Homeಕರ್ನಾಟಕಉಕ್ರೇನ್‌ ವಿರುದ್ಧ ಯುದ್ಧ ವಿರೋಧಿಸಿ ರಷ್ಯಾ ಪ್ರಜೆಗಳ ಪ್ರತಿಭಟನೆ; 700 ಜನರ ಬಂಧನ

ಉಕ್ರೇನ್‌ ವಿರುದ್ಧ ಯುದ್ಧ ವಿರೋಧಿಸಿ ರಷ್ಯಾ ಪ್ರಜೆಗಳ ಪ್ರತಿಭಟನೆ; 700 ಜನರ ಬಂಧನ

- Advertisement -
- Advertisement -

ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್ ಮೇಲೆ ಆಕ್ರಮಣ ಮಾಡಲು ಸೈನ್ಯವನ್ನು ಕಳುಹಿಸಿದ ನಂತರ ರಷ್ಯಾದಲ್ಲಿ ಯುದ್ಧ ವಿರೋಧಿ ಪ್ರತಿಭಟನೆಗಳು ಬಿರುಸುಪಡೆದಿದೆ. ರಷ್ಯಾದ ಪೊಲೀಸರು ಹಲವು ನಗರಗಳಲ್ಲಿ 700ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ ಎಂದು ಸ್ವತಂತ್ರ ಮಾಧ್ಯಮಗಳು ವರದಿ ಮಾಡಿವೆ.

ಮಧ್ಯ ಮಾಸ್ಕೋದ ಪುಷ್ಕಿನ್ ಚೌಕದ ಬಳಿ ಸುಮಾರು 2,000 ಜನರು ಜಮಾಯಿಸಿದ್ದರು. ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ 1,000 ಜನರು ಸೇರಿದ್ದರು ಎಂದು ಸ್ಥಳದಲ್ಲಿದ್ದ ಎಎಫ್‌ಪಿ ವರದಿಗಾರರು ತಿಳಿಸಿದ್ದಾರೆ.

ರಷ್ಯಾ ಜನತೆಯ ವಿರೋಧದ ನಡುವೆ ಉಕ್ರೇನ್‌ ಮೇಲೆ ಆಕ್ರಮಣ ನಡೆಯುತ್ತಿದೆ. ಹೆಚ್ಚಿನ ಪ್ರತಿಭಟನಾ ನಿರತ ನಾಯಕರನ್ನು ಹತ್ಯೆ ಮಾಡಲಾಗಿದೆ, ಜೈಲಿನಲ್ಲಿಡಲಾಗಿದೆ ಅಥವಾ ದೇಶದಿಂದ ಹೊರದೂಡಲಾಗಿದೆ ಎಂದು ವರದಿಗಳಾಗಿವೆ.

ಪುಟಿನ್ ವಿರುದ್ಧ ರಷ್ಯಾದಲ್ಲಿ ಬಹುದೊಡ್ಡ ಪ್ರತಿಭಟನೆಗಳನ್ನು ಸಂಘಟಿಸುತ್ತಿದ್ದ ವಿರೋಧ ಪಕ್ಷದ ನಾಯಕ ಅಲೆಕ್ಸಿ ನವಲ್ನಿ ಅವರನ್ನು ಕಳೆದ ಎರಡೂವರೆ ವರ್ಷಗಳಿಂದ ಜೈಲಿನಲ್ಲಿ ಇರಿಸಲಾಗಿದೆ.

ಗುರುವಾರ ಮುಂಜಾನೆ ಪುಟಿನ್ ಉಕ್ರೇನ್ ಮೇಲೆ ಆಕ್ರಮಣವನ್ನು ಪ್ರಾರಂಭಿಸಿದ ನಂತರ ರಷ್ಯಾದ ಹಲವಾರು ಕಾರ್ಯಕರ್ತರು ಜನರು ಬೀದಿಗಿಳಿಯುವಂತೆ ಸಾಮಾಜಿಕ ಮಾಧ್ಯಮಗಳ ಮೂಲಕ ಕರೆ ನೀಡಿದ್ದಾರೆ.

ಮಾಸ್ಕೋದಲ್ಲಿ, ಪ್ರತಿಭಟನಾಕಾರರು ಪುಷ್ಕಿನ್ ಚೌಕದಲ್ಲಿ ಸೇರಿ “ಯುದ್ಧ ಬೇಡ!” ಎಂದು ಘೋಷಣೆ ಕೂಗಿದ್ದಾರೆ.

“ನಾನು ಆಘಾತಕ್ಕೊಳಗಾಗಿದ್ದೇನೆ. ನನ್ನ ಸಂಬಂಧಿಕರು ಮತ್ತು ಪ್ರೀತಿಪಾತ್ರರು ಉಕ್ರೇನ್‌ನಲ್ಲಿ ವಾಸಿಸುತ್ತಿದ್ದಾರೆ” ಎಂದು 23 ವರ್ಷದ ಅನಸ್ತಾಸಿಯಾ ನೆಸ್ಟುಲ್ಯ ಮಾಸ್ಕೋದಲ್ಲಿ ಹೇಳಿದರು.

“ನಾನು ಅವರಿಗೆ ಫೋನ್ ಮೂಲಕ ಏನು ಹೇಳಬಹುದು? ನೀವು ಅಲ್ಲಿಯೇ ಇರಿ ಎನ್ನಬಹುದೆ?” ಎಂದು ಅವರು ಕೇಳಿದರು. “ಅನೇಕರು ಪ್ರತಿಭಟಿಸಲು ಹೆದರುತ್ತಾರೆ” ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಸೇಂಟ್ ಪೀಟರ್ಸ್ಬರ್ಗ್‌‌ನಲ್ಲಿ ಸೇರಿದ್ದ ಅನೇಕರು ಇದೇ ರೀತಿಯ ಹೇಳಿಕೆಗಳನ್ನು ನೀಡಿ ಪುಟಿನ್‌ ವಿರುದ್ಧ ಸಿಡಿದೆದ್ದಿದ್ದಾರೆ.

“ಅಧಿಕಾರಿಗಳಿಗೆ ಹುಚ್ಚು ಹಿಡಿದಿದೆ ಎಂಬ ಭಾವನೆ ನನ್ನಲ್ಲಿದೆ” ಎಂದು 27 ವರ್ಷದ ಸ್ವೆಟ್ಲಾನಾ ವೋಲ್ಕೊವಾ ತಿಳಿಸಿದ್ದಾರೆ. ರಷ್ಯಾದಲ್ಲಿ ಪ್ರತಿಭಟನೆ ಮಾಡಲು ಕೆಲವೇ ಜನರು ಸಿದ್ಧರಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

‘ಅಪಪ್ರಚಾರದಿಂದ ಜನರನ್ನು ಮೂರ್ಖರನ್ನಾಗಿಸಲಾಗಿದೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂತರ ಮೂವರು ಪೊಲೀಸ್ ಅಧಿಕಾರಿಗಳು ಅವರನ್ನು ಎಳೆದೊಯ್ಯುತ್ತಿದ್ದಂತೆ, ಯುವಕನೊಬ್ಬ- “ನೀವು ಯಾರೊಂದಿಗೆ ಹೋರಾಡುತ್ತಿದ್ದೀರಿ? ಪುಟಿನ್ ಅವರನ್ನು ಬಂಧಿಸಿ” ಎಂದು ಘೋಷಣೆ ಕೂಗಿದನು.

ಇತ್ತೀಚಿನ ವರ್ಷಗಳಲ್ಲಿ ಪ್ರತಿಭಟನಾ ಕಾನೂನುಗಳನ್ನು ರಷ್ಯಾ ಕಠಿಣಗೊಳಿಸಿದೆ. ಸಾಮಾನ್ಯವಾಗಿ ಸಾಮೂಹಿಕ ಬಂಧನಗಳನ್ನು ಮಾಡುವ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕಲಾಗುತ್ತಿದೆ.

ಜೈಲಿನಲ್ಲಿರುವ ವಿರೋಧ ಪಕ್ಷದ ನಾಯಕ ನವಲ್ನಿ ಅವರು ಉಕ್ರೇನ್ ಮೇಲಿನ ಆಕ್ರಮಣವನ್ನು ವಿರೋಧಿಸಿದ್ದಾರೆ. “ನಾನು ಈ ಯುದ್ಧದ ವಿರುದ್ಧ ಇದ್ದೇನೆ” ಎಂದು ನವಲ್ನಿ ಅವರು ಸ್ವತಂತ್ರ ಟೆಲಿವಿಷನ್ ಚಾನೆಲ್ ಡೋಜ್ ಪ್ರಕಟಿಸಿದ ವೀಡಿಯೊದಲ್ಲಿ ತಿಳಿಸಿದ್ದಾರೆ.

“ದೇಶದೊಳಗಿನ ಸಮಸ್ಯೆಗಳನ್ನು ಮುಚ್ಚಿಹಾಕಲು, ರಷ್ಯಾ ಸರ್ಕಾರ ಎಸಗಿರುವ ತಪ್ಪುಗಳನ್ನು ಜನರಿಗೆ ತಿಳಿಯದಂತೆ ಮುಚ್ಚಿ ಹಾಕಲು ರಷ್ಯಾ ಮತ್ತು ಉಕ್ರೇನ್ ನಡುವಿನ ಈ ಯುದ್ಧ ನಡೆಯುತ್ತಿದೆ” ಎಂದು 45 ವರ್ಷದ ವ್ಯಕ್ತಿಯೊಬ್ಬರು ಹೇಳಿದ್ದಾರೆ.

ಯುದ್ಧ-ವಿರೋಧಿ ನಿಲುವು ಹೊಂದಿರುವವರು ಪ್ರತಿಭಟನೆಗಳನ್ನು  ನಡೆಸದಂತೆ ರಷ್ಯಾ ಅಧಿಕಾರಿಗಳು ಎಚ್ಚರಿಕೆಗಳನ್ನು ನೀಡಿದ್ದಾರೆ.

ಪ್ರಮುಖ ಅಪರಾಧಗಳನ್ನು ತನಿಖೆ ಮಾಡುವ ಸರ್ಕಾರಿ ಸಂಸ್ಥೆಯಾದ ತನಿಖಾ ಸಮಿತಿಯು ಎಚ್ಚರಿಕೆ ನೀಡಿದ್ದು, ರಷ್ಯನ್ನರು ವಿದೇಶಿ ರಾಜಕೀಯ ಪರಿಸ್ಥಿತಿಗೆ ಸಂಬಂಧಿಸಿದ ಅನಧಿಕೃತ ಪ್ರತಿಭಟನೆಗಳಿಗೆ ಸೇರಿದರೆ ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದಿದೆ.


ಇದನ್ನೂ ಓದಿರಿ: ಉಕ್ರೇನ್‌ನಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಸೂಕ್ತ ಕ್ರಮ: ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...