Homeಕರ್ನಾಟಕಉಕ್ರೇನ್‌ ರಾಜಧಾನಿ ಮೇಲೆ ರಷ್ಯಾ ದಾಳಿ: ಬೃಹತ್‌ ಕಟ್ಟಡಕ್ಕೆ ಅಪ್ಪಳಿಸಿದ ಕ್ಷಿಪಣಿ- ಮೇಯರ್‌

ಉಕ್ರೇನ್‌ ರಾಜಧಾನಿ ಮೇಲೆ ರಷ್ಯಾ ದಾಳಿ: ಬೃಹತ್‌ ಕಟ್ಟಡಕ್ಕೆ ಅಪ್ಪಳಿಸಿದ ಕ್ಷಿಪಣಿ- ಮೇಯರ್‌

- Advertisement -
- Advertisement -

ಉಕ್ರೇನಿಯನ್ ಮತ್ತು ರಷ್ಯಾ ಪಡೆಗಳ ನಡುವಿನ ಸಮರದಲ್ಲಿ ಉಕ್ರೇನ್ ರಾಜಧಾನಿ ಕೀವ್‌ನಲ್ಲಿರುವ ಅಪಾರ್ಟ್ಮೆಂಟ್‌ಗೆ ಕ್ಷಿಪಣಿ ಅಪ್ಪಳಿಸಿದೆ ಎಂದು ಕೀವ್‌‌ ಮೇಯರ್ ವಿಟಾಲಿ ಕ್ಲಿಟ್ಸ್ಕೊ ಹೇಳಿದ್ದಾರೆ. ಆದರೆ ಯಾವುದೇ ಸಾವುಗಳು ಅಥವಾ ಗಾಯಗೊಂಡವರ ವರದಿಯಾಗಿಲ್ಲ.

ಜುಲಿಯಾನಿ ವಿಮಾನ ನಿಲ್ದಾಣದ ಬಳಿ ಕೀವ್‌ನ ನೈಋತ್ಯ ಹೊರವಲಯದಲ್ಲಿರುವ ಅಪಾರ್ಟ್‌ಮೆಂಟ್‌ ಬ್ಲಾಕ್‌ಗೆ ಶನಿವಾರ ಕ್ಷಿಪಣಿ ಅಪ್ಪಳಿಸಿದೆ. ನಂತರ ತುರ್ತು ಮತ್ತು ರಕ್ಷಣಾ ಸೇವೆಗಳು ಘಟನಾ ಸ್ಥಳಕ್ಕೆ ಧಾವಿಸಿವೆ ಎಂದು ವಿಟಾಲಿ ಕ್ಲಿಟ್ಸ್ಕೊ ಹೇಳಿದ್ದಾರೆ.

ಸಂದೇಶ ಕಳುಹಿಸುವ ಅಪ್ಲಿಕೇಶನ್‌ನಲ್ಲಿ ಅವರು ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಕಟ್ಟಡದ ಒಂದು ಬದಿಗೆ ಕ್ಷಪಣಿ ಅಪ್ಪಳಿಸಿರುವುದನ್ನು ಅವರು ತಿಳಿಸಿದ್ದಾರೆ. ಹಲವು ಮಹಡಿಗಳ ಅಪಾರ್ಟ್‌‌ಮೆಂಟ್ ಹಾನಿಗೊಳಗಾಗಿದೆ.

ನಿರಾಶ್ರಿತ ಶಿಬಿರಗಳಲ್ಲಿ ಉಳಿಯಲು ಕ್ಲಿಟ್ಸ್ಕೊ ಕೀವ್‌‌ ಜನರಲ್ಲಿ ಒತ್ತಾಯಿಸಿದ್ದಾರೆ. “ಶತ್ರುಗಳು ವೈಮಾನಿಕ ದಾಳಿ ಮಾಡುತ್ತಾರೆ” ಎಂದು ಅವರು ಎಚ್ಚರಿಸಿದ್ದಾರೆ.

ಕೀವ್‌‌ನಿಂದ ವರದಿ ಮಾಡಿರುವ ಅಲ್ ಜಜೀರಾದ ಆಂಡ್ರ್ಯೂ ಸಿಮ್ಮನ್ಸ್, “ರಾತ್ರಿಯಿಡೀ ದಾಳಿಗೊಳಗಾದ ಹಲವು ಕಟ್ಟಡಗಳಲ್ಲಿ ಈ ಎತ್ತರದ ಅಪಾರ್ಟ್‌‌ಮೆಂಟ್‌ ಕೂಡ ಒಂದಾಗಿದೆ” ಎಂದು ತಿಳಿಸಿದ್ದಾರೆ.

“ಈ ನಗರದ ಬೀದಿಗಳಲ್ಲಿ ವೈಮಾನಿಕವಾಗಿ ನಡೆಯುತ್ತಿರುವ ಹಿಂಸಾಚಾರ ಅತ್ಯಂತ ಭೀಕರವಾಗಿದೆ” ಎಂದು ಅವರು ತಿಳಿಸಿದ್ದಾರೆ. “ಭೀಕರ ಶಬ್ಧ, ಭಯಾನಕ ಶಬ್ದ” ಎಂದು ಅವರು ತಮ್ಮ ಅನುಭವ ಹಂಚಿಕೊಂಡಿದ್ದಾರೆ. “ರಾಜಧಾನಿಯನ್ನು ವಶಪಡಿಸಿಕೊಳ್ಳುವ ಮುಂದಿನ ಹಂತದ ಕುರಿತು ಎಚ್ಚರಿಕೆಯ ಘಂಟೆಯನ್ನು ರಷ್ಯಾ ಪಡೆ ನೀಡುತ್ತಿದೆ” ಎಂದು ಅವರು ವರದಿ ಮಾಡಿದ್ದಾರೆ.

ವಾಯು ಮತ್ತು ಜಲಮಾರ್ಗದ ಕ್ರೂಸ್ ಕ್ಷಿಪಣಿಗಳನ್ನು ಬಳಸಿಕೊಂಡು ಉಕ್ರೇನ್‌ನ ಮಿಲಿಟರಿ ಮೂಲಸೌಕರ್ಯವನ್ನು ಗುರಿಮಾಡಿಕೊಳ್ಳಲಾಗಿದೆ ಎಂದು ರಷ್ಯಾದ ಮಿಲಿಟರಿ ಶನಿವಾರ ಹೇಳಿದೆ.

ಸ್ಥಳೀಯ ಕಾಲಮಾನ ಬೆಳಿಗ್ಗೆ 6 ಗಂಟೆಯವರೆಗೆ ರಾತ್ರಿ ನಡೆದ ಕಾದಾಟದಿಂದಾಗಿ ಇಬ್ಬರು ಮಕ್ಕಳು ಸೇರಿದಂತೆ 35 ಜನರು ಗಾಯಗೊಂಡಿದ್ದಾರೆ ಎಂದು ಕ್ಲಿಟ್ಸ್ಕೊ ಮಾಹಿತಿ ನೀಡಿದ್ದಾರೆ. ಅವರು ನಾಗರಿಕರನ್ನು ಮಾತ್ರ ಉಲ್ಲೇಖಿಸುತ್ತಿದ್ದಾರೆಯೇ ಎಂಬ ಮಾಹಿತಿ ಸ್ಪಷ್ಟವಾಗಿಲ್ಲ.

ಉಕ್ರೇನ್‌ನ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಅವರು ಹಾನಿಗೊಳಗಾದ ಅಪಾರ್ಟ್ಮೆಂಟ್ ಬ್ಲಾಕ್‌ನ ಚಿತ್ರವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಕೀವ್‌‌ ನಮ್ಮ ಭವ್ಯವಾದ, ಶಾಂತಿಯುತ ನಗರ. ರಷ್ಯಾದ ಸೇನೆ, ಕ್ಷಿಪಣಿಗಳ ದಾಳಿಯ ನಡುವೆ ಮತ್ತೊಂದು ರಾತ್ರಿ ಜನರು ಬದುಕುಳಿದರು. ದಾಳಿ ಮಾಡಿದವರಲ್ಲಿ ಒಬ್ಬರು ಕೀವ್‌ಲ್ಲಿರುವ ವಸತಿ ಅಪಾರ್ಟ್ಮೆಂಟ್‌ಗೆ ಹೊಡೆದಿದ್ದಾರೆ” ಎಂದು ಅವರು ಬರೆದಿದ್ದಾರೆ.

ನಾನು ಜಗತ್ತನ್ನು ಒತ್ತಾಯಿಸುತ್ತೇನೆ: ರಷ್ಯಾವನ್ನು ಸಂಪೂರ್ಣವಾಗಿ ಹೊರಗಿಡಿ, ರಾಯಭಾರಿಗಳನ್ನು ಹೊರಹಾಕಿ, ತೈಲ ನಿರ್ಬಂಧ ಹೇರಿ. ಅದರ ಆರ್ಥಿಕತೆಯನ್ನು ಕಸಿದುಕೊಳ್ಳಿ. ರಷ್ಯಾದ ಯುದ್ಧ ಅಪರಾಧಿಗಳನ್ನು ತಡೆಯಿರಿ” ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿರಿ: ಉಕ್ರೇನ್‌ ವಿರುದ್ಧ ಯುದ್ಧ ವಿರೋಧಿಸಿ ರಷ್ಯಾ ಪ್ರಜೆಗಳ ಪ್ರತಿಭಟನೆ; 700 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...