Homeಮುಖಪುಟಉಕ್ರೇನ್ ಯುದ್ಧ ಟೀಕಿಸಿದ ರಷ್ಯಾದ ಪತ್ರಕರ್ತನಿಗೆ 8 ವರ್ಷ ಜೈಲು ಶಿಕ್ಷೆ!

ಉಕ್ರೇನ್ ಯುದ್ಧ ಟೀಕಿಸಿದ ರಷ್ಯಾದ ಪತ್ರಕರ್ತನಿಗೆ 8 ವರ್ಷ ಜೈಲು ಶಿಕ್ಷೆ!

- Advertisement -
- Advertisement -

ಉಕ್ರೇನ್‌ನಲ್ಲಿ ನಾಗರಿಕರ ಮೇಲೆ ರಷ್ಯಾ ನಡೆಸುತ್ತಿರುವ ದಾಳಿಯ ಕುರಿತು ತನ್ನ ಪತ್ರಿಕೆಯಲ್ಲಿ ವರದಿ ಮಾಡಿದ ರಷ್ಯಾದ ವಾರ್ತಾಪತ್ರಿಕೆಯ ಪ್ರಕಾಶಕರೊಬ್ಬರನ್ನು ಶುಕ್ರವಾರ ಸೈಬೀರಿಯಾದ ನ್ಯಾಯಾಲಯ ತಪ್ಪಿತಸ್ಥನೆಂದು ಘೋಷಿಸಿ ಎಂಟು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ವರದಿಗಳು ಹೇಳಿವೆ.

ಗೊರ್ನೊ-ಅಲ್ಟೈಸ್ಕ್ ನಗರದ ನ್ಯಾಯಾಲಯವು ಅಲ್ಟಾಯ್‌ನ ಸೈಬೀರಿಯನ್ ಪ್ರದೇಶದ ಪ್ರಮುಖ ಪತ್ರಕರ್ತ ಮತ್ತು ಸ್ಥಳೀಯ ಪತ್ರಿಕೆಯಾದ ಲಿಸ್ಟಾಕ್ ಅಥವಾ ರಷ್ಯನ್ ಭಾಷೆಯ “ಕರಪತ್ರ” ದ ಪ್ರಕಾಶಕ ಸೆರ್ಗೆಯ್ ಮಿಖೈಲೋವ್ ಅವರನ್ನು ರಷ್ಯಾ ಸೈನ್ಯದ ಬಗ್ಗೆ “ಸುಳ್ಳು ಮಾಹಿತಿ ಹರಡಿದ” ಅಪರಾಧಿ ಎಂದು ತೀರ್ಪು ನೀಡಿದೆ ಎಂದು ನೆಟ್ ಫ್ರೀಡಮ್ಸ್ ಹಕ್ಕುಗಳ ಗುಂಪು ಹೇಳಿರುವುದಾಗಿ ವರದಿಗಳು ತಿಳಿಸಿವೆ.

ಫೆಬ್ರವರಿ 2022 ರಲ್ಲಿ ರಷ್ಯಾ ಉಕ್ರೇನ್ ಅನ್ನು ಆಕ್ರಮಿಸಿದ ಕೆಲ ದಿನಗಳ ನಂತರ ಅಳವಡಿಸಿಕೊಂಡ ಹೊಸ ಕಾನೂನಿನ ಪ್ರಕಾರ, ರಷ್ಯಾದಲ್ಲಿ ಯುದ್ಧವನ್ನು ಟೀಕಿಸುವುದು ಕ್ರಿಮಿನಲ್ ಅಪರಾಧವಾಗಿದೆ. ಅನೇಕ ಪತ್ರಕರ್ತರು ಸೇರಿದಂತೆ ನೂರಾರು ರಷ್ಯನ್ನರನ್ನು ಈ ಕಾನೂನಡಿ ವಿಚಾರಣೆಗೆ ಒಳಪಡಿಸಲಾಗಿದೆ.

ರಾಜಕೀಯ ಬಂಧನಗಳನ್ನು ಪತ್ತೆಹಚ್ಚುವ ರಷ್ಯಾದ ಪ್ರಮುಖ ಹಕ್ಕುಗಳ ಗುಂಪುಗಳಲ್ಲಿ ಒಂದಾಗಿರುವ OVD-Info ಪ್ರಕಾರ, ಫೆಬ್ರವರಿ 2022ರಲ್ಲಿ ಅಳವಡಿಸಿಕೊಂಡ ಕಾನೂನಡಿ, ಯುದ್ಧ ವಿರೋಧಿಸಿದ ಕಾರಣಕ್ಕೆ 1000ಕ್ಕೂ ಹೆಚ್ಚು ಜನರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.

ನೆಟ್ ಫ್ರೀಡಮ್ಸ್ ಪ್ರಕಾರ, ಉಕ್ರೇನ್‌ನಲ್ಲಿ ನಾಗರಿಕರ ಮೇಲೆ ರಷ್ಯಾ ನಡೆಸುತ್ತಿರುವ ದಾಳಿಯ ಕುರಿತು ತನ್ನ ಸಾಮಾಜಿಕ ಮಾಧ್ಯಮ ಖಾತೆ ಮತ್ತು ವೆಬ್‌ಸೈಟ್‌ನಲ್ಲಿ ಸರಣಿ ವರದಿ ಪ್ರಕಟಿಸಿದ ಬಳಿಕ ಲಿಸ್ಟಾಕ್‌ ಪತ್ರಿಕೆ ಪ್ರಕಾಶಕ ಮಿಖೈಲೋವ್ ಅವರನ್ನು ಈ ವರ್ಷದ ಏಪ್ರಿಲ್‌ನಲ್ಲಿ ಬಂಧಿಸಲಾಗಿತ್ತು.

ಕಳೆದ ಬುಧವಾರ ನ್ಯಾಯಾಲಯಕ್ಕೆ ತನ್ನ ಕೊನೆಯ ಹೇಳಿಕೆ ನೀಡಿರುವ ಪತ್ರಕರ್ತ ಮಿಖೈಲೋವ್ “ನನ್ನ ದೇಶದ ಜನರಿಗೆ ಪ್ರಸ್ತುತ ನಡೆಯುತ್ತಿರುವ ಯುದ್ಧದ ಕುರಿತು ಸತ್ಯ ತಿಳಿಸಲು ಮತ್ತು ರಷ್ಯಾದ ರಕ್ಷಣೆ ಎಂಬ ಪ್ರೊಪಗಂಡ ಆಧಾರಿತ ಸುಳ್ಳುಗಳಿಂದ ಅವರನ್ನು ರಕ್ಷಿಸಲು ನಾನು ಸುದ್ದಿ ಪ್ರಕಟಿಸಿದೆ” ಎಂದು ಹೇಳಿದ್ದಾಗಿ ರಷ್ಯಾದ ಸ್ವತಂತ್ರ ಸುದ್ದಿವಾಹಿನಿ ಮೆಡುಜಾ ತಿಳಿಸಿದೆ.

“ಸತ್ಯ ಕಹಿಯಾಗಿದ್ದರೂ ಇಷ್ಟು ವರ್ಷಗಳಲ್ಲಿ ನಾನು ಅದನ್ನೇ ಬರೆಯುತ್ತಿದ್ದೇನೆ ಎಂದು ಮಿಖೈಲೋವ್ ನ್ಯಾಯಾಲಯಕ್ಕೆ ಹೇಳಿದ್ದಾರೆ” ಎಂದು ಮೆಡುಜಾ ವರದಿ ಮಾಡಿದೆ.

ಇದನ್ನೂ ಓದಿ : ಶಂಭು ಗಡಿಯಲ್ಲಿ ರೈತರ ಪ್ರತಿಭಟನೆ; ಕುಸ್ತಿಪಟು ವಿನೇಶಾ ಫೋಗಟ್‌ಗೆ ಹಾರ ಹಾಕಿ ಸ್ವಾಗತಿಸಿದ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...