Homeಮುಖಪುಟರಷ್ಯಾದ ವಿಪಕ್ಷ ನಾಯಕ ಅಲೆಕ್ಸಿ ನವಾಲ್ನಿ ಜೈಲಿನಲ್ಲಿ ಸಾವು

ರಷ್ಯಾದ ವಿಪಕ್ಷ ನಾಯಕ ಅಲೆಕ್ಸಿ ನವಾಲ್ನಿ ಜೈಲಿನಲ್ಲಿ ಸಾವು

- Advertisement -
- Advertisement -

ಸರ್ವಾಧಿಕಾರಿ ಧೋರಣೆಯ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ರಾಜಕೀಯ ಪ್ರತಿಸ್ಪರ್ಧಿ, ಕಳೆದ ಕೆಲ ದಶಕಗಳಲ್ಲಿ ರಷ್ಯಾ ಕಂಡಂತಹ ಅತ್ಯಂತ ಮಹತ್ವದ ವಿರೋಧ ಪಕ್ಷದ ನಾಯಕ ಅಲೆಕ್ಸಿ ನವಾಲ್ನಿ ಆರ್ಕ್ಟಿಕ್ ಸರ್ಕಲ್ ಜೈಲಿನಲ್ಲಿ ಶುಕ್ರವಾರ ನಿಧನರಾಗಿದ್ದಾರೆ ಎಂದು ಬಿಬಿಸಿ ನ್ಯೂಸ್ ವರದಿ ಮಾಡಿದೆ.

ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಕಡು ವಿರೋಧಿಯಾಗಿದ್ದ ನವಾಲ್ನಿ ಅವರಿಗೆ ಉಗ್ರವಾದದ ಆರೋಪದ ಮೇಲೆ 19 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇದು ರಾಜಕೀಯವಾಗಿ ಪ್ರೇರಿತ ಎಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ನವಾಲ್ನಿ ಅವರನ್ನು ರಷ್ಯಾದ ಅತ್ಯಂತ ಕಠಿಣ ಮಾಸ್ಕೋದ ಈಶಾನ್ಯಕ್ಕೆ ಸುಮಾರು 1,900 ಕಿ.ಮೀ ದೂರದ ಖಾರ್ಪ್ ನಗರದಲ್ಲಿರುವ ಐಕೆ-3 ಜೈಲಿನಲ್ಲಿ ಬಂಧಿಸಿಡಲಾಗಿತ್ತು.

ಜೈಲಿನ ಒಳಗೆ ದಿನ ನಿತ್ಯದಂತೆ ಶುಕ್ರವಾರ ಬೆಳಿಗ್ಗೆ ವಾಯುವಿಹಾರ ನಡೆಸಿದ ಬಳಿಕ ನವಾಲ್ನಿ ಕುಸಿದುಬಿದ್ದು ಪ್ರಜ್ಞೆ ಕಳೆದುಕೊಂಡರು. ತೀವ್ರ ಅಸ್ವಸ್ಥರಾಗಿದ್ದ ಅವರು ಚೇತರಿಸಿಕೊಳ್ಳಲಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.`ಜೈಲಿನ ವೈದ್ಯಕೀಯ ಸಿಬಂದಿ ತಕ್ಷಣವೇ ಸ್ಥಳಕ್ಕೆ ಆಗಮಿಸಿ ಆಂಬ್ಯುಲೆನ್ಸ್ ಕರೆಸಿಕೊಂಡರು. ಪ್ರಾಥಮಿಕ ಚಿಕಿತ್ಸೆ ಒದಗಿಸಿದರೂ ಫಲ ನೀಡಲಿಲ್ಲ. ಕೈದಿ ಮೃತಪಟ್ಟಿರುವುದಾಗಿ ಆಂಬ್ಯುಲೆನ್ಸ್ ನ ವೈದ್ಯರು ಘೋಷಿಸಿದರು. ಸಾವಿನ ಕಾರಣವನ್ನು ಪರಿಶೀಲಿಸಲಾಗುತ್ತಿದೆ’ ಎಂದು ಜೈಲು ಅಧಿಕಾರಿಗಳು ಹೇಳಿದ್ದಾರೆ.

ಪುಟಿನ್ ಆಡಳಿತದಿಂದ ಕೊಲೆ ಶಂಕೆ 

ನವಾಲ್ನಿ ಸಾವಿನ ಕುರಿತು ಪ್ರತಿಕ್ರಿಯಿಸಿರುವ ಅವರ ಪತ್ನಿ ಯುಲಿಯಾ, ಪುಟಿನ್ ಆಡಳಿತವನ್ನು ಶಿಕ್ಷಿಸಲು ಸಹಾಯ ಮಾಡುವಂತೆ ಅಂತಾರಾಷ್ಟ್ರೀಯ ಸಮುದಾಯಕ್ಕೆ ಮನವಿ ಮಾಡಿದ್ದಾರೆ. ನವಾಲ್ನಿ ಅವರ ಆಪ್ತ ಮಿತ್ರರಲ್ಲಿ ಒಬ್ಬರಾದ ಭ್ರಷ್ಟಾಚಾರ ವಿರೋಧಿ ಫೌಂಡೇಶನ್ ಮುಖ್ಯಸ್ಥ ಇವಾನ್ ಝ್ಡಾನೋವ್ ಅವರು, ನವಾಲ್ನಿಯ ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.

ನವಾಲ್ನಿ ಸಾವಿನ ಹಿನ್ನೆಲೆ ಅವರ ಬೆಂಬಲಿಗರು ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸುವ ಸಾಧ್ಯತೆಯಿದೆ. ಹಾಗಾಗಿ, ಪುಟಿನ್ ಆಡಳಿತ ಎಚ್ಚರಿಕೆ ವಹಿಸಿದ್ದು, ಜನ ಸೇರಿಸಿ ದೊಡ್ಡ ಮಟ್ಟ ಪ್ರತಿಭಟನೆ ನಡೆಸದಂತೆ ಸೂಚಿಸಿದೆ. ಮಧ್ಯ ಮಾಸ್ಕೋ, ಸೇಂಟ್ ಪೀಟರ್ಸ್‌ಬರ್ಗ್, ಮರ್ಮನ್ಸ್ಕ್ ಮತ್ತು ನಿಜ್ನಿ-ನವ್ಗೊರೊಡ್ ಸೇರಿದಂತೆ ಇತರ ನಗರಗಳಲ್ಲಿ ಹಲವಾರು ಜನರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂಧಿಸಲಾಗಿದೆ.

ಸಾವನ್ನಪ್ಪುವ ಒಂದು ದಿನದ ಹಿಂದೆ 47 ವರ್ಷದ ನವಾಲ್ನಿ ನಗು ನಗುತ್ತಾ ಆರೋಗ್ಯವಾಗಿದ್ದರು. ವಿಡಿಯೋ ಕಾನ್ಪರೆನ್ಸ್ ಮೂಲಕ ಅವರು ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು. ಹಾಗಾಗಿ, ಅವರ ಹಠಾತ್ ಸಾವಿನ ಬಗ್ಗೆ ಸಂಶಯ ಮೂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ರಷ್ಯಾದ ಅತ್ಯಂತ ಜನಪ್ರಿಯ ವಿರೋಧ ಪಕ್ಷದ ಮುಖಂಡರಾಗಿದ್ದ ನವಾಲ್ನಿ, ದಶಕಗಳಿಗೂ ಹಿಂದೆ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಅವರ ನಿಕಟವರ್ತಿಗಳಾಗಿದ್ದ ಮುಖಂಡರನ್ನು ಕಟುವಾಗಿ ಟೀಕಿಸುವ ಮೂಲಕ ಮತ್ತು ರಷ್ಯಾ ಆಡಳಿತದಲ್ಲಿ ವ್ಯಾಪಿಸಿದ್ದ ವ್ಯಾಪಕ ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತುವ ಮೂಲಕ ಪ್ರಾಮುಖ್ಯತೆ ಪಡೆದಿದ್ದರು.

ನವಾಲ್ನಿ ಸಾವಿನ ಬಗ್ಗೆ ಪುಟಿನ್‍ಗೆ ಮಾಹಿತಿ ನೀಡಲಾಗಿದೆ ಎಂದು ರಷ್ಯಾ ಅಧ್ಯಕ್ಷರ ವಕ್ತಾರ ಡಿಮಿಟ್ರಿ ಪೆಸ್ಕೋವ್ ಹೇಳಿದ್ದಾರೆ. 2020ರ ಆಗಸ್ಟ್ ನಲ್ಲಿ ಸೈಬೀರಿಯಾದಲ್ಲಿ ನವಾಲ್ನಿಗೆ ವಿಷಪ್ರಾಶನ ಮಾಡಿರುವುದಾಗಿ ವರದಿಯಾಗಿತ್ತು. 2021ರಲ್ಲಿ ಜರ್ಮನಿಯಿಂದ ರಷ್ಯಾಕ್ಕೆ ಮರಳಿದ್ದ ನವಾಲ್ನಿಯನ್ನು 2021ರ ಜನವರಿಯಿಂದ ಬಂಧನದಲ್ಲಿ ಇಡಲಾಗಿತ್ತು.

ಯುಎಸ್ ತೀವ್ರ ಖಂಡನೆ:

ರಷ್ಯಾದ ವಿಪಕ್ಷ ನಾಯಕನ ಸಾವಿನ ಕುರಿತು ಯುಎಸ್ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಇದು ರಷ್ಯಾ ಅಧ್ಯಕ್ಷ ಪುಟಿನ್ ಅವರ ಕ್ರೂರತೆಗೆ ಮತ್ತಷ್ಟು ಪುರಾವೆಯಾಗಿದೆ ಎಂದು ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹೇಳಿದ್ದಾರೆ. ನವಾಲ್ನಿ ಸಾವಿನ ಸುದ್ಧಿಯಿಂದ ತೀವ್ರ ವಿಚಲಿತಗೊಂಡಿದ್ದು, ಅತೀವ ದುಃಖವಾಗಿದೆ. ತನ್ನದೇ ದೇಶದ ಜನರ ಭಿನ್ನಾಭಿಪ್ರಾಯವನ್ನು ಎದುರಿಸಲು ಪುಟಿನ್ ಹೆದರುತ್ತಾರೆ. ಪುಟಿನ್ ನಿರಂಕುಶ ಅಧಿಕಾರದ ವಿರುದ್ಧ ಧ್ವನಿ ಎತ್ತುವವರಿಗೆ ರಕ್ಷಣೆ ಮತ್ತು ಭದ್ರತೆ ಖಾತರಿಪಡಿಸಲು ನಾವೆಲ್ಲಾ ಒಂದಾಗಬೇಕಿದೆ ಎಂದು ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್‍ಡೆರ್ ಲೆಯೆನ್ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ : ಕೇಂದ್ರ ಸರ್ಕಾರದ ಧೋರಣೆಯಿಂದ ಬೇಸತ್ತು ದೇಶ ತೊರೆದ ಫ್ರೆಂಚ್ ಪತ್ರಕರ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...