Homeಮುಖಪುಟರಷ್ಯಾದ ವಿಪಕ್ಷ ನಾಯಕ ಅಲೆಕ್ಸಿ ನವಾಲ್ನಿ ಜೈಲಿನಲ್ಲಿ ಸಾವು

ರಷ್ಯಾದ ವಿಪಕ್ಷ ನಾಯಕ ಅಲೆಕ್ಸಿ ನವಾಲ್ನಿ ಜೈಲಿನಲ್ಲಿ ಸಾವು

- Advertisement -
- Advertisement -

ಸರ್ವಾಧಿಕಾರಿ ಧೋರಣೆಯ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ರಾಜಕೀಯ ಪ್ರತಿಸ್ಪರ್ಧಿ, ಕಳೆದ ಕೆಲ ದಶಕಗಳಲ್ಲಿ ರಷ್ಯಾ ಕಂಡಂತಹ ಅತ್ಯಂತ ಮಹತ್ವದ ವಿರೋಧ ಪಕ್ಷದ ನಾಯಕ ಅಲೆಕ್ಸಿ ನವಾಲ್ನಿ ಆರ್ಕ್ಟಿಕ್ ಸರ್ಕಲ್ ಜೈಲಿನಲ್ಲಿ ಶುಕ್ರವಾರ ನಿಧನರಾಗಿದ್ದಾರೆ ಎಂದು ಬಿಬಿಸಿ ನ್ಯೂಸ್ ವರದಿ ಮಾಡಿದೆ.

ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಕಡು ವಿರೋಧಿಯಾಗಿದ್ದ ನವಾಲ್ನಿ ಅವರಿಗೆ ಉಗ್ರವಾದದ ಆರೋಪದ ಮೇಲೆ 19 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇದು ರಾಜಕೀಯವಾಗಿ ಪ್ರೇರಿತ ಎಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ನವಾಲ್ನಿ ಅವರನ್ನು ರಷ್ಯಾದ ಅತ್ಯಂತ ಕಠಿಣ ಮಾಸ್ಕೋದ ಈಶಾನ್ಯಕ್ಕೆ ಸುಮಾರು 1,900 ಕಿ.ಮೀ ದೂರದ ಖಾರ್ಪ್ ನಗರದಲ್ಲಿರುವ ಐಕೆ-3 ಜೈಲಿನಲ್ಲಿ ಬಂಧಿಸಿಡಲಾಗಿತ್ತು.

ಜೈಲಿನ ಒಳಗೆ ದಿನ ನಿತ್ಯದಂತೆ ಶುಕ್ರವಾರ ಬೆಳಿಗ್ಗೆ ವಾಯುವಿಹಾರ ನಡೆಸಿದ ಬಳಿಕ ನವಾಲ್ನಿ ಕುಸಿದುಬಿದ್ದು ಪ್ರಜ್ಞೆ ಕಳೆದುಕೊಂಡರು. ತೀವ್ರ ಅಸ್ವಸ್ಥರಾಗಿದ್ದ ಅವರು ಚೇತರಿಸಿಕೊಳ್ಳಲಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.`ಜೈಲಿನ ವೈದ್ಯಕೀಯ ಸಿಬಂದಿ ತಕ್ಷಣವೇ ಸ್ಥಳಕ್ಕೆ ಆಗಮಿಸಿ ಆಂಬ್ಯುಲೆನ್ಸ್ ಕರೆಸಿಕೊಂಡರು. ಪ್ರಾಥಮಿಕ ಚಿಕಿತ್ಸೆ ಒದಗಿಸಿದರೂ ಫಲ ನೀಡಲಿಲ್ಲ. ಕೈದಿ ಮೃತಪಟ್ಟಿರುವುದಾಗಿ ಆಂಬ್ಯುಲೆನ್ಸ್ ನ ವೈದ್ಯರು ಘೋಷಿಸಿದರು. ಸಾವಿನ ಕಾರಣವನ್ನು ಪರಿಶೀಲಿಸಲಾಗುತ್ತಿದೆ’ ಎಂದು ಜೈಲು ಅಧಿಕಾರಿಗಳು ಹೇಳಿದ್ದಾರೆ.

ಪುಟಿನ್ ಆಡಳಿತದಿಂದ ಕೊಲೆ ಶಂಕೆ 

ನವಾಲ್ನಿ ಸಾವಿನ ಕುರಿತು ಪ್ರತಿಕ್ರಿಯಿಸಿರುವ ಅವರ ಪತ್ನಿ ಯುಲಿಯಾ, ಪುಟಿನ್ ಆಡಳಿತವನ್ನು ಶಿಕ್ಷಿಸಲು ಸಹಾಯ ಮಾಡುವಂತೆ ಅಂತಾರಾಷ್ಟ್ರೀಯ ಸಮುದಾಯಕ್ಕೆ ಮನವಿ ಮಾಡಿದ್ದಾರೆ. ನವಾಲ್ನಿ ಅವರ ಆಪ್ತ ಮಿತ್ರರಲ್ಲಿ ಒಬ್ಬರಾದ ಭ್ರಷ್ಟಾಚಾರ ವಿರೋಧಿ ಫೌಂಡೇಶನ್ ಮುಖ್ಯಸ್ಥ ಇವಾನ್ ಝ್ಡಾನೋವ್ ಅವರು, ನವಾಲ್ನಿಯ ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.

ನವಾಲ್ನಿ ಸಾವಿನ ಹಿನ್ನೆಲೆ ಅವರ ಬೆಂಬಲಿಗರು ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸುವ ಸಾಧ್ಯತೆಯಿದೆ. ಹಾಗಾಗಿ, ಪುಟಿನ್ ಆಡಳಿತ ಎಚ್ಚರಿಕೆ ವಹಿಸಿದ್ದು, ಜನ ಸೇರಿಸಿ ದೊಡ್ಡ ಮಟ್ಟ ಪ್ರತಿಭಟನೆ ನಡೆಸದಂತೆ ಸೂಚಿಸಿದೆ. ಮಧ್ಯ ಮಾಸ್ಕೋ, ಸೇಂಟ್ ಪೀಟರ್ಸ್‌ಬರ್ಗ್, ಮರ್ಮನ್ಸ್ಕ್ ಮತ್ತು ನಿಜ್ನಿ-ನವ್ಗೊರೊಡ್ ಸೇರಿದಂತೆ ಇತರ ನಗರಗಳಲ್ಲಿ ಹಲವಾರು ಜನರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂಧಿಸಲಾಗಿದೆ.

ಸಾವನ್ನಪ್ಪುವ ಒಂದು ದಿನದ ಹಿಂದೆ 47 ವರ್ಷದ ನವಾಲ್ನಿ ನಗು ನಗುತ್ತಾ ಆರೋಗ್ಯವಾಗಿದ್ದರು. ವಿಡಿಯೋ ಕಾನ್ಪರೆನ್ಸ್ ಮೂಲಕ ಅವರು ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು. ಹಾಗಾಗಿ, ಅವರ ಹಠಾತ್ ಸಾವಿನ ಬಗ್ಗೆ ಸಂಶಯ ಮೂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ರಷ್ಯಾದ ಅತ್ಯಂತ ಜನಪ್ರಿಯ ವಿರೋಧ ಪಕ್ಷದ ಮುಖಂಡರಾಗಿದ್ದ ನವಾಲ್ನಿ, ದಶಕಗಳಿಗೂ ಹಿಂದೆ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಅವರ ನಿಕಟವರ್ತಿಗಳಾಗಿದ್ದ ಮುಖಂಡರನ್ನು ಕಟುವಾಗಿ ಟೀಕಿಸುವ ಮೂಲಕ ಮತ್ತು ರಷ್ಯಾ ಆಡಳಿತದಲ್ಲಿ ವ್ಯಾಪಿಸಿದ್ದ ವ್ಯಾಪಕ ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತುವ ಮೂಲಕ ಪ್ರಾಮುಖ್ಯತೆ ಪಡೆದಿದ್ದರು.

ನವಾಲ್ನಿ ಸಾವಿನ ಬಗ್ಗೆ ಪುಟಿನ್‍ಗೆ ಮಾಹಿತಿ ನೀಡಲಾಗಿದೆ ಎಂದು ರಷ್ಯಾ ಅಧ್ಯಕ್ಷರ ವಕ್ತಾರ ಡಿಮಿಟ್ರಿ ಪೆಸ್ಕೋವ್ ಹೇಳಿದ್ದಾರೆ. 2020ರ ಆಗಸ್ಟ್ ನಲ್ಲಿ ಸೈಬೀರಿಯಾದಲ್ಲಿ ನವಾಲ್ನಿಗೆ ವಿಷಪ್ರಾಶನ ಮಾಡಿರುವುದಾಗಿ ವರದಿಯಾಗಿತ್ತು. 2021ರಲ್ಲಿ ಜರ್ಮನಿಯಿಂದ ರಷ್ಯಾಕ್ಕೆ ಮರಳಿದ್ದ ನವಾಲ್ನಿಯನ್ನು 2021ರ ಜನವರಿಯಿಂದ ಬಂಧನದಲ್ಲಿ ಇಡಲಾಗಿತ್ತು.

ಯುಎಸ್ ತೀವ್ರ ಖಂಡನೆ:

ರಷ್ಯಾದ ವಿಪಕ್ಷ ನಾಯಕನ ಸಾವಿನ ಕುರಿತು ಯುಎಸ್ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಇದು ರಷ್ಯಾ ಅಧ್ಯಕ್ಷ ಪುಟಿನ್ ಅವರ ಕ್ರೂರತೆಗೆ ಮತ್ತಷ್ಟು ಪುರಾವೆಯಾಗಿದೆ ಎಂದು ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹೇಳಿದ್ದಾರೆ. ನವಾಲ್ನಿ ಸಾವಿನ ಸುದ್ಧಿಯಿಂದ ತೀವ್ರ ವಿಚಲಿತಗೊಂಡಿದ್ದು, ಅತೀವ ದುಃಖವಾಗಿದೆ. ತನ್ನದೇ ದೇಶದ ಜನರ ಭಿನ್ನಾಭಿಪ್ರಾಯವನ್ನು ಎದುರಿಸಲು ಪುಟಿನ್ ಹೆದರುತ್ತಾರೆ. ಪುಟಿನ್ ನಿರಂಕುಶ ಅಧಿಕಾರದ ವಿರುದ್ಧ ಧ್ವನಿ ಎತ್ತುವವರಿಗೆ ರಕ್ಷಣೆ ಮತ್ತು ಭದ್ರತೆ ಖಾತರಿಪಡಿಸಲು ನಾವೆಲ್ಲಾ ಒಂದಾಗಬೇಕಿದೆ ಎಂದು ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್‍ಡೆರ್ ಲೆಯೆನ್ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ : ಕೇಂದ್ರ ಸರ್ಕಾರದ ಧೋರಣೆಯಿಂದ ಬೇಸತ್ತು ದೇಶ ತೊರೆದ ಫ್ರೆಂಚ್ ಪತ್ರಕರ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...