Homeಮುಖಪುಟಉಕ್ರೇನ್ ಮೇಲೆ ರಷ್ಯಾ ದಾಳಿ: 137 ಸಾವುಗಳಾಗಿವೆ ಎಂದು ಉಕ್ರೇನ್

ಉಕ್ರೇನ್ ಮೇಲೆ ರಷ್ಯಾ ದಾಳಿ: 137 ಸಾವುಗಳಾಗಿವೆ ಎಂದು ಉಕ್ರೇನ್

- Advertisement -
- Advertisement -

ಉಕ್ರೇನ್ ಮೇಲೆ ರಷ್ಯಾವು ಎರಡನೇ ದಿನವೂ ಮಿಲಿಟರಿ ಕಾರ್ಯಾಚರಣೆ ಮುಂದುವರೆಸಿದ್ದು ರಾಜಧಾನಿ ಕೈವ್‌ವರೆಗೂ ತಲುಪಿದೆ ಎನ್ನಲಾಗಿದೆ. ರಾಜಧಾನಿಯಲ್ಲಿ ಎರಡು ಸ್ಫೋಟಗಳಾದ ವರದಿಯಾಗಿದ್ದು,  ಗುರುವಾರದಿಂದ ಕನಿಷ್ಠ 137 ಜನರು ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಹೇಳಿದೆ

ಶುಕ್ರವಾರ ಮುಂಜಾನೆ ಕೇಂದ್ರ ಕೈವ್‌ನಲ್ಲಿ ಎರಡು ದೊಡ್ಡ ಸ್ಫೋಟಗಳು ಕೇಳಿಬಂದವು ಎಂದು ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ. ಕೈವ್‌ನ ನಾಗರಿಕ ಪ್ರದೇಶಗಳ ಮೇಲೆ ರಷ್ಯಾ ಗುಂಡು ಹಾರಿಸಿದೆ ಆದರೆ ಉಕ್ರೇನ್‌ನ ವಾಯುಸೇನೆಯು ತಿರುಗೇಟು ನೀಡಿದೆ ಎಂದು ಉಕ್ರೇನ್ ಸೇನೆಯು ಹೇಳಿಕೊಂಡಿದೆ.

“ಕೈವ್ ಮೇಲೆ ಭಯಾನಕ ರಷ್ಯಾದ ರಾಕೆಟ್ ದಾಳಿಗಳು ನಡೆಯುತ್ತಿವೆ. ಕಳೆದ ಬಾರಿ ನಮ್ಮ ರಾಜಧಾನಿಯು 1941 ರಲ್ಲಿ ನಾಜಿ ಜರ್ಮನಿಯಿಂದ ದಾಳಿಗೊಳಗಾದಾಗ ಈ ರೀತಿಯ ಪರಿಸ್ಥಿತಿಯನ್ನು ಅನುಭವಿಸಿತು. ಉಕ್ರೇನ್ ಆ ದುಷ್ಟರನ್ನು ಸೋಲಿಸಿತು ಮತ್ತು ಇದನ್ನೂ ಸೋಲಿಸುತ್ತದೆ ಎಂದು ಉಕ್ರೇನ್ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಎರಡನೆಯ ಮಹಾಯುದ್ಧದ ನಂತರ ಯುರೋಪಿಯನ್ ರಾಜ್ಯದ ಮೇಲೆ ನಡೆದ ಅತಿದೊಡ್ಡ ದಾಳಿಯಲ್ಲಿ ರಷ್ಯಾದ ಆಕ್ರಮಣಕಾರರ ವಿರುದ್ಧ ತನ್ನ ಪಡೆಗಳು ಹೋರಾಡುತ್ತಿರುವಾಗ ತಾನು ಸಹ ರಾಜಧಾನಿ ಕೈವ್‌ನಲ್ಲಿ ಉಳಿಯುವುದಾಗಿ ಪ್ರತಿಜ್ಞೆ ಮಾಡಿದ್ದೇನೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ತಿಳಿಸಿದ್ದಾರೆ.  ಶತ್ರುಗಳು ನನ್ನನ್ನು ನಂಬರ್ ಒನ್ ಗುರಿ, ನನ್ನ ಕುಟುಂಬ ಎರಡನೇ ಗುರಿ ಎಂದು ಪರಿಗಣಿಸಿದ್ದಾರೆ” ಎಂದು ಝೆಲೆನ್ಸ್ಕಿ ವೀಡಿಯೊ ಸಂದೇಶದಲ್ಲಿ ಎಚ್ಚರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ತಡರಾತ್ರಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತನಾಡಿ, “ತಕ್ಷಣ ಹಿಂಸಾಚಾರವನ್ನು ನಿಲ್ಲಿಸುವಂತೆ” ಮನವಿ ಮಾಡಿದರು ಎಂದು ವರದಿಯಾಗಿದೆ.

ಉಕ್ರೇನ್‌ನಲ್ಲಿ ಜನಾಂಗೀಯ ಹತ್ಯೆಗೆ ಒಳಗಾದ ರಷ್ಯಾದ ನಾಗರಿಕರು ಸೇರಿದಂತೆ ಜನರನ್ನು ರಕ್ಷಿಸಲು ರಷ್ಯಾ “ವಿಶೇಷ ಮಿಲಿಟರಿ ಕಾರ್ಯಾಚರಣೆ” ನಡೆಸುತ್ತಿದೆ ಎಂದು ಪುಟಿನ್ ಹೇಳಿದ್ದಾರೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್ ಮೇಲೆ ಆಕ್ರಮಣ ಮಾಡಲು ಸೈನ್ಯವನ್ನು ಕಳುಹಿಸಿದ ನಂತರ ರಷ್ಯಾದಲ್ಲಿ ಯುದ್ಧ ವಿರೋಧಿ ಪ್ರತಿಭಟನೆಗಳು ಬಿರುಸುಪಡೆದಿದೆ. ರಷ್ಯಾದ ಪೊಲೀಸರು ಹಲವು ನಗರಗಳಲ್ಲಿ 700ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ ಎಂದು ಸ್ವತಂತ್ರ ಮಾಧ್ಯಮಗಳು ವರದಿ ಮಾಡಿವೆ.

ಮಧ್ಯ ಮಾಸ್ಕೋದ ಪುಷ್ಕಿನ್ ಚೌಕದ ಬಳಿ ಸುಮಾರು 2,000 ಜನರು ಜಮಾಯಿಸಿದ್ದರು. ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ 1,000 ಜನರು ಸೇರಿದ್ದರು ಎಂದು ಸ್ಥಳದಲ್ಲಿದ್ದ ಎಎಫ್‌ಪಿ ವರದಿಗಾರರು ತಿಳಿಸಿದ್ದಾರೆ.

ರಷ್ಯಾ ಜನತೆಯ ವಿರೋಧದ ನಡುವೆ ಉಕ್ರೇನ್‌ ಮೇಲೆ ಆಕ್ರಮಣ ನಡೆಯುತ್ತಿದೆ. ಹೆಚ್ಚಿನ ಪ್ರತಿಭಟನಾ ನಿರತ ನಾಯಕರನ್ನು ಹತ್ಯೆ ಮಾಡಲಾಗಿದೆ, ಜೈಲಿನಲ್ಲಿಡಲಾಗಿದೆ ಅಥವಾ ದೇಶದಿಂದ ಹೊರದೂಡಲಾಗಿದೆ ಎಂದು ವರದಿಗಳಾಗಿವೆ.


ಇದನ್ನೂ ಓದಿ: ಉಕ್ರೇನ್‌ ವಿರುದ್ಧ ಯುದ್ಧ ವಿರೋಧಿಸಿ ರಷ್ಯಾ ಪ್ರಜೆಗಳ ಪ್ರತಿಭಟನೆ; 700 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...