Homeಮುಖಪುಟಉಕ್ರೇನ್‌ಗೆ ಪರಮಾಣು ಬೆದರಿಕೆಯೊಡ್ಡಿದ ರಷ್ಯಾ; ಶಾಂತಿ ಮಾತುಕತೆ ನಡೆಸಲು ಉಭಯ ರಾಷ್ಟ್ರಗಳಿಗೆ ಚೀನಾ ಕರೆ

ಉಕ್ರೇನ್‌ಗೆ ಪರಮಾಣು ಬೆದರಿಕೆಯೊಡ್ಡಿದ ರಷ್ಯಾ; ಶಾಂತಿ ಮಾತುಕತೆ ನಡೆಸಲು ಉಭಯ ರಾಷ್ಟ್ರಗಳಿಗೆ ಚೀನಾ ಕರೆ

- Advertisement -
- Advertisement -

ರಷ್ಯಾ ಮತ್ತು ಉಕ್ರೇನ್‌ ನಡುವಿನ ಯುದ್ಧದಲ್ಲಿ ಪರಮಾಣು ಅಸ್ತ್ರಗಳನ್ನು ಬಳಸುವ ಮಾತುಗಳು ಕೇಳಿಬಂದ ಹಿನ್ನೆಲೆಯಲ್ಲಿ ಆದಷ್ಟು ಬೇಗ ಶಾಂತಿ ಮಾತುಕತೆ ನಡೆಸಲು ಉಭಯ ರಾಷ್ಟ್ರಗಳಿಗೆ ಚೀನಾ ಶುಕ್ರವಾರ ಕರೆ ನೀಡಿದೆ.

ಉಕ್ರೇನ್‌ನ ಮೇಲೆ ರಷ್ಯಾದ ಆಕ್ರಮಣ ಮಾಡಿ ಇಂದಿಗೆ (ಫೆ.24) ಒಂದು ವರ್ಷ ಕಳೆಯುತ್ತಿದೆ. ಈ ಸಂದರ್ಭದಲ್ಲಿ ಬಿಕ್ಕಟ್ಟಿನ ”ರಾಜಕೀಯ ಇತ್ಯರ್ಥ”ದ ಕುರಿತು ರಷ್ಯಾ 12 ಅಂಶಗಳನ್ನು ಬಿಡುಗಡೆಗೊಳಿಸಿದೆ.

”ರಷ್ಯಾ ಮತ್ತು ಉಕ್ರೇನ್ ನಡುವೆ ಸಾಧ್ಯವಾದಷ್ಟು ಬೇಗ ನೇರ ಸಂವಾದವನ್ನು ಪುನರಾರಂಭಿಸಲು ಎಲ್ಲ ಪಕ್ಷಗಳು ಬೆಂಬಲಿಸಬೇಕು” ಎಂದು ಚೀನಾ ವಿದೇಶಾಂಗ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಬಿಡುಗಡೆಯಾದ ಪತ್ರಿಕೆ ಹೇಳಿದೆ.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು, ಉಕ್ರೇನ್‌ ಮೇಲೆ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸುವುದಾಗಿ ಬೆದರಿಕೆ ಹಾಕಿದ್ದಾರೆ. ಆದರೆ ಚೀನಾ, ಪರಮಾಣು ಶಸ್ತ್ರಾಸ್ತ್ರಗಳ ಬಳಕೆಗೆ ಮಾತ್ರವಲ್ಲ, ಅವುಗಳನ್ನು ಬಳಕೆ ಮಾಡುತ್ತೇವೆ ಎಂದು ಬೆದರಿಕೆ ಹಾಕುವ ಕ್ರಮಕ್ಕೂ ವಿರೋಧ ವ್ಯಕ್ತಪಡಿಸಿದೆ.

”ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಬಾರದು ಮತ್ತು ಪರಮಾಣು ಯುದ್ಧಗಳನ್ನು ಮಾಡಬಾರದು. ಪರಮಾಣು ಶಸ್ತ್ರಾಸ್ತ್ರಗಳ ಬೆದರಿಕೆ ಅಥವಾ ಬಳಕೆಯನ್ನು ವಿರೋಧಿಸಬೇಕು” ಎಂದು ಚೀನಾ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ದೆಹಲಿ: ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್‌ಶಿಪ್‌ ಬಹಿಷ್ಕರಿಸುವ ಪಟ್ಟಿಗೆ ಉಕ್ರೇನ್ ಸೇರ್ಪಡೆ

”ಎರಡು ದೇಶಗಳು ಹೀಗೆ ಯುದ್ಧದ ಸಂದರ್ಭದಲ್ಲಿ ಪರಮಾಣು ಬಳಸುವ ಮೂಲಕ ಅಂತರರಾಷ್ಟ್ರೀಯ ಮಾನವೀಯ ಕಾನೂನನ್ನು ಉಲ್ಲಂಘಿಸಿದಂತಾಗುತ್ತದೆ. ಹಾಗಾಗಿ ಕಾನೂನನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನಾಗರಿಕರು ಅಥವಾ ನಾಗರಿಕ ಸೌಲಭ್ಯಗಳ ಮೇಲೆ ದಾಳಿ ಮಾಡುವುದನ್ನು ತಪ್ಪಿಸಬೇಕು” ಎಂದು ಚೀನಾ ಹೇಳಿದೆ.

ಮಿತ್ರ ರಾಷ್ಟ್ರ ರಷ್ಯಾದೊಂದಿಗೆ ನಿಕಟ ಸಂಬಂಧವನ್ನು ಉಳಿಸಿಕೊಂಡು ಈ ಯುದ್ಧದಲ್ಲಿ ತಟಸ್ಥವಾಗಿ ತನ್ನ ಸ್ಥಾನವನ್ನು ಪಡೆದುಕೊಳ್ಳಲು ಚೀನಾ ಪ್ರಯತ್ನಿಸಿದೆ.

ಬುಧವಾರ ಚೀನಾದ ಉನ್ನತ ರಾಜತಾಂತ್ರಿಕ ವಾಂಗ್ ಯಿ ಅವರು, ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಮತ್ತು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಮಾಸ್ಕೋದಲ್ಲಿ ಭೇಟಿಯಾದರು.

ಈ ಬಗ್ಗೆ ಗುರುವಾರ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಮಾತನಾಡಿದ್ದು, ”ಚೀನಾ ದೇಶ ಇದೀಗ ಉಕ್ರೇನ್ ಬಗ್ಗೆ ಮಾತನಾಡಲು ಪ್ರಾರಂಭಿಸಿದ್ದು ಮತ್ತು ಕೆಲವು ಒಳ್ಳೆಯ ಸಂದೇಶಗಳನ್ನು ಕಳುಹಿಸಿದ್ದು ಒಳ್ಳೆಯದು ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದರು.

”ನಾವು ಚೀನಾದೊಂದಿಗೆ ಸಭೆ ನಡೆಸಲು ಬಯಸುತ್ತೇವೆ. ಅವರು ನೀಡುವ ಅಂತಿಮ ತೀರ್ಮಾನಗಳನ್ನು ನೋಡಿದ ನಂತರ ನಾವು ನಮ್ಮ ತೀರ್ಮಾನಗಳನ್ನು ತಿಳಿಸುತ್ತೇವೆ” ಎಂದು ಝೆಲೆನ್ಸ್ಕಿ ಹೇಳಿದರು.

ರಷ್ಯಾ ಉಕ್ರೇನ್‌ ಮೇಲೆ ದಾಳಿ ಮಾಡಲು ಶುರುಮಾಡಿದಾಗಿನಿಂದ ಚೀನಾ ಪುಟಿನ್‌ಗೆ ರಾಜತಾಂತ್ರಿಕ ಮತ್ತು ಆರ್ಥಿಕ ಬೆಂಬಲವನ್ನು ನೀಡಿತ್ತು ಆದರೆ ಬಹಿರಂಗವಾಗಿ ಮಿಲಿಟರಿ ಸಹಾಯ ಅಥವಾ ಮಾರಕ ಶಸ್ತ್ರಾಸ್ತ್ರಗಳ ಪೂರೈಕೆ ವಿಚಾರದಿಂದ ದೂರವಿತ್ತು.

ಚೀನಾದ ರಾಜ್ಯ-ನಿಯಂತ್ರಿತ ಸಂಸ್ಥೆಗಳು, ಮಾರಕವಲ್ಲದ ಡ್ರೋನ್‌ಗಳು ಮತ್ತು ಇತರ ಉಪಕರಣಗಳನ್ನು ರಷ್ಯಾ ಮತ್ತು ಉಕ್ರೇನ್‌ಗೆ ಮಾರಾಟ ಮಾಡಿದೆ, ಆದರೆ ಮಾನವರಹಿತ ವೈಮಾನಿಕ ವಾಹನಗಳಂತಹ ಹೆಚ್ಚು-ಅಗತ್ಯವಿರುವ ಸರಬರಾಜುಗಳಿಗಾಗಿ ರಷ್ಯಾ ಇರಾನ್‌ನತ್ತ ಮುಖ ಮಾಡಿತು.

ಉತ್ತರ ಕೊರಿಯಾ, ರಾಕೆಟ್‌ಗಳು ಮತ್ತು ಫಿರಂಗಿ ಶೆಲ್‌ಗಳನ್ನು ಸಹ ಒದಗಿಸಿದೆ ಎಂದು ಅಮೆರಿಕ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...