Homeಕರ್ನಾಟಕರಷ್ಯಾ-ಉಕ್ರೇನ್‌ ವಾರ್‌‌ ಅಪ್‌ಡೇಟ್‌: 198 ಮಂದಿ ಮರಣ

ರಷ್ಯಾ-ಉಕ್ರೇನ್‌ ವಾರ್‌‌ ಅಪ್‌ಡೇಟ್‌: 198 ಮಂದಿ ಮರಣ

- Advertisement -
- Advertisement -

ರಷ್ಯಾದ ದಾಳಿಯಲ್ಲಿ 198 ಜನರು ಸಾವನ್ನಪ್ಪಿದ್ದಾರೆ ಮತ್ತು 1,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಉಕ್ರೇನಿಯನ್ ಆರೋಗ್ಯ ಸಚಿವರು ಹೇಳುತ್ತಾರೆ.

ಮೃತಪಟ್ಟವರಲ್ಲಿ ಮೂವರು ಮಕ್ಕಳಿದ್ದಾರೆ ಎಂದು ಆರೋಗ್ಯ ಸಚಿವ ವಿಕ್ಟರ್ ಲಿಯಾಶ್ಕೊ ಶನಿವಾರ ಹೇಳಿದ್ದಾರೆ. ಗುರುವಾರ ಆರಂಭವಾದ ರಷ್ಯಾದ ಆಕ್ರಮಣದಲ್ಲಿ 33 ಮಕ್ಕಳು ಸೇರಿದಂತೆ ಇನ್ನೂ 1,115 ಜನರು ಗಾಯಗೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಉಕ್ರೇನ್‌ ರಾಜಧಾನಿ ಕೀವ್‌ನಲ್ಲಿ ಹೋರಾಟ ಮುಂದುವರಿದಿದೆ.

ಆಕ್ರಮಣಕಾರಿ ರಷ್ಯಾದ ಪಡೆಗಳು ಶನಿವಾರ ಉಕ್ರೇನ್‌ನ ರಾಜಧಾನಿಯತ್ತ ನುಗ್ಗುತ್ತಿದ್ದಂತೆ, ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಶಸ್ತ್ರಾಸ್ತ್ರಗಳನ್ನು ತ್ಯಜಿಸಲು ಸೈನ್ಯಕ್ಕೆ ಕರೆ ನೀಡಿದ್ದಾರೆಂಬ ವದಂತಿ ಹಬ್ಬಿತ್ತು. ಅದಕ್ಕೆ ಸ್ಪಷ್ಟನೆ ನೀಡಿರುವ ಅಧ್ಯಕ್ಷ, “ಇದು ನಮ್ಮ ಭೂಮಿ, ನಮ್ಮ ದೇಶ, ನಮ್ಮ ಮಕ್ಕಳು. ನಾವು ಎಲ್ಲವನ್ನೂ ರಕ್ಷಣೆ ಮಾಡಿಕೊಳ್ಳುತ್ತೇವೆ” ಎಂದು ಅವರು ಕಿರು ವಿಡಿಯೊದಲ್ಲಿ ಹೇಳಿದರು.

ಉಕ್ರೇನ್ ಮೇಲಿನ ದಾಳಿಯನ್ನು ರಷ್ಯಾ ನಿಲ್ಲಿಸಬೇಕು. ಎಲ್ಲಾ ಪಡೆಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಕ್ಕೆ ವಿರುದ್ಧವಾಗಿ ರಷ್ಯಾ ವೀಟೋ ಹಕ್ಕು ಚಲಾಯಿಸಿದೆ. ಚೀನಾ, ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ದೇಶಗಳು ಸಂಘರ್ಷದಿಂದ ದೂರ ಉಳಿದಿವೆ.

PC: AP

ಉಕ್ರೇನ್‌ನಲ್ಲಿರುವ ಭಾರತೀಯರನ್ನು ಸ್ಥಳಾಂತರಿಸುವ ಏರ್ ಇಂಡಿಯಾ ವಿಮಾನವು ರೊಮೇನಿಯಾದಿಂದ ಹೊರಟು ಸಂಜೆ 4 ಗಂಟೆಗೆ ಮುಂಬೈಗೆ ಆಗಮಿಸಲಿದೆ. ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸಲು ಬುಕಾರೆಸ್ಟ್ ಮತ್ತು ಹಂಗೇರಿಯ ರಾಜಧಾನಿ ಬುಡಾಪೆಸ್ಟ್‌ಗೆ ಹೆಚ್ಚಿನ ವಿಮಾನಗಳನ್ನು ಏರ್ ಇಂಡಿಯಾ ಕಳುಹಿಸಿದೆ.

ಉಕ್ರೇನಿಯನ್ ರಕ್ಷಣಾ ಪಡೆಗಳು, ರಷ್ಯಾದ ಆಕ್ರಮಣಕ್ಕೆ ಉಗ್ರ ಪ್ರತಿರೋಧವನ್ನು ನೀಡುತ್ತಿವೆ. ರಾಜಧಾನಿ ಕೀವ್‌ ಮತ್ತು ದೇಶದ ಇತರ ನಗರಗಳ ಮೇಲೆ ನಿಯಂತ್ರಣವನ್ನು ಉಳಿಸಿಕೊಳ್ಳಲು ಉಕ್ರೇನ್‌ ರಕ್ಷಣಾ ಪಡೆಗಳು ಹೋರಾಡುತ್ತಿವೆ.

ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಶನಿವಾರ ಟ್ವಿಟರ್‌ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದು, ಸುಳ್ಳು ವರದಿಗಳನ್ನು ನಂಬಬೇಡಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

“ನಾನು ಬದುಕಿದ್ದೇನೆ. ಕೀವ್‌ ನಗರ ದ್ವಂಸವಾಗಿಲ್ಲ. ಉಕ್ರೇನ್ ತನ್ನ ಶಸ್ತ್ರಾಸ್ತ್ರಗಳನ್ನು ತ್ಯಜಿಸಿದ ಯಾವುದೇ ವರದಿಗಳು ಸುಳ್ಳು” ಎಂದು ಝೆಲೆನ್ಸ್ಕಿ ಸ್ಪಷ್ಟಪಡಿಸಿದ್ದಾರೆ.

“ನಾನು ಇಲ್ಲಿದ್ದೇನೆ. ನಾವು ಯಾವುದೇ ಶಸ್ತ್ರಾಸ್ತ್ರಗಳನ್ನು ತ್ಯಜಿಸುತ್ತಿಲ್ಲ. ನಾವು ನಮ್ಮ ದೇಶವನ್ನು ರಕ್ಷಿಸುತ್ತೇವೆ, ಏಕೆಂದರೆ ನಮ್ಮ ಶಸ್ತ್ರಾಸ್ತ್ರಗಳು ನಮ್ಮ ಸತ್ಯ. ಸತ್ಯವೆಂದರೆ ಇದು ನಮ್ಮ ನಾಡು, ನಮ್ಮ ದೇಶ, ನಮ್ಮ ಮಕ್ಕಳು ಮತ್ತು ನಾವು ಅವರೆಲ್ಲರನ್ನೂ ರಕ್ಷಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ರಷ್ಯಾದ ಆಕ್ರಮಣದ ಮಧ್ಯೆ ಕೀವ್ ನಗರದ ಮೇಯರ್ ಕರ್ಫ್ಯೂ ವಿಧಿಸಿದ್ದಾರೆ. ರಷ್ಯಾದ ಪಡೆಗಳು ನಗರದ ಮೇಲೆ ಒತ್ತಡ ತರುತ್ತಿರುವುದು ತೀವ್ರವಾದ ಬಳಿಕ ಕರ್ಫ್ಯೂ ವಿಸ್ತರಿಸಿದ್ದಾರೆ.

“ಸಂಜೆ 5 ರಿಂದ ಬೆಳಿಗ್ಗೆ 8 ಗಂಟೆಯವರೆಗೆ ಕರ್ಫ್ಯೂ ವಿಸ್ತರಿಸಲಾಗಿದೆ” ಎಂದು ಮೇಯರ್‌ ಮೇಯರ್ ವಿಟಾಲಿ ಕ್ಲಿಟ್ಸ್ಕೊ ತಿಳಿಸಿದ್ದು, “ಕರ್ಫ್ಯೂ ಸಮಯದಲ್ಲಿ ಹೊರಗೆ ತಿರುಗಾಡುವ ಎಲ್ಲಾ ನಾಗರಿಕರನ್ನು ಶತ್ರುಗಳೆಂದು ಪರಿಗಣಿಸಲಾಗುತ್ತದೆ” ಎಂದು ಕ್ಲಿಟ್ಸ್ಕೊ ತಿಳಿಸಿದ್ದಾರೆ.

ಉಕ್ರೇನ್‌ನ ರಾಜಧಾನಿ ಕೀವ್‌ಗೆ ಸುಮಾರು 30 ಕಿಮೀ ದೂರದಲ್ಲಿ ಬಹುಪಾಲು ರಷ್ಯಾ ಪಡೆ ಬಂದು ನಿಂತಿದೆ ಎಂದು ಬ್ರಿಟನ್‌ನ ರಕ್ಷಣಾ ಸಚಿವಾಲಯ ಶನಿವಾರ ಹೇಳಿದೆ.

ರಷ್ಯಾದ ಪಡೆಗಳು ಆಗ್ನೇಯ ನಗರವಾದ ಮೆಲಿಟೊಪೋಲ್ ಅನ್ನು ವಶಪಡಿಸಿಕೊಂಡಿವೆ ಎಂಬ ರಷ್ಯಾದ ವರದಿಗಳನ್ನು ಮೊದಲು ಆಲಿಸಿದ ಬ್ರಿಟನ್, ಉಕ್ರೇನಿಯನ್ ಮಿಲಿಟರಿ ದೇಶಾದ್ಯಂತ ಬಲವಾದ ಪ್ರತಿರೋಧವನ್ನು ಮುಂದುವರೆಸುತ್ತಿದೆ ಎಂದು ತಿಳಿಸಿದೆ.


ಇದನ್ನೂ ಓದಿರಿ: ಭಾರತೀಯರು ವೈದ್ಯಕೀಯ ವ್ಯಾಸಂಗಕ್ಕಾಗಿ ಉಕ್ರೇನ್‌ಗೆ ಹೋಗುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...