Homeಕರ್ನಾಟಕಉಕ್ರೇನ್‌ ರಾಜಧಾನಿ ಮೇಲೆ ರಷ್ಯಾ ದಾಳಿ: ಬೃಹತ್‌ ಕಟ್ಟಡಕ್ಕೆ ಅಪ್ಪಳಿಸಿದ ಕ್ಷಿಪಣಿ- ಮೇಯರ್‌

ಉಕ್ರೇನ್‌ ರಾಜಧಾನಿ ಮೇಲೆ ರಷ್ಯಾ ದಾಳಿ: ಬೃಹತ್‌ ಕಟ್ಟಡಕ್ಕೆ ಅಪ್ಪಳಿಸಿದ ಕ್ಷಿಪಣಿ- ಮೇಯರ್‌

- Advertisement -
- Advertisement -

ಉಕ್ರೇನಿಯನ್ ಮತ್ತು ರಷ್ಯಾ ಪಡೆಗಳ ನಡುವಿನ ಸಮರದಲ್ಲಿ ಉಕ್ರೇನ್ ರಾಜಧಾನಿ ಕೀವ್‌ನಲ್ಲಿರುವ ಅಪಾರ್ಟ್ಮೆಂಟ್‌ಗೆ ಕ್ಷಿಪಣಿ ಅಪ್ಪಳಿಸಿದೆ ಎಂದು ಕೀವ್‌‌ ಮೇಯರ್ ವಿಟಾಲಿ ಕ್ಲಿಟ್ಸ್ಕೊ ಹೇಳಿದ್ದಾರೆ. ಆದರೆ ಯಾವುದೇ ಸಾವುಗಳು ಅಥವಾ ಗಾಯಗೊಂಡವರ ವರದಿಯಾಗಿಲ್ಲ.

ಜುಲಿಯಾನಿ ವಿಮಾನ ನಿಲ್ದಾಣದ ಬಳಿ ಕೀವ್‌ನ ನೈಋತ್ಯ ಹೊರವಲಯದಲ್ಲಿರುವ ಅಪಾರ್ಟ್‌ಮೆಂಟ್‌ ಬ್ಲಾಕ್‌ಗೆ ಶನಿವಾರ ಕ್ಷಿಪಣಿ ಅಪ್ಪಳಿಸಿದೆ. ನಂತರ ತುರ್ತು ಮತ್ತು ರಕ್ಷಣಾ ಸೇವೆಗಳು ಘಟನಾ ಸ್ಥಳಕ್ಕೆ ಧಾವಿಸಿವೆ ಎಂದು ವಿಟಾಲಿ ಕ್ಲಿಟ್ಸ್ಕೊ ಹೇಳಿದ್ದಾರೆ.

ಸಂದೇಶ ಕಳುಹಿಸುವ ಅಪ್ಲಿಕೇಶನ್‌ನಲ್ಲಿ ಅವರು ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಕಟ್ಟಡದ ಒಂದು ಬದಿಗೆ ಕ್ಷಪಣಿ ಅಪ್ಪಳಿಸಿರುವುದನ್ನು ಅವರು ತಿಳಿಸಿದ್ದಾರೆ. ಹಲವು ಮಹಡಿಗಳ ಅಪಾರ್ಟ್‌‌ಮೆಂಟ್ ಹಾನಿಗೊಳಗಾಗಿದೆ.

ನಿರಾಶ್ರಿತ ಶಿಬಿರಗಳಲ್ಲಿ ಉಳಿಯಲು ಕ್ಲಿಟ್ಸ್ಕೊ ಕೀವ್‌‌ ಜನರಲ್ಲಿ ಒತ್ತಾಯಿಸಿದ್ದಾರೆ. “ಶತ್ರುಗಳು ವೈಮಾನಿಕ ದಾಳಿ ಮಾಡುತ್ತಾರೆ” ಎಂದು ಅವರು ಎಚ್ಚರಿಸಿದ್ದಾರೆ.

ಕೀವ್‌‌ನಿಂದ ವರದಿ ಮಾಡಿರುವ ಅಲ್ ಜಜೀರಾದ ಆಂಡ್ರ್ಯೂ ಸಿಮ್ಮನ್ಸ್, “ರಾತ್ರಿಯಿಡೀ ದಾಳಿಗೊಳಗಾದ ಹಲವು ಕಟ್ಟಡಗಳಲ್ಲಿ ಈ ಎತ್ತರದ ಅಪಾರ್ಟ್‌‌ಮೆಂಟ್‌ ಕೂಡ ಒಂದಾಗಿದೆ” ಎಂದು ತಿಳಿಸಿದ್ದಾರೆ.

“ಈ ನಗರದ ಬೀದಿಗಳಲ್ಲಿ ವೈಮಾನಿಕವಾಗಿ ನಡೆಯುತ್ತಿರುವ ಹಿಂಸಾಚಾರ ಅತ್ಯಂತ ಭೀಕರವಾಗಿದೆ” ಎಂದು ಅವರು ತಿಳಿಸಿದ್ದಾರೆ. “ಭೀಕರ ಶಬ್ಧ, ಭಯಾನಕ ಶಬ್ದ” ಎಂದು ಅವರು ತಮ್ಮ ಅನುಭವ ಹಂಚಿಕೊಂಡಿದ್ದಾರೆ. “ರಾಜಧಾನಿಯನ್ನು ವಶಪಡಿಸಿಕೊಳ್ಳುವ ಮುಂದಿನ ಹಂತದ ಕುರಿತು ಎಚ್ಚರಿಕೆಯ ಘಂಟೆಯನ್ನು ರಷ್ಯಾ ಪಡೆ ನೀಡುತ್ತಿದೆ” ಎಂದು ಅವರು ವರದಿ ಮಾಡಿದ್ದಾರೆ.

ವಾಯು ಮತ್ತು ಜಲಮಾರ್ಗದ ಕ್ರೂಸ್ ಕ್ಷಿಪಣಿಗಳನ್ನು ಬಳಸಿಕೊಂಡು ಉಕ್ರೇನ್‌ನ ಮಿಲಿಟರಿ ಮೂಲಸೌಕರ್ಯವನ್ನು ಗುರಿಮಾಡಿಕೊಳ್ಳಲಾಗಿದೆ ಎಂದು ರಷ್ಯಾದ ಮಿಲಿಟರಿ ಶನಿವಾರ ಹೇಳಿದೆ.

ಸ್ಥಳೀಯ ಕಾಲಮಾನ ಬೆಳಿಗ್ಗೆ 6 ಗಂಟೆಯವರೆಗೆ ರಾತ್ರಿ ನಡೆದ ಕಾದಾಟದಿಂದಾಗಿ ಇಬ್ಬರು ಮಕ್ಕಳು ಸೇರಿದಂತೆ 35 ಜನರು ಗಾಯಗೊಂಡಿದ್ದಾರೆ ಎಂದು ಕ್ಲಿಟ್ಸ್ಕೊ ಮಾಹಿತಿ ನೀಡಿದ್ದಾರೆ. ಅವರು ನಾಗರಿಕರನ್ನು ಮಾತ್ರ ಉಲ್ಲೇಖಿಸುತ್ತಿದ್ದಾರೆಯೇ ಎಂಬ ಮಾಹಿತಿ ಸ್ಪಷ್ಟವಾಗಿಲ್ಲ.

ಉಕ್ರೇನ್‌ನ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಅವರು ಹಾನಿಗೊಳಗಾದ ಅಪಾರ್ಟ್ಮೆಂಟ್ ಬ್ಲಾಕ್‌ನ ಚಿತ್ರವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಕೀವ್‌‌ ನಮ್ಮ ಭವ್ಯವಾದ, ಶಾಂತಿಯುತ ನಗರ. ರಷ್ಯಾದ ಸೇನೆ, ಕ್ಷಿಪಣಿಗಳ ದಾಳಿಯ ನಡುವೆ ಮತ್ತೊಂದು ರಾತ್ರಿ ಜನರು ಬದುಕುಳಿದರು. ದಾಳಿ ಮಾಡಿದವರಲ್ಲಿ ಒಬ್ಬರು ಕೀವ್‌ಲ್ಲಿರುವ ವಸತಿ ಅಪಾರ್ಟ್ಮೆಂಟ್‌ಗೆ ಹೊಡೆದಿದ್ದಾರೆ” ಎಂದು ಅವರು ಬರೆದಿದ್ದಾರೆ.

ನಾನು ಜಗತ್ತನ್ನು ಒತ್ತಾಯಿಸುತ್ತೇನೆ: ರಷ್ಯಾವನ್ನು ಸಂಪೂರ್ಣವಾಗಿ ಹೊರಗಿಡಿ, ರಾಯಭಾರಿಗಳನ್ನು ಹೊರಹಾಕಿ, ತೈಲ ನಿರ್ಬಂಧ ಹೇರಿ. ಅದರ ಆರ್ಥಿಕತೆಯನ್ನು ಕಸಿದುಕೊಳ್ಳಿ. ರಷ್ಯಾದ ಯುದ್ಧ ಅಪರಾಧಿಗಳನ್ನು ತಡೆಯಿರಿ” ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿರಿ: ಉಕ್ರೇನ್‌ ವಿರುದ್ಧ ಯುದ್ಧ ವಿರೋಧಿಸಿ ರಷ್ಯಾ ಪ್ರಜೆಗಳ ಪ್ರತಿಭಟನೆ; 700 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...