Homeಕರ್ನಾಟಕಉಕ್ರೇನ್‌ ವಿರುದ್ಧ ಯುದ್ಧ ವಿರೋಧಿಸಿ ರಷ್ಯಾ ಪ್ರಜೆಗಳ ಪ್ರತಿಭಟನೆ; 700 ಜನರ ಬಂಧನ

ಉಕ್ರೇನ್‌ ವಿರುದ್ಧ ಯುದ್ಧ ವಿರೋಧಿಸಿ ರಷ್ಯಾ ಪ್ರಜೆಗಳ ಪ್ರತಿಭಟನೆ; 700 ಜನರ ಬಂಧನ

- Advertisement -
- Advertisement -

ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್ ಮೇಲೆ ಆಕ್ರಮಣ ಮಾಡಲು ಸೈನ್ಯವನ್ನು ಕಳುಹಿಸಿದ ನಂತರ ರಷ್ಯಾದಲ್ಲಿ ಯುದ್ಧ ವಿರೋಧಿ ಪ್ರತಿಭಟನೆಗಳು ಬಿರುಸುಪಡೆದಿದೆ. ರಷ್ಯಾದ ಪೊಲೀಸರು ಹಲವು ನಗರಗಳಲ್ಲಿ 700ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ ಎಂದು ಸ್ವತಂತ್ರ ಮಾಧ್ಯಮಗಳು ವರದಿ ಮಾಡಿವೆ.

ಮಧ್ಯ ಮಾಸ್ಕೋದ ಪುಷ್ಕಿನ್ ಚೌಕದ ಬಳಿ ಸುಮಾರು 2,000 ಜನರು ಜಮಾಯಿಸಿದ್ದರು. ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ 1,000 ಜನರು ಸೇರಿದ್ದರು ಎಂದು ಸ್ಥಳದಲ್ಲಿದ್ದ ಎಎಫ್‌ಪಿ ವರದಿಗಾರರು ತಿಳಿಸಿದ್ದಾರೆ.

ರಷ್ಯಾ ಜನತೆಯ ವಿರೋಧದ ನಡುವೆ ಉಕ್ರೇನ್‌ ಮೇಲೆ ಆಕ್ರಮಣ ನಡೆಯುತ್ತಿದೆ. ಹೆಚ್ಚಿನ ಪ್ರತಿಭಟನಾ ನಿರತ ನಾಯಕರನ್ನು ಹತ್ಯೆ ಮಾಡಲಾಗಿದೆ, ಜೈಲಿನಲ್ಲಿಡಲಾಗಿದೆ ಅಥವಾ ದೇಶದಿಂದ ಹೊರದೂಡಲಾಗಿದೆ ಎಂದು ವರದಿಗಳಾಗಿವೆ.

ಪುಟಿನ್ ವಿರುದ್ಧ ರಷ್ಯಾದಲ್ಲಿ ಬಹುದೊಡ್ಡ ಪ್ರತಿಭಟನೆಗಳನ್ನು ಸಂಘಟಿಸುತ್ತಿದ್ದ ವಿರೋಧ ಪಕ್ಷದ ನಾಯಕ ಅಲೆಕ್ಸಿ ನವಲ್ನಿ ಅವರನ್ನು ಕಳೆದ ಎರಡೂವರೆ ವರ್ಷಗಳಿಂದ ಜೈಲಿನಲ್ಲಿ ಇರಿಸಲಾಗಿದೆ.

ಗುರುವಾರ ಮುಂಜಾನೆ ಪುಟಿನ್ ಉಕ್ರೇನ್ ಮೇಲೆ ಆಕ್ರಮಣವನ್ನು ಪ್ರಾರಂಭಿಸಿದ ನಂತರ ರಷ್ಯಾದ ಹಲವಾರು ಕಾರ್ಯಕರ್ತರು ಜನರು ಬೀದಿಗಿಳಿಯುವಂತೆ ಸಾಮಾಜಿಕ ಮಾಧ್ಯಮಗಳ ಮೂಲಕ ಕರೆ ನೀಡಿದ್ದಾರೆ.

ಮಾಸ್ಕೋದಲ್ಲಿ, ಪ್ರತಿಭಟನಾಕಾರರು ಪುಷ್ಕಿನ್ ಚೌಕದಲ್ಲಿ ಸೇರಿ “ಯುದ್ಧ ಬೇಡ!” ಎಂದು ಘೋಷಣೆ ಕೂಗಿದ್ದಾರೆ.

“ನಾನು ಆಘಾತಕ್ಕೊಳಗಾಗಿದ್ದೇನೆ. ನನ್ನ ಸಂಬಂಧಿಕರು ಮತ್ತು ಪ್ರೀತಿಪಾತ್ರರು ಉಕ್ರೇನ್‌ನಲ್ಲಿ ವಾಸಿಸುತ್ತಿದ್ದಾರೆ” ಎಂದು 23 ವರ್ಷದ ಅನಸ್ತಾಸಿಯಾ ನೆಸ್ಟುಲ್ಯ ಮಾಸ್ಕೋದಲ್ಲಿ ಹೇಳಿದರು.

“ನಾನು ಅವರಿಗೆ ಫೋನ್ ಮೂಲಕ ಏನು ಹೇಳಬಹುದು? ನೀವು ಅಲ್ಲಿಯೇ ಇರಿ ಎನ್ನಬಹುದೆ?” ಎಂದು ಅವರು ಕೇಳಿದರು. “ಅನೇಕರು ಪ್ರತಿಭಟಿಸಲು ಹೆದರುತ್ತಾರೆ” ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಸೇಂಟ್ ಪೀಟರ್ಸ್ಬರ್ಗ್‌‌ನಲ್ಲಿ ಸೇರಿದ್ದ ಅನೇಕರು ಇದೇ ರೀತಿಯ ಹೇಳಿಕೆಗಳನ್ನು ನೀಡಿ ಪುಟಿನ್‌ ವಿರುದ್ಧ ಸಿಡಿದೆದ್ದಿದ್ದಾರೆ.

“ಅಧಿಕಾರಿಗಳಿಗೆ ಹುಚ್ಚು ಹಿಡಿದಿದೆ ಎಂಬ ಭಾವನೆ ನನ್ನಲ್ಲಿದೆ” ಎಂದು 27 ವರ್ಷದ ಸ್ವೆಟ್ಲಾನಾ ವೋಲ್ಕೊವಾ ತಿಳಿಸಿದ್ದಾರೆ. ರಷ್ಯಾದಲ್ಲಿ ಪ್ರತಿಭಟನೆ ಮಾಡಲು ಕೆಲವೇ ಜನರು ಸಿದ್ಧರಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

‘ಅಪಪ್ರಚಾರದಿಂದ ಜನರನ್ನು ಮೂರ್ಖರನ್ನಾಗಿಸಲಾಗಿದೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂತರ ಮೂವರು ಪೊಲೀಸ್ ಅಧಿಕಾರಿಗಳು ಅವರನ್ನು ಎಳೆದೊಯ್ಯುತ್ತಿದ್ದಂತೆ, ಯುವಕನೊಬ್ಬ- “ನೀವು ಯಾರೊಂದಿಗೆ ಹೋರಾಡುತ್ತಿದ್ದೀರಿ? ಪುಟಿನ್ ಅವರನ್ನು ಬಂಧಿಸಿ” ಎಂದು ಘೋಷಣೆ ಕೂಗಿದನು.

ಇತ್ತೀಚಿನ ವರ್ಷಗಳಲ್ಲಿ ಪ್ರತಿಭಟನಾ ಕಾನೂನುಗಳನ್ನು ರಷ್ಯಾ ಕಠಿಣಗೊಳಿಸಿದೆ. ಸಾಮಾನ್ಯವಾಗಿ ಸಾಮೂಹಿಕ ಬಂಧನಗಳನ್ನು ಮಾಡುವ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕಲಾಗುತ್ತಿದೆ.

ಜೈಲಿನಲ್ಲಿರುವ ವಿರೋಧ ಪಕ್ಷದ ನಾಯಕ ನವಲ್ನಿ ಅವರು ಉಕ್ರೇನ್ ಮೇಲಿನ ಆಕ್ರಮಣವನ್ನು ವಿರೋಧಿಸಿದ್ದಾರೆ. “ನಾನು ಈ ಯುದ್ಧದ ವಿರುದ್ಧ ಇದ್ದೇನೆ” ಎಂದು ನವಲ್ನಿ ಅವರು ಸ್ವತಂತ್ರ ಟೆಲಿವಿಷನ್ ಚಾನೆಲ್ ಡೋಜ್ ಪ್ರಕಟಿಸಿದ ವೀಡಿಯೊದಲ್ಲಿ ತಿಳಿಸಿದ್ದಾರೆ.

“ದೇಶದೊಳಗಿನ ಸಮಸ್ಯೆಗಳನ್ನು ಮುಚ್ಚಿಹಾಕಲು, ರಷ್ಯಾ ಸರ್ಕಾರ ಎಸಗಿರುವ ತಪ್ಪುಗಳನ್ನು ಜನರಿಗೆ ತಿಳಿಯದಂತೆ ಮುಚ್ಚಿ ಹಾಕಲು ರಷ್ಯಾ ಮತ್ತು ಉಕ್ರೇನ್ ನಡುವಿನ ಈ ಯುದ್ಧ ನಡೆಯುತ್ತಿದೆ” ಎಂದು 45 ವರ್ಷದ ವ್ಯಕ್ತಿಯೊಬ್ಬರು ಹೇಳಿದ್ದಾರೆ.

ಯುದ್ಧ-ವಿರೋಧಿ ನಿಲುವು ಹೊಂದಿರುವವರು ಪ್ರತಿಭಟನೆಗಳನ್ನು  ನಡೆಸದಂತೆ ರಷ್ಯಾ ಅಧಿಕಾರಿಗಳು ಎಚ್ಚರಿಕೆಗಳನ್ನು ನೀಡಿದ್ದಾರೆ.

ಪ್ರಮುಖ ಅಪರಾಧಗಳನ್ನು ತನಿಖೆ ಮಾಡುವ ಸರ್ಕಾರಿ ಸಂಸ್ಥೆಯಾದ ತನಿಖಾ ಸಮಿತಿಯು ಎಚ್ಚರಿಕೆ ನೀಡಿದ್ದು, ರಷ್ಯನ್ನರು ವಿದೇಶಿ ರಾಜಕೀಯ ಪರಿಸ್ಥಿತಿಗೆ ಸಂಬಂಧಿಸಿದ ಅನಧಿಕೃತ ಪ್ರತಿಭಟನೆಗಳಿಗೆ ಸೇರಿದರೆ ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದಿದೆ.


ಇದನ್ನೂ ಓದಿರಿ: ಉಕ್ರೇನ್‌ನಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಸೂಕ್ತ ಕ್ರಮ: ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....