Homeಕರ್ನಾಟಕರಷ್ಯಾ-ಉಕ್ರೇನ್‌ ವಾರ್‌‌ ಅಪ್‌ಡೇಟ್‌: 198 ಮಂದಿ ಮರಣ

ರಷ್ಯಾ-ಉಕ್ರೇನ್‌ ವಾರ್‌‌ ಅಪ್‌ಡೇಟ್‌: 198 ಮಂದಿ ಮರಣ

- Advertisement -
- Advertisement -

ರಷ್ಯಾದ ದಾಳಿಯಲ್ಲಿ 198 ಜನರು ಸಾವನ್ನಪ್ಪಿದ್ದಾರೆ ಮತ್ತು 1,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಉಕ್ರೇನಿಯನ್ ಆರೋಗ್ಯ ಸಚಿವರು ಹೇಳುತ್ತಾರೆ.

ಮೃತಪಟ್ಟವರಲ್ಲಿ ಮೂವರು ಮಕ್ಕಳಿದ್ದಾರೆ ಎಂದು ಆರೋಗ್ಯ ಸಚಿವ ವಿಕ್ಟರ್ ಲಿಯಾಶ್ಕೊ ಶನಿವಾರ ಹೇಳಿದ್ದಾರೆ. ಗುರುವಾರ ಆರಂಭವಾದ ರಷ್ಯಾದ ಆಕ್ರಮಣದಲ್ಲಿ 33 ಮಕ್ಕಳು ಸೇರಿದಂತೆ ಇನ್ನೂ 1,115 ಜನರು ಗಾಯಗೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಉಕ್ರೇನ್‌ ರಾಜಧಾನಿ ಕೀವ್‌ನಲ್ಲಿ ಹೋರಾಟ ಮುಂದುವರಿದಿದೆ.

ಆಕ್ರಮಣಕಾರಿ ರಷ್ಯಾದ ಪಡೆಗಳು ಶನಿವಾರ ಉಕ್ರೇನ್‌ನ ರಾಜಧಾನಿಯತ್ತ ನುಗ್ಗುತ್ತಿದ್ದಂತೆ, ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಶಸ್ತ್ರಾಸ್ತ್ರಗಳನ್ನು ತ್ಯಜಿಸಲು ಸೈನ್ಯಕ್ಕೆ ಕರೆ ನೀಡಿದ್ದಾರೆಂಬ ವದಂತಿ ಹಬ್ಬಿತ್ತು. ಅದಕ್ಕೆ ಸ್ಪಷ್ಟನೆ ನೀಡಿರುವ ಅಧ್ಯಕ್ಷ, “ಇದು ನಮ್ಮ ಭೂಮಿ, ನಮ್ಮ ದೇಶ, ನಮ್ಮ ಮಕ್ಕಳು. ನಾವು ಎಲ್ಲವನ್ನೂ ರಕ್ಷಣೆ ಮಾಡಿಕೊಳ್ಳುತ್ತೇವೆ” ಎಂದು ಅವರು ಕಿರು ವಿಡಿಯೊದಲ್ಲಿ ಹೇಳಿದರು.

ಉಕ್ರೇನ್ ಮೇಲಿನ ದಾಳಿಯನ್ನು ರಷ್ಯಾ ನಿಲ್ಲಿಸಬೇಕು. ಎಲ್ಲಾ ಪಡೆಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಕ್ಕೆ ವಿರುದ್ಧವಾಗಿ ರಷ್ಯಾ ವೀಟೋ ಹಕ್ಕು ಚಲಾಯಿಸಿದೆ. ಚೀನಾ, ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ದೇಶಗಳು ಸಂಘರ್ಷದಿಂದ ದೂರ ಉಳಿದಿವೆ.

PC: AP

ಉಕ್ರೇನ್‌ನಲ್ಲಿರುವ ಭಾರತೀಯರನ್ನು ಸ್ಥಳಾಂತರಿಸುವ ಏರ್ ಇಂಡಿಯಾ ವಿಮಾನವು ರೊಮೇನಿಯಾದಿಂದ ಹೊರಟು ಸಂಜೆ 4 ಗಂಟೆಗೆ ಮುಂಬೈಗೆ ಆಗಮಿಸಲಿದೆ. ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸಲು ಬುಕಾರೆಸ್ಟ್ ಮತ್ತು ಹಂಗೇರಿಯ ರಾಜಧಾನಿ ಬುಡಾಪೆಸ್ಟ್‌ಗೆ ಹೆಚ್ಚಿನ ವಿಮಾನಗಳನ್ನು ಏರ್ ಇಂಡಿಯಾ ಕಳುಹಿಸಿದೆ.

ಉಕ್ರೇನಿಯನ್ ರಕ್ಷಣಾ ಪಡೆಗಳು, ರಷ್ಯಾದ ಆಕ್ರಮಣಕ್ಕೆ ಉಗ್ರ ಪ್ರತಿರೋಧವನ್ನು ನೀಡುತ್ತಿವೆ. ರಾಜಧಾನಿ ಕೀವ್‌ ಮತ್ತು ದೇಶದ ಇತರ ನಗರಗಳ ಮೇಲೆ ನಿಯಂತ್ರಣವನ್ನು ಉಳಿಸಿಕೊಳ್ಳಲು ಉಕ್ರೇನ್‌ ರಕ್ಷಣಾ ಪಡೆಗಳು ಹೋರಾಡುತ್ತಿವೆ.

ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಶನಿವಾರ ಟ್ವಿಟರ್‌ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದು, ಸುಳ್ಳು ವರದಿಗಳನ್ನು ನಂಬಬೇಡಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

“ನಾನು ಬದುಕಿದ್ದೇನೆ. ಕೀವ್‌ ನಗರ ದ್ವಂಸವಾಗಿಲ್ಲ. ಉಕ್ರೇನ್ ತನ್ನ ಶಸ್ತ್ರಾಸ್ತ್ರಗಳನ್ನು ತ್ಯಜಿಸಿದ ಯಾವುದೇ ವರದಿಗಳು ಸುಳ್ಳು” ಎಂದು ಝೆಲೆನ್ಸ್ಕಿ ಸ್ಪಷ್ಟಪಡಿಸಿದ್ದಾರೆ.

“ನಾನು ಇಲ್ಲಿದ್ದೇನೆ. ನಾವು ಯಾವುದೇ ಶಸ್ತ್ರಾಸ್ತ್ರಗಳನ್ನು ತ್ಯಜಿಸುತ್ತಿಲ್ಲ. ನಾವು ನಮ್ಮ ದೇಶವನ್ನು ರಕ್ಷಿಸುತ್ತೇವೆ, ಏಕೆಂದರೆ ನಮ್ಮ ಶಸ್ತ್ರಾಸ್ತ್ರಗಳು ನಮ್ಮ ಸತ್ಯ. ಸತ್ಯವೆಂದರೆ ಇದು ನಮ್ಮ ನಾಡು, ನಮ್ಮ ದೇಶ, ನಮ್ಮ ಮಕ್ಕಳು ಮತ್ತು ನಾವು ಅವರೆಲ್ಲರನ್ನೂ ರಕ್ಷಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ರಷ್ಯಾದ ಆಕ್ರಮಣದ ಮಧ್ಯೆ ಕೀವ್ ನಗರದ ಮೇಯರ್ ಕರ್ಫ್ಯೂ ವಿಧಿಸಿದ್ದಾರೆ. ರಷ್ಯಾದ ಪಡೆಗಳು ನಗರದ ಮೇಲೆ ಒತ್ತಡ ತರುತ್ತಿರುವುದು ತೀವ್ರವಾದ ಬಳಿಕ ಕರ್ಫ್ಯೂ ವಿಸ್ತರಿಸಿದ್ದಾರೆ.

“ಸಂಜೆ 5 ರಿಂದ ಬೆಳಿಗ್ಗೆ 8 ಗಂಟೆಯವರೆಗೆ ಕರ್ಫ್ಯೂ ವಿಸ್ತರಿಸಲಾಗಿದೆ” ಎಂದು ಮೇಯರ್‌ ಮೇಯರ್ ವಿಟಾಲಿ ಕ್ಲಿಟ್ಸ್ಕೊ ತಿಳಿಸಿದ್ದು, “ಕರ್ಫ್ಯೂ ಸಮಯದಲ್ಲಿ ಹೊರಗೆ ತಿರುಗಾಡುವ ಎಲ್ಲಾ ನಾಗರಿಕರನ್ನು ಶತ್ರುಗಳೆಂದು ಪರಿಗಣಿಸಲಾಗುತ್ತದೆ” ಎಂದು ಕ್ಲಿಟ್ಸ್ಕೊ ತಿಳಿಸಿದ್ದಾರೆ.

ಉಕ್ರೇನ್‌ನ ರಾಜಧಾನಿ ಕೀವ್‌ಗೆ ಸುಮಾರು 30 ಕಿಮೀ ದೂರದಲ್ಲಿ ಬಹುಪಾಲು ರಷ್ಯಾ ಪಡೆ ಬಂದು ನಿಂತಿದೆ ಎಂದು ಬ್ರಿಟನ್‌ನ ರಕ್ಷಣಾ ಸಚಿವಾಲಯ ಶನಿವಾರ ಹೇಳಿದೆ.

ರಷ್ಯಾದ ಪಡೆಗಳು ಆಗ್ನೇಯ ನಗರವಾದ ಮೆಲಿಟೊಪೋಲ್ ಅನ್ನು ವಶಪಡಿಸಿಕೊಂಡಿವೆ ಎಂಬ ರಷ್ಯಾದ ವರದಿಗಳನ್ನು ಮೊದಲು ಆಲಿಸಿದ ಬ್ರಿಟನ್, ಉಕ್ರೇನಿಯನ್ ಮಿಲಿಟರಿ ದೇಶಾದ್ಯಂತ ಬಲವಾದ ಪ್ರತಿರೋಧವನ್ನು ಮುಂದುವರೆಸುತ್ತಿದೆ ಎಂದು ತಿಳಿಸಿದೆ.


ಇದನ್ನೂ ಓದಿರಿ: ಭಾರತೀಯರು ವೈದ್ಯಕೀಯ ವ್ಯಾಸಂಗಕ್ಕಾಗಿ ಉಕ್ರೇನ್‌ಗೆ ಹೋಗುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...