Homeಕರ್ನಾಟಕರಷ್ಯಾ-ಉಕ್ರೇನ್‌ ವಾರ್‌‌ ಅಪ್‌ಡೇಟ್‌: 198 ಮಂದಿ ಮರಣ

ರಷ್ಯಾ-ಉಕ್ರೇನ್‌ ವಾರ್‌‌ ಅಪ್‌ಡೇಟ್‌: 198 ಮಂದಿ ಮರಣ

- Advertisement -
- Advertisement -

ರಷ್ಯಾದ ದಾಳಿಯಲ್ಲಿ 198 ಜನರು ಸಾವನ್ನಪ್ಪಿದ್ದಾರೆ ಮತ್ತು 1,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಉಕ್ರೇನಿಯನ್ ಆರೋಗ್ಯ ಸಚಿವರು ಹೇಳುತ್ತಾರೆ.

ಮೃತಪಟ್ಟವರಲ್ಲಿ ಮೂವರು ಮಕ್ಕಳಿದ್ದಾರೆ ಎಂದು ಆರೋಗ್ಯ ಸಚಿವ ವಿಕ್ಟರ್ ಲಿಯಾಶ್ಕೊ ಶನಿವಾರ ಹೇಳಿದ್ದಾರೆ. ಗುರುವಾರ ಆರಂಭವಾದ ರಷ್ಯಾದ ಆಕ್ರಮಣದಲ್ಲಿ 33 ಮಕ್ಕಳು ಸೇರಿದಂತೆ ಇನ್ನೂ 1,115 ಜನರು ಗಾಯಗೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಉಕ್ರೇನ್‌ ರಾಜಧಾನಿ ಕೀವ್‌ನಲ್ಲಿ ಹೋರಾಟ ಮುಂದುವರಿದಿದೆ.

ಆಕ್ರಮಣಕಾರಿ ರಷ್ಯಾದ ಪಡೆಗಳು ಶನಿವಾರ ಉಕ್ರೇನ್‌ನ ರಾಜಧಾನಿಯತ್ತ ನುಗ್ಗುತ್ತಿದ್ದಂತೆ, ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಶಸ್ತ್ರಾಸ್ತ್ರಗಳನ್ನು ತ್ಯಜಿಸಲು ಸೈನ್ಯಕ್ಕೆ ಕರೆ ನೀಡಿದ್ದಾರೆಂಬ ವದಂತಿ ಹಬ್ಬಿತ್ತು. ಅದಕ್ಕೆ ಸ್ಪಷ್ಟನೆ ನೀಡಿರುವ ಅಧ್ಯಕ್ಷ, “ಇದು ನಮ್ಮ ಭೂಮಿ, ನಮ್ಮ ದೇಶ, ನಮ್ಮ ಮಕ್ಕಳು. ನಾವು ಎಲ್ಲವನ್ನೂ ರಕ್ಷಣೆ ಮಾಡಿಕೊಳ್ಳುತ್ತೇವೆ” ಎಂದು ಅವರು ಕಿರು ವಿಡಿಯೊದಲ್ಲಿ ಹೇಳಿದರು.

ಉಕ್ರೇನ್ ಮೇಲಿನ ದಾಳಿಯನ್ನು ರಷ್ಯಾ ನಿಲ್ಲಿಸಬೇಕು. ಎಲ್ಲಾ ಪಡೆಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಕ್ಕೆ ವಿರುದ್ಧವಾಗಿ ರಷ್ಯಾ ವೀಟೋ ಹಕ್ಕು ಚಲಾಯಿಸಿದೆ. ಚೀನಾ, ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ದೇಶಗಳು ಸಂಘರ್ಷದಿಂದ ದೂರ ಉಳಿದಿವೆ.

PC: AP

ಉಕ್ರೇನ್‌ನಲ್ಲಿರುವ ಭಾರತೀಯರನ್ನು ಸ್ಥಳಾಂತರಿಸುವ ಏರ್ ಇಂಡಿಯಾ ವಿಮಾನವು ರೊಮೇನಿಯಾದಿಂದ ಹೊರಟು ಸಂಜೆ 4 ಗಂಟೆಗೆ ಮುಂಬೈಗೆ ಆಗಮಿಸಲಿದೆ. ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸಲು ಬುಕಾರೆಸ್ಟ್ ಮತ್ತು ಹಂಗೇರಿಯ ರಾಜಧಾನಿ ಬುಡಾಪೆಸ್ಟ್‌ಗೆ ಹೆಚ್ಚಿನ ವಿಮಾನಗಳನ್ನು ಏರ್ ಇಂಡಿಯಾ ಕಳುಹಿಸಿದೆ.

ಉಕ್ರೇನಿಯನ್ ರಕ್ಷಣಾ ಪಡೆಗಳು, ರಷ್ಯಾದ ಆಕ್ರಮಣಕ್ಕೆ ಉಗ್ರ ಪ್ರತಿರೋಧವನ್ನು ನೀಡುತ್ತಿವೆ. ರಾಜಧಾನಿ ಕೀವ್‌ ಮತ್ತು ದೇಶದ ಇತರ ನಗರಗಳ ಮೇಲೆ ನಿಯಂತ್ರಣವನ್ನು ಉಳಿಸಿಕೊಳ್ಳಲು ಉಕ್ರೇನ್‌ ರಕ್ಷಣಾ ಪಡೆಗಳು ಹೋರಾಡುತ್ತಿವೆ.

ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಶನಿವಾರ ಟ್ವಿಟರ್‌ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದು, ಸುಳ್ಳು ವರದಿಗಳನ್ನು ನಂಬಬೇಡಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

“ನಾನು ಬದುಕಿದ್ದೇನೆ. ಕೀವ್‌ ನಗರ ದ್ವಂಸವಾಗಿಲ್ಲ. ಉಕ್ರೇನ್ ತನ್ನ ಶಸ್ತ್ರಾಸ್ತ್ರಗಳನ್ನು ತ್ಯಜಿಸಿದ ಯಾವುದೇ ವರದಿಗಳು ಸುಳ್ಳು” ಎಂದು ಝೆಲೆನ್ಸ್ಕಿ ಸ್ಪಷ್ಟಪಡಿಸಿದ್ದಾರೆ.

“ನಾನು ಇಲ್ಲಿದ್ದೇನೆ. ನಾವು ಯಾವುದೇ ಶಸ್ತ್ರಾಸ್ತ್ರಗಳನ್ನು ತ್ಯಜಿಸುತ್ತಿಲ್ಲ. ನಾವು ನಮ್ಮ ದೇಶವನ್ನು ರಕ್ಷಿಸುತ್ತೇವೆ, ಏಕೆಂದರೆ ನಮ್ಮ ಶಸ್ತ್ರಾಸ್ತ್ರಗಳು ನಮ್ಮ ಸತ್ಯ. ಸತ್ಯವೆಂದರೆ ಇದು ನಮ್ಮ ನಾಡು, ನಮ್ಮ ದೇಶ, ನಮ್ಮ ಮಕ್ಕಳು ಮತ್ತು ನಾವು ಅವರೆಲ್ಲರನ್ನೂ ರಕ್ಷಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ರಷ್ಯಾದ ಆಕ್ರಮಣದ ಮಧ್ಯೆ ಕೀವ್ ನಗರದ ಮೇಯರ್ ಕರ್ಫ್ಯೂ ವಿಧಿಸಿದ್ದಾರೆ. ರಷ್ಯಾದ ಪಡೆಗಳು ನಗರದ ಮೇಲೆ ಒತ್ತಡ ತರುತ್ತಿರುವುದು ತೀವ್ರವಾದ ಬಳಿಕ ಕರ್ಫ್ಯೂ ವಿಸ್ತರಿಸಿದ್ದಾರೆ.

“ಸಂಜೆ 5 ರಿಂದ ಬೆಳಿಗ್ಗೆ 8 ಗಂಟೆಯವರೆಗೆ ಕರ್ಫ್ಯೂ ವಿಸ್ತರಿಸಲಾಗಿದೆ” ಎಂದು ಮೇಯರ್‌ ಮೇಯರ್ ವಿಟಾಲಿ ಕ್ಲಿಟ್ಸ್ಕೊ ತಿಳಿಸಿದ್ದು, “ಕರ್ಫ್ಯೂ ಸಮಯದಲ್ಲಿ ಹೊರಗೆ ತಿರುಗಾಡುವ ಎಲ್ಲಾ ನಾಗರಿಕರನ್ನು ಶತ್ರುಗಳೆಂದು ಪರಿಗಣಿಸಲಾಗುತ್ತದೆ” ಎಂದು ಕ್ಲಿಟ್ಸ್ಕೊ ತಿಳಿಸಿದ್ದಾರೆ.

ಉಕ್ರೇನ್‌ನ ರಾಜಧಾನಿ ಕೀವ್‌ಗೆ ಸುಮಾರು 30 ಕಿಮೀ ದೂರದಲ್ಲಿ ಬಹುಪಾಲು ರಷ್ಯಾ ಪಡೆ ಬಂದು ನಿಂತಿದೆ ಎಂದು ಬ್ರಿಟನ್‌ನ ರಕ್ಷಣಾ ಸಚಿವಾಲಯ ಶನಿವಾರ ಹೇಳಿದೆ.

ರಷ್ಯಾದ ಪಡೆಗಳು ಆಗ್ನೇಯ ನಗರವಾದ ಮೆಲಿಟೊಪೋಲ್ ಅನ್ನು ವಶಪಡಿಸಿಕೊಂಡಿವೆ ಎಂಬ ರಷ್ಯಾದ ವರದಿಗಳನ್ನು ಮೊದಲು ಆಲಿಸಿದ ಬ್ರಿಟನ್, ಉಕ್ರೇನಿಯನ್ ಮಿಲಿಟರಿ ದೇಶಾದ್ಯಂತ ಬಲವಾದ ಪ್ರತಿರೋಧವನ್ನು ಮುಂದುವರೆಸುತ್ತಿದೆ ಎಂದು ತಿಳಿಸಿದೆ.


ಇದನ್ನೂ ಓದಿರಿ: ಭಾರತೀಯರು ವೈದ್ಯಕೀಯ ವ್ಯಾಸಂಗಕ್ಕಾಗಿ ಉಕ್ರೇನ್‌ಗೆ ಹೋಗುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...