್ರೇನ್‌ನಲ್ಲಿ ನಾಗರಿಕರ ಮೇಲೆ ರಷ್ಯಾ ನಡೆಸುತ್ತಿರುವ ದಾಳಿಯ ಕುರಿತು ತನ್ನ ಸಾಮಾಜಿಕ ಮಾಧ್ಯಮ ಖಾತೆ ಮತ್ತು ವೆಬ್‌ಸೈಟ್‌ನಲ್ಲಿ ಸರಣಿ ವರದಿ ಪ್ರಕಟಿಸಿದ ಬಳಿಕ ಲಿಸ್ಟಾಕ್‌ ಪತ್ರಿಕೆ ಪ್ರಕಾಶಕ ಮಿಖೈಲೋವ್ ಅವರನ್ನು ಈ ವರ್ಷದ ಏಪ್ರಿಲ್‌ನಲ್ಲಿ ಬಂಧಿಸಲಾಗಿತ್ತು.

ಕಳೆದ ಬುಧವಾರ ನ್ಯಾಯಾಲಯಕ್ಕೆ ತನ್ನ ಕೊನೆಯ ಹೇಳಿಕೆ ನೀಡಿರುವ ಪತ್ರಕರ್ತ ಮಿಖೈಲೋವ್ “ನನ್ನ ದೇಶದ ಜನರಿಗೆ ಪ್ರಸ್ತುತ ನಡೆಯುತ್ತಿರುವ ಯುದ್ಧದ ಕುರಿತು ಸತ್ಯ ತಿಳಿಸಲು ಮತ್ತು ರಷ್ಯಾದ ರಕ್ಷಣೆ ಎಂಬ ಪ್ರೊಪಗಂಡ ಆಧಾರಿತ ಸುಳ್ಳುಗಳಿಂದ ಅವರನ್ನು ರಕ್ಷಿಸಲು ನಾನು ಸುದ್ದಿ ಪ್ರಕಟಿಸಿದೆ” ಎಂದು ಹೇಳಿದ್ದಾಗಿ ರಷ್ಯಾದ ಸ್ವತಂತ್ರ ಸುದ್ದಿವಾಹಿನಿ ಮೆಡುಜಾ ತಿಳಿಸಿದೆ.

“ಸತ್ಯ ಕಹಿಯಾಗಿದ್ದರೂ ಇಷ್ಟು ವರ್ಷಗಳಲ್ಲಿ ನಾನು ಅದನ್ನೇ ಬರೆಯುತ್ತಿದ್ದೇನೆ ಎಂದು ಮಿಖೈಲೋವ್ ನ್ಯಾಯಾಲಯಕ್ಕೆ ಹೇಳಿದ್ದಾರೆ” ಎಂದು ಮೆಡುಜಾ ವರದಿ ಮಾಡಿದೆ.

ಇದನ್ನೂ ಓದಿ : ಶಂಭು ಗಡಿಯಲ್ಲಿ ರೈತರ ಪ್ರತಿಭಟನೆ; ಕುಸ್ತಿಪಟು ವಿನೇಶಾ ಫೋಗಟ್‌ಗೆ ಹಾರ ಹಾಕಿ ಸ್ವಾಗತಿಸಿದ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...