Homeಅಂತರಾಷ್ಟ್ರೀಯಡಾಲರ್‌ಗೆ ಬೈಬೈ ಹೇಳಿದ ರಷ್ಯಾ: ಮುರಿಯಲಿದೆಯೆ ಅಮೆರಿಕನ್‍ ಡಾಲರ್ ಏಕಾಧಿಪತ್ಯ?

ಡಾಲರ್‌ಗೆ ಬೈಬೈ ಹೇಳಿದ ರಷ್ಯಾ: ಮುರಿಯಲಿದೆಯೆ ಅಮೆರಿಕನ್‍ ಡಾಲರ್ ಏಕಾಧಿಪತ್ಯ?

ಚೀನಾದ ಕರೆನ್ಸಿ ಯುವಾನ್, ಯುರೋಪಿಯನ ಒಕ್ಕೂಟದ ಯೂರೋ ಮತ್ತು ಚಿನ್ನದತ್ತ ಸಾಗುವುದು ರಷ್ಯಾದ ಯೋಜನೆಯಾಗಿದೆ ಎನ್ನಲಾಗಿದೆ.

- Advertisement -
- Advertisement -

ರಷ್ಯಾ ಅಮೆರಿಕದ ಡಾಲರ್ ಹಣಕಾಸು ವ್ಯವಸ್ಥೆಯಿಂದ ಹೊರಬಂದಿದೆ ಎಂದು ssaurel.com ಮಾಧ್ಯಮ ವರದಿ ಮಾಡಿದೆ. ಇದು ಭಾರತೀಯ ಮಾಧ್ಯಮಗಳಲ್ಲಿ ಸಣ್ಣ ಸುದ್ದಿಯಾಗಿ ಮರೆಯಾದಂತಿದೆ.

ಸಾಮಾನ್ಯ ಭಾಷೆಯಲ್ಲಿ ಸರಳವಾಗಿ ಹೇಳುವುದಾದರೆ, ರಷ್ಯಾ ಅಮೆರಿಕನ್ ಡಾಲರ್ ಅನ್ನು ತ್ಯಜಿಸಿದ್ದು, ಮುಂಬರುವ ವರ್ಷಗಳಲ್ಲಿ ಹೆಚ್ಚು ಹೆಚ್ಚು ದೇಶಗಳು ಅಮೆರಿಕನ್‍ ಡಾಲರ್ ವ್ಯವಸ್ಥೆಯಿಂದ ನಿರ್ಗಮಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಜೂನ್ 2021ರ ಆರಂಭದಲ್ಲಿ, ನಾವು ಭೌಗೋಳಿಕ ರಾಜಕೀಯ ಮತ್ತು ವಿಶ್ವ ಆರ್ಥಿಕತೆಯ ವಿಷಯದಲ್ಲಿ ಬಹಳ ಆಸಕ್ತಿದಾಯಕ ಸುದ್ದಿಗಳನ್ನು ಗಮನಿಸುತ್ತಿದ್ದೇವೆ: ಅದರಲ್ಲಿ ರಷ್ಯಾ ಯುಎಸ್ ಡಾಲರ್ ಅನ್ನು ಕೈಬಿಟ್ಟಿದ್ದು ಕೂಡ ಒಂದು ಪ್ರಮುಖ ವಿದ್ಯಮಾನ.

ರಷ್ಯಾದ ಹಣಕಾಸು ಮಂತ್ರಿ, ನ್ಯಾಷನಲ್ ಯೋಗಕ್ಷೇಮ ನಿಧಿ, ರಷ್ಯಾದ ತೈಲ ನಿಧಿ, ಅಮೆರಿಕನ್‍ ಡಾಲರ್‌ಗೆ ಒಡ್ಡಿಕೊಳ್ಳುವುದರಿಂದ ಸಂಪೂರ್ಣವಾಗಿ ಹೊರಗುಳಿಯುತ್ತದೆ ಎಂದು ಘೋಷಿಸಿದ್ದಾರೆ. ಇದರ ಪ್ರಮಾಣವೀಗ 40 ಬಿಲಿಯನ್ ಡಾಲರ್‌ಗಳಷ್ಟಿದೆ.

ಚೀನಾದ ಕರೆನ್ಸಿ ಯುವಾನ್, ಯುರೋಪಿಯನ ಒಕ್ಕೂಟದ ಯೂರೋ ಮತ್ತು ಚಿನ್ನದತ್ತ ಸಾಗುವುದು ರಷ್ಯಾದ ಯೋಜನೆಯಾಗಿದೆ ಎನ್ನಲಾಗಿದೆ.

“ಇಂದು ನಾವು ಡಾಲರ್‌ಗಳಲ್ಲಿ ಸುಮಾರು ಶೇ. 35 ಎನ್‌ಡಬ್ಲ್ಯೂಎಫ್  (ನ್ಯಾಷನಲ್‍ ವೆಲ್‍ಫೇರ್ ಫಂಡ್‍) ಹೂಡಿಕೆಗಳನ್ನು ಹೊಂದಿದ್ದೇವೆ. ಡಾಲರ್ ಸ್ವತ್ತುಗಳಿಂದ ಸಂಪೂರ್ಣವಾಗಿ ಹೊರಬರಲು ನಾವು ನಿರ್ಧರಿಸಿದ್ದೇವೆ. ಡಾಲರ್‌ಗಳಲ್ಲಿನ ಹೂಡಿಕೆಗಳನ್ನು ಯುರೋ ಮತ್ತು ಚಿನ್ನದ ಹೆಚ್ಚಳದೊಂದಿಗೆ ಬದಲಾಯಿಸುತ್ತೇವೆ’ ಎಂದು ರಷ್ಯಾ ಆಡಳಿತ ತಿಳಿಸಿದೆ.

ರಷ್ಯಾದ ರಾಷ್ಟ್ರೀಯ ಯೋಗಕ್ಷೇಮ ನಿಧಿ (ನ್ಯಾಷನಲ್‍ ವೆಲ್‍ಫೇರ್ ಫಂಡ್‍) ಅಂದಾಜು 120 ಬಿಲಿಯನ್ ಡಾಲರ್‌ಗಳನ್ನು ಹೊಂದಿದೆ. ಆದ್ದರಿಂದ ರಷ್ಯಾ ತೆಗೆದುಕೊಂಡ ನಿರ್ಧಾರವು ಆರ್ಥಿಕ ದೃಷ್ಟಿಕೋನದಿಂದ ಮಹತ್ವದ್ದಾಗಿದೆ. ಹಾಗೆಯೇ, ಭೌಗೋಳಿಕ ರಾಜಕೀಯ ದೃಷ್ಟಿಕೋನದಿಂದ ಕೂಡ ಗಮನಾರ್ಹವಾಗಿದೆ.

ರಷ್ಯಾ  ಕಳೆದ ಒಂದು ದಶಕದಿಂದ ಯುಎಸ್ ಡಾಲರ್ ಅನ್ನು ಹೊರಹಾಕುವ ಗುರಿಯನ್ನು ಹೊಂದಿದೆ.

ರಷ್ಯಾದ ಈ ಘೋಷಣೆಯೇನೂ ಆಶ್ಚರ್ಯಕರವಲ್ಲ. ಈಗ ಹಲವಾರು ವರ್ಷಗಳಿಂದ ಅಂತರರಾಷ್ಟ್ರೀಯ ರಾಜಕಾರಣವನ್ನು ಅನುಸರಿಸುತ್ತಿರುವವರು  ಇದನ್ನು ಬಲ್ಲರು. ರಷ್ಯಾ ಯುಎಸ್ ಡಾಲರ್ ಅನ್ನು ಅವಲಂಬಿಸಿರುವ ಬಗ್ಗೆ ರಷ್ಯಾದ ಅಧ್ಯಕ್ಷ ಡಿಮಿಟ್ರಿ ಎ. ಮೆಡ್ವೆಡೆವ್ ಅವರು 2009ರಲ್ಲಿ ನೀಡಿದ ಎಚ್ಚರಿಕೆಯನ್ನು ಇಲ್ಲಿ ಗಮನಿಸಬಹುದು.

ಡಿಮಿಟ್ರಿ ಎ. ಮೆಡ್ವೆಡೆವ್ ಅವರ ಕಾಮೆಂಟ್‌ಗಳು ಆ ಸಮಯದಲ್ಲಿ ಜಗತ್ತು ಅನುಭವಿಸುತ್ತಿದ್ದ ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಮೇಲೆ ಕೇಂದ್ರೀಕೃತವಾಗಿತ್ತು. ಆ ಬಿಕ್ಕಟ್ಟಿಗೆ ಅಮೆರಿಕೆವೇ ಹೆಚ್ಚು ಹೊಣೆಗಾರನಾಗಿದೆ ಎಂಬ ತರ್ಕವನ್ನು ಅನೇಕರು ದೇಶಗಳು ಸಾರ್ವಜನಿಕವಾಗಿ ಒಪ್ಪಿಕೊಳ್ಳಲು ಸಿದ್ಧವಿರಲಿಲ್ಲ.

ಆ ಸಮಯದಲ್ಲಿ, ಯುಎಸ್ ಡಾಲರ್ ಅನ್ನು ಬದಲಿಸಲು  ಸೂಪರ್ ನ್ಯಾಷನಲ್‍  ಕರೆನ್ಸಿಯನ್ನು ರಚಿಸುವ ಬಗ್ಗೆ ರಷ್ಯಾ ಮತ್ತು ಚೀನಾ ಇತರ ದೇಶಗಳೊಂದಿಗೆ ಚರ್ಚೆ ಮಾಡಿದ್ದವು. ಅಂದಿನಿಂದ ಈ ಆಲೋಚನೆಯನ್ನು ಕೈಬಿಡಲಾಗಿದೆ. ಆದರೆ ಸತೋಶಿ ನಕಮೊಟೊ ಅವರು ಜನವರಿ 3, 2009ರಂದು ಪ್ರಾರಂಭಿಸಿದ ತನ್ನ ಬಿಟ್‌ಕಾಯಿನ್‌ನೊಂದಿಗೆ ಇದನ್ನು ಕಾರ್ಯಗತಗೊಳಿಸಿದ್ದಾರೆ ಎಂಬುದು ಗಮನಿಸಬೇಕಾದ ಸಂಗತಿ.

ಈಗ ರಷ್ಯಾ ಇತರ ಗುರಿಗಳನ್ನು ಮನಸ್ಸಿನಲ್ಲಿಟ್ಟುಕೊಂಡಿದೆ. ವ್ಲಾಡಿಮಿರ್ ಪುಟಿನ್ ನೇತೃತ್ವದ ದೇಶವು ಅಮೆರಿಕದ ಆರ್ಥಿಕ ನಿರ್ಬಂಧಗಳ ಅಪಾಯದಿಂದ ತನ್ನನ್ನು ತಾನು ರಕ್ಷಿಸಿಕೊಳ್ಳಲು ಬಯಸಿದೆ. ಆದ್ದರಿಂದ ರಷ್ಯಾ ಒಂದು ಆಧಿಪತ್ಯದ ಕರೆನ್ಸಿಯನ್ನು ಬಿಟ್ಟು ಚೀನಾದ ಯುವಾನ್ ಮತ್ತು ಯೂರೋ ಕಡೆಗೆ ಚಲಿಸುತ್ತಿದೆ. ಈ ಅಮೇರಿಕನ್ ಡಾಲರ್ ಅನ್ನು ಚೀನಾದ ಯುವಾನ್‌ಗೆ ಪರಿವರ್ತಿಸುವುದರಿಂದ ರಷ್ಯಾಕ್ಕೆ ಬೀಜಿಂಗ್‌ನೊಂದಿಗಿನ ತನ್ನ ಪ್ರಮುಖ ಕಾರ್ಯತಂತ್ರದ ಮೈತ್ರಿಯನ್ನು ಬಲಪಡಿಸಲು ಸಹ ಅವಕಾಶ ನೀಡುತ್ತದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಚಿಂತಕ ಬಂಜಗೆರೆ ಜಯಪ್ರಕಾಶ್‍, ‘ಯುರೋಪಿಯನ್‍ ಒಕ್ಕೂಟ ತನ್ನದೇ ಕರೆನ್ಸಿಯನ್ನು ಮಾಡಿಕೊಂಡಿದ್ದು ಅಮೆರಿಕದ ಡಾಲರ್ ಅಧಿಪತ್ಯಕ್ಕೆ ಅಂತಹ ದೊಡ್ಡ ಪೆಟ್ಟನ್ನೇನೂ ನೀಡಿಲ್ಲ. ಈಗ ರಷ್ಯಾ ಹಾದಿಯಲ್ಲೇ ಚೀನಾ ನಿರ್ಧಾರ ತೆಗೆದುಕೊಂಡರೆ ಆಗ ನಿಜಕ್ಕೂ ಡಾಲರ್ ಅಧಿಪತ್ಯಕ್ಕೆ ಹಿನ್ನಡೆಯಾಗಲಿದೆ’ ಎಂದರು.

‘ಈ ಹಿಂದೆ ಲಿಬಿಯಾ ಕೂಡ ತನ್ನ ತೈಲ ಆರ್ಥಿಕತೆಯನ್ನು ಗಮನದಲ್ಲಿ ಇಟ್ಟುಕೊಂಡು ಡಾಲರ್‌ನಿಂದ ಮುಕ್ತಿ ಪಡೆಯಲು ಬಯಸಿತ್ತು. ಅದಕ್ಕಾಗಿ ಅದು ಹಲವು ಆಫ್ರಿಕನ್‍ ದೇಶಗಳೊಂದಿಗೆ ಮಾತುಕತೆಯನ್ನೂ ನಡೆಸಿತ್ತು. ತೈಲ ಮತ್ತು ಡಾಲರ್ ವಿನಿಮಯವನ್ನೇ ನೆಚ್ಚಿಕೊಂಡಿರುವ ಅಮೆರಿಕ, ಲಿಬಿಯಾ ಮುಖ್ಯಸ್ಥ ಗಡಾಫಿ ಸರ್ವಾಧಿಕಾರಿ ಎಂಬುದನ್ನು ಹೈಲೈಟ್‍ ಮಾಡಿ ಅಲ್ಲಿ ತನ್ನ ಸೈನ್ಯವನ್ನು ಬಿಟ್ಟು ದಾಳಿ ನಡೆಸಿತ್ತು. ತಾನೇ ಒಂದು ಸರ್ವಾಧಿಕಾರಿ ಎಂಬುದನ್ನು ಮರೆಮಾಚುತ್ತ ಅಮೆರಿಕ ಅಧಿಪತ್ಯ ನಡೆಸುತ್ತಿದೆ ರಷ್ಯಾದ ನಿಲುವು ಬೆಂಬಲಿಸಿ ಇನ್ನಷ್ಟು ದೇಶಗಳು, ಮುಖ್ಯವಾಗಿ ಚೀನಾ ಡಾಲರ್ ತೊರೆದರೆ ಅಮೆರಿಕದ ಎಕಾನಮಿ ಅಧಿಪತ್ಯಕ್ಕೆ ಹೊಡೆತ ಬೀಳಬಹುದು’ ಎಂದು ರಾಜಕೀಯ ಚಿಂತಕ ಮುಜಾಫರ್ ಅಸ್ಸಾದಿ ನಾನುಗೌರಿ.ಕಾಂ ಗೆ ತಿಳಿಸಿದರು.

ಚೀನಾದ ಯುವಾನ್ ಮತ್ತು ಯೂರೋಗಳ ಜೊತೆಗೆ, ರಷ್ಯಾ ತನ್ನ ರಾಷ್ಟ್ರೀಯ ಯೋಗಕ್ಷೇಮ ನಿಧಿ ನಿಕ್ಷೇಪಗಳಿಗೆ ಚಿನ್ನದ ಖರೀದಿಯನ್ನು ಕೂಡ ಸೇರಿಸುತ್ತಿದೆ. ಈ ನಿರ್ಧಾರವು ಇನ್ನೂ ಕಡಿಮೆ ಅಪಾಯಕಾರಿಯಾಗಿದೆ, ಏಕೆಂದರೆ ಚಿನ್ನವು ಶತಮಾನಗಳಿಂದ ಗುರುತಿಸಲ್ಪಟ್ಟ ಮೌಲ್ಯದ ಮೀಸಲು ಎಂದು ತಿಳಿದಿದೆ.

ಅಮೆರಿಕದ ನಿರ್ಬಂಧಗಳ ಅಪಾಯಗಳಿಂದ ರಷ್ಯಾ ನಿಜವಾಗಿಯೂ ತನ್ನನ್ನು ತಾನು ರಕ್ಷಿಸಿಕೊಳ್ಳಲು ಬಯಸಿದರೆ, ಅದು ಭೌತಿಕ ಚಿನ್ನದ ಖರೀದಿಗೆ ತಿರುಗಬೇಕಾಗುತ್ತದೆ.

ಯುಎಸ್ ಡಾಲರ್ ನೂರು ವರ್ಷಗಳಿಂದ ವಿಶ್ವದ ಮೀಸಲು ಕರೆನ್ಸಿಯಾಗಿದೆ. ಆದರೆ ನಿಜವಾದ ಸಮಸ್ಯೆ ಏನೆಂದರೆ, ಅಮೆರಿಕವು ತನ್ನ ಕರೆನ್ಸಿಯನ್ನು ವಿಶ್ವದಾದ್ಯಂತ ತನ್ನ ಪ್ರಾಬಲ್ಯವನ್ನು ಸ್ಥಾಪಿಸಲು ಆಯುಧವಾಗಿ ಬಳಸುತ್ತಿದೆ.

ಅಮೆರಿಕ ಇದನ್ನು ಮಾಡಲು ಶಕ್ತವಾಗಿದೆ ಏಕೆಂದರೆ ಅದು ವಿಶ್ವದ ಮೀಸಲು ಕರೆನ್ಸಿಯನ್ನು ನಿಯಂತ್ರಿಸುತ್ತದೆ. ಈ ಅನ್ಯಾಯವನ್ನು ಒಪ್ಪಿಕೊಳ್ಳಲು ಹೆಚ್ಚು ಹೆಚ್ಚು ದೇಶಗಳು ಇನ್ನು ಮುಂದೆ ಸಿದ್ಧವಿಲ್ಲ. ಅವು ಯುಎಸ್ ಡಾಲರ್ ವ್ಯವಸ್ಥೆಯಿಂದ ಹೊರಬರಲು ಉತ್ತಮ ಮಾರ್ಗದ ಬಗ್ಗೆ ಯೋಚಿಸುತ್ತಿವೆ.

ಯುಎಸ್ ಡಾಲರ್ ವ್ಯವಸ್ಥೆಯಿಂದ ಹೊರಬರುವುದು ಒಂದು ಸಂಕೀರ್ಣ ವಿಷಯ, ಆದರೆ ರಷ್ಯಾ ತೋರಿಸಿದಂತೆ ಇದು ಸಾಧ್ಯ.

ಮುಂದಿನ ಇಪ್ಪತ್ತು ವರ್ಷಗಳಲ್ಲಿ, ಯುಎಸ್ ಡಾಲರ್ ಮೇಲಿನ ಒತ್ತಡವು ಹೆಚ್ಚಾಗುವ ಸಾಧ್ಯತೆಯಿದೆ. ಯುಎಸ್ ಡಾಲರ್ ವಿಶ್ವದ ಮೀಸಲು ಕರೆನ್ಸಿಯಾಗಿ ಉಳಿಯುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಚೀನಾಕ್ಕೆ ಪಟ್ಟಭದ್ರ ಆಸಕ್ತಿ ಇದೆ. ಜಾಗತಿಕ ವಿತ್ತೀಯ ಮತ್ತು ಹಣಕಾಸು ವ್ಯವಸ್ಥೆಯಲ್ಲಿ ಅಮೆರಿಕ ಪ್ರಾಬಲ್ಯ ಹೊಂದಿರುವವರೆಗೆ ವಿಶ್ವದ ಪ್ರಮುಖ ಮಹಾಶಕ್ತಿಯಾಗುವುದು ಅಸಾಧ್ಯ ಎಂದು ಬೀಜಿಂಗ್ ಅರ್ಥ ಮಾಡಿಕೊಂಡಿದೆ.

ಚೀನಾ ನಿಧಾನವಾಗಿ ಮುಂದುವರಿಯುತ್ತದೆ, ಚೀನಾ ತನ್ನ ಡಿಜಿಟಲ್ ಯುವಾನ್ ಯೋಜನೆಯಲ್ಲಿ ಕೆಲಸ ಮಾಡುವುದನ್ನು ಮುಂದುವರೆಸಿದೆ. ಪ್ರಪಂಚದಾದ್ಯಂತದ ಯುಎಸ್ ಡಾಲರ್ ಪ್ರಾಬಲ್ಯದ ಈ ಅಂತ್ಯವು ಮುಂದಿನ  ವರ್ಷಗಳಲ್ಲಿ ದೃಢೀಕರಿಸಲ್ಪಟ್ಟರೆ, ಅದು ಸುಲಭವಾಗಿ ಸಂಭವಿಸುವುದಿಲ್ಲ. ಐತಿಹಾಸಿಕವಾಗಿ, ವಿಶ್ವ ಮೀಸಲು ಕರೆನ್ಸಿಗಳ ನಡುವಿನ ಪರಿವರ್ತನೆಗಳು ಯಾವಾಗಲೂ ಹಿಂಸಾತ್ಮಕವಾಗಿ ಸಂಭವಿಸಿವೆ.

‘ಶಸ್ತ್ರಾಸ್ತ ಮಾರಾಟವೇ ಅಮೆರಿಕದ ಮುಖ್ಯ ಆದಾಯ. ಅಲ್ಲಿ ಡೆಮಾಕ್ರಟಿಕ್‍ ಬರಲಿ ಅಥವಾ ರಿಪಬ್ಲಿಕನ್‍ಗಳು ಅಧಿಕಾರ ವಹಿಸಿಕೊಳ್ಳಲಿ, ಆರ್ಥಿಕತೆಯನ್ನು ಅಲ್ಲಿನ ಶ್ರೀಮಂತರು ನಿಯಂತ್ರಿಸುತ್ತಿದ್ದಾರೆ. ವಿಶ್ವದ ಶೇ. 68ರಷ್ಟು ಪೇಟೆಂಟ್‍ಗಳು ಅಮೆರಿಕದ ಬಳಿಯಿವೆ. ಸಣ್ಣ ದೇಶಗಳ ಸಂಶೋಧನೆಗಳನ್ನು ಖರೀದಿಸಿ ಅದು ಪೇಟೆಂಟ್‍ ಹಕ್ಕು ಪಡೆದುಕೊಳ್ಳುತ್ತದೆ. ಚೀನಾ ದೃಢವಾದ ಹೆಜ್ಜೆ ಇಟ್ಟಾಗ ಮಾತ್ರ ಅಮೆರಿಕದ ಈ ಡಾಲರ್ ಪ್ರಾಬಲ್ಯಕ್ಕೆ ಹಿನ್ನಡೆ ಆಗಬಹುದು’ ಎಂದು ಬಂಜಗೆರೆ ಹೇಳುತ್ತಾರೆ.

ಈ ಪರಿವರ್ತನೆಯು ಹೆಚ್ಚು ಶಾಂತಿಯುತವಾಗಿರಲು, ಜಗತ್ತು ತಟಸ್ಥ, ರಾಜಕೀಯ-ರಹಿತ ಕರೆನ್ಸಿಗೆ ಚಲಿಸುವ ಸಮಯ ಬರಲಿದೆ. ಏನೇ ಆಗಲಿ, ಪ್ರಪಂಚದಾದ್ಯಂತ ಯುಎಸ್ ಡಾಲರ್ ಪ್ರಾಬಲ್ಯವು ಮುಂದಿನ ದಶಕಗಳಲ್ಲಿ ಆಪತ್ತು ಎದುರಿಸಲಿದೆ ಎಂಬುದನ್ನು ಈ ಘಟನೆಗಳು ಸೂಚಿಸುತ್ತವೆ.

-ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಬೀದಿಗೆ ಬಿದ್ದ ಲೋಹದ ಮೇಲೆ ಚಿತ್ತಾರ ಮೂಡಿಸುವ ಒನಿಪೆಂಟಾದ ಕಲಾವಿದರ ಬದುಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...