Homeಮುಖಪುಟರಷ್ಯಾದ ವಿಪಕ್ಷ ನಾಯಕ ಅಲೆಕ್ಸಿ ನವಾಲ್ನಿ ಜೈಲಿನಲ್ಲಿ ಸಾವು

ರಷ್ಯಾದ ವಿಪಕ್ಷ ನಾಯಕ ಅಲೆಕ್ಸಿ ನವಾಲ್ನಿ ಜೈಲಿನಲ್ಲಿ ಸಾವು

- Advertisement -
- Advertisement -

ಸರ್ವಾಧಿಕಾರಿ ಧೋರಣೆಯ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ರಾಜಕೀಯ ಪ್ರತಿಸ್ಪರ್ಧಿ, ಕಳೆದ ಕೆಲ ದಶಕಗಳಲ್ಲಿ ರಷ್ಯಾ ಕಂಡಂತಹ ಅತ್ಯಂತ ಮಹತ್ವದ ವಿರೋಧ ಪಕ್ಷದ ನಾಯಕ ಅಲೆಕ್ಸಿ ನವಾಲ್ನಿ ಆರ್ಕ್ಟಿಕ್ ಸರ್ಕಲ್ ಜೈಲಿನಲ್ಲಿ ಶುಕ್ರವಾರ ನಿಧನರಾಗಿದ್ದಾರೆ ಎಂದು ಬಿಬಿಸಿ ನ್ಯೂಸ್ ವರದಿ ಮಾಡಿದೆ.

ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಕಡು ವಿರೋಧಿಯಾಗಿದ್ದ ನವಾಲ್ನಿ ಅವರಿಗೆ ಉಗ್ರವಾದದ ಆರೋಪದ ಮೇಲೆ 19 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇದು ರಾಜಕೀಯವಾಗಿ ಪ್ರೇರಿತ ಎಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ನವಾಲ್ನಿ ಅವರನ್ನು ರಷ್ಯಾದ ಅತ್ಯಂತ ಕಠಿಣ ಮಾಸ್ಕೋದ ಈಶಾನ್ಯಕ್ಕೆ ಸುಮಾರು 1,900 ಕಿ.ಮೀ ದೂರದ ಖಾರ್ಪ್ ನಗರದಲ್ಲಿರುವ ಐಕೆ-3 ಜೈಲಿನಲ್ಲಿ ಬಂಧಿಸಿಡಲಾಗಿತ್ತು.

ಜೈಲಿನ ಒಳಗೆ ದಿನ ನಿತ್ಯದಂತೆ ಶುಕ್ರವಾರ ಬೆಳಿಗ್ಗೆ ವಾಯುವಿಹಾರ ನಡೆಸಿದ ಬಳಿಕ ನವಾಲ್ನಿ ಕುಸಿದುಬಿದ್ದು ಪ್ರಜ್ಞೆ ಕಳೆದುಕೊಂಡರು. ತೀವ್ರ ಅಸ್ವಸ್ಥರಾಗಿದ್ದ ಅವರು ಚೇತರಿಸಿಕೊಳ್ಳಲಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.`ಜೈಲಿನ ವೈದ್ಯಕೀಯ ಸಿಬಂದಿ ತಕ್ಷಣವೇ ಸ್ಥಳಕ್ಕೆ ಆಗಮಿಸಿ ಆಂಬ್ಯುಲೆನ್ಸ್ ಕರೆಸಿಕೊಂಡರು. ಪ್ರಾಥಮಿಕ ಚಿಕಿತ್ಸೆ ಒದಗಿಸಿದರೂ ಫಲ ನೀಡಲಿಲ್ಲ. ಕೈದಿ ಮೃತಪಟ್ಟಿರುವುದಾಗಿ ಆಂಬ್ಯುಲೆನ್ಸ್ ನ ವೈದ್ಯರು ಘೋಷಿಸಿದರು. ಸಾವಿನ ಕಾರಣವನ್ನು ಪರಿಶೀಲಿಸಲಾಗುತ್ತಿದೆ’ ಎಂದು ಜೈಲು ಅಧಿಕಾರಿಗಳು ಹೇಳಿದ್ದಾರೆ.

ಪುಟಿನ್ ಆಡಳಿತದಿಂದ ಕೊಲೆ ಶಂಕೆ 

ನವಾಲ್ನಿ ಸಾವಿನ ಕುರಿತು ಪ್ರತಿಕ್ರಿಯಿಸಿರುವ ಅವರ ಪತ್ನಿ ಯುಲಿಯಾ, ಪುಟಿನ್ ಆಡಳಿತವನ್ನು ಶಿಕ್ಷಿಸಲು ಸಹಾಯ ಮಾಡುವಂತೆ ಅಂತಾರಾಷ್ಟ್ರೀಯ ಸಮುದಾಯಕ್ಕೆ ಮನವಿ ಮಾಡಿದ್ದಾರೆ. ನವಾಲ್ನಿ ಅವರ ಆಪ್ತ ಮಿತ್ರರಲ್ಲಿ ಒಬ್ಬರಾದ ಭ್ರಷ್ಟಾಚಾರ ವಿರೋಧಿ ಫೌಂಡೇಶನ್ ಮುಖ್ಯಸ್ಥ ಇವಾನ್ ಝ್ಡಾನೋವ್ ಅವರು, ನವಾಲ್ನಿಯ ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.

ನವಾಲ್ನಿ ಸಾವಿನ ಹಿನ್ನೆಲೆ ಅವರ ಬೆಂಬಲಿಗರು ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸುವ ಸಾಧ್ಯತೆಯಿದೆ. ಹಾಗಾಗಿ, ಪುಟಿನ್ ಆಡಳಿತ ಎಚ್ಚರಿಕೆ ವಹಿಸಿದ್ದು, ಜನ ಸೇರಿಸಿ ದೊಡ್ಡ ಮಟ್ಟ ಪ್ರತಿಭಟನೆ ನಡೆಸದಂತೆ ಸೂಚಿಸಿದೆ. ಮಧ್ಯ ಮಾಸ್ಕೋ, ಸೇಂಟ್ ಪೀಟರ್ಸ್‌ಬರ್ಗ್, ಮರ್ಮನ್ಸ್ಕ್ ಮತ್ತು ನಿಜ್ನಿ-ನವ್ಗೊರೊಡ್ ಸೇರಿದಂತೆ ಇತರ ನಗರಗಳಲ್ಲಿ ಹಲವಾರು ಜನರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂಧಿಸಲಾಗಿದೆ.

ಸಾವನ್ನಪ್ಪುವ ಒಂದು ದಿನದ ಹಿಂದೆ 47 ವರ್ಷದ ನವಾಲ್ನಿ ನಗು ನಗುತ್ತಾ ಆರೋಗ್ಯವಾಗಿದ್ದರು. ವಿಡಿಯೋ ಕಾನ್ಪರೆನ್ಸ್ ಮೂಲಕ ಅವರು ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು. ಹಾಗಾಗಿ, ಅವರ ಹಠಾತ್ ಸಾವಿನ ಬಗ್ಗೆ ಸಂಶಯ ಮೂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ರಷ್ಯಾದ ಅತ್ಯಂತ ಜನಪ್ರಿಯ ವಿರೋಧ ಪಕ್ಷದ ಮುಖಂಡರಾಗಿದ್ದ ನವಾಲ್ನಿ, ದಶಕಗಳಿಗೂ ಹಿಂದೆ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಅವರ ನಿಕಟವರ್ತಿಗಳಾಗಿದ್ದ ಮುಖಂಡರನ್ನು ಕಟುವಾಗಿ ಟೀಕಿಸುವ ಮೂಲಕ ಮತ್ತು ರಷ್ಯಾ ಆಡಳಿತದಲ್ಲಿ ವ್ಯಾಪಿಸಿದ್ದ ವ್ಯಾಪಕ ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತುವ ಮೂಲಕ ಪ್ರಾಮುಖ್ಯತೆ ಪಡೆದಿದ್ದರು.

ನವಾಲ್ನಿ ಸಾವಿನ ಬಗ್ಗೆ ಪುಟಿನ್‍ಗೆ ಮಾಹಿತಿ ನೀಡಲಾಗಿದೆ ಎಂದು ರಷ್ಯಾ ಅಧ್ಯಕ್ಷರ ವಕ್ತಾರ ಡಿಮಿಟ್ರಿ ಪೆಸ್ಕೋವ್ ಹೇಳಿದ್ದಾರೆ. 2020ರ ಆಗಸ್ಟ್ ನಲ್ಲಿ ಸೈಬೀರಿಯಾದಲ್ಲಿ ನವಾಲ್ನಿಗೆ ವಿಷಪ್ರಾಶನ ಮಾಡಿರುವುದಾಗಿ ವರದಿಯಾಗಿತ್ತು. 2021ರಲ್ಲಿ ಜರ್ಮನಿಯಿಂದ ರಷ್ಯಾಕ್ಕೆ ಮರಳಿದ್ದ ನವಾಲ್ನಿಯನ್ನು 2021ರ ಜನವರಿಯಿಂದ ಬಂಧನದಲ್ಲಿ ಇಡಲಾಗಿತ್ತು.

ಯುಎಸ್ ತೀವ್ರ ಖಂಡನೆ:

ರಷ್ಯಾದ ವಿಪಕ್ಷ ನಾಯಕನ ಸಾವಿನ ಕುರಿತು ಯುಎಸ್ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಇದು ರಷ್ಯಾ ಅಧ್ಯಕ್ಷ ಪುಟಿನ್ ಅವರ ಕ್ರೂರತೆಗೆ ಮತ್ತಷ್ಟು ಪುರಾವೆಯಾಗಿದೆ ಎಂದು ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹೇಳಿದ್ದಾರೆ. ನವಾಲ್ನಿ ಸಾವಿನ ಸುದ್ಧಿಯಿಂದ ತೀವ್ರ ವಿಚಲಿತಗೊಂಡಿದ್ದು, ಅತೀವ ದುಃಖವಾಗಿದೆ. ತನ್ನದೇ ದೇಶದ ಜನರ ಭಿನ್ನಾಭಿಪ್ರಾಯವನ್ನು ಎದುರಿಸಲು ಪುಟಿನ್ ಹೆದರುತ್ತಾರೆ. ಪುಟಿನ್ ನಿರಂಕುಶ ಅಧಿಕಾರದ ವಿರುದ್ಧ ಧ್ವನಿ ಎತ್ತುವವರಿಗೆ ರಕ್ಷಣೆ ಮತ್ತು ಭದ್ರತೆ ಖಾತರಿಪಡಿಸಲು ನಾವೆಲ್ಲಾ ಒಂದಾಗಬೇಕಿದೆ ಎಂದು ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್‍ಡೆರ್ ಲೆಯೆನ್ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ : ಕೇಂದ್ರ ಸರ್ಕಾರದ ಧೋರಣೆಯಿಂದ ಬೇಸತ್ತು ದೇಶ ತೊರೆದ ಫ್ರೆಂಚ್ ಪತ್ರಕರ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...