Homeಮುಖಪುಟರಷ್ಯಾದ ವಿಪಕ್ಷ ನಾಯಕ ಅಲೆಕ್ಸಿ ನವಾಲ್ನಿ ಜೈಲಿನಲ್ಲಿ ಸಾವು

ರಷ್ಯಾದ ವಿಪಕ್ಷ ನಾಯಕ ಅಲೆಕ್ಸಿ ನವಾಲ್ನಿ ಜೈಲಿನಲ್ಲಿ ಸಾವು

- Advertisement -
- Advertisement -

ಸರ್ವಾಧಿಕಾರಿ ಧೋರಣೆಯ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ರಾಜಕೀಯ ಪ್ರತಿಸ್ಪರ್ಧಿ, ಕಳೆದ ಕೆಲ ದಶಕಗಳಲ್ಲಿ ರಷ್ಯಾ ಕಂಡಂತಹ ಅತ್ಯಂತ ಮಹತ್ವದ ವಿರೋಧ ಪಕ್ಷದ ನಾಯಕ ಅಲೆಕ್ಸಿ ನವಾಲ್ನಿ ಆರ್ಕ್ಟಿಕ್ ಸರ್ಕಲ್ ಜೈಲಿನಲ್ಲಿ ಶುಕ್ರವಾರ ನಿಧನರಾಗಿದ್ದಾರೆ ಎಂದು ಬಿಬಿಸಿ ನ್ಯೂಸ್ ವರದಿ ಮಾಡಿದೆ.

ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಕಡು ವಿರೋಧಿಯಾಗಿದ್ದ ನವಾಲ್ನಿ ಅವರಿಗೆ ಉಗ್ರವಾದದ ಆರೋಪದ ಮೇಲೆ 19 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇದು ರಾಜಕೀಯವಾಗಿ ಪ್ರೇರಿತ ಎಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ನವಾಲ್ನಿ ಅವರನ್ನು ರಷ್ಯಾದ ಅತ್ಯಂತ ಕಠಿಣ ಮಾಸ್ಕೋದ ಈಶಾನ್ಯಕ್ಕೆ ಸುಮಾರು 1,900 ಕಿ.ಮೀ ದೂರದ ಖಾರ್ಪ್ ನಗರದಲ್ಲಿರುವ ಐಕೆ-3 ಜೈಲಿನಲ್ಲಿ ಬಂಧಿಸಿಡಲಾಗಿತ್ತು.

ಜೈಲಿನ ಒಳಗೆ ದಿನ ನಿತ್ಯದಂತೆ ಶುಕ್ರವಾರ ಬೆಳಿಗ್ಗೆ ವಾಯುವಿಹಾರ ನಡೆಸಿದ ಬಳಿಕ ನವಾಲ್ನಿ ಕುಸಿದುಬಿದ್ದು ಪ್ರಜ್ಞೆ ಕಳೆದುಕೊಂಡರು. ತೀವ್ರ ಅಸ್ವಸ್ಥರಾಗಿದ್ದ ಅವರು ಚೇತರಿಸಿಕೊಳ್ಳಲಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.`ಜೈಲಿನ ವೈದ್ಯಕೀಯ ಸಿಬಂದಿ ತಕ್ಷಣವೇ ಸ್ಥಳಕ್ಕೆ ಆಗಮಿಸಿ ಆಂಬ್ಯುಲೆನ್ಸ್ ಕರೆಸಿಕೊಂಡರು. ಪ್ರಾಥಮಿಕ ಚಿಕಿತ್ಸೆ ಒದಗಿಸಿದರೂ ಫಲ ನೀಡಲಿಲ್ಲ. ಕೈದಿ ಮೃತಪಟ್ಟಿರುವುದಾಗಿ ಆಂಬ್ಯುಲೆನ್ಸ್ ನ ವೈದ್ಯರು ಘೋಷಿಸಿದರು. ಸಾವಿನ ಕಾರಣವನ್ನು ಪರಿಶೀಲಿಸಲಾಗುತ್ತಿದೆ’ ಎಂದು ಜೈಲು ಅಧಿಕಾರಿಗಳು ಹೇಳಿದ್ದಾರೆ.

ಪುಟಿನ್ ಆಡಳಿತದಿಂದ ಕೊಲೆ ಶಂಕೆ 

ನವಾಲ್ನಿ ಸಾವಿನ ಕುರಿತು ಪ್ರತಿಕ್ರಿಯಿಸಿರುವ ಅವರ ಪತ್ನಿ ಯುಲಿಯಾ, ಪುಟಿನ್ ಆಡಳಿತವನ್ನು ಶಿಕ್ಷಿಸಲು ಸಹಾಯ ಮಾಡುವಂತೆ ಅಂತಾರಾಷ್ಟ್ರೀಯ ಸಮುದಾಯಕ್ಕೆ ಮನವಿ ಮಾಡಿದ್ದಾರೆ. ನವಾಲ್ನಿ ಅವರ ಆಪ್ತ ಮಿತ್ರರಲ್ಲಿ ಒಬ್ಬರಾದ ಭ್ರಷ್ಟಾಚಾರ ವಿರೋಧಿ ಫೌಂಡೇಶನ್ ಮುಖ್ಯಸ್ಥ ಇವಾನ್ ಝ್ಡಾನೋವ್ ಅವರು, ನವಾಲ್ನಿಯ ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.

ನವಾಲ್ನಿ ಸಾವಿನ ಹಿನ್ನೆಲೆ ಅವರ ಬೆಂಬಲಿಗರು ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸುವ ಸಾಧ್ಯತೆಯಿದೆ. ಹಾಗಾಗಿ, ಪುಟಿನ್ ಆಡಳಿತ ಎಚ್ಚರಿಕೆ ವಹಿಸಿದ್ದು, ಜನ ಸೇರಿಸಿ ದೊಡ್ಡ ಮಟ್ಟ ಪ್ರತಿಭಟನೆ ನಡೆಸದಂತೆ ಸೂಚಿಸಿದೆ. ಮಧ್ಯ ಮಾಸ್ಕೋ, ಸೇಂಟ್ ಪೀಟರ್ಸ್‌ಬರ್ಗ್, ಮರ್ಮನ್ಸ್ಕ್ ಮತ್ತು ನಿಜ್ನಿ-ನವ್ಗೊರೊಡ್ ಸೇರಿದಂತೆ ಇತರ ನಗರಗಳಲ್ಲಿ ಹಲವಾರು ಜನರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂಧಿಸಲಾಗಿದೆ.

ಸಾವನ್ನಪ್ಪುವ ಒಂದು ದಿನದ ಹಿಂದೆ 47 ವರ್ಷದ ನವಾಲ್ನಿ ನಗು ನಗುತ್ತಾ ಆರೋಗ್ಯವಾಗಿದ್ದರು. ವಿಡಿಯೋ ಕಾನ್ಪರೆನ್ಸ್ ಮೂಲಕ ಅವರು ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು. ಹಾಗಾಗಿ, ಅವರ ಹಠಾತ್ ಸಾವಿನ ಬಗ್ಗೆ ಸಂಶಯ ಮೂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ರಷ್ಯಾದ ಅತ್ಯಂತ ಜನಪ್ರಿಯ ವಿರೋಧ ಪಕ್ಷದ ಮುಖಂಡರಾಗಿದ್ದ ನವಾಲ್ನಿ, ದಶಕಗಳಿಗೂ ಹಿಂದೆ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಅವರ ನಿಕಟವರ್ತಿಗಳಾಗಿದ್ದ ಮುಖಂಡರನ್ನು ಕಟುವಾಗಿ ಟೀಕಿಸುವ ಮೂಲಕ ಮತ್ತು ರಷ್ಯಾ ಆಡಳಿತದಲ್ಲಿ ವ್ಯಾಪಿಸಿದ್ದ ವ್ಯಾಪಕ ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತುವ ಮೂಲಕ ಪ್ರಾಮುಖ್ಯತೆ ಪಡೆದಿದ್ದರು.

ನವಾಲ್ನಿ ಸಾವಿನ ಬಗ್ಗೆ ಪುಟಿನ್‍ಗೆ ಮಾಹಿತಿ ನೀಡಲಾಗಿದೆ ಎಂದು ರಷ್ಯಾ ಅಧ್ಯಕ್ಷರ ವಕ್ತಾರ ಡಿಮಿಟ್ರಿ ಪೆಸ್ಕೋವ್ ಹೇಳಿದ್ದಾರೆ. 2020ರ ಆಗಸ್ಟ್ ನಲ್ಲಿ ಸೈಬೀರಿಯಾದಲ್ಲಿ ನವಾಲ್ನಿಗೆ ವಿಷಪ್ರಾಶನ ಮಾಡಿರುವುದಾಗಿ ವರದಿಯಾಗಿತ್ತು. 2021ರಲ್ಲಿ ಜರ್ಮನಿಯಿಂದ ರಷ್ಯಾಕ್ಕೆ ಮರಳಿದ್ದ ನವಾಲ್ನಿಯನ್ನು 2021ರ ಜನವರಿಯಿಂದ ಬಂಧನದಲ್ಲಿ ಇಡಲಾಗಿತ್ತು.

ಯುಎಸ್ ತೀವ್ರ ಖಂಡನೆ:

ರಷ್ಯಾದ ವಿಪಕ್ಷ ನಾಯಕನ ಸಾವಿನ ಕುರಿತು ಯುಎಸ್ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಇದು ರಷ್ಯಾ ಅಧ್ಯಕ್ಷ ಪುಟಿನ್ ಅವರ ಕ್ರೂರತೆಗೆ ಮತ್ತಷ್ಟು ಪುರಾವೆಯಾಗಿದೆ ಎಂದು ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹೇಳಿದ್ದಾರೆ. ನವಾಲ್ನಿ ಸಾವಿನ ಸುದ್ಧಿಯಿಂದ ತೀವ್ರ ವಿಚಲಿತಗೊಂಡಿದ್ದು, ಅತೀವ ದುಃಖವಾಗಿದೆ. ತನ್ನದೇ ದೇಶದ ಜನರ ಭಿನ್ನಾಭಿಪ್ರಾಯವನ್ನು ಎದುರಿಸಲು ಪುಟಿನ್ ಹೆದರುತ್ತಾರೆ. ಪುಟಿನ್ ನಿರಂಕುಶ ಅಧಿಕಾರದ ವಿರುದ್ಧ ಧ್ವನಿ ಎತ್ತುವವರಿಗೆ ರಕ್ಷಣೆ ಮತ್ತು ಭದ್ರತೆ ಖಾತರಿಪಡಿಸಲು ನಾವೆಲ್ಲಾ ಒಂದಾಗಬೇಕಿದೆ ಎಂದು ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್‍ಡೆರ್ ಲೆಯೆನ್ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ : ಕೇಂದ್ರ ಸರ್ಕಾರದ ಧೋರಣೆಯಿಂದ ಬೇಸತ್ತು ದೇಶ ತೊರೆದ ಫ್ರೆಂಚ್ ಪತ್ರಕರ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...