Homeಕರ್ನಾಟಕರಷ್ಯಾ-ಉಕ್ರೇನ್‌ ವಾರ್‌‌ ಅಪ್‌ಡೇಟ್‌: 198 ಮಂದಿ ಮರಣ

ರಷ್ಯಾ-ಉಕ್ರೇನ್‌ ವಾರ್‌‌ ಅಪ್‌ಡೇಟ್‌: 198 ಮಂದಿ ಮರಣ

- Advertisement -
- Advertisement -

ರಷ್ಯಾದ ದಾಳಿಯಲ್ಲಿ 198 ಜನರು ಸಾವನ್ನಪ್ಪಿದ್ದಾರೆ ಮತ್ತು 1,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಉಕ್ರೇನಿಯನ್ ಆರೋಗ್ಯ ಸಚಿವರು ಹೇಳುತ್ತಾರೆ.

ಮೃತಪಟ್ಟವರಲ್ಲಿ ಮೂವರು ಮಕ್ಕಳಿದ್ದಾರೆ ಎಂದು ಆರೋಗ್ಯ ಸಚಿವ ವಿಕ್ಟರ್ ಲಿಯಾಶ್ಕೊ ಶನಿವಾರ ಹೇಳಿದ್ದಾರೆ. ಗುರುವಾರ ಆರಂಭವಾದ ರಷ್ಯಾದ ಆಕ್ರಮಣದಲ್ಲಿ 33 ಮಕ್ಕಳು ಸೇರಿದಂತೆ ಇನ್ನೂ 1,115 ಜನರು ಗಾಯಗೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಉಕ್ರೇನ್‌ ರಾಜಧಾನಿ ಕೀವ್‌ನಲ್ಲಿ ಹೋರಾಟ ಮುಂದುವರಿದಿದೆ.

ಆಕ್ರಮಣಕಾರಿ ರಷ್ಯಾದ ಪಡೆಗಳು ಶನಿವಾರ ಉಕ್ರೇನ್‌ನ ರಾಜಧಾನಿಯತ್ತ ನುಗ್ಗುತ್ತಿದ್ದಂತೆ, ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಶಸ್ತ್ರಾಸ್ತ್ರಗಳನ್ನು ತ್ಯಜಿಸಲು ಸೈನ್ಯಕ್ಕೆ ಕರೆ ನೀಡಿದ್ದಾರೆಂಬ ವದಂತಿ ಹಬ್ಬಿತ್ತು. ಅದಕ್ಕೆ ಸ್ಪಷ್ಟನೆ ನೀಡಿರುವ ಅಧ್ಯಕ್ಷ, “ಇದು ನಮ್ಮ ಭೂಮಿ, ನಮ್ಮ ದೇಶ, ನಮ್ಮ ಮಕ್ಕಳು. ನಾವು ಎಲ್ಲವನ್ನೂ ರಕ್ಷಣೆ ಮಾಡಿಕೊಳ್ಳುತ್ತೇವೆ” ಎಂದು ಅವರು ಕಿರು ವಿಡಿಯೊದಲ್ಲಿ ಹೇಳಿದರು.

ಉಕ್ರೇನ್ ಮೇಲಿನ ದಾಳಿಯನ್ನು ರಷ್ಯಾ ನಿಲ್ಲಿಸಬೇಕು. ಎಲ್ಲಾ ಪಡೆಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಕ್ಕೆ ವಿರುದ್ಧವಾಗಿ ರಷ್ಯಾ ವೀಟೋ ಹಕ್ಕು ಚಲಾಯಿಸಿದೆ. ಚೀನಾ, ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ದೇಶಗಳು ಸಂಘರ್ಷದಿಂದ ದೂರ ಉಳಿದಿವೆ.

PC: AP

ಉಕ್ರೇನ್‌ನಲ್ಲಿರುವ ಭಾರತೀಯರನ್ನು ಸ್ಥಳಾಂತರಿಸುವ ಏರ್ ಇಂಡಿಯಾ ವಿಮಾನವು ರೊಮೇನಿಯಾದಿಂದ ಹೊರಟು ಸಂಜೆ 4 ಗಂಟೆಗೆ ಮುಂಬೈಗೆ ಆಗಮಿಸಲಿದೆ. ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸಲು ಬುಕಾರೆಸ್ಟ್ ಮತ್ತು ಹಂಗೇರಿಯ ರಾಜಧಾನಿ ಬುಡಾಪೆಸ್ಟ್‌ಗೆ ಹೆಚ್ಚಿನ ವಿಮಾನಗಳನ್ನು ಏರ್ ಇಂಡಿಯಾ ಕಳುಹಿಸಿದೆ.

ಉಕ್ರೇನಿಯನ್ ರಕ್ಷಣಾ ಪಡೆಗಳು, ರಷ್ಯಾದ ಆಕ್ರಮಣಕ್ಕೆ ಉಗ್ರ ಪ್ರತಿರೋಧವನ್ನು ನೀಡುತ್ತಿವೆ. ರಾಜಧಾನಿ ಕೀವ್‌ ಮತ್ತು ದೇಶದ ಇತರ ನಗರಗಳ ಮೇಲೆ ನಿಯಂತ್ರಣವನ್ನು ಉಳಿಸಿಕೊಳ್ಳಲು ಉಕ್ರೇನ್‌ ರಕ್ಷಣಾ ಪಡೆಗಳು ಹೋರಾಡುತ್ತಿವೆ.

ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಶನಿವಾರ ಟ್ವಿಟರ್‌ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದು, ಸುಳ್ಳು ವರದಿಗಳನ್ನು ನಂಬಬೇಡಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

“ನಾನು ಬದುಕಿದ್ದೇನೆ. ಕೀವ್‌ ನಗರ ದ್ವಂಸವಾಗಿಲ್ಲ. ಉಕ್ರೇನ್ ತನ್ನ ಶಸ್ತ್ರಾಸ್ತ್ರಗಳನ್ನು ತ್ಯಜಿಸಿದ ಯಾವುದೇ ವರದಿಗಳು ಸುಳ್ಳು” ಎಂದು ಝೆಲೆನ್ಸ್ಕಿ ಸ್ಪಷ್ಟಪಡಿಸಿದ್ದಾರೆ.

“ನಾನು ಇಲ್ಲಿದ್ದೇನೆ. ನಾವು ಯಾವುದೇ ಶಸ್ತ್ರಾಸ್ತ್ರಗಳನ್ನು ತ್ಯಜಿಸುತ್ತಿಲ್ಲ. ನಾವು ನಮ್ಮ ದೇಶವನ್ನು ರಕ್ಷಿಸುತ್ತೇವೆ, ಏಕೆಂದರೆ ನಮ್ಮ ಶಸ್ತ್ರಾಸ್ತ್ರಗಳು ನಮ್ಮ ಸತ್ಯ. ಸತ್ಯವೆಂದರೆ ಇದು ನಮ್ಮ ನಾಡು, ನಮ್ಮ ದೇಶ, ನಮ್ಮ ಮಕ್ಕಳು ಮತ್ತು ನಾವು ಅವರೆಲ್ಲರನ್ನೂ ರಕ್ಷಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ರಷ್ಯಾದ ಆಕ್ರಮಣದ ಮಧ್ಯೆ ಕೀವ್ ನಗರದ ಮೇಯರ್ ಕರ್ಫ್ಯೂ ವಿಧಿಸಿದ್ದಾರೆ. ರಷ್ಯಾದ ಪಡೆಗಳು ನಗರದ ಮೇಲೆ ಒತ್ತಡ ತರುತ್ತಿರುವುದು ತೀವ್ರವಾದ ಬಳಿಕ ಕರ್ಫ್ಯೂ ವಿಸ್ತರಿಸಿದ್ದಾರೆ.

“ಸಂಜೆ 5 ರಿಂದ ಬೆಳಿಗ್ಗೆ 8 ಗಂಟೆಯವರೆಗೆ ಕರ್ಫ್ಯೂ ವಿಸ್ತರಿಸಲಾಗಿದೆ” ಎಂದು ಮೇಯರ್‌ ಮೇಯರ್ ವಿಟಾಲಿ ಕ್ಲಿಟ್ಸ್ಕೊ ತಿಳಿಸಿದ್ದು, “ಕರ್ಫ್ಯೂ ಸಮಯದಲ್ಲಿ ಹೊರಗೆ ತಿರುಗಾಡುವ ಎಲ್ಲಾ ನಾಗರಿಕರನ್ನು ಶತ್ರುಗಳೆಂದು ಪರಿಗಣಿಸಲಾಗುತ್ತದೆ” ಎಂದು ಕ್ಲಿಟ್ಸ್ಕೊ ತಿಳಿಸಿದ್ದಾರೆ.

ಉಕ್ರೇನ್‌ನ ರಾಜಧಾನಿ ಕೀವ್‌ಗೆ ಸುಮಾರು 30 ಕಿಮೀ ದೂರದಲ್ಲಿ ಬಹುಪಾಲು ರಷ್ಯಾ ಪಡೆ ಬಂದು ನಿಂತಿದೆ ಎಂದು ಬ್ರಿಟನ್‌ನ ರಕ್ಷಣಾ ಸಚಿವಾಲಯ ಶನಿವಾರ ಹೇಳಿದೆ.

ರಷ್ಯಾದ ಪಡೆಗಳು ಆಗ್ನೇಯ ನಗರವಾದ ಮೆಲಿಟೊಪೋಲ್ ಅನ್ನು ವಶಪಡಿಸಿಕೊಂಡಿವೆ ಎಂಬ ರಷ್ಯಾದ ವರದಿಗಳನ್ನು ಮೊದಲು ಆಲಿಸಿದ ಬ್ರಿಟನ್, ಉಕ್ರೇನಿಯನ್ ಮಿಲಿಟರಿ ದೇಶಾದ್ಯಂತ ಬಲವಾದ ಪ್ರತಿರೋಧವನ್ನು ಮುಂದುವರೆಸುತ್ತಿದೆ ಎಂದು ತಿಳಿಸಿದೆ.


ಇದನ್ನೂ ಓದಿರಿ: ಭಾರತೀಯರು ವೈದ್ಯಕೀಯ ವ್ಯಾಸಂಗಕ್ಕಾಗಿ ಉಕ್ರೇನ್‌ಗೆ ಹೋಗುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....