Homeಮುಖಪುಟರಷ್ಯಾದ ವಿಪಕ್ಷ ನಾಯಕ ಅಲೆಕ್ಸಿ ನವಾಲ್ನಿ ಜೈಲಿನಲ್ಲಿ ಸಾವು

ರಷ್ಯಾದ ವಿಪಕ್ಷ ನಾಯಕ ಅಲೆಕ್ಸಿ ನವಾಲ್ನಿ ಜೈಲಿನಲ್ಲಿ ಸಾವು

- Advertisement -
- Advertisement -

ಸರ್ವಾಧಿಕಾರಿ ಧೋರಣೆಯ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ರಾಜಕೀಯ ಪ್ರತಿಸ್ಪರ್ಧಿ, ಕಳೆದ ಕೆಲ ದಶಕಗಳಲ್ಲಿ ರಷ್ಯಾ ಕಂಡಂತಹ ಅತ್ಯಂತ ಮಹತ್ವದ ವಿರೋಧ ಪಕ್ಷದ ನಾಯಕ ಅಲೆಕ್ಸಿ ನವಾಲ್ನಿ ಆರ್ಕ್ಟಿಕ್ ಸರ್ಕಲ್ ಜೈಲಿನಲ್ಲಿ ಶುಕ್ರವಾರ ನಿಧನರಾಗಿದ್ದಾರೆ ಎಂದು ಬಿಬಿಸಿ ನ್ಯೂಸ್ ವರದಿ ಮಾಡಿದೆ.

ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಕಡು ವಿರೋಧಿಯಾಗಿದ್ದ ನವಾಲ್ನಿ ಅವರಿಗೆ ಉಗ್ರವಾದದ ಆರೋಪದ ಮೇಲೆ 19 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇದು ರಾಜಕೀಯವಾಗಿ ಪ್ರೇರಿತ ಎಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ನವಾಲ್ನಿ ಅವರನ್ನು ರಷ್ಯಾದ ಅತ್ಯಂತ ಕಠಿಣ ಮಾಸ್ಕೋದ ಈಶಾನ್ಯಕ್ಕೆ ಸುಮಾರು 1,900 ಕಿ.ಮೀ ದೂರದ ಖಾರ್ಪ್ ನಗರದಲ್ಲಿರುವ ಐಕೆ-3 ಜೈಲಿನಲ್ಲಿ ಬಂಧಿಸಿಡಲಾಗಿತ್ತು.

ಜೈಲಿನ ಒಳಗೆ ದಿನ ನಿತ್ಯದಂತೆ ಶುಕ್ರವಾರ ಬೆಳಿಗ್ಗೆ ವಾಯುವಿಹಾರ ನಡೆಸಿದ ಬಳಿಕ ನವಾಲ್ನಿ ಕುಸಿದುಬಿದ್ದು ಪ್ರಜ್ಞೆ ಕಳೆದುಕೊಂಡರು. ತೀವ್ರ ಅಸ್ವಸ್ಥರಾಗಿದ್ದ ಅವರು ಚೇತರಿಸಿಕೊಳ್ಳಲಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.`ಜೈಲಿನ ವೈದ್ಯಕೀಯ ಸಿಬಂದಿ ತಕ್ಷಣವೇ ಸ್ಥಳಕ್ಕೆ ಆಗಮಿಸಿ ಆಂಬ್ಯುಲೆನ್ಸ್ ಕರೆಸಿಕೊಂಡರು. ಪ್ರಾಥಮಿಕ ಚಿಕಿತ್ಸೆ ಒದಗಿಸಿದರೂ ಫಲ ನೀಡಲಿಲ್ಲ. ಕೈದಿ ಮೃತಪಟ್ಟಿರುವುದಾಗಿ ಆಂಬ್ಯುಲೆನ್ಸ್ ನ ವೈದ್ಯರು ಘೋಷಿಸಿದರು. ಸಾವಿನ ಕಾರಣವನ್ನು ಪರಿಶೀಲಿಸಲಾಗುತ್ತಿದೆ’ ಎಂದು ಜೈಲು ಅಧಿಕಾರಿಗಳು ಹೇಳಿದ್ದಾರೆ.

ಪುಟಿನ್ ಆಡಳಿತದಿಂದ ಕೊಲೆ ಶಂಕೆ 

ನವಾಲ್ನಿ ಸಾವಿನ ಕುರಿತು ಪ್ರತಿಕ್ರಿಯಿಸಿರುವ ಅವರ ಪತ್ನಿ ಯುಲಿಯಾ, ಪುಟಿನ್ ಆಡಳಿತವನ್ನು ಶಿಕ್ಷಿಸಲು ಸಹಾಯ ಮಾಡುವಂತೆ ಅಂತಾರಾಷ್ಟ್ರೀಯ ಸಮುದಾಯಕ್ಕೆ ಮನವಿ ಮಾಡಿದ್ದಾರೆ. ನವಾಲ್ನಿ ಅವರ ಆಪ್ತ ಮಿತ್ರರಲ್ಲಿ ಒಬ್ಬರಾದ ಭ್ರಷ್ಟಾಚಾರ ವಿರೋಧಿ ಫೌಂಡೇಶನ್ ಮುಖ್ಯಸ್ಥ ಇವಾನ್ ಝ್ಡಾನೋವ್ ಅವರು, ನವಾಲ್ನಿಯ ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.

ನವಾಲ್ನಿ ಸಾವಿನ ಹಿನ್ನೆಲೆ ಅವರ ಬೆಂಬಲಿಗರು ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸುವ ಸಾಧ್ಯತೆಯಿದೆ. ಹಾಗಾಗಿ, ಪುಟಿನ್ ಆಡಳಿತ ಎಚ್ಚರಿಕೆ ವಹಿಸಿದ್ದು, ಜನ ಸೇರಿಸಿ ದೊಡ್ಡ ಮಟ್ಟ ಪ್ರತಿಭಟನೆ ನಡೆಸದಂತೆ ಸೂಚಿಸಿದೆ. ಮಧ್ಯ ಮಾಸ್ಕೋ, ಸೇಂಟ್ ಪೀಟರ್ಸ್‌ಬರ್ಗ್, ಮರ್ಮನ್ಸ್ಕ್ ಮತ್ತು ನಿಜ್ನಿ-ನವ್ಗೊರೊಡ್ ಸೇರಿದಂತೆ ಇತರ ನಗರಗಳಲ್ಲಿ ಹಲವಾರು ಜನರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂಧಿಸಲಾಗಿದೆ.

ಸಾವನ್ನಪ್ಪುವ ಒಂದು ದಿನದ ಹಿಂದೆ 47 ವರ್ಷದ ನವಾಲ್ನಿ ನಗು ನಗುತ್ತಾ ಆರೋಗ್ಯವಾಗಿದ್ದರು. ವಿಡಿಯೋ ಕಾನ್ಪರೆನ್ಸ್ ಮೂಲಕ ಅವರು ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು. ಹಾಗಾಗಿ, ಅವರ ಹಠಾತ್ ಸಾವಿನ ಬಗ್ಗೆ ಸಂಶಯ ಮೂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ರಷ್ಯಾದ ಅತ್ಯಂತ ಜನಪ್ರಿಯ ವಿರೋಧ ಪಕ್ಷದ ಮುಖಂಡರಾಗಿದ್ದ ನವಾಲ್ನಿ, ದಶಕಗಳಿಗೂ ಹಿಂದೆ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಅವರ ನಿಕಟವರ್ತಿಗಳಾಗಿದ್ದ ಮುಖಂಡರನ್ನು ಕಟುವಾಗಿ ಟೀಕಿಸುವ ಮೂಲಕ ಮತ್ತು ರಷ್ಯಾ ಆಡಳಿತದಲ್ಲಿ ವ್ಯಾಪಿಸಿದ್ದ ವ್ಯಾಪಕ ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತುವ ಮೂಲಕ ಪ್ರಾಮುಖ್ಯತೆ ಪಡೆದಿದ್ದರು.

ನವಾಲ್ನಿ ಸಾವಿನ ಬಗ್ಗೆ ಪುಟಿನ್‍ಗೆ ಮಾಹಿತಿ ನೀಡಲಾಗಿದೆ ಎಂದು ರಷ್ಯಾ ಅಧ್ಯಕ್ಷರ ವಕ್ತಾರ ಡಿಮಿಟ್ರಿ ಪೆಸ್ಕೋವ್ ಹೇಳಿದ್ದಾರೆ. 2020ರ ಆಗಸ್ಟ್ ನಲ್ಲಿ ಸೈಬೀರಿಯಾದಲ್ಲಿ ನವಾಲ್ನಿಗೆ ವಿಷಪ್ರಾಶನ ಮಾಡಿರುವುದಾಗಿ ವರದಿಯಾಗಿತ್ತು. 2021ರಲ್ಲಿ ಜರ್ಮನಿಯಿಂದ ರಷ್ಯಾಕ್ಕೆ ಮರಳಿದ್ದ ನವಾಲ್ನಿಯನ್ನು 2021ರ ಜನವರಿಯಿಂದ ಬಂಧನದಲ್ಲಿ ಇಡಲಾಗಿತ್ತು.

ಯುಎಸ್ ತೀವ್ರ ಖಂಡನೆ:

ರಷ್ಯಾದ ವಿಪಕ್ಷ ನಾಯಕನ ಸಾವಿನ ಕುರಿತು ಯುಎಸ್ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಇದು ರಷ್ಯಾ ಅಧ್ಯಕ್ಷ ಪುಟಿನ್ ಅವರ ಕ್ರೂರತೆಗೆ ಮತ್ತಷ್ಟು ಪುರಾವೆಯಾಗಿದೆ ಎಂದು ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹೇಳಿದ್ದಾರೆ. ನವಾಲ್ನಿ ಸಾವಿನ ಸುದ್ಧಿಯಿಂದ ತೀವ್ರ ವಿಚಲಿತಗೊಂಡಿದ್ದು, ಅತೀವ ದುಃಖವಾಗಿದೆ. ತನ್ನದೇ ದೇಶದ ಜನರ ಭಿನ್ನಾಭಿಪ್ರಾಯವನ್ನು ಎದುರಿಸಲು ಪುಟಿನ್ ಹೆದರುತ್ತಾರೆ. ಪುಟಿನ್ ನಿರಂಕುಶ ಅಧಿಕಾರದ ವಿರುದ್ಧ ಧ್ವನಿ ಎತ್ತುವವರಿಗೆ ರಕ್ಷಣೆ ಮತ್ತು ಭದ್ರತೆ ಖಾತರಿಪಡಿಸಲು ನಾವೆಲ್ಲಾ ಒಂದಾಗಬೇಕಿದೆ ಎಂದು ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್‍ಡೆರ್ ಲೆಯೆನ್ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ : ಕೇಂದ್ರ ಸರ್ಕಾರದ ಧೋರಣೆಯಿಂದ ಬೇಸತ್ತು ದೇಶ ತೊರೆದ ಫ್ರೆಂಚ್ ಪತ್ರಕರ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...