Homeಕರ್ನಾಟಕಉಕ್ರೇನ್‌ ವಿರುದ್ಧ ಯುದ್ಧ ವಿರೋಧಿಸಿ ರಷ್ಯಾ ಪ್ರಜೆಗಳ ಪ್ರತಿಭಟನೆ; 700 ಜನರ ಬಂಧನ

ಉಕ್ರೇನ್‌ ವಿರುದ್ಧ ಯುದ್ಧ ವಿರೋಧಿಸಿ ರಷ್ಯಾ ಪ್ರಜೆಗಳ ಪ್ರತಿಭಟನೆ; 700 ಜನರ ಬಂಧನ

- Advertisement -
- Advertisement -

ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್ ಮೇಲೆ ಆಕ್ರಮಣ ಮಾಡಲು ಸೈನ್ಯವನ್ನು ಕಳುಹಿಸಿದ ನಂತರ ರಷ್ಯಾದಲ್ಲಿ ಯುದ್ಧ ವಿರೋಧಿ ಪ್ರತಿಭಟನೆಗಳು ಬಿರುಸುಪಡೆದಿದೆ. ರಷ್ಯಾದ ಪೊಲೀಸರು ಹಲವು ನಗರಗಳಲ್ಲಿ 700ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ ಎಂದು ಸ್ವತಂತ್ರ ಮಾಧ್ಯಮಗಳು ವರದಿ ಮಾಡಿವೆ.

ಮಧ್ಯ ಮಾಸ್ಕೋದ ಪುಷ್ಕಿನ್ ಚೌಕದ ಬಳಿ ಸುಮಾರು 2,000 ಜನರು ಜಮಾಯಿಸಿದ್ದರು. ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ 1,000 ಜನರು ಸೇರಿದ್ದರು ಎಂದು ಸ್ಥಳದಲ್ಲಿದ್ದ ಎಎಫ್‌ಪಿ ವರದಿಗಾರರು ತಿಳಿಸಿದ್ದಾರೆ.

ರಷ್ಯಾ ಜನತೆಯ ವಿರೋಧದ ನಡುವೆ ಉಕ್ರೇನ್‌ ಮೇಲೆ ಆಕ್ರಮಣ ನಡೆಯುತ್ತಿದೆ. ಹೆಚ್ಚಿನ ಪ್ರತಿಭಟನಾ ನಿರತ ನಾಯಕರನ್ನು ಹತ್ಯೆ ಮಾಡಲಾಗಿದೆ, ಜೈಲಿನಲ್ಲಿಡಲಾಗಿದೆ ಅಥವಾ ದೇಶದಿಂದ ಹೊರದೂಡಲಾಗಿದೆ ಎಂದು ವರದಿಗಳಾಗಿವೆ.

ಪುಟಿನ್ ವಿರುದ್ಧ ರಷ್ಯಾದಲ್ಲಿ ಬಹುದೊಡ್ಡ ಪ್ರತಿಭಟನೆಗಳನ್ನು ಸಂಘಟಿಸುತ್ತಿದ್ದ ವಿರೋಧ ಪಕ್ಷದ ನಾಯಕ ಅಲೆಕ್ಸಿ ನವಲ್ನಿ ಅವರನ್ನು ಕಳೆದ ಎರಡೂವರೆ ವರ್ಷಗಳಿಂದ ಜೈಲಿನಲ್ಲಿ ಇರಿಸಲಾಗಿದೆ.

ಗುರುವಾರ ಮುಂಜಾನೆ ಪುಟಿನ್ ಉಕ್ರೇನ್ ಮೇಲೆ ಆಕ್ರಮಣವನ್ನು ಪ್ರಾರಂಭಿಸಿದ ನಂತರ ರಷ್ಯಾದ ಹಲವಾರು ಕಾರ್ಯಕರ್ತರು ಜನರು ಬೀದಿಗಿಳಿಯುವಂತೆ ಸಾಮಾಜಿಕ ಮಾಧ್ಯಮಗಳ ಮೂಲಕ ಕರೆ ನೀಡಿದ್ದಾರೆ.

ಮಾಸ್ಕೋದಲ್ಲಿ, ಪ್ರತಿಭಟನಾಕಾರರು ಪುಷ್ಕಿನ್ ಚೌಕದಲ್ಲಿ ಸೇರಿ “ಯುದ್ಧ ಬೇಡ!” ಎಂದು ಘೋಷಣೆ ಕೂಗಿದ್ದಾರೆ.

“ನಾನು ಆಘಾತಕ್ಕೊಳಗಾಗಿದ್ದೇನೆ. ನನ್ನ ಸಂಬಂಧಿಕರು ಮತ್ತು ಪ್ರೀತಿಪಾತ್ರರು ಉಕ್ರೇನ್‌ನಲ್ಲಿ ವಾಸಿಸುತ್ತಿದ್ದಾರೆ” ಎಂದು 23 ವರ್ಷದ ಅನಸ್ತಾಸಿಯಾ ನೆಸ್ಟುಲ್ಯ ಮಾಸ್ಕೋದಲ್ಲಿ ಹೇಳಿದರು.

“ನಾನು ಅವರಿಗೆ ಫೋನ್ ಮೂಲಕ ಏನು ಹೇಳಬಹುದು? ನೀವು ಅಲ್ಲಿಯೇ ಇರಿ ಎನ್ನಬಹುದೆ?” ಎಂದು ಅವರು ಕೇಳಿದರು. “ಅನೇಕರು ಪ್ರತಿಭಟಿಸಲು ಹೆದರುತ್ತಾರೆ” ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಸೇಂಟ್ ಪೀಟರ್ಸ್ಬರ್ಗ್‌‌ನಲ್ಲಿ ಸೇರಿದ್ದ ಅನೇಕರು ಇದೇ ರೀತಿಯ ಹೇಳಿಕೆಗಳನ್ನು ನೀಡಿ ಪುಟಿನ್‌ ವಿರುದ್ಧ ಸಿಡಿದೆದ್ದಿದ್ದಾರೆ.

“ಅಧಿಕಾರಿಗಳಿಗೆ ಹುಚ್ಚು ಹಿಡಿದಿದೆ ಎಂಬ ಭಾವನೆ ನನ್ನಲ್ಲಿದೆ” ಎಂದು 27 ವರ್ಷದ ಸ್ವೆಟ್ಲಾನಾ ವೋಲ್ಕೊವಾ ತಿಳಿಸಿದ್ದಾರೆ. ರಷ್ಯಾದಲ್ಲಿ ಪ್ರತಿಭಟನೆ ಮಾಡಲು ಕೆಲವೇ ಜನರು ಸಿದ್ಧರಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

‘ಅಪಪ್ರಚಾರದಿಂದ ಜನರನ್ನು ಮೂರ್ಖರನ್ನಾಗಿಸಲಾಗಿದೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂತರ ಮೂವರು ಪೊಲೀಸ್ ಅಧಿಕಾರಿಗಳು ಅವರನ್ನು ಎಳೆದೊಯ್ಯುತ್ತಿದ್ದಂತೆ, ಯುವಕನೊಬ್ಬ- “ನೀವು ಯಾರೊಂದಿಗೆ ಹೋರಾಡುತ್ತಿದ್ದೀರಿ? ಪುಟಿನ್ ಅವರನ್ನು ಬಂಧಿಸಿ” ಎಂದು ಘೋಷಣೆ ಕೂಗಿದನು.

ಇತ್ತೀಚಿನ ವರ್ಷಗಳಲ್ಲಿ ಪ್ರತಿಭಟನಾ ಕಾನೂನುಗಳನ್ನು ರಷ್ಯಾ ಕಠಿಣಗೊಳಿಸಿದೆ. ಸಾಮಾನ್ಯವಾಗಿ ಸಾಮೂಹಿಕ ಬಂಧನಗಳನ್ನು ಮಾಡುವ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕಲಾಗುತ್ತಿದೆ.

ಜೈಲಿನಲ್ಲಿರುವ ವಿರೋಧ ಪಕ್ಷದ ನಾಯಕ ನವಲ್ನಿ ಅವರು ಉಕ್ರೇನ್ ಮೇಲಿನ ಆಕ್ರಮಣವನ್ನು ವಿರೋಧಿಸಿದ್ದಾರೆ. “ನಾನು ಈ ಯುದ್ಧದ ವಿರುದ್ಧ ಇದ್ದೇನೆ” ಎಂದು ನವಲ್ನಿ ಅವರು ಸ್ವತಂತ್ರ ಟೆಲಿವಿಷನ್ ಚಾನೆಲ್ ಡೋಜ್ ಪ್ರಕಟಿಸಿದ ವೀಡಿಯೊದಲ್ಲಿ ತಿಳಿಸಿದ್ದಾರೆ.

“ದೇಶದೊಳಗಿನ ಸಮಸ್ಯೆಗಳನ್ನು ಮುಚ್ಚಿಹಾಕಲು, ರಷ್ಯಾ ಸರ್ಕಾರ ಎಸಗಿರುವ ತಪ್ಪುಗಳನ್ನು ಜನರಿಗೆ ತಿಳಿಯದಂತೆ ಮುಚ್ಚಿ ಹಾಕಲು ರಷ್ಯಾ ಮತ್ತು ಉಕ್ರೇನ್ ನಡುವಿನ ಈ ಯುದ್ಧ ನಡೆಯುತ್ತಿದೆ” ಎಂದು 45 ವರ್ಷದ ವ್ಯಕ್ತಿಯೊಬ್ಬರು ಹೇಳಿದ್ದಾರೆ.

ಯುದ್ಧ-ವಿರೋಧಿ ನಿಲುವು ಹೊಂದಿರುವವರು ಪ್ರತಿಭಟನೆಗಳನ್ನು  ನಡೆಸದಂತೆ ರಷ್ಯಾ ಅಧಿಕಾರಿಗಳು ಎಚ್ಚರಿಕೆಗಳನ್ನು ನೀಡಿದ್ದಾರೆ.

ಪ್ರಮುಖ ಅಪರಾಧಗಳನ್ನು ತನಿಖೆ ಮಾಡುವ ಸರ್ಕಾರಿ ಸಂಸ್ಥೆಯಾದ ತನಿಖಾ ಸಮಿತಿಯು ಎಚ್ಚರಿಕೆ ನೀಡಿದ್ದು, ರಷ್ಯನ್ನರು ವಿದೇಶಿ ರಾಜಕೀಯ ಪರಿಸ್ಥಿತಿಗೆ ಸಂಬಂಧಿಸಿದ ಅನಧಿಕೃತ ಪ್ರತಿಭಟನೆಗಳಿಗೆ ಸೇರಿದರೆ ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದಿದೆ.


ಇದನ್ನೂ ಓದಿರಿ: ಉಕ್ರೇನ್‌ನಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಸೂಕ್ತ ಕ್ರಮ: ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....