Homeಅಂತರಾಷ್ಟ್ರೀಯಕೊರೊನಾ ಲಸಿಕೆಯ ಪ್ರಾಯೋಗಿಕ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರೈಸಿದ ರಷ್ಯಾದ ಸೆಚೆನೋವ್ ವಿಶ್ವವಿದ್ಯಾಲಯ

ಕೊರೊನಾ ಲಸಿಕೆಯ ಪ್ರಾಯೋಗಿಕ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರೈಸಿದ ರಷ್ಯಾದ ಸೆಚೆನೋವ್ ವಿಶ್ವವಿದ್ಯಾಲಯ

ಸ್ವಯಂ ಪ್ರಯೋಗಕ್ಕೆ ಒಳಪಟ್ಟಿದ್ದ ಮೊದಲ ತಂಡವನ್ನು ಬುಧವಾರ ಹಾಗೂ ಎರಡನೆಯದನ್ನು ಜುಲೈ 20 ರಂದು ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

- Advertisement -
- Advertisement -

ವಿಶ್ವದ ಮೊದಲ ಕೊರೊನಾ ವೈರಸ್ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ರಷ್ಯಾ ಸೆಚೆನೋವ್ ವಿಶ್ವವಿದ್ಯಾನಿಲಯದ ಟ್ರಾಸ್ಸಲೇಷನಲ್ ಮೆಡಿಸಿನ್ ಆಂಡ್ ಬಯೊಟೆಕ್ನಾಲಜಿ ವಿಭಾಗದ ನಿರ್ದೇಶಕ ವಾಡಿಮ್ ತಾರಸೊವ್ ತಿಳಿಸಿದ್ದಾರೆ.

ಸ್ವಯಂ ಪ್ರಯೋಗಕ್ಕೆ ಒಳಪಟ್ಟಿದ್ದ ಮೊದಲ ತಂಡವನ್ನು ಬುಧವಾರ ಹಾಗೂ ಎರಡನೆಯದನ್ನು ಜುಲೈ 20 ರಂದು ಬಿಡುಗಡೆ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ರಷ್ಯಾದ ಗಮಾಲಿ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಸಂಸ್ಥೆಯು ತಯಾರಿಸಿದ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳನ್ನು ಜೂನ್ 18 ರಂದು ಪ್ರಾರಂಭಿಸಿತ್ತು ಎಂದು ತಾರಸೋವ್ ಹೇಳಿದ್ದಾರೆ.

ಸೆಚೆನೋವ್ ವಿಶ್ವವಿದ್ಯಾಲಯದ ಅಲೆಕ್ಸಾಂಡರ್ ಲುಕಾಶೆವ್ ಅವರು, ಈ ಹಂತದ ಅಧ್ಯಯನದ ಉದ್ದೇಶವು ಮಾನವನ ಆರೋಗ್ಯಕ್ಕೆ ಲಸಿಕೆಯ ಸುರಕ್ಷತೆಯನ್ನು ಕಂಡುಹಿಡಿಯುವುದಾಗಿತ್ತು. ಇದನ್ನು ಯಶಸ್ವಿಯಾಗಿ ಮಾಡಲಾಗಿದೆ. ಜೊತೆಗೆ ಮತ್ತಷ್ಟು ಲಸಿಕೆ ಅಭಿವೃದ್ಧಿ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

“ಸೆಚೆನೋವ್ ವಿಶ್ವವಿದ್ಯಾಲಯವು ಶಿಕ್ಷಣ ಸಂಸ್ಥೆಯಾಗಿ ಮಾತ್ರವಲ್ಲದೆ ವೈಜ್ಞಾನಿಕ ಮತ್ತು ತಾಂತ್ರಿಕ ಸಂಶೋಧನಾ ಕೇಂದ್ರವಾಗಿಯೂ ಕಾರ್ಯನಿರ್ವಹಿಸಿದೆ. ಪೂರ್ವಭಾವಿ ಅಧ್ಯಯನಗಳಿಂದ ಪ್ರಾರಂಭಿಸಿ ಮತ್ತು ಪ್ರೋಟೋಕಾಲ್ ಅಭಿವೃದ್ಧಿ, ಮತ್ತು ಕ್ಲಿನಿಕಲ್ ಪ್ರಯೋಗಗಳು ಪ್ರಸ್ತುತ ನಡೆಯುತ್ತಿವೆ” ಎಂದು ತಾರಾಸೊವ್ ಹೇಳಿದ್ದಾರೆ.


ಇದನ್ನೂ ಓದಿ: ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಸಂಶೋಧನೆಯಲ್ಲಿ ಪ್ರಗತಿ; ಮನುಷ್ಯರ ಮೇಲೆ ಪ್ರಯೋಗ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...