Homeಮುಖಪುಟಉಕ್ರೇನ್ ಮೇಲೆ ರಷ್ಯಾ ದಾಳಿ: 137 ಸಾವುಗಳಾಗಿವೆ ಎಂದು ಉಕ್ರೇನ್

ಉಕ್ರೇನ್ ಮೇಲೆ ರಷ್ಯಾ ದಾಳಿ: 137 ಸಾವುಗಳಾಗಿವೆ ಎಂದು ಉಕ್ರೇನ್

- Advertisement -
- Advertisement -

ಉಕ್ರೇನ್ ಮೇಲೆ ರಷ್ಯಾವು ಎರಡನೇ ದಿನವೂ ಮಿಲಿಟರಿ ಕಾರ್ಯಾಚರಣೆ ಮುಂದುವರೆಸಿದ್ದು ರಾಜಧಾನಿ ಕೈವ್‌ವರೆಗೂ ತಲುಪಿದೆ ಎನ್ನಲಾಗಿದೆ. ರಾಜಧಾನಿಯಲ್ಲಿ ಎರಡು ಸ್ಫೋಟಗಳಾದ ವರದಿಯಾಗಿದ್ದು,  ಗುರುವಾರದಿಂದ ಕನಿಷ್ಠ 137 ಜನರು ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಹೇಳಿದೆ

ಶುಕ್ರವಾರ ಮುಂಜಾನೆ ಕೇಂದ್ರ ಕೈವ್‌ನಲ್ಲಿ ಎರಡು ದೊಡ್ಡ ಸ್ಫೋಟಗಳು ಕೇಳಿಬಂದವು ಎಂದು ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ. ಕೈವ್‌ನ ನಾಗರಿಕ ಪ್ರದೇಶಗಳ ಮೇಲೆ ರಷ್ಯಾ ಗುಂಡು ಹಾರಿಸಿದೆ ಆದರೆ ಉಕ್ರೇನ್‌ನ ವಾಯುಸೇನೆಯು ತಿರುಗೇಟು ನೀಡಿದೆ ಎಂದು ಉಕ್ರೇನ್ ಸೇನೆಯು ಹೇಳಿಕೊಂಡಿದೆ.

“ಕೈವ್ ಮೇಲೆ ಭಯಾನಕ ರಷ್ಯಾದ ರಾಕೆಟ್ ದಾಳಿಗಳು ನಡೆಯುತ್ತಿವೆ. ಕಳೆದ ಬಾರಿ ನಮ್ಮ ರಾಜಧಾನಿಯು 1941 ರಲ್ಲಿ ನಾಜಿ ಜರ್ಮನಿಯಿಂದ ದಾಳಿಗೊಳಗಾದಾಗ ಈ ರೀತಿಯ ಪರಿಸ್ಥಿತಿಯನ್ನು ಅನುಭವಿಸಿತು. ಉಕ್ರೇನ್ ಆ ದುಷ್ಟರನ್ನು ಸೋಲಿಸಿತು ಮತ್ತು ಇದನ್ನೂ ಸೋಲಿಸುತ್ತದೆ ಎಂದು ಉಕ್ರೇನ್ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಎರಡನೆಯ ಮಹಾಯುದ್ಧದ ನಂತರ ಯುರೋಪಿಯನ್ ರಾಜ್ಯದ ಮೇಲೆ ನಡೆದ ಅತಿದೊಡ್ಡ ದಾಳಿಯಲ್ಲಿ ರಷ್ಯಾದ ಆಕ್ರಮಣಕಾರರ ವಿರುದ್ಧ ತನ್ನ ಪಡೆಗಳು ಹೋರಾಡುತ್ತಿರುವಾಗ ತಾನು ಸಹ ರಾಜಧಾನಿ ಕೈವ್‌ನಲ್ಲಿ ಉಳಿಯುವುದಾಗಿ ಪ್ರತಿಜ್ಞೆ ಮಾಡಿದ್ದೇನೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ತಿಳಿಸಿದ್ದಾರೆ.  ಶತ್ರುಗಳು ನನ್ನನ್ನು ನಂಬರ್ ಒನ್ ಗುರಿ, ನನ್ನ ಕುಟುಂಬ ಎರಡನೇ ಗುರಿ ಎಂದು ಪರಿಗಣಿಸಿದ್ದಾರೆ” ಎಂದು ಝೆಲೆನ್ಸ್ಕಿ ವೀಡಿಯೊ ಸಂದೇಶದಲ್ಲಿ ಎಚ್ಚರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ತಡರಾತ್ರಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತನಾಡಿ, “ತಕ್ಷಣ ಹಿಂಸಾಚಾರವನ್ನು ನಿಲ್ಲಿಸುವಂತೆ” ಮನವಿ ಮಾಡಿದರು ಎಂದು ವರದಿಯಾಗಿದೆ.

ಉಕ್ರೇನ್‌ನಲ್ಲಿ ಜನಾಂಗೀಯ ಹತ್ಯೆಗೆ ಒಳಗಾದ ರಷ್ಯಾದ ನಾಗರಿಕರು ಸೇರಿದಂತೆ ಜನರನ್ನು ರಕ್ಷಿಸಲು ರಷ್ಯಾ “ವಿಶೇಷ ಮಿಲಿಟರಿ ಕಾರ್ಯಾಚರಣೆ” ನಡೆಸುತ್ತಿದೆ ಎಂದು ಪುಟಿನ್ ಹೇಳಿದ್ದಾರೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್ ಮೇಲೆ ಆಕ್ರಮಣ ಮಾಡಲು ಸೈನ್ಯವನ್ನು ಕಳುಹಿಸಿದ ನಂತರ ರಷ್ಯಾದಲ್ಲಿ ಯುದ್ಧ ವಿರೋಧಿ ಪ್ರತಿಭಟನೆಗಳು ಬಿರುಸುಪಡೆದಿದೆ. ರಷ್ಯಾದ ಪೊಲೀಸರು ಹಲವು ನಗರಗಳಲ್ಲಿ 700ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ ಎಂದು ಸ್ವತಂತ್ರ ಮಾಧ್ಯಮಗಳು ವರದಿ ಮಾಡಿವೆ.

ಮಧ್ಯ ಮಾಸ್ಕೋದ ಪುಷ್ಕಿನ್ ಚೌಕದ ಬಳಿ ಸುಮಾರು 2,000 ಜನರು ಜಮಾಯಿಸಿದ್ದರು. ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ 1,000 ಜನರು ಸೇರಿದ್ದರು ಎಂದು ಸ್ಥಳದಲ್ಲಿದ್ದ ಎಎಫ್‌ಪಿ ವರದಿಗಾರರು ತಿಳಿಸಿದ್ದಾರೆ.

ರಷ್ಯಾ ಜನತೆಯ ವಿರೋಧದ ನಡುವೆ ಉಕ್ರೇನ್‌ ಮೇಲೆ ಆಕ್ರಮಣ ನಡೆಯುತ್ತಿದೆ. ಹೆಚ್ಚಿನ ಪ್ರತಿಭಟನಾ ನಿರತ ನಾಯಕರನ್ನು ಹತ್ಯೆ ಮಾಡಲಾಗಿದೆ, ಜೈಲಿನಲ್ಲಿಡಲಾಗಿದೆ ಅಥವಾ ದೇಶದಿಂದ ಹೊರದೂಡಲಾಗಿದೆ ಎಂದು ವರದಿಗಳಾಗಿವೆ.


ಇದನ್ನೂ ಓದಿ: ಉಕ್ರೇನ್‌ ವಿರುದ್ಧ ಯುದ್ಧ ವಿರೋಧಿಸಿ ರಷ್ಯಾ ಪ್ರಜೆಗಳ ಪ್ರತಿಭಟನೆ; 700 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...