Homeಕರ್ನಾಟಕಉಕ್ರೇನ್‌ ವಿರುದ್ಧ ಯುದ್ಧ ವಿರೋಧಿಸಿ ರಷ್ಯಾ ಪ್ರಜೆಗಳ ಪ್ರತಿಭಟನೆ; 700 ಜನರ ಬಂಧನ

ಉಕ್ರೇನ್‌ ವಿರುದ್ಧ ಯುದ್ಧ ವಿರೋಧಿಸಿ ರಷ್ಯಾ ಪ್ರಜೆಗಳ ಪ್ರತಿಭಟನೆ; 700 ಜನರ ಬಂಧನ

- Advertisement -
- Advertisement -

ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್ ಮೇಲೆ ಆಕ್ರಮಣ ಮಾಡಲು ಸೈನ್ಯವನ್ನು ಕಳುಹಿಸಿದ ನಂತರ ರಷ್ಯಾದಲ್ಲಿ ಯುದ್ಧ ವಿರೋಧಿ ಪ್ರತಿಭಟನೆಗಳು ಬಿರುಸುಪಡೆದಿದೆ. ರಷ್ಯಾದ ಪೊಲೀಸರು ಹಲವು ನಗರಗಳಲ್ಲಿ 700ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ ಎಂದು ಸ್ವತಂತ್ರ ಮಾಧ್ಯಮಗಳು ವರದಿ ಮಾಡಿವೆ.

ಮಧ್ಯ ಮಾಸ್ಕೋದ ಪುಷ್ಕಿನ್ ಚೌಕದ ಬಳಿ ಸುಮಾರು 2,000 ಜನರು ಜಮಾಯಿಸಿದ್ದರು. ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ 1,000 ಜನರು ಸೇರಿದ್ದರು ಎಂದು ಸ್ಥಳದಲ್ಲಿದ್ದ ಎಎಫ್‌ಪಿ ವರದಿಗಾರರು ತಿಳಿಸಿದ್ದಾರೆ.

ರಷ್ಯಾ ಜನತೆಯ ವಿರೋಧದ ನಡುವೆ ಉಕ್ರೇನ್‌ ಮೇಲೆ ಆಕ್ರಮಣ ನಡೆಯುತ್ತಿದೆ. ಹೆಚ್ಚಿನ ಪ್ರತಿಭಟನಾ ನಿರತ ನಾಯಕರನ್ನು ಹತ್ಯೆ ಮಾಡಲಾಗಿದೆ, ಜೈಲಿನಲ್ಲಿಡಲಾಗಿದೆ ಅಥವಾ ದೇಶದಿಂದ ಹೊರದೂಡಲಾಗಿದೆ ಎಂದು ವರದಿಗಳಾಗಿವೆ.

ಪುಟಿನ್ ವಿರುದ್ಧ ರಷ್ಯಾದಲ್ಲಿ ಬಹುದೊಡ್ಡ ಪ್ರತಿಭಟನೆಗಳನ್ನು ಸಂಘಟಿಸುತ್ತಿದ್ದ ವಿರೋಧ ಪಕ್ಷದ ನಾಯಕ ಅಲೆಕ್ಸಿ ನವಲ್ನಿ ಅವರನ್ನು ಕಳೆದ ಎರಡೂವರೆ ವರ್ಷಗಳಿಂದ ಜೈಲಿನಲ್ಲಿ ಇರಿಸಲಾಗಿದೆ.

ಗುರುವಾರ ಮುಂಜಾನೆ ಪುಟಿನ್ ಉಕ್ರೇನ್ ಮೇಲೆ ಆಕ್ರಮಣವನ್ನು ಪ್ರಾರಂಭಿಸಿದ ನಂತರ ರಷ್ಯಾದ ಹಲವಾರು ಕಾರ್ಯಕರ್ತರು ಜನರು ಬೀದಿಗಿಳಿಯುವಂತೆ ಸಾಮಾಜಿಕ ಮಾಧ್ಯಮಗಳ ಮೂಲಕ ಕರೆ ನೀಡಿದ್ದಾರೆ.

ಮಾಸ್ಕೋದಲ್ಲಿ, ಪ್ರತಿಭಟನಾಕಾರರು ಪುಷ್ಕಿನ್ ಚೌಕದಲ್ಲಿ ಸೇರಿ “ಯುದ್ಧ ಬೇಡ!” ಎಂದು ಘೋಷಣೆ ಕೂಗಿದ್ದಾರೆ.

“ನಾನು ಆಘಾತಕ್ಕೊಳಗಾಗಿದ್ದೇನೆ. ನನ್ನ ಸಂಬಂಧಿಕರು ಮತ್ತು ಪ್ರೀತಿಪಾತ್ರರು ಉಕ್ರೇನ್‌ನಲ್ಲಿ ವಾಸಿಸುತ್ತಿದ್ದಾರೆ” ಎಂದು 23 ವರ್ಷದ ಅನಸ್ತಾಸಿಯಾ ನೆಸ್ಟುಲ್ಯ ಮಾಸ್ಕೋದಲ್ಲಿ ಹೇಳಿದರು.

“ನಾನು ಅವರಿಗೆ ಫೋನ್ ಮೂಲಕ ಏನು ಹೇಳಬಹುದು? ನೀವು ಅಲ್ಲಿಯೇ ಇರಿ ಎನ್ನಬಹುದೆ?” ಎಂದು ಅವರು ಕೇಳಿದರು. “ಅನೇಕರು ಪ್ರತಿಭಟಿಸಲು ಹೆದರುತ್ತಾರೆ” ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಸೇಂಟ್ ಪೀಟರ್ಸ್ಬರ್ಗ್‌‌ನಲ್ಲಿ ಸೇರಿದ್ದ ಅನೇಕರು ಇದೇ ರೀತಿಯ ಹೇಳಿಕೆಗಳನ್ನು ನೀಡಿ ಪುಟಿನ್‌ ವಿರುದ್ಧ ಸಿಡಿದೆದ್ದಿದ್ದಾರೆ.

“ಅಧಿಕಾರಿಗಳಿಗೆ ಹುಚ್ಚು ಹಿಡಿದಿದೆ ಎಂಬ ಭಾವನೆ ನನ್ನಲ್ಲಿದೆ” ಎಂದು 27 ವರ್ಷದ ಸ್ವೆಟ್ಲಾನಾ ವೋಲ್ಕೊವಾ ತಿಳಿಸಿದ್ದಾರೆ. ರಷ್ಯಾದಲ್ಲಿ ಪ್ರತಿಭಟನೆ ಮಾಡಲು ಕೆಲವೇ ಜನರು ಸಿದ್ಧರಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

‘ಅಪಪ್ರಚಾರದಿಂದ ಜನರನ್ನು ಮೂರ್ಖರನ್ನಾಗಿಸಲಾಗಿದೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂತರ ಮೂವರು ಪೊಲೀಸ್ ಅಧಿಕಾರಿಗಳು ಅವರನ್ನು ಎಳೆದೊಯ್ಯುತ್ತಿದ್ದಂತೆ, ಯುವಕನೊಬ್ಬ- “ನೀವು ಯಾರೊಂದಿಗೆ ಹೋರಾಡುತ್ತಿದ್ದೀರಿ? ಪುಟಿನ್ ಅವರನ್ನು ಬಂಧಿಸಿ” ಎಂದು ಘೋಷಣೆ ಕೂಗಿದನು.

ಇತ್ತೀಚಿನ ವರ್ಷಗಳಲ್ಲಿ ಪ್ರತಿಭಟನಾ ಕಾನೂನುಗಳನ್ನು ರಷ್ಯಾ ಕಠಿಣಗೊಳಿಸಿದೆ. ಸಾಮಾನ್ಯವಾಗಿ ಸಾಮೂಹಿಕ ಬಂಧನಗಳನ್ನು ಮಾಡುವ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕಲಾಗುತ್ತಿದೆ.

ಜೈಲಿನಲ್ಲಿರುವ ವಿರೋಧ ಪಕ್ಷದ ನಾಯಕ ನವಲ್ನಿ ಅವರು ಉಕ್ರೇನ್ ಮೇಲಿನ ಆಕ್ರಮಣವನ್ನು ವಿರೋಧಿಸಿದ್ದಾರೆ. “ನಾನು ಈ ಯುದ್ಧದ ವಿರುದ್ಧ ಇದ್ದೇನೆ” ಎಂದು ನವಲ್ನಿ ಅವರು ಸ್ವತಂತ್ರ ಟೆಲಿವಿಷನ್ ಚಾನೆಲ್ ಡೋಜ್ ಪ್ರಕಟಿಸಿದ ವೀಡಿಯೊದಲ್ಲಿ ತಿಳಿಸಿದ್ದಾರೆ.

“ದೇಶದೊಳಗಿನ ಸಮಸ್ಯೆಗಳನ್ನು ಮುಚ್ಚಿಹಾಕಲು, ರಷ್ಯಾ ಸರ್ಕಾರ ಎಸಗಿರುವ ತಪ್ಪುಗಳನ್ನು ಜನರಿಗೆ ತಿಳಿಯದಂತೆ ಮುಚ್ಚಿ ಹಾಕಲು ರಷ್ಯಾ ಮತ್ತು ಉಕ್ರೇನ್ ನಡುವಿನ ಈ ಯುದ್ಧ ನಡೆಯುತ್ತಿದೆ” ಎಂದು 45 ವರ್ಷದ ವ್ಯಕ್ತಿಯೊಬ್ಬರು ಹೇಳಿದ್ದಾರೆ.

ಯುದ್ಧ-ವಿರೋಧಿ ನಿಲುವು ಹೊಂದಿರುವವರು ಪ್ರತಿಭಟನೆಗಳನ್ನು  ನಡೆಸದಂತೆ ರಷ್ಯಾ ಅಧಿಕಾರಿಗಳು ಎಚ್ಚರಿಕೆಗಳನ್ನು ನೀಡಿದ್ದಾರೆ.

ಪ್ರಮುಖ ಅಪರಾಧಗಳನ್ನು ತನಿಖೆ ಮಾಡುವ ಸರ್ಕಾರಿ ಸಂಸ್ಥೆಯಾದ ತನಿಖಾ ಸಮಿತಿಯು ಎಚ್ಚರಿಕೆ ನೀಡಿದ್ದು, ರಷ್ಯನ್ನರು ವಿದೇಶಿ ರಾಜಕೀಯ ಪರಿಸ್ಥಿತಿಗೆ ಸಂಬಂಧಿಸಿದ ಅನಧಿಕೃತ ಪ್ರತಿಭಟನೆಗಳಿಗೆ ಸೇರಿದರೆ ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದಿದೆ.


ಇದನ್ನೂ ಓದಿರಿ: ಉಕ್ರೇನ್‌ನಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಸೂಕ್ತ ಕ್ರಮ: ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೇರಿಕಾದಲ್ಲಿ ಅದಾನಿ ಮತ್ತು ಆಪ್ತರ ಮೇಲಿನ ಕ್ರಿಮಿನಲ್ ಕೇಸ್ ರದ್ದು: ‘ರಾಜಿ ಮಾಡಿಕೊಂಡ ಪ್ರಧಾನಿ ಭಾರತದ ಹಿತಾಸಕ್ತಿ ಮಾರಾಟ ಮಾಡಿದ್ದಾರೆ’ ಎಂದ ರಾಹುಲ್ ಗಾಂಧಿ 

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧದ ಪ್ರಮುಖ ಕ್ರಿಮಿನಲ್ ಆರೋಪಗಳನ್ನು ಅಮೆರಿಕದ ಫೆಡರಲ್ ನ್ಯಾಯಾಧೀಶರು ಶಾಶ್ವತವಾಗಿ ವಜಾಗೊಳಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್...

ಕರ್ನಾಟಕ SIR | ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಬಗ್ಗೆ ತುಟಿ ಬಿಚ್ಚದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆಗಸ್ಟ್ 7ರಂದು ಚುನಾವಣಾ ಆಯೋಗ ಹೊರಡಿಸಿದ ಪ್ರಕಟಣೆಯ ಪ್ರಕಾರ, ಗಣತಿ ನಮೂನೆ ಅಥವಾ ಎನ್ಯುಮರೇಶನ್ ಫಾರಂ ಸಲ್ಲಿಕೆ ದಿನಾಂಕ ಆಗಸ್ಟ್...

‘ಆಹಾರ ಸುರಕ್ಷತೆ – ಔಷಧ ಆಡಳಿತ ಇಲಾಖೆ’ಯಿಂದ ಹೋಟೆಲ್‌ಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಹೋಟೆಲ್‌ಗಳು, ಡಾಬಾಗಳು ಹಾಗೂ ಆಹಾರ ಸೇವಾ ಸಂಸ್ಥೆಗಳು ಪಾಲಿಸಬೇಕಾದ 'ಆಹಾರ ಸುರಕ್ಷತಾ ಮತ್ತು ನೈರ್ಮಲ್ಯ ನಿಯಮಗಳ'ನ್ನು 'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧ ಆಡಳಿತ ಇಲಾಖೆ' ಆಯುಕ್ತರು ಪ್ರಕಟಿಸಿದ್ದಾರೆ. ಕಳೆದ ಮೂರ್ನಾಲ್ಕು...

ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟ 1 ವರ್ಷ ನಿಷೇಧ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಮತ್ತು ಸಮಾಜದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಅಂಶ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಇತರ ಅಪಾಯಕಾರಿ ಉತ್ಪನ್ನಗಳ ಮೇಲೆ ಸಂಪೂರ್ಣ...

ಲೋಕಸಭೆ ಬಲ 543 ರಲ್ಲೇ ಶಾಶ್ವತವಾಗಿ ಮುಂದುವರಿಸಲು ಕೇಂದ್ರಕ್ಕೆ ಆಗ್ರಹ: ತಮಿಳುನಾಡು ವಿಧಾನಸಭೆಯಲ್ಲಿ ಸಿಎಂ ಸಿ. ಜೋಸೆಫ್ ವಿಜಯ್ ನಿರ್ಣಯ ಮಂಡನೆ

ಚೆನ್ನೈ: ಕೇಂದ್ರ ಸರ್ಕಾರವು ಲೋಕಸಭೆಯ ಒಟ್ಟು ಸ್ಥಾನಗಳ ಬಲವನ್ನು ಪ್ರಸ್ತುತ ಇರುವ 543 ರಲ್ಲೇ ಶಾಶ್ವತವಾಗಿ ಕಾಯ್ದುಕೊಳ್ಳಬೇಕು ಮತ್ತು ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅನುಪಾತವನ್ನು ಬದಲಾಯಿಸಬಾರದು ಎಂದು ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಸಿ....

ಯುಪಿಯಲ್ಲಿ ಅಮಾನವೀಯ ಘಟನೆ: ಮೊಬೈಲ್ ಕದ್ದ ಆರೋಪ ಹೊರಿಸಿ ಒಬಿಸಿ ಯುವಕನ ತಲೆ ಬೋಳಿಸಿ ಮೆರವಣಿಗೆ; ಮೇಲ್ಜಾತಿಯ ತಂದೆ-ಮಗನ ಬಂಧನ

ಉನ್ನಾವೋ: ಉತ್ತರ ಪ್ರದೇಶದಲ್ಲಿ ಇದುವರೆಗೆ ದಲಿತ ಸಮುದಾಯಗಳ ಮೇಲೆ ವ್ಯಾಪಕವಾಗಿ ನಡೆಯುತ್ತಿದ್ದ ಜಾತಿ ಆಧಾರಿತ ದೌರ್ಜನ್ಯ ಮತ್ತು ಸಾರ್ವಜನಿಕ ಅವಮಾನದಂತಹ ಅಮಾನವೀಯ ಕೃತ್ಯಗಳು, ಈಗ ಇತರ ಹಿಂದುಳಿದ ವರ್ಗಗಳ (ಒಬಿಸಿ) ಜನರ ಮೇಲೆಯೂ...

SIR 3ನೇ ಹಂತ: 12 ರಾಜ್ಯಗಳು-ಕೇಂದ್ರಾಡಳಿತ ಪ್ರದೇಶಗಳ 1.58 ಕೋಟಿ ಮತದಾರರ ಹೆಸರು ಕರಡು ಪಟ್ಟಿಯಿಂದ ಡಿಲೀಟ್

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಮೂರನೇ ಹಂತದಲ್ಲಿ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಿಂದ ಸುಮಾರು 1.58 ಕೋಟಿ ಹೆಸರುಗಳನ್ನು ಅಳಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ 3ನೇ ಹಂತದ ವ್ಯಾಪ್ತಿಗೆ ಒಳಪಡುವ 16 ರಾಜ್ಯಗಳಲ್ಲಿ...

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...