Homeಕರ್ನಾಟಕಉಕ್ರೇನ್‌ ವಿರುದ್ಧ ಯುದ್ಧ ವಿರೋಧಿಸಿ ರಷ್ಯಾ ಪ್ರಜೆಗಳ ಪ್ರತಿಭಟನೆ; 700 ಜನರ ಬಂಧನ

ಉಕ್ರೇನ್‌ ವಿರುದ್ಧ ಯುದ್ಧ ವಿರೋಧಿಸಿ ರಷ್ಯಾ ಪ್ರಜೆಗಳ ಪ್ರತಿಭಟನೆ; 700 ಜನರ ಬಂಧನ

- Advertisement -
- Advertisement -

ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್ ಮೇಲೆ ಆಕ್ರಮಣ ಮಾಡಲು ಸೈನ್ಯವನ್ನು ಕಳುಹಿಸಿದ ನಂತರ ರಷ್ಯಾದಲ್ಲಿ ಯುದ್ಧ ವಿರೋಧಿ ಪ್ರತಿಭಟನೆಗಳು ಬಿರುಸುಪಡೆದಿದೆ. ರಷ್ಯಾದ ಪೊಲೀಸರು ಹಲವು ನಗರಗಳಲ್ಲಿ 700ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ ಎಂದು ಸ್ವತಂತ್ರ ಮಾಧ್ಯಮಗಳು ವರದಿ ಮಾಡಿವೆ.

ಮಧ್ಯ ಮಾಸ್ಕೋದ ಪುಷ್ಕಿನ್ ಚೌಕದ ಬಳಿ ಸುಮಾರು 2,000 ಜನರು ಜಮಾಯಿಸಿದ್ದರು. ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ 1,000 ಜನರು ಸೇರಿದ್ದರು ಎಂದು ಸ್ಥಳದಲ್ಲಿದ್ದ ಎಎಫ್‌ಪಿ ವರದಿಗಾರರು ತಿಳಿಸಿದ್ದಾರೆ.

ರಷ್ಯಾ ಜನತೆಯ ವಿರೋಧದ ನಡುವೆ ಉಕ್ರೇನ್‌ ಮೇಲೆ ಆಕ್ರಮಣ ನಡೆಯುತ್ತಿದೆ. ಹೆಚ್ಚಿನ ಪ್ರತಿಭಟನಾ ನಿರತ ನಾಯಕರನ್ನು ಹತ್ಯೆ ಮಾಡಲಾಗಿದೆ, ಜೈಲಿನಲ್ಲಿಡಲಾಗಿದೆ ಅಥವಾ ದೇಶದಿಂದ ಹೊರದೂಡಲಾಗಿದೆ ಎಂದು ವರದಿಗಳಾಗಿವೆ.

ಪುಟಿನ್ ವಿರುದ್ಧ ರಷ್ಯಾದಲ್ಲಿ ಬಹುದೊಡ್ಡ ಪ್ರತಿಭಟನೆಗಳನ್ನು ಸಂಘಟಿಸುತ್ತಿದ್ದ ವಿರೋಧ ಪಕ್ಷದ ನಾಯಕ ಅಲೆಕ್ಸಿ ನವಲ್ನಿ ಅವರನ್ನು ಕಳೆದ ಎರಡೂವರೆ ವರ್ಷಗಳಿಂದ ಜೈಲಿನಲ್ಲಿ ಇರಿಸಲಾಗಿದೆ.

ಗುರುವಾರ ಮುಂಜಾನೆ ಪುಟಿನ್ ಉಕ್ರೇನ್ ಮೇಲೆ ಆಕ್ರಮಣವನ್ನು ಪ್ರಾರಂಭಿಸಿದ ನಂತರ ರಷ್ಯಾದ ಹಲವಾರು ಕಾರ್ಯಕರ್ತರು ಜನರು ಬೀದಿಗಿಳಿಯುವಂತೆ ಸಾಮಾಜಿಕ ಮಾಧ್ಯಮಗಳ ಮೂಲಕ ಕರೆ ನೀಡಿದ್ದಾರೆ.

ಮಾಸ್ಕೋದಲ್ಲಿ, ಪ್ರತಿಭಟನಾಕಾರರು ಪುಷ್ಕಿನ್ ಚೌಕದಲ್ಲಿ ಸೇರಿ “ಯುದ್ಧ ಬೇಡ!” ಎಂದು ಘೋಷಣೆ ಕೂಗಿದ್ದಾರೆ.

“ನಾನು ಆಘಾತಕ್ಕೊಳಗಾಗಿದ್ದೇನೆ. ನನ್ನ ಸಂಬಂಧಿಕರು ಮತ್ತು ಪ್ರೀತಿಪಾತ್ರರು ಉಕ್ರೇನ್‌ನಲ್ಲಿ ವಾಸಿಸುತ್ತಿದ್ದಾರೆ” ಎಂದು 23 ವರ್ಷದ ಅನಸ್ತಾಸಿಯಾ ನೆಸ್ಟುಲ್ಯ ಮಾಸ್ಕೋದಲ್ಲಿ ಹೇಳಿದರು.

“ನಾನು ಅವರಿಗೆ ಫೋನ್ ಮೂಲಕ ಏನು ಹೇಳಬಹುದು? ನೀವು ಅಲ್ಲಿಯೇ ಇರಿ ಎನ್ನಬಹುದೆ?” ಎಂದು ಅವರು ಕೇಳಿದರು. “ಅನೇಕರು ಪ್ರತಿಭಟಿಸಲು ಹೆದರುತ್ತಾರೆ” ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಸೇಂಟ್ ಪೀಟರ್ಸ್ಬರ್ಗ್‌‌ನಲ್ಲಿ ಸೇರಿದ್ದ ಅನೇಕರು ಇದೇ ರೀತಿಯ ಹೇಳಿಕೆಗಳನ್ನು ನೀಡಿ ಪುಟಿನ್‌ ವಿರುದ್ಧ ಸಿಡಿದೆದ್ದಿದ್ದಾರೆ.

“ಅಧಿಕಾರಿಗಳಿಗೆ ಹುಚ್ಚು ಹಿಡಿದಿದೆ ಎಂಬ ಭಾವನೆ ನನ್ನಲ್ಲಿದೆ” ಎಂದು 27 ವರ್ಷದ ಸ್ವೆಟ್ಲಾನಾ ವೋಲ್ಕೊವಾ ತಿಳಿಸಿದ್ದಾರೆ. ರಷ್ಯಾದಲ್ಲಿ ಪ್ರತಿಭಟನೆ ಮಾಡಲು ಕೆಲವೇ ಜನರು ಸಿದ್ಧರಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

‘ಅಪಪ್ರಚಾರದಿಂದ ಜನರನ್ನು ಮೂರ್ಖರನ್ನಾಗಿಸಲಾಗಿದೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂತರ ಮೂವರು ಪೊಲೀಸ್ ಅಧಿಕಾರಿಗಳು ಅವರನ್ನು ಎಳೆದೊಯ್ಯುತ್ತಿದ್ದಂತೆ, ಯುವಕನೊಬ್ಬ- “ನೀವು ಯಾರೊಂದಿಗೆ ಹೋರಾಡುತ್ತಿದ್ದೀರಿ? ಪುಟಿನ್ ಅವರನ್ನು ಬಂಧಿಸಿ” ಎಂದು ಘೋಷಣೆ ಕೂಗಿದನು.

ಇತ್ತೀಚಿನ ವರ್ಷಗಳಲ್ಲಿ ಪ್ರತಿಭಟನಾ ಕಾನೂನುಗಳನ್ನು ರಷ್ಯಾ ಕಠಿಣಗೊಳಿಸಿದೆ. ಸಾಮಾನ್ಯವಾಗಿ ಸಾಮೂಹಿಕ ಬಂಧನಗಳನ್ನು ಮಾಡುವ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕಲಾಗುತ್ತಿದೆ.

ಜೈಲಿನಲ್ಲಿರುವ ವಿರೋಧ ಪಕ್ಷದ ನಾಯಕ ನವಲ್ನಿ ಅವರು ಉಕ್ರೇನ್ ಮೇಲಿನ ಆಕ್ರಮಣವನ್ನು ವಿರೋಧಿಸಿದ್ದಾರೆ. “ನಾನು ಈ ಯುದ್ಧದ ವಿರುದ್ಧ ಇದ್ದೇನೆ” ಎಂದು ನವಲ್ನಿ ಅವರು ಸ್ವತಂತ್ರ ಟೆಲಿವಿಷನ್ ಚಾನೆಲ್ ಡೋಜ್ ಪ್ರಕಟಿಸಿದ ವೀಡಿಯೊದಲ್ಲಿ ತಿಳಿಸಿದ್ದಾರೆ.

“ದೇಶದೊಳಗಿನ ಸಮಸ್ಯೆಗಳನ್ನು ಮುಚ್ಚಿಹಾಕಲು, ರಷ್ಯಾ ಸರ್ಕಾರ ಎಸಗಿರುವ ತಪ್ಪುಗಳನ್ನು ಜನರಿಗೆ ತಿಳಿಯದಂತೆ ಮುಚ್ಚಿ ಹಾಕಲು ರಷ್ಯಾ ಮತ್ತು ಉಕ್ರೇನ್ ನಡುವಿನ ಈ ಯುದ್ಧ ನಡೆಯುತ್ತಿದೆ” ಎಂದು 45 ವರ್ಷದ ವ್ಯಕ್ತಿಯೊಬ್ಬರು ಹೇಳಿದ್ದಾರೆ.

ಯುದ್ಧ-ವಿರೋಧಿ ನಿಲುವು ಹೊಂದಿರುವವರು ಪ್ರತಿಭಟನೆಗಳನ್ನು  ನಡೆಸದಂತೆ ರಷ್ಯಾ ಅಧಿಕಾರಿಗಳು ಎಚ್ಚರಿಕೆಗಳನ್ನು ನೀಡಿದ್ದಾರೆ.

ಪ್ರಮುಖ ಅಪರಾಧಗಳನ್ನು ತನಿಖೆ ಮಾಡುವ ಸರ್ಕಾರಿ ಸಂಸ್ಥೆಯಾದ ತನಿಖಾ ಸಮಿತಿಯು ಎಚ್ಚರಿಕೆ ನೀಡಿದ್ದು, ರಷ್ಯನ್ನರು ವಿದೇಶಿ ರಾಜಕೀಯ ಪರಿಸ್ಥಿತಿಗೆ ಸಂಬಂಧಿಸಿದ ಅನಧಿಕೃತ ಪ್ರತಿಭಟನೆಗಳಿಗೆ ಸೇರಿದರೆ ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದಿದೆ.


ಇದನ್ನೂ ಓದಿರಿ: ಉಕ್ರೇನ್‌ನಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಸೂಕ್ತ ಕ್ರಮ: ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...