Homeಮುಖಪುಟಉಕ್ರೇನ್ ಯುದ್ಧ ಟೀಕಿಸಿದ ರಷ್ಯಾದ ಪತ್ರಕರ್ತನಿಗೆ 8 ವರ್ಷ ಜೈಲು ಶಿಕ್ಷೆ!

ಉಕ್ರೇನ್ ಯುದ್ಧ ಟೀಕಿಸಿದ ರಷ್ಯಾದ ಪತ್ರಕರ್ತನಿಗೆ 8 ವರ್ಷ ಜೈಲು ಶಿಕ್ಷೆ!

- Advertisement -
- Advertisement -

ಉಕ್ರೇನ್‌ನಲ್ಲಿ ನಾಗರಿಕರ ಮೇಲೆ ರಷ್ಯಾ ನಡೆಸುತ್ತಿರುವ ದಾಳಿಯ ಕುರಿತು ತನ್ನ ಪತ್ರಿಕೆಯಲ್ಲಿ ವರದಿ ಮಾಡಿದ ರಷ್ಯಾದ ವಾರ್ತಾಪತ್ರಿಕೆಯ ಪ್ರಕಾಶಕರೊಬ್ಬರನ್ನು ಶುಕ್ರವಾರ ಸೈಬೀರಿಯಾದ ನ್ಯಾಯಾಲಯ ತಪ್ಪಿತಸ್ಥನೆಂದು ಘೋಷಿಸಿ ಎಂಟು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ವರದಿಗಳು ಹೇಳಿವೆ.

ಗೊರ್ನೊ-ಅಲ್ಟೈಸ್ಕ್ ನಗರದ ನ್ಯಾಯಾಲಯವು ಅಲ್ಟಾಯ್‌ನ ಸೈಬೀರಿಯನ್ ಪ್ರದೇಶದ ಪ್ರಮುಖ ಪತ್ರಕರ್ತ ಮತ್ತು ಸ್ಥಳೀಯ ಪತ್ರಿಕೆಯಾದ ಲಿಸ್ಟಾಕ್ ಅಥವಾ ರಷ್ಯನ್ ಭಾಷೆಯ “ಕರಪತ್ರ” ದ ಪ್ರಕಾಶಕ ಸೆರ್ಗೆಯ್ ಮಿಖೈಲೋವ್ ಅವರನ್ನು ರಷ್ಯಾ ಸೈನ್ಯದ ಬಗ್ಗೆ “ಸುಳ್ಳು ಮಾಹಿತಿ ಹರಡಿದ” ಅಪರಾಧಿ ಎಂದು ತೀರ್ಪು ನೀಡಿದೆ ಎಂದು ನೆಟ್ ಫ್ರೀಡಮ್ಸ್ ಹಕ್ಕುಗಳ ಗುಂಪು ಹೇಳಿರುವುದಾಗಿ ವರದಿಗಳು ತಿಳಿಸಿವೆ.

ಫೆಬ್ರವರಿ 2022 ರಲ್ಲಿ ರಷ್ಯಾ ಉಕ್ರೇನ್ ಅನ್ನು ಆಕ್ರಮಿಸಿದ ಕೆಲ ದಿನಗಳ ನಂತರ ಅಳವಡಿಸಿಕೊಂಡ ಹೊಸ ಕಾನೂನಿನ ಪ್ರಕಾರ, ರಷ್ಯಾದಲ್ಲಿ ಯುದ್ಧವನ್ನು ಟೀಕಿಸುವುದು ಕ್ರಿಮಿನಲ್ ಅಪರಾಧವಾಗಿದೆ. ಅನೇಕ ಪತ್ರಕರ್ತರು ಸೇರಿದಂತೆ ನೂರಾರು ರಷ್ಯನ್ನರನ್ನು ಈ ಕಾನೂನಡಿ ವಿಚಾರಣೆಗೆ ಒಳಪಡಿಸಲಾಗಿದೆ.

ರಾಜಕೀಯ ಬಂಧನಗಳನ್ನು ಪತ್ತೆಹಚ್ಚುವ ರಷ್ಯಾದ ಪ್ರಮುಖ ಹಕ್ಕುಗಳ ಗುಂಪುಗಳಲ್ಲಿ ಒಂದಾಗಿರುವ OVD-Info ಪ್ರಕಾರ, ಫೆಬ್ರವರಿ 2022ರಲ್ಲಿ ಅಳವಡಿಸಿಕೊಂಡ ಕಾನೂನಡಿ, ಯುದ್ಧ ವಿರೋಧಿಸಿದ ಕಾರಣಕ್ಕೆ 1000ಕ್ಕೂ ಹೆಚ್ಚು ಜನರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.

ನೆಟ್ ಫ್ರೀಡಮ್ಸ್ ಪ್ರಕಾರ, ಉಕ್ರೇನ್‌ನಲ್ಲಿ ನಾಗರಿಕರ ಮೇಲೆ ರಷ್ಯಾ ನಡೆಸುತ್ತಿರುವ ದಾಳಿಯ ಕುರಿತು ತನ್ನ ಸಾಮಾಜಿಕ ಮಾಧ್ಯಮ ಖಾತೆ ಮತ್ತು ವೆಬ್‌ಸೈಟ್‌ನಲ್ಲಿ ಸರಣಿ ವರದಿ ಪ್ರಕಟಿಸಿದ ಬಳಿಕ ಲಿಸ್ಟಾಕ್‌ ಪತ್ರಿಕೆ ಪ್ರಕಾಶಕ ಮಿಖೈಲೋವ್ ಅವರನ್ನು ಈ ವರ್ಷದ ಏಪ್ರಿಲ್‌ನಲ್ಲಿ ಬಂಧಿಸಲಾಗಿತ್ತು.

ಕಳೆದ ಬುಧವಾರ ನ್ಯಾಯಾಲಯಕ್ಕೆ ತನ್ನ ಕೊನೆಯ ಹೇಳಿಕೆ ನೀಡಿರುವ ಪತ್ರಕರ್ತ ಮಿಖೈಲೋವ್ “ನನ್ನ ದೇಶದ ಜನರಿಗೆ ಪ್ರಸ್ತುತ ನಡೆಯುತ್ತಿರುವ ಯುದ್ಧದ ಕುರಿತು ಸತ್ಯ ತಿಳಿಸಲು ಮತ್ತು ರಷ್ಯಾದ ರಕ್ಷಣೆ ಎಂಬ ಪ್ರೊಪಗಂಡ ಆಧಾರಿತ ಸುಳ್ಳುಗಳಿಂದ ಅವರನ್ನು ರಕ್ಷಿಸಲು ನಾನು ಸುದ್ದಿ ಪ್ರಕಟಿಸಿದೆ” ಎಂದು ಹೇಳಿದ್ದಾಗಿ ರಷ್ಯಾದ ಸ್ವತಂತ್ರ ಸುದ್ದಿವಾಹಿನಿ ಮೆಡುಜಾ ತಿಳಿಸಿದೆ.

“ಸತ್ಯ ಕಹಿಯಾಗಿದ್ದರೂ ಇಷ್ಟು ವರ್ಷಗಳಲ್ಲಿ ನಾನು ಅದನ್ನೇ ಬರೆಯುತ್ತಿದ್ದೇನೆ ಎಂದು ಮಿಖೈಲೋವ್ ನ್ಯಾಯಾಲಯಕ್ಕೆ ಹೇಳಿದ್ದಾರೆ” ಎಂದು ಮೆಡುಜಾ ವರದಿ ಮಾಡಿದೆ.

ಇದನ್ನೂ ಓದಿ : ಶಂಭು ಗಡಿಯಲ್ಲಿ ರೈತರ ಪ್ರತಿಭಟನೆ; ಕುಸ್ತಿಪಟು ವಿನೇಶಾ ಫೋಗಟ್‌ಗೆ ಹಾರ ಹಾಕಿ ಸ್ವಾಗತಿಸಿದ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...