Homeಅಂತರಾಷ್ಟ್ರೀಯರಷ್ಯಾ-ಉಕ್ರೇನ್‌ ಬಿಕ್ಕಟ್ಟು: ಕ್ಷಿಪಣಿ ದಾಳಿ; ಕರ್ನಾಟಕ ಮೂಲದ ವಿದ್ಯಾರ್ಥಿ ಬಲಿ

ರಷ್ಯಾ-ಉಕ್ರೇನ್‌ ಬಿಕ್ಕಟ್ಟು: ಕ್ಷಿಪಣಿ ದಾಳಿ; ಕರ್ನಾಟಕ ಮೂಲದ ವಿದ್ಯಾರ್ಥಿ ಬಲಿ

- Advertisement -
- Advertisement -

ಇಂದು ಬೆಳಗ್ಗೆ ಉಕ್ರೇನ್‌ನ ಖಾರ್ಕಿವ್‌ನಲ್ಲಿ ನಡೆದ ಕ್ಷಿಪಣಿ ದಾಳಿಯಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ ತಿಳಿಸಿದೆ. ಸಚಿವಾಲಯವು ವಿದ್ಯಾರ್ಥಿಯ ಕುಟುಂಬದೊಂದಿಗೆ ಸಂಪರ್ಕದಲ್ಲಿದೆ ಎಂದು ಹೇಳಿದ್ದು, ವಿದ್ಯಾರ್ಥಿಯ ಹೆಸರನ್ನು ಅಧೀಕೃತವಾಗಿ ಇನ್ನೂ ಬಿಡುಗಡೆ ಮಾಡಿಲ್ಲ.

“ಇಂದು ಬೆಳಿಗ್ಗೆ ಖಾರ್ಕಿವ್‌ನಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ ಶೆಲ್ ದಾಳಿಯಲ್ಲಿ ತನ್ನ ಪ್ರಾಣವನ್ನು ಕಳೆದುಕೊಂಡಿದ್ದಾನೆ ಎಂದು ನಾವು ತೀವ್ರ ದುಃಖದಿಂದ ದೃಢೀಕರಿಸುತ್ತೇವೆ. ಸಚಿವಾಲಯವು ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಉಕ್ರೇನ್‌‌‌ ಮೇಲಿನ ದಾಳಿಯ ನಂತರ ಪುಟಿನ್‌ ಅವರು ಮೋದಿ ಜೊತೆಗೆ ಮಾತುಕತೆಗೆ ಮನವಿ ಮಾಡಿಲ್ಲ

“ರಷ್ಯಾ ಮತ್ತು ಉಕ್ರೇನ್‌ನ ರಾಯಭಾರಿಗಳನ್ನು ಕರೆಸಿಕೊಂಡಿರುವ ವಿದೇಶಾಂಗ ಕಾರ್ಯದರ್ಶಿ ಖಾರ್ಕಿವ್‌ನಲ್ಲಿರುವ ಭಾರತೀಯ ಪ್ರಜೆಗಳಿಗೆ ಮತ್ತು ಇತರ ಸಂಘರ್ಷ ವಲಯಗಳಲ್ಲಿರುವ ನಗರಗಳಿಗೆ ತುರ್ತು ಸುರಕ್ಷಿತ ಮಾರ್ಗಕ್ಕಾಗಿ ನಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ. ಇದೇ ರೀತಿಯ ಕ್ರಮವನ್ನು ರಷ್ಯಾ ಮತ್ತು ಉಕ್ರೇನ್‌ನಲ್ಲಿರುವ ನಮ್ಮ ರಾಯಭಾರಿಗಳು ಸಹ ಕೈಗೊಳ್ಳುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಖಾರ್ಕಿವ್ ವೈದ್ಯಕೀಯ ವಿಶ್ವವಿದ್ಯಾಲಯದ 4 ನೇ ವರ್ಷದ ಭಾರತೀಯ ವಿದ್ಯಾರ್ಥಿ ನವೀನ್ ಶೇಖರರಪ್ಪ ಜ್ಞಾನಗೌಡರ ಎಂದು ಮೃತಪಟ್ಟ ವಿದ್ಯಾರ್ಥಿಯನ್ನು ಗುರುತಿಸಲಾಗಿದೆ ಎಂದು ಪತ್ರಕರ್ತಬ್ಬರು ಟ್ವೀಟ್ ಮಾಡಿದ್ದರೆ. ಇವರು ಕರ್ನಾಟಕ ಮೂಲದ ವಿದ್ಯಾರ್ಥಿ ಎಂದು ಪ್ರಜಾವಾಣಿ ಬರೆದಿದ್ದು, ಇನ್ನೂ ದೃಢೀಕರಿಸಿಲ್ಲ ಎಂದು ತನ್ನ ವರದಿಯಲ್ಲಿ ಹೇಳಿದೆ.

“ಖಾರ್ಕಿವ್ ಗವರ್ನರ್ ಹೌಸ್/ಸಿಟಿ ಹಾಲ್‌ಗೆ ಆಹಾರ ತೆಗೆದುಕೊಳ್ಳಲು ಹೋದಾಗ ರಷ್ಯಾದ ಕ್ಷಿಪಣಿ ದಾಳಿಯಲ್ಲಿ ಕರ್ನಾಟಕದ ಒಬ್ಬ ಭಾರತೀಯ ವೈದ್ಯಕೀಯ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಭಾರತೀಯ ವಿದ್ಯಾರ್ಥಿ ಸಂಯೋಜಕಿ ಡಾ.ಪೂಜಾ ಖಾರ್ಕಿವ್‌ನಿಂದ ನನಗೆ ಮಾಹಿತಿ ನೀಡಿದ್ದಾರೆ. 3000-4000 ಭಾರತೀಯರು ಇನ್ನೂ ಖಾರ್ಕಿವ್‌ನಲ್ಲಿ ಸಿಲುಕಿಕೊಂಡಿದ್ದಾರೆ” ಎಂದು ಆದಿಥ್ಯ ರಾಜ್ ಕೌಲ್‌ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ರಷ್ಯಾ-ಉಕ್ರೇನ್ ಬಿಕ್ಕಟ್ಟು: 352 ಉಕ್ರೇನಿಯನ್ ನಾಗರಿಕರು ಸಾವು, 1,684 ಮಂದಿಗೆ ಗಾಯ

ರಷ್ಯಾ ಸೇನೆ ಉಕ್ರೇನ್‌ ಮೇಲೆ ತನ್ನ ದಾಳಿಯನ್ನು ಮುಂದುವರೆಸುತ್ತಿರುವ ಮಧ್ಯೆ, ಭಾರತವು ತನ್ನ ಎಲ್ಲಾ ನಾಗರಿಕರನ್ನು ‘ತುರ್ತಾಗಿ ರೈಲುಗಳು ಅಥವಾ ಲಭ್ಯವಿರುವ ಯಾವುದೇ ವಿಧಾನಗಳ ಮೂಲಕ’ ಉಕ್ರೇನ್ ರಾಜಧಾನಿ ಕೈವ್‌ನಿಂದ ತೊರೆಯುವಂತೆ ಮಂಗಳವಾರ ಒತ್ತಾಯಿಸಿದೆ.

ಈ ಬಗ್ಗೆ ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆಗೆ ಟ್ವೀಟ್ ಮಾಡಿರುವ ಉಕ್ರೇನ್‌ನ ಕೈವ್‌ನಲ್ಲಿರುವ ಭಾರತದ ರಾಯಭಾರ ಕಚೇರಿ, “ಕೈವ್‌ನಲ್ಲಿರುವ ಭಾರತೀಯರಿಗೆ ಸಲಹೆ… ಲಭ್ಯವಿರುವ ರೈಲುಗಳ ಮೂಲಕ ಅಥವಾ ಲಭ್ಯವಿರುವ ಯಾವುದೇ ಇತರ ವಿಧಾನಗಳ ಮೂಲಕ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಭಾರತೀಯ ಪ್ರಜೆಗಳಿಗೆ ಇಂದು ತುರ್ತಾಗಿ ಕೈವ್ ತೊರೆಯುವಂತೆ ಸೂಚಿಸಲಾಗಿದೆ” ಎಂದು ಹೇಳಿದೆ.

ಕೈವ್‌ನ ವಾಯುವ್ಯ ರಸ್ತೆಗಳಲ್ಲಿ ರಷ್ಯಾದ ಮಿಲಿಟರಿ ವಾಹನಗಳ ದೀರ್ಘ ಬೆಂಗಾವಲುಗಳ ಉಪಗ್ರಹ ಚಿತ್ರಗಳು ಹೊರಹೊಮ್ಮಿದ ಗಂಟೆಗಳ ನಂತರ ಈ ಸಲಹೆಯನ್ನು ಭಾರತೀಯ ರಾಯಭಾರಿ ಕಚೇರಿ ಈ ಪೋಸ್ಟ್ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಅಮೆರಿಕಾ ಮೂಲದ ಬಾಹ್ಯಾಕಾಶ ತಂತ್ರಜ್ಞಾನ ಕಂಪನಿ ಬಿಡುಗಡೆ ಮಾಡಿದ ಈ ಚಿತ್ರಗಳಲ್ಲಿ ನೂರಾರು ಟ್ಯಾಂಕ್‌ಗಳು, ಫಿರಂಗಿಗಳು, ಶಸ್ತ್ರಸಜ್ಜಿತ ಲಾಜಿಸ್ಟಿಕ್ ವಾಹನಗಳು ಕಾಣುತ್ತಿವೆ ಎಂದು ವರದಿ ಉಲ್ಲೇಖಿಸಿದೆ.

ಭಾರತೀಯ ರಾಯಭಾರಿಯ ಈ ನಡೆಯನ್ನು ವಿರೋಧಿಸಿರುವ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ, “ಸಾವು-ಬದುಕಿನ ನಡುವೆ ಇರುವ ಸಾವಿರಾರು ಭಾರತೀಯರಿಗೆ ‘ಸಹಾಯ’ ಮಾಡುವ ಬದಲು ‘ಆತ್ಮನಿರ್ಭರ ಸಲಹೆ’ ಮಾತ್ರ ನೀಡುವುದೇ? ಕಳೆದ 5 ದಿನಗಳಿಂದ ಉಕ್ರೇನ್‌ನಲ್ಲಿ ಮೋದಿ ಸರ್ಕಾರ ಸಾವಿರಾರು ಮಕ್ಕಳನ್ನು ಇಲ್ಲಿಂದ ಅಲ್ಲಿಗೆ ಓಡಿಸುತ್ತಿದೆಯೇ? ಇಂತಹ ವಿನಾಶದಿಂದ ಹೊರಬರುವುದು ಹೇಗೆ, ಅಷ್ಟು ದೂರವನ್ನು ಹೇಗೆ ಕ್ರಮಿಸುವುದು ಮತ್ತು ಎಲ್ಲಿಗೆ ಹೋಗಬೇಕು? ಮಕ್ಕಳ ಬದುಕಿನೊಂದಿಗೆ ಎಷ್ಟು ದಿನ ಆಟವಾಡುತ್ತಿದ್ದೀರಿ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉಕ್ರೇನ್ ಮೇಲೆ ಯುದ್ಧ ಸಾರಿದ ರಷ್ಯಾ; ವಿವಿಧ ರಾಷ್ಟ್ರಗಳ ಮುಖಂಡರು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...