Homeಕರ್ನಾಟಕಉಕ್ರೇನ್‌ ರಾಜಧಾನಿ ಮೇಲೆ ರಷ್ಯಾ ದಾಳಿ: ಬೃಹತ್‌ ಕಟ್ಟಡಕ್ಕೆ ಅಪ್ಪಳಿಸಿದ ಕ್ಷಿಪಣಿ- ಮೇಯರ್‌

ಉಕ್ರೇನ್‌ ರಾಜಧಾನಿ ಮೇಲೆ ರಷ್ಯಾ ದಾಳಿ: ಬೃಹತ್‌ ಕಟ್ಟಡಕ್ಕೆ ಅಪ್ಪಳಿಸಿದ ಕ್ಷಿಪಣಿ- ಮೇಯರ್‌

- Advertisement -
- Advertisement -

ಉಕ್ರೇನಿಯನ್ ಮತ್ತು ರಷ್ಯಾ ಪಡೆಗಳ ನಡುವಿನ ಸಮರದಲ್ಲಿ ಉಕ್ರೇನ್ ರಾಜಧಾನಿ ಕೀವ್‌ನಲ್ಲಿರುವ ಅಪಾರ್ಟ್ಮೆಂಟ್‌ಗೆ ಕ್ಷಿಪಣಿ ಅಪ್ಪಳಿಸಿದೆ ಎಂದು ಕೀವ್‌‌ ಮೇಯರ್ ವಿಟಾಲಿ ಕ್ಲಿಟ್ಸ್ಕೊ ಹೇಳಿದ್ದಾರೆ. ಆದರೆ ಯಾವುದೇ ಸಾವುಗಳು ಅಥವಾ ಗಾಯಗೊಂಡವರ ವರದಿಯಾಗಿಲ್ಲ.

ಜುಲಿಯಾನಿ ವಿಮಾನ ನಿಲ್ದಾಣದ ಬಳಿ ಕೀವ್‌ನ ನೈಋತ್ಯ ಹೊರವಲಯದಲ್ಲಿರುವ ಅಪಾರ್ಟ್‌ಮೆಂಟ್‌ ಬ್ಲಾಕ್‌ಗೆ ಶನಿವಾರ ಕ್ಷಿಪಣಿ ಅಪ್ಪಳಿಸಿದೆ. ನಂತರ ತುರ್ತು ಮತ್ತು ರಕ್ಷಣಾ ಸೇವೆಗಳು ಘಟನಾ ಸ್ಥಳಕ್ಕೆ ಧಾವಿಸಿವೆ ಎಂದು ವಿಟಾಲಿ ಕ್ಲಿಟ್ಸ್ಕೊ ಹೇಳಿದ್ದಾರೆ.

ಸಂದೇಶ ಕಳುಹಿಸುವ ಅಪ್ಲಿಕೇಶನ್‌ನಲ್ಲಿ ಅವರು ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಕಟ್ಟಡದ ಒಂದು ಬದಿಗೆ ಕ್ಷಪಣಿ ಅಪ್ಪಳಿಸಿರುವುದನ್ನು ಅವರು ತಿಳಿಸಿದ್ದಾರೆ. ಹಲವು ಮಹಡಿಗಳ ಅಪಾರ್ಟ್‌‌ಮೆಂಟ್ ಹಾನಿಗೊಳಗಾಗಿದೆ.

ನಿರಾಶ್ರಿತ ಶಿಬಿರಗಳಲ್ಲಿ ಉಳಿಯಲು ಕ್ಲಿಟ್ಸ್ಕೊ ಕೀವ್‌‌ ಜನರಲ್ಲಿ ಒತ್ತಾಯಿಸಿದ್ದಾರೆ. “ಶತ್ರುಗಳು ವೈಮಾನಿಕ ದಾಳಿ ಮಾಡುತ್ತಾರೆ” ಎಂದು ಅವರು ಎಚ್ಚರಿಸಿದ್ದಾರೆ.

ಕೀವ್‌‌ನಿಂದ ವರದಿ ಮಾಡಿರುವ ಅಲ್ ಜಜೀರಾದ ಆಂಡ್ರ್ಯೂ ಸಿಮ್ಮನ್ಸ್, “ರಾತ್ರಿಯಿಡೀ ದಾಳಿಗೊಳಗಾದ ಹಲವು ಕಟ್ಟಡಗಳಲ್ಲಿ ಈ ಎತ್ತರದ ಅಪಾರ್ಟ್‌‌ಮೆಂಟ್‌ ಕೂಡ ಒಂದಾಗಿದೆ” ಎಂದು ತಿಳಿಸಿದ್ದಾರೆ.

“ಈ ನಗರದ ಬೀದಿಗಳಲ್ಲಿ ವೈಮಾನಿಕವಾಗಿ ನಡೆಯುತ್ತಿರುವ ಹಿಂಸಾಚಾರ ಅತ್ಯಂತ ಭೀಕರವಾಗಿದೆ” ಎಂದು ಅವರು ತಿಳಿಸಿದ್ದಾರೆ. “ಭೀಕರ ಶಬ್ಧ, ಭಯಾನಕ ಶಬ್ದ” ಎಂದು ಅವರು ತಮ್ಮ ಅನುಭವ ಹಂಚಿಕೊಂಡಿದ್ದಾರೆ. “ರಾಜಧಾನಿಯನ್ನು ವಶಪಡಿಸಿಕೊಳ್ಳುವ ಮುಂದಿನ ಹಂತದ ಕುರಿತು ಎಚ್ಚರಿಕೆಯ ಘಂಟೆಯನ್ನು ರಷ್ಯಾ ಪಡೆ ನೀಡುತ್ತಿದೆ” ಎಂದು ಅವರು ವರದಿ ಮಾಡಿದ್ದಾರೆ.

ವಾಯು ಮತ್ತು ಜಲಮಾರ್ಗದ ಕ್ರೂಸ್ ಕ್ಷಿಪಣಿಗಳನ್ನು ಬಳಸಿಕೊಂಡು ಉಕ್ರೇನ್‌ನ ಮಿಲಿಟರಿ ಮೂಲಸೌಕರ್ಯವನ್ನು ಗುರಿಮಾಡಿಕೊಳ್ಳಲಾಗಿದೆ ಎಂದು ರಷ್ಯಾದ ಮಿಲಿಟರಿ ಶನಿವಾರ ಹೇಳಿದೆ.

ಸ್ಥಳೀಯ ಕಾಲಮಾನ ಬೆಳಿಗ್ಗೆ 6 ಗಂಟೆಯವರೆಗೆ ರಾತ್ರಿ ನಡೆದ ಕಾದಾಟದಿಂದಾಗಿ ಇಬ್ಬರು ಮಕ್ಕಳು ಸೇರಿದಂತೆ 35 ಜನರು ಗಾಯಗೊಂಡಿದ್ದಾರೆ ಎಂದು ಕ್ಲಿಟ್ಸ್ಕೊ ಮಾಹಿತಿ ನೀಡಿದ್ದಾರೆ. ಅವರು ನಾಗರಿಕರನ್ನು ಮಾತ್ರ ಉಲ್ಲೇಖಿಸುತ್ತಿದ್ದಾರೆಯೇ ಎಂಬ ಮಾಹಿತಿ ಸ್ಪಷ್ಟವಾಗಿಲ್ಲ.

ಉಕ್ರೇನ್‌ನ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಅವರು ಹಾನಿಗೊಳಗಾದ ಅಪಾರ್ಟ್ಮೆಂಟ್ ಬ್ಲಾಕ್‌ನ ಚಿತ್ರವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಕೀವ್‌‌ ನಮ್ಮ ಭವ್ಯವಾದ, ಶಾಂತಿಯುತ ನಗರ. ರಷ್ಯಾದ ಸೇನೆ, ಕ್ಷಿಪಣಿಗಳ ದಾಳಿಯ ನಡುವೆ ಮತ್ತೊಂದು ರಾತ್ರಿ ಜನರು ಬದುಕುಳಿದರು. ದಾಳಿ ಮಾಡಿದವರಲ್ಲಿ ಒಬ್ಬರು ಕೀವ್‌ಲ್ಲಿರುವ ವಸತಿ ಅಪಾರ್ಟ್ಮೆಂಟ್‌ಗೆ ಹೊಡೆದಿದ್ದಾರೆ” ಎಂದು ಅವರು ಬರೆದಿದ್ದಾರೆ.

ನಾನು ಜಗತ್ತನ್ನು ಒತ್ತಾಯಿಸುತ್ತೇನೆ: ರಷ್ಯಾವನ್ನು ಸಂಪೂರ್ಣವಾಗಿ ಹೊರಗಿಡಿ, ರಾಯಭಾರಿಗಳನ್ನು ಹೊರಹಾಕಿ, ತೈಲ ನಿರ್ಬಂಧ ಹೇರಿ. ಅದರ ಆರ್ಥಿಕತೆಯನ್ನು ಕಸಿದುಕೊಳ್ಳಿ. ರಷ್ಯಾದ ಯುದ್ಧ ಅಪರಾಧಿಗಳನ್ನು ತಡೆಯಿರಿ” ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿರಿ: ಉಕ್ರೇನ್‌ ವಿರುದ್ಧ ಯುದ್ಧ ವಿರೋಧಿಸಿ ರಷ್ಯಾ ಪ್ರಜೆಗಳ ಪ್ರತಿಭಟನೆ; 700 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...