Homeಕರ್ನಾಟಕರಷ್ಯಾ-ಉಕ್ರೇನ್‌ ವಾರ್‌‌ ಅಪ್‌ಡೇಟ್‌: 198 ಮಂದಿ ಮರಣ

ರಷ್ಯಾ-ಉಕ್ರೇನ್‌ ವಾರ್‌‌ ಅಪ್‌ಡೇಟ್‌: 198 ಮಂದಿ ಮರಣ

- Advertisement -
- Advertisement -

ರಷ್ಯಾದ ದಾಳಿಯಲ್ಲಿ 198 ಜನರು ಸಾವನ್ನಪ್ಪಿದ್ದಾರೆ ಮತ್ತು 1,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಉಕ್ರೇನಿಯನ್ ಆರೋಗ್ಯ ಸಚಿವರು ಹೇಳುತ್ತಾರೆ.

ಮೃತಪಟ್ಟವರಲ್ಲಿ ಮೂವರು ಮಕ್ಕಳಿದ್ದಾರೆ ಎಂದು ಆರೋಗ್ಯ ಸಚಿವ ವಿಕ್ಟರ್ ಲಿಯಾಶ್ಕೊ ಶನಿವಾರ ಹೇಳಿದ್ದಾರೆ. ಗುರುವಾರ ಆರಂಭವಾದ ರಷ್ಯಾದ ಆಕ್ರಮಣದಲ್ಲಿ 33 ಮಕ್ಕಳು ಸೇರಿದಂತೆ ಇನ್ನೂ 1,115 ಜನರು ಗಾಯಗೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಉಕ್ರೇನ್‌ ರಾಜಧಾನಿ ಕೀವ್‌ನಲ್ಲಿ ಹೋರಾಟ ಮುಂದುವರಿದಿದೆ.

ಆಕ್ರಮಣಕಾರಿ ರಷ್ಯಾದ ಪಡೆಗಳು ಶನಿವಾರ ಉಕ್ರೇನ್‌ನ ರಾಜಧಾನಿಯತ್ತ ನುಗ್ಗುತ್ತಿದ್ದಂತೆ, ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಶಸ್ತ್ರಾಸ್ತ್ರಗಳನ್ನು ತ್ಯಜಿಸಲು ಸೈನ್ಯಕ್ಕೆ ಕರೆ ನೀಡಿದ್ದಾರೆಂಬ ವದಂತಿ ಹಬ್ಬಿತ್ತು. ಅದಕ್ಕೆ ಸ್ಪಷ್ಟನೆ ನೀಡಿರುವ ಅಧ್ಯಕ್ಷ, “ಇದು ನಮ್ಮ ಭೂಮಿ, ನಮ್ಮ ದೇಶ, ನಮ್ಮ ಮಕ್ಕಳು. ನಾವು ಎಲ್ಲವನ್ನೂ ರಕ್ಷಣೆ ಮಾಡಿಕೊಳ್ಳುತ್ತೇವೆ” ಎಂದು ಅವರು ಕಿರು ವಿಡಿಯೊದಲ್ಲಿ ಹೇಳಿದರು.

ಉಕ್ರೇನ್ ಮೇಲಿನ ದಾಳಿಯನ್ನು ರಷ್ಯಾ ನಿಲ್ಲಿಸಬೇಕು. ಎಲ್ಲಾ ಪಡೆಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಕ್ಕೆ ವಿರುದ್ಧವಾಗಿ ರಷ್ಯಾ ವೀಟೋ ಹಕ್ಕು ಚಲಾಯಿಸಿದೆ. ಚೀನಾ, ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ದೇಶಗಳು ಸಂಘರ್ಷದಿಂದ ದೂರ ಉಳಿದಿವೆ.

PC: AP

ಉಕ್ರೇನ್‌ನಲ್ಲಿರುವ ಭಾರತೀಯರನ್ನು ಸ್ಥಳಾಂತರಿಸುವ ಏರ್ ಇಂಡಿಯಾ ವಿಮಾನವು ರೊಮೇನಿಯಾದಿಂದ ಹೊರಟು ಸಂಜೆ 4 ಗಂಟೆಗೆ ಮುಂಬೈಗೆ ಆಗಮಿಸಲಿದೆ. ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸಲು ಬುಕಾರೆಸ್ಟ್ ಮತ್ತು ಹಂಗೇರಿಯ ರಾಜಧಾನಿ ಬುಡಾಪೆಸ್ಟ್‌ಗೆ ಹೆಚ್ಚಿನ ವಿಮಾನಗಳನ್ನು ಏರ್ ಇಂಡಿಯಾ ಕಳುಹಿಸಿದೆ.

ಉಕ್ರೇನಿಯನ್ ರಕ್ಷಣಾ ಪಡೆಗಳು, ರಷ್ಯಾದ ಆಕ್ರಮಣಕ್ಕೆ ಉಗ್ರ ಪ್ರತಿರೋಧವನ್ನು ನೀಡುತ್ತಿವೆ. ರಾಜಧಾನಿ ಕೀವ್‌ ಮತ್ತು ದೇಶದ ಇತರ ನಗರಗಳ ಮೇಲೆ ನಿಯಂತ್ರಣವನ್ನು ಉಳಿಸಿಕೊಳ್ಳಲು ಉಕ್ರೇನ್‌ ರಕ್ಷಣಾ ಪಡೆಗಳು ಹೋರಾಡುತ್ತಿವೆ.

ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಶನಿವಾರ ಟ್ವಿಟರ್‌ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದು, ಸುಳ್ಳು ವರದಿಗಳನ್ನು ನಂಬಬೇಡಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

“ನಾನು ಬದುಕಿದ್ದೇನೆ. ಕೀವ್‌ ನಗರ ದ್ವಂಸವಾಗಿಲ್ಲ. ಉಕ್ರೇನ್ ತನ್ನ ಶಸ್ತ್ರಾಸ್ತ್ರಗಳನ್ನು ತ್ಯಜಿಸಿದ ಯಾವುದೇ ವರದಿಗಳು ಸುಳ್ಳು” ಎಂದು ಝೆಲೆನ್ಸ್ಕಿ ಸ್ಪಷ್ಟಪಡಿಸಿದ್ದಾರೆ.

“ನಾನು ಇಲ್ಲಿದ್ದೇನೆ. ನಾವು ಯಾವುದೇ ಶಸ್ತ್ರಾಸ್ತ್ರಗಳನ್ನು ತ್ಯಜಿಸುತ್ತಿಲ್ಲ. ನಾವು ನಮ್ಮ ದೇಶವನ್ನು ರಕ್ಷಿಸುತ್ತೇವೆ, ಏಕೆಂದರೆ ನಮ್ಮ ಶಸ್ತ್ರಾಸ್ತ್ರಗಳು ನಮ್ಮ ಸತ್ಯ. ಸತ್ಯವೆಂದರೆ ಇದು ನಮ್ಮ ನಾಡು, ನಮ್ಮ ದೇಶ, ನಮ್ಮ ಮಕ್ಕಳು ಮತ್ತು ನಾವು ಅವರೆಲ್ಲರನ್ನೂ ರಕ್ಷಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ರಷ್ಯಾದ ಆಕ್ರಮಣದ ಮಧ್ಯೆ ಕೀವ್ ನಗರದ ಮೇಯರ್ ಕರ್ಫ್ಯೂ ವಿಧಿಸಿದ್ದಾರೆ. ರಷ್ಯಾದ ಪಡೆಗಳು ನಗರದ ಮೇಲೆ ಒತ್ತಡ ತರುತ್ತಿರುವುದು ತೀವ್ರವಾದ ಬಳಿಕ ಕರ್ಫ್ಯೂ ವಿಸ್ತರಿಸಿದ್ದಾರೆ.

“ಸಂಜೆ 5 ರಿಂದ ಬೆಳಿಗ್ಗೆ 8 ಗಂಟೆಯವರೆಗೆ ಕರ್ಫ್ಯೂ ವಿಸ್ತರಿಸಲಾಗಿದೆ” ಎಂದು ಮೇಯರ್‌ ಮೇಯರ್ ವಿಟಾಲಿ ಕ್ಲಿಟ್ಸ್ಕೊ ತಿಳಿಸಿದ್ದು, “ಕರ್ಫ್ಯೂ ಸಮಯದಲ್ಲಿ ಹೊರಗೆ ತಿರುಗಾಡುವ ಎಲ್ಲಾ ನಾಗರಿಕರನ್ನು ಶತ್ರುಗಳೆಂದು ಪರಿಗಣಿಸಲಾಗುತ್ತದೆ” ಎಂದು ಕ್ಲಿಟ್ಸ್ಕೊ ತಿಳಿಸಿದ್ದಾರೆ.

ಉಕ್ರೇನ್‌ನ ರಾಜಧಾನಿ ಕೀವ್‌ಗೆ ಸುಮಾರು 30 ಕಿಮೀ ದೂರದಲ್ಲಿ ಬಹುಪಾಲು ರಷ್ಯಾ ಪಡೆ ಬಂದು ನಿಂತಿದೆ ಎಂದು ಬ್ರಿಟನ್‌ನ ರಕ್ಷಣಾ ಸಚಿವಾಲಯ ಶನಿವಾರ ಹೇಳಿದೆ.

ರಷ್ಯಾದ ಪಡೆಗಳು ಆಗ್ನೇಯ ನಗರವಾದ ಮೆಲಿಟೊಪೋಲ್ ಅನ್ನು ವಶಪಡಿಸಿಕೊಂಡಿವೆ ಎಂಬ ರಷ್ಯಾದ ವರದಿಗಳನ್ನು ಮೊದಲು ಆಲಿಸಿದ ಬ್ರಿಟನ್, ಉಕ್ರೇನಿಯನ್ ಮಿಲಿಟರಿ ದೇಶಾದ್ಯಂತ ಬಲವಾದ ಪ್ರತಿರೋಧವನ್ನು ಮುಂದುವರೆಸುತ್ತಿದೆ ಎಂದು ತಿಳಿಸಿದೆ.


ಇದನ್ನೂ ಓದಿರಿ: ಭಾರತೀಯರು ವೈದ್ಯಕೀಯ ವ್ಯಾಸಂಗಕ್ಕಾಗಿ ಉಕ್ರೇನ್‌ಗೆ ಹೋಗುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ : ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಎಷ್ಟು ಮನೆಗಳನ್ನು ನೆಲಸಮ ಮಾಡಲಾಗಿದೆ. ಇದರಿಂದಾಗಿ ಎಷ್ಟು ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಮತ್ತು ಪುನರ್ವವಸತಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಒಳಗೊಂಡ ವರದಿ ಸಲ್ಲಿಸುವಂತೆ ಪ್ರಕರಣದಲ್ಲಿ ನ್ಯಾಯಾಲಯದ ನೆರವುಗಾರರಾಗಿರುವ...

ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...