Homeಅಂತರಾಷ್ಟ್ರೀಯರಷ್ಯಾ-ಉಕ್ರೇನ್‌ ಬಿಕ್ಕಟ್ಟು: ಕ್ಷಿಪಣಿ ದಾಳಿ; ಕರ್ನಾಟಕ ಮೂಲದ ವಿದ್ಯಾರ್ಥಿ ಬಲಿ

ರಷ್ಯಾ-ಉಕ್ರೇನ್‌ ಬಿಕ್ಕಟ್ಟು: ಕ್ಷಿಪಣಿ ದಾಳಿ; ಕರ್ನಾಟಕ ಮೂಲದ ವಿದ್ಯಾರ್ಥಿ ಬಲಿ

- Advertisement -
- Advertisement -

ಇಂದು ಬೆಳಗ್ಗೆ ಉಕ್ರೇನ್‌ನ ಖಾರ್ಕಿವ್‌ನಲ್ಲಿ ನಡೆದ ಕ್ಷಿಪಣಿ ದಾಳಿಯಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ ತಿಳಿಸಿದೆ. ಸಚಿವಾಲಯವು ವಿದ್ಯಾರ್ಥಿಯ ಕುಟುಂಬದೊಂದಿಗೆ ಸಂಪರ್ಕದಲ್ಲಿದೆ ಎಂದು ಹೇಳಿದ್ದು, ವಿದ್ಯಾರ್ಥಿಯ ಹೆಸರನ್ನು ಅಧೀಕೃತವಾಗಿ ಇನ್ನೂ ಬಿಡುಗಡೆ ಮಾಡಿಲ್ಲ.

“ಇಂದು ಬೆಳಿಗ್ಗೆ ಖಾರ್ಕಿವ್‌ನಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ ಶೆಲ್ ದಾಳಿಯಲ್ಲಿ ತನ್ನ ಪ್ರಾಣವನ್ನು ಕಳೆದುಕೊಂಡಿದ್ದಾನೆ ಎಂದು ನಾವು ತೀವ್ರ ದುಃಖದಿಂದ ದೃಢೀಕರಿಸುತ್ತೇವೆ. ಸಚಿವಾಲಯವು ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಉಕ್ರೇನ್‌‌‌ ಮೇಲಿನ ದಾಳಿಯ ನಂತರ ಪುಟಿನ್‌ ಅವರು ಮೋದಿ ಜೊತೆಗೆ ಮಾತುಕತೆಗೆ ಮನವಿ ಮಾಡಿಲ್ಲ

“ರಷ್ಯಾ ಮತ್ತು ಉಕ್ರೇನ್‌ನ ರಾಯಭಾರಿಗಳನ್ನು ಕರೆಸಿಕೊಂಡಿರುವ ವಿದೇಶಾಂಗ ಕಾರ್ಯದರ್ಶಿ ಖಾರ್ಕಿವ್‌ನಲ್ಲಿರುವ ಭಾರತೀಯ ಪ್ರಜೆಗಳಿಗೆ ಮತ್ತು ಇತರ ಸಂಘರ್ಷ ವಲಯಗಳಲ್ಲಿರುವ ನಗರಗಳಿಗೆ ತುರ್ತು ಸುರಕ್ಷಿತ ಮಾರ್ಗಕ್ಕಾಗಿ ನಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ. ಇದೇ ರೀತಿಯ ಕ್ರಮವನ್ನು ರಷ್ಯಾ ಮತ್ತು ಉಕ್ರೇನ್‌ನಲ್ಲಿರುವ ನಮ್ಮ ರಾಯಭಾರಿಗಳು ಸಹ ಕೈಗೊಳ್ಳುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಖಾರ್ಕಿವ್ ವೈದ್ಯಕೀಯ ವಿಶ್ವವಿದ್ಯಾಲಯದ 4 ನೇ ವರ್ಷದ ಭಾರತೀಯ ವಿದ್ಯಾರ್ಥಿ ನವೀನ್ ಶೇಖರರಪ್ಪ ಜ್ಞಾನಗೌಡರ ಎಂದು ಮೃತಪಟ್ಟ ವಿದ್ಯಾರ್ಥಿಯನ್ನು ಗುರುತಿಸಲಾಗಿದೆ ಎಂದು ಪತ್ರಕರ್ತಬ್ಬರು ಟ್ವೀಟ್ ಮಾಡಿದ್ದರೆ. ಇವರು ಕರ್ನಾಟಕ ಮೂಲದ ವಿದ್ಯಾರ್ಥಿ ಎಂದು ಪ್ರಜಾವಾಣಿ ಬರೆದಿದ್ದು, ಇನ್ನೂ ದೃಢೀಕರಿಸಿಲ್ಲ ಎಂದು ತನ್ನ ವರದಿಯಲ್ಲಿ ಹೇಳಿದೆ.

“ಖಾರ್ಕಿವ್ ಗವರ್ನರ್ ಹೌಸ್/ಸಿಟಿ ಹಾಲ್‌ಗೆ ಆಹಾರ ತೆಗೆದುಕೊಳ್ಳಲು ಹೋದಾಗ ರಷ್ಯಾದ ಕ್ಷಿಪಣಿ ದಾಳಿಯಲ್ಲಿ ಕರ್ನಾಟಕದ ಒಬ್ಬ ಭಾರತೀಯ ವೈದ್ಯಕೀಯ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಭಾರತೀಯ ವಿದ್ಯಾರ್ಥಿ ಸಂಯೋಜಕಿ ಡಾ.ಪೂಜಾ ಖಾರ್ಕಿವ್‌ನಿಂದ ನನಗೆ ಮಾಹಿತಿ ನೀಡಿದ್ದಾರೆ. 3000-4000 ಭಾರತೀಯರು ಇನ್ನೂ ಖಾರ್ಕಿವ್‌ನಲ್ಲಿ ಸಿಲುಕಿಕೊಂಡಿದ್ದಾರೆ” ಎಂದು ಆದಿಥ್ಯ ರಾಜ್ ಕೌಲ್‌ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ರಷ್ಯಾ-ಉಕ್ರೇನ್ ಬಿಕ್ಕಟ್ಟು: 352 ಉಕ್ರೇನಿಯನ್ ನಾಗರಿಕರು ಸಾವು, 1,684 ಮಂದಿಗೆ ಗಾಯ

ರಷ್ಯಾ ಸೇನೆ ಉಕ್ರೇನ್‌ ಮೇಲೆ ತನ್ನ ದಾಳಿಯನ್ನು ಮುಂದುವರೆಸುತ್ತಿರುವ ಮಧ್ಯೆ, ಭಾರತವು ತನ್ನ ಎಲ್ಲಾ ನಾಗರಿಕರನ್ನು ‘ತುರ್ತಾಗಿ ರೈಲುಗಳು ಅಥವಾ ಲಭ್ಯವಿರುವ ಯಾವುದೇ ವಿಧಾನಗಳ ಮೂಲಕ’ ಉಕ್ರೇನ್ ರಾಜಧಾನಿ ಕೈವ್‌ನಿಂದ ತೊರೆಯುವಂತೆ ಮಂಗಳವಾರ ಒತ್ತಾಯಿಸಿದೆ.

ಈ ಬಗ್ಗೆ ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆಗೆ ಟ್ವೀಟ್ ಮಾಡಿರುವ ಉಕ್ರೇನ್‌ನ ಕೈವ್‌ನಲ್ಲಿರುವ ಭಾರತದ ರಾಯಭಾರ ಕಚೇರಿ, “ಕೈವ್‌ನಲ್ಲಿರುವ ಭಾರತೀಯರಿಗೆ ಸಲಹೆ… ಲಭ್ಯವಿರುವ ರೈಲುಗಳ ಮೂಲಕ ಅಥವಾ ಲಭ್ಯವಿರುವ ಯಾವುದೇ ಇತರ ವಿಧಾನಗಳ ಮೂಲಕ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಭಾರತೀಯ ಪ್ರಜೆಗಳಿಗೆ ಇಂದು ತುರ್ತಾಗಿ ಕೈವ್ ತೊರೆಯುವಂತೆ ಸೂಚಿಸಲಾಗಿದೆ” ಎಂದು ಹೇಳಿದೆ.

ಕೈವ್‌ನ ವಾಯುವ್ಯ ರಸ್ತೆಗಳಲ್ಲಿ ರಷ್ಯಾದ ಮಿಲಿಟರಿ ವಾಹನಗಳ ದೀರ್ಘ ಬೆಂಗಾವಲುಗಳ ಉಪಗ್ರಹ ಚಿತ್ರಗಳು ಹೊರಹೊಮ್ಮಿದ ಗಂಟೆಗಳ ನಂತರ ಈ ಸಲಹೆಯನ್ನು ಭಾರತೀಯ ರಾಯಭಾರಿ ಕಚೇರಿ ಈ ಪೋಸ್ಟ್ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಅಮೆರಿಕಾ ಮೂಲದ ಬಾಹ್ಯಾಕಾಶ ತಂತ್ರಜ್ಞಾನ ಕಂಪನಿ ಬಿಡುಗಡೆ ಮಾಡಿದ ಈ ಚಿತ್ರಗಳಲ್ಲಿ ನೂರಾರು ಟ್ಯಾಂಕ್‌ಗಳು, ಫಿರಂಗಿಗಳು, ಶಸ್ತ್ರಸಜ್ಜಿತ ಲಾಜಿಸ್ಟಿಕ್ ವಾಹನಗಳು ಕಾಣುತ್ತಿವೆ ಎಂದು ವರದಿ ಉಲ್ಲೇಖಿಸಿದೆ.

ಭಾರತೀಯ ರಾಯಭಾರಿಯ ಈ ನಡೆಯನ್ನು ವಿರೋಧಿಸಿರುವ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ, “ಸಾವು-ಬದುಕಿನ ನಡುವೆ ಇರುವ ಸಾವಿರಾರು ಭಾರತೀಯರಿಗೆ ‘ಸಹಾಯ’ ಮಾಡುವ ಬದಲು ‘ಆತ್ಮನಿರ್ಭರ ಸಲಹೆ’ ಮಾತ್ರ ನೀಡುವುದೇ? ಕಳೆದ 5 ದಿನಗಳಿಂದ ಉಕ್ರೇನ್‌ನಲ್ಲಿ ಮೋದಿ ಸರ್ಕಾರ ಸಾವಿರಾರು ಮಕ್ಕಳನ್ನು ಇಲ್ಲಿಂದ ಅಲ್ಲಿಗೆ ಓಡಿಸುತ್ತಿದೆಯೇ? ಇಂತಹ ವಿನಾಶದಿಂದ ಹೊರಬರುವುದು ಹೇಗೆ, ಅಷ್ಟು ದೂರವನ್ನು ಹೇಗೆ ಕ್ರಮಿಸುವುದು ಮತ್ತು ಎಲ್ಲಿಗೆ ಹೋಗಬೇಕು? ಮಕ್ಕಳ ಬದುಕಿನೊಂದಿಗೆ ಎಷ್ಟು ದಿನ ಆಟವಾಡುತ್ತಿದ್ದೀರಿ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉಕ್ರೇನ್ ಮೇಲೆ ಯುದ್ಧ ಸಾರಿದ ರಷ್ಯಾ; ವಿವಿಧ ರಾಷ್ಟ್ರಗಳ ಮುಖಂಡರು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...