Homeಮುಖಪುಟರಷ್ಯಾದ ವಿಪಕ್ಷ ನಾಯಕ ಅಲೆಕ್ಸಿ ನವಾಲ್ನಿ ಜೈಲಿನಲ್ಲಿ ಸಾವು

ರಷ್ಯಾದ ವಿಪಕ್ಷ ನಾಯಕ ಅಲೆಕ್ಸಿ ನವಾಲ್ನಿ ಜೈಲಿನಲ್ಲಿ ಸಾವು

- Advertisement -
- Advertisement -

ಸರ್ವಾಧಿಕಾರಿ ಧೋರಣೆಯ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ರಾಜಕೀಯ ಪ್ರತಿಸ್ಪರ್ಧಿ, ಕಳೆದ ಕೆಲ ದಶಕಗಳಲ್ಲಿ ರಷ್ಯಾ ಕಂಡಂತಹ ಅತ್ಯಂತ ಮಹತ್ವದ ವಿರೋಧ ಪಕ್ಷದ ನಾಯಕ ಅಲೆಕ್ಸಿ ನವಾಲ್ನಿ ಆರ್ಕ್ಟಿಕ್ ಸರ್ಕಲ್ ಜೈಲಿನಲ್ಲಿ ಶುಕ್ರವಾರ ನಿಧನರಾಗಿದ್ದಾರೆ ಎಂದು ಬಿಬಿಸಿ ನ್ಯೂಸ್ ವರದಿ ಮಾಡಿದೆ.

ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಕಡು ವಿರೋಧಿಯಾಗಿದ್ದ ನವಾಲ್ನಿ ಅವರಿಗೆ ಉಗ್ರವಾದದ ಆರೋಪದ ಮೇಲೆ 19 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇದು ರಾಜಕೀಯವಾಗಿ ಪ್ರೇರಿತ ಎಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ನವಾಲ್ನಿ ಅವರನ್ನು ರಷ್ಯಾದ ಅತ್ಯಂತ ಕಠಿಣ ಮಾಸ್ಕೋದ ಈಶಾನ್ಯಕ್ಕೆ ಸುಮಾರು 1,900 ಕಿ.ಮೀ ದೂರದ ಖಾರ್ಪ್ ನಗರದಲ್ಲಿರುವ ಐಕೆ-3 ಜೈಲಿನಲ್ಲಿ ಬಂಧಿಸಿಡಲಾಗಿತ್ತು.

ಜೈಲಿನ ಒಳಗೆ ದಿನ ನಿತ್ಯದಂತೆ ಶುಕ್ರವಾರ ಬೆಳಿಗ್ಗೆ ವಾಯುವಿಹಾರ ನಡೆಸಿದ ಬಳಿಕ ನವಾಲ್ನಿ ಕುಸಿದುಬಿದ್ದು ಪ್ರಜ್ಞೆ ಕಳೆದುಕೊಂಡರು. ತೀವ್ರ ಅಸ್ವಸ್ಥರಾಗಿದ್ದ ಅವರು ಚೇತರಿಸಿಕೊಳ್ಳಲಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.`ಜೈಲಿನ ವೈದ್ಯಕೀಯ ಸಿಬಂದಿ ತಕ್ಷಣವೇ ಸ್ಥಳಕ್ಕೆ ಆಗಮಿಸಿ ಆಂಬ್ಯುಲೆನ್ಸ್ ಕರೆಸಿಕೊಂಡರು. ಪ್ರಾಥಮಿಕ ಚಿಕಿತ್ಸೆ ಒದಗಿಸಿದರೂ ಫಲ ನೀಡಲಿಲ್ಲ. ಕೈದಿ ಮೃತಪಟ್ಟಿರುವುದಾಗಿ ಆಂಬ್ಯುಲೆನ್ಸ್ ನ ವೈದ್ಯರು ಘೋಷಿಸಿದರು. ಸಾವಿನ ಕಾರಣವನ್ನು ಪರಿಶೀಲಿಸಲಾಗುತ್ತಿದೆ’ ಎಂದು ಜೈಲು ಅಧಿಕಾರಿಗಳು ಹೇಳಿದ್ದಾರೆ.

ಪುಟಿನ್ ಆಡಳಿತದಿಂದ ಕೊಲೆ ಶಂಕೆ 

ನವಾಲ್ನಿ ಸಾವಿನ ಕುರಿತು ಪ್ರತಿಕ್ರಿಯಿಸಿರುವ ಅವರ ಪತ್ನಿ ಯುಲಿಯಾ, ಪುಟಿನ್ ಆಡಳಿತವನ್ನು ಶಿಕ್ಷಿಸಲು ಸಹಾಯ ಮಾಡುವಂತೆ ಅಂತಾರಾಷ್ಟ್ರೀಯ ಸಮುದಾಯಕ್ಕೆ ಮನವಿ ಮಾಡಿದ್ದಾರೆ. ನವಾಲ್ನಿ ಅವರ ಆಪ್ತ ಮಿತ್ರರಲ್ಲಿ ಒಬ್ಬರಾದ ಭ್ರಷ್ಟಾಚಾರ ವಿರೋಧಿ ಫೌಂಡೇಶನ್ ಮುಖ್ಯಸ್ಥ ಇವಾನ್ ಝ್ಡಾನೋವ್ ಅವರು, ನವಾಲ್ನಿಯ ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.

ನವಾಲ್ನಿ ಸಾವಿನ ಹಿನ್ನೆಲೆ ಅವರ ಬೆಂಬಲಿಗರು ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸುವ ಸಾಧ್ಯತೆಯಿದೆ. ಹಾಗಾಗಿ, ಪುಟಿನ್ ಆಡಳಿತ ಎಚ್ಚರಿಕೆ ವಹಿಸಿದ್ದು, ಜನ ಸೇರಿಸಿ ದೊಡ್ಡ ಮಟ್ಟ ಪ್ರತಿಭಟನೆ ನಡೆಸದಂತೆ ಸೂಚಿಸಿದೆ. ಮಧ್ಯ ಮಾಸ್ಕೋ, ಸೇಂಟ್ ಪೀಟರ್ಸ್‌ಬರ್ಗ್, ಮರ್ಮನ್ಸ್ಕ್ ಮತ್ತು ನಿಜ್ನಿ-ನವ್ಗೊರೊಡ್ ಸೇರಿದಂತೆ ಇತರ ನಗರಗಳಲ್ಲಿ ಹಲವಾರು ಜನರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂಧಿಸಲಾಗಿದೆ.

ಸಾವನ್ನಪ್ಪುವ ಒಂದು ದಿನದ ಹಿಂದೆ 47 ವರ್ಷದ ನವಾಲ್ನಿ ನಗು ನಗುತ್ತಾ ಆರೋಗ್ಯವಾಗಿದ್ದರು. ವಿಡಿಯೋ ಕಾನ್ಪರೆನ್ಸ್ ಮೂಲಕ ಅವರು ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು. ಹಾಗಾಗಿ, ಅವರ ಹಠಾತ್ ಸಾವಿನ ಬಗ್ಗೆ ಸಂಶಯ ಮೂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ರಷ್ಯಾದ ಅತ್ಯಂತ ಜನಪ್ರಿಯ ವಿರೋಧ ಪಕ್ಷದ ಮುಖಂಡರಾಗಿದ್ದ ನವಾಲ್ನಿ, ದಶಕಗಳಿಗೂ ಹಿಂದೆ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಅವರ ನಿಕಟವರ್ತಿಗಳಾಗಿದ್ದ ಮುಖಂಡರನ್ನು ಕಟುವಾಗಿ ಟೀಕಿಸುವ ಮೂಲಕ ಮತ್ತು ರಷ್ಯಾ ಆಡಳಿತದಲ್ಲಿ ವ್ಯಾಪಿಸಿದ್ದ ವ್ಯಾಪಕ ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತುವ ಮೂಲಕ ಪ್ರಾಮುಖ್ಯತೆ ಪಡೆದಿದ್ದರು.

ನವಾಲ್ನಿ ಸಾವಿನ ಬಗ್ಗೆ ಪುಟಿನ್‍ಗೆ ಮಾಹಿತಿ ನೀಡಲಾಗಿದೆ ಎಂದು ರಷ್ಯಾ ಅಧ್ಯಕ್ಷರ ವಕ್ತಾರ ಡಿಮಿಟ್ರಿ ಪೆಸ್ಕೋವ್ ಹೇಳಿದ್ದಾರೆ. 2020ರ ಆಗಸ್ಟ್ ನಲ್ಲಿ ಸೈಬೀರಿಯಾದಲ್ಲಿ ನವಾಲ್ನಿಗೆ ವಿಷಪ್ರಾಶನ ಮಾಡಿರುವುದಾಗಿ ವರದಿಯಾಗಿತ್ತು. 2021ರಲ್ಲಿ ಜರ್ಮನಿಯಿಂದ ರಷ್ಯಾಕ್ಕೆ ಮರಳಿದ್ದ ನವಾಲ್ನಿಯನ್ನು 2021ರ ಜನವರಿಯಿಂದ ಬಂಧನದಲ್ಲಿ ಇಡಲಾಗಿತ್ತು.

ಯುಎಸ್ ತೀವ್ರ ಖಂಡನೆ:

ರಷ್ಯಾದ ವಿಪಕ್ಷ ನಾಯಕನ ಸಾವಿನ ಕುರಿತು ಯುಎಸ್ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಇದು ರಷ್ಯಾ ಅಧ್ಯಕ್ಷ ಪುಟಿನ್ ಅವರ ಕ್ರೂರತೆಗೆ ಮತ್ತಷ್ಟು ಪುರಾವೆಯಾಗಿದೆ ಎಂದು ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹೇಳಿದ್ದಾರೆ. ನವಾಲ್ನಿ ಸಾವಿನ ಸುದ್ಧಿಯಿಂದ ತೀವ್ರ ವಿಚಲಿತಗೊಂಡಿದ್ದು, ಅತೀವ ದುಃಖವಾಗಿದೆ. ತನ್ನದೇ ದೇಶದ ಜನರ ಭಿನ್ನಾಭಿಪ್ರಾಯವನ್ನು ಎದುರಿಸಲು ಪುಟಿನ್ ಹೆದರುತ್ತಾರೆ. ಪುಟಿನ್ ನಿರಂಕುಶ ಅಧಿಕಾರದ ವಿರುದ್ಧ ಧ್ವನಿ ಎತ್ತುವವರಿಗೆ ರಕ್ಷಣೆ ಮತ್ತು ಭದ್ರತೆ ಖಾತರಿಪಡಿಸಲು ನಾವೆಲ್ಲಾ ಒಂದಾಗಬೇಕಿದೆ ಎಂದು ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್‍ಡೆರ್ ಲೆಯೆನ್ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ : ಕೇಂದ್ರ ಸರ್ಕಾರದ ಧೋರಣೆಯಿಂದ ಬೇಸತ್ತು ದೇಶ ತೊರೆದ ಫ್ರೆಂಚ್ ಪತ್ರಕರ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...