Homeಮುಖಪುಟಈಶಾನ್ಯ ಉಕ್ರೇನ್‌ ಮೇಲೆ ರಷ್ಯಾದ ಕ್ಷಿಪಣಿ ದಾಳಿ; ಗರ್ಭಿಣಿ ಸೇರಿದಂತೆ 10 ಮಂದಿ ಸಾವು, ಹಲವರಿಗೆ...

ಈಶಾನ್ಯ ಉಕ್ರೇನ್‌ ಮೇಲೆ ರಷ್ಯಾದ ಕ್ಷಿಪಣಿ ದಾಳಿ; ಗರ್ಭಿಣಿ ಸೇರಿದಂತೆ 10 ಮಂದಿ ಸಾವು, ಹಲವರಿಗೆ ಗಾಯ

- Advertisement -
- Advertisement -

ಈಶಾನ್ಯ ಉಕ್ರೇನ್‌ನ ಖಾರ್ಕಿವ್ ಪ್ರದೇಶದಲ್ಲಿ ಭಾನುವಾರ ರಷ್ಯಾ ನಡೆಸಿದ ಎರಡು ಪ್ರತ್ಯೇಕ ದಾಳಿಗಳಲ್ಲಿ ಗರ್ಭಿಣಿ ಮಹಿಳೆ ಸೇರಿದಂತೆ ಕನಿಷ್ಠ 10 ಜನ ಬಲಿಯಾಗಿದ್ದು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದು, ಅಂತರರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಇತ್ತೀಚಿನ ದಿನಗಳಲ್ಲಿ ಖಾರ್ಕಿವ್ ನಗರ ಮತ್ತು ಸುತ್ತಲಿನ ಪ್ರದೇಶದ ಮೇಲೆ ರಷ್ಯಾದ ಕ್ಷಿಪಣಿಗಳು, ಬಾಂಬ್‌ಗಳ ಮೂಲಕ ರಷ್ಯಾದ ಪಡೆಗಳು ಈಶಾನ್ಯ ಪ್ರದೇಶದಲ್ಲಿ ಆಕ್ರಮಣ ಪ್ರಾರಂಭಿಸಿದ ನಿರಂತರ ದಾಳಿಗಳಲ್ಲಿ ಈ ಸಾವುನೋವು ಸಂಭವಿಸಿದೆ.

ಭಾನುವಾರ ನಡೆದ ಮೊದಲ ದಾಳಿಯಲ್ಲಿ ಖಾರ್ಕಿವ್‌ನ ಹೊರಗಿನ ಮನರಂಜನಾ ಪ್ರದೇಶದಲ್ಲಿ ಐವರನ್ನು ಕೊಲ್ಲಲಾಗಿದೆ; 16 ಮಂದಿ ಗಾಯಗೊಂಡಿದ್ದಾರೆ. ಆದರೆ, ಕುಪಿಯಾನ್ಸ್ಕ್ ಜಿಲ್ಲೆಯ ಎರಡು ಹಳ್ಳಿಗಳಲ್ಲಿ ಮತ್ತೊಬ್ಬರು ಸಾವನ್ನಪ್ಪಿದ್ದು, 9 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ರಷ್ಯಾದ ಪಡೆಗಳು ಸ್ವಯಂ ಚಾಲಿತ ಬಹು ರಾಕೆಟ್ ಲಾಂಚರ್‌ನೊಂದಿಗೆ ಇಲ್ಲಿನ ಎರಡು ಹಳ್ಳಿಗಳ ಮೇಲೆ ಶೆಲ್ ದಾಳಿ ನಡೆಸಿದವು ಎಂದು ಸ್ಥಳೀಯ ಗವರ್ನರ್ ಒಲೆಹ್ ಸಿನಿಹುಬೊವ್ ಹೇಳಿದ್ದಾರೆ. ಖಾರ್ಕಿವ್ ನಗರದಲ್ಲಿ, ಮೇಯರ್ ಇಹೋರ್ ತೆರೆಖೋವ್ ಅವರು ಗಾಯಗೊಂಡವರ ಮತ್ತು ಸಾವಿನ ಸಂಖ್ಯೆಯನ್ನು ನೀಡಿದರು.

“ಖಾರ್ಕಿವ್‌ ಸಮೀಪದ ಉಪನಗರದಲ್ಲಿ ಮಧ್ಯಾಹ್ನದ ಸುಮಾರಿಗೆ ಸ್ಫೋಟಗಳು ಸಂಭವಿಸಿವೆ. ಎರಡು ರಷ್ಯಾದ ಕ್ಷಿಪಣಿಗಳು ಜನರು ವಿಶ್ರಾಂತಿ ಪಡೆಯುತ್ತಿದ್ದ ಮನರಂಜನಾ ಕೇಂದ್ರವನ್ನು ಹೊಡೆದು, ಐದು ಜನರನ್ನು ಕೊಂದಿದ್ದು, ಹದಿನಾರು ಮಂದಿ ಗಾಯಗೊಂಡರು” ಒಲೆಹ್ ಟೆಲಿಗ್ರಾಮ್ ಸಂದೇಶದಲ್ಲಿ ಹೇಳಿದದ್ದಾರೆ.

15-20 ನಿಮಿಷಗಳ ನಂತರ ಎರಡನೇ “ಡಬಲ್ ಟ್ಯಾಪ್” ದಾಳಿಯ ನಂತರ, ಸ್ಥಳೀಯ ಅಧಿಕಾರಿಗಳು ಪ್ರಬಲವಾದ ಸ್ಫೋಟ ಎಂದು ಘೋಷಿಸಿದ್ದಾರೆ. ಮನರಂಜನಾ ಪ್ರದೇಶವನ್ನು ನಾಶಪಡಿಸಿರುವುದನ್ನು ರಾಯಿಟರ್ಸ್ ವರದಿಗಾರರು ನೋಡಿದರು.

ಒಂದು ಗಂಟೆಯ ಹಿಂದೆ ಹಗಲಿನಲ್ಲಿ ಕಾರ್ಯನಿರತ ಸರೋವರದ ರೆಸ್ಟೊರೆಂಟ್ ಪ್ರದೇಶವಾಗಿದ್ದ ಅವಶೇಷಗಳಡಿಯಲ್ಲಿ ಒಬ್ಬ ವ್ಯಕ್ತಿಯ ಶವ ಬಿದ್ದಿತ್ತು. ಮಹಿಳೆಯೊಬ್ಬರು ಆಘಾತದಿಂದ ತನ್ನ ಕೈಚೀಲವನ್ನು ಅವಶೇಷಗಳಲ್ಲಿ ಹುಡುಕುತ್ತಾ ಇದ್ದರು. ರೆಸಾರ್ಟ್ ಎದುರು ವಾಸಿಸುತ್ತಿದ್ದ 69 ವರ್ಷದ ವಲೆಂಟಿನಾ ಎಂಬ ಮಹಿಳೆ ಸ್ಫೋಟ ಸಂಭವಿಸಿದಾಗ ಮನೆಯಲ್ಲಿದ್ದರು. ಪತಿ ಸ್ಫೋಟದಲ್ಲಿ ಸಾವನ್ನಪ್ಪಿದ್ದಾನೆ ಎಂದು ಹೇಳುತ್ತಾ ಅಳುತ್ತಿದ್ದ ಆಕೆಯ ಮುಖದ ಭಾಗದಲ್ಲಿ ರಕ್ತ ಹರಿಯುತ್ತಿ ಎಂದು ವರದಿಗಳು ಹೇಳಿವೆ.

ಇದನ್ನೂ ಓದಿ; ಪ್ಯಾಲೆಸ್ತೀನ್‌ ಪರ ಪ್ರತಿಭಟನಾಕಾರರ ಮೇಲೆ ಅಮೆರಿಕ ಪೊಲೀಸರಿಂದ ದೌರ್ಜನ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...