Homeಮುಖಪುಟಉಕ್ರೇನ್‌ಗೆ ಪರಮಾಣು ಬೆದರಿಕೆಯೊಡ್ಡಿದ ರಷ್ಯಾ; ಶಾಂತಿ ಮಾತುಕತೆ ನಡೆಸಲು ಉಭಯ ರಾಷ್ಟ್ರಗಳಿಗೆ ಚೀನಾ ಕರೆ

ಉಕ್ರೇನ್‌ಗೆ ಪರಮಾಣು ಬೆದರಿಕೆಯೊಡ್ಡಿದ ರಷ್ಯಾ; ಶಾಂತಿ ಮಾತುಕತೆ ನಡೆಸಲು ಉಭಯ ರಾಷ್ಟ್ರಗಳಿಗೆ ಚೀನಾ ಕರೆ

- Advertisement -
- Advertisement -

ರಷ್ಯಾ ಮತ್ತು ಉಕ್ರೇನ್‌ ನಡುವಿನ ಯುದ್ಧದಲ್ಲಿ ಪರಮಾಣು ಅಸ್ತ್ರಗಳನ್ನು ಬಳಸುವ ಮಾತುಗಳು ಕೇಳಿಬಂದ ಹಿನ್ನೆಲೆಯಲ್ಲಿ ಆದಷ್ಟು ಬೇಗ ಶಾಂತಿ ಮಾತುಕತೆ ನಡೆಸಲು ಉಭಯ ರಾಷ್ಟ್ರಗಳಿಗೆ ಚೀನಾ ಶುಕ್ರವಾರ ಕರೆ ನೀಡಿದೆ.

ಉಕ್ರೇನ್‌ನ ಮೇಲೆ ರಷ್ಯಾದ ಆಕ್ರಮಣ ಮಾಡಿ ಇಂದಿಗೆ (ಫೆ.24) ಒಂದು ವರ್ಷ ಕಳೆಯುತ್ತಿದೆ. ಈ ಸಂದರ್ಭದಲ್ಲಿ ಬಿಕ್ಕಟ್ಟಿನ ”ರಾಜಕೀಯ ಇತ್ಯರ್ಥ”ದ ಕುರಿತು ರಷ್ಯಾ 12 ಅಂಶಗಳನ್ನು ಬಿಡುಗಡೆಗೊಳಿಸಿದೆ.

”ರಷ್ಯಾ ಮತ್ತು ಉಕ್ರೇನ್ ನಡುವೆ ಸಾಧ್ಯವಾದಷ್ಟು ಬೇಗ ನೇರ ಸಂವಾದವನ್ನು ಪುನರಾರಂಭಿಸಲು ಎಲ್ಲ ಪಕ್ಷಗಳು ಬೆಂಬಲಿಸಬೇಕು” ಎಂದು ಚೀನಾ ವಿದೇಶಾಂಗ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಬಿಡುಗಡೆಯಾದ ಪತ್ರಿಕೆ ಹೇಳಿದೆ.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು, ಉಕ್ರೇನ್‌ ಮೇಲೆ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸುವುದಾಗಿ ಬೆದರಿಕೆ ಹಾಕಿದ್ದಾರೆ. ಆದರೆ ಚೀನಾ, ಪರಮಾಣು ಶಸ್ತ್ರಾಸ್ತ್ರಗಳ ಬಳಕೆಗೆ ಮಾತ್ರವಲ್ಲ, ಅವುಗಳನ್ನು ಬಳಕೆ ಮಾಡುತ್ತೇವೆ ಎಂದು ಬೆದರಿಕೆ ಹಾಕುವ ಕ್ರಮಕ್ಕೂ ವಿರೋಧ ವ್ಯಕ್ತಪಡಿಸಿದೆ.

”ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಬಾರದು ಮತ್ತು ಪರಮಾಣು ಯುದ್ಧಗಳನ್ನು ಮಾಡಬಾರದು. ಪರಮಾಣು ಶಸ್ತ್ರಾಸ್ತ್ರಗಳ ಬೆದರಿಕೆ ಅಥವಾ ಬಳಕೆಯನ್ನು ವಿರೋಧಿಸಬೇಕು” ಎಂದು ಚೀನಾ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ದೆಹಲಿ: ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್‌ಶಿಪ್‌ ಬಹಿಷ್ಕರಿಸುವ ಪಟ್ಟಿಗೆ ಉಕ್ರೇನ್ ಸೇರ್ಪಡೆ

”ಎರಡು ದೇಶಗಳು ಹೀಗೆ ಯುದ್ಧದ ಸಂದರ್ಭದಲ್ಲಿ ಪರಮಾಣು ಬಳಸುವ ಮೂಲಕ ಅಂತರರಾಷ್ಟ್ರೀಯ ಮಾನವೀಯ ಕಾನೂನನ್ನು ಉಲ್ಲಂಘಿಸಿದಂತಾಗುತ್ತದೆ. ಹಾಗಾಗಿ ಕಾನೂನನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನಾಗರಿಕರು ಅಥವಾ ನಾಗರಿಕ ಸೌಲಭ್ಯಗಳ ಮೇಲೆ ದಾಳಿ ಮಾಡುವುದನ್ನು ತಪ್ಪಿಸಬೇಕು” ಎಂದು ಚೀನಾ ಹೇಳಿದೆ.

ಮಿತ್ರ ರಾಷ್ಟ್ರ ರಷ್ಯಾದೊಂದಿಗೆ ನಿಕಟ ಸಂಬಂಧವನ್ನು ಉಳಿಸಿಕೊಂಡು ಈ ಯುದ್ಧದಲ್ಲಿ ತಟಸ್ಥವಾಗಿ ತನ್ನ ಸ್ಥಾನವನ್ನು ಪಡೆದುಕೊಳ್ಳಲು ಚೀನಾ ಪ್ರಯತ್ನಿಸಿದೆ.

ಬುಧವಾರ ಚೀನಾದ ಉನ್ನತ ರಾಜತಾಂತ್ರಿಕ ವಾಂಗ್ ಯಿ ಅವರು, ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಮತ್ತು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಮಾಸ್ಕೋದಲ್ಲಿ ಭೇಟಿಯಾದರು.

ಈ ಬಗ್ಗೆ ಗುರುವಾರ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಮಾತನಾಡಿದ್ದು, ”ಚೀನಾ ದೇಶ ಇದೀಗ ಉಕ್ರೇನ್ ಬಗ್ಗೆ ಮಾತನಾಡಲು ಪ್ರಾರಂಭಿಸಿದ್ದು ಮತ್ತು ಕೆಲವು ಒಳ್ಳೆಯ ಸಂದೇಶಗಳನ್ನು ಕಳುಹಿಸಿದ್ದು ಒಳ್ಳೆಯದು ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದರು.

”ನಾವು ಚೀನಾದೊಂದಿಗೆ ಸಭೆ ನಡೆಸಲು ಬಯಸುತ್ತೇವೆ. ಅವರು ನೀಡುವ ಅಂತಿಮ ತೀರ್ಮಾನಗಳನ್ನು ನೋಡಿದ ನಂತರ ನಾವು ನಮ್ಮ ತೀರ್ಮಾನಗಳನ್ನು ತಿಳಿಸುತ್ತೇವೆ” ಎಂದು ಝೆಲೆನ್ಸ್ಕಿ ಹೇಳಿದರು.

ರಷ್ಯಾ ಉಕ್ರೇನ್‌ ಮೇಲೆ ದಾಳಿ ಮಾಡಲು ಶುರುಮಾಡಿದಾಗಿನಿಂದ ಚೀನಾ ಪುಟಿನ್‌ಗೆ ರಾಜತಾಂತ್ರಿಕ ಮತ್ತು ಆರ್ಥಿಕ ಬೆಂಬಲವನ್ನು ನೀಡಿತ್ತು ಆದರೆ ಬಹಿರಂಗವಾಗಿ ಮಿಲಿಟರಿ ಸಹಾಯ ಅಥವಾ ಮಾರಕ ಶಸ್ತ್ರಾಸ್ತ್ರಗಳ ಪೂರೈಕೆ ವಿಚಾರದಿಂದ ದೂರವಿತ್ತು.

ಚೀನಾದ ರಾಜ್ಯ-ನಿಯಂತ್ರಿತ ಸಂಸ್ಥೆಗಳು, ಮಾರಕವಲ್ಲದ ಡ್ರೋನ್‌ಗಳು ಮತ್ತು ಇತರ ಉಪಕರಣಗಳನ್ನು ರಷ್ಯಾ ಮತ್ತು ಉಕ್ರೇನ್‌ಗೆ ಮಾರಾಟ ಮಾಡಿದೆ, ಆದರೆ ಮಾನವರಹಿತ ವೈಮಾನಿಕ ವಾಹನಗಳಂತಹ ಹೆಚ್ಚು-ಅಗತ್ಯವಿರುವ ಸರಬರಾಜುಗಳಿಗಾಗಿ ರಷ್ಯಾ ಇರಾನ್‌ನತ್ತ ಮುಖ ಮಾಡಿತು.

ಉತ್ತರ ಕೊರಿಯಾ, ರಾಕೆಟ್‌ಗಳು ಮತ್ತು ಫಿರಂಗಿ ಶೆಲ್‌ಗಳನ್ನು ಸಹ ಒದಗಿಸಿದೆ ಎಂದು ಅಮೆರಿಕ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...