Homeಮುಖಪುಟಉಕ್ರೇನ್‌- ರಷ್ಯಾ ವಾರ್‌: ಯುರೋಪ್‌ನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಬೆಂಕಿ

ಉಕ್ರೇನ್‌- ರಷ್ಯಾ ವಾರ್‌: ಯುರೋಪ್‌ನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಬೆಂಕಿ

ಜಪೋರಿಝಿಯಾ ಪರಮಾಣು ಸ್ಥಾವರ ಸ್ಫೋಟಿಸಿದರೆ, ಚೋರ್ನೋಬಿಲ್‌ಗಿಂತ 10 ಪಟ್ಟು ದೊಡ್ಡ ದುರಂತವಾಗುತ್ತದೆ: ಉಕ್ರೇನ್‌

- Advertisement -
- Advertisement -

ಕೀವ್‌: ರಷ್ಯಾ ದಾಳಿಯ ಬಳಿಕ ಉಕ್ರೇನ್‌ನಲ್ಲಿರುವ ಯುರೋಪಿನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಲು ಸಾಧ್ಯವಾಗುತ್ತಿಲ್ಲ. ಏಕೆಂದರೆ ರಷ್ಯಾದ ಪಡೆಗಳು ಅಗ್ನಿಶಾಮಕ ದಳದ ಮೇಲೆ ಗುಂಡಿನ ದಾಳಿ ಮುಂದುವರಿಸಿವೆ ಎಂದು ಜಪೋರಿಝಿಯಾ ಪರಮಾಣು ಸ್ಥಾವರದ ಬಳಿಯ ಪಟ್ಟಣದ ಮೇಯರ್ ತಿಳಿಸಿದ್ದಾರೆ.

“ಝಪೊರಿಝಿಯಾ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ರಷ್ಯಾದ ಪಡೆಗಳು ಕ್ಷಪಣಿ ದಾಳಿ ನಡೆಸಿದ ಪರಿಣಾಮವಾಗಿ ಬೆಂಕಿ ಕಾಣಿಸಿಕೊಂಡಿದೆ” ಎಂದು ಇಲ್ಲಿನ ವಕ್ತಾರ ಆಂಡ್ರೇ ತುಜ್ ವಿಡಿಯೊ ಮೂಲಕ ತಿಳಿಸಿದ್ದಾರೆ. ಯಾವುದೇ ವಿಕಿರಣ ಘಟನೆ ಸಂಭವಿಸಬಹುದೇ ಎಂದು ನಿಕಟವಾಗಿ ಗಮನಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ತಕ್ಷಣದಲ್ಲಿ ವಿಕಿರಣ ಘಟನೆ ವರದಿಯಾಗಿಲ್ಲ. ಅಗತ್ಯ ಉಪಕರಣಗಳು ಬೆಂಕಿಗೆ ಸಿಲುಕಿಲ್ಲ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ. ಆದರೆ ಆಕ್ರಮಣಕಾರಿ ಪಡೆಗಳು ಮುಂದೆ ಏನು ಮಾಡಬಹುದು ಎಂಬುದು ಸ್ಪಷ್ಟವಾಗಿಲ್ಲ.

ಚೆರ್ನೋಬಿಲ್ ಪರಮಾಣು ದುರಂತವನ್ನು “ಪುನರಾವರ್ತನೆ” ಮಾಡಲು ರಷ್ಯಾ ಪ್ರಯತ್ನಿಸುತ್ತಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮರ್ ಝೆಲೆನ್ಸ್ಕಿ ಆರೋಪಿಸಿದ್ದಾರೆ. ಜಪೋರಿಝಿಯಾ ಪರಮಾಣು ಸ್ಥಾವರದಲ್ಲಿನ ಬಿಕ್ಕಟ್ಟಿನ ಬಗ್ಗೆ ಯುಎಸ್ ಅಧ್ಯಕ್ಷ ಜೋ ಬಿಡನ್ ಸೇರಿದಂತೆ ಅಂತಾರಾಷ್ಟ್ರೀಯ ನಾಯಕರೊಂದಿಗೆ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ.

“ರಷ್ಯಾ ಹೊರತುಪಡಿಸಿ ಯಾವುದೇ ದೇಶವು ಪರಮಾಣು ಶಕ್ತಿ ಘಟಕಗಳ ಮೇಲೆ ಗುಂಡು ಹಾರಿಸಿಲ್ಲ” ಎಂದು ಝೆಲೆನ್ಸ್ಕಿ ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ.

ಯುರೋಪಿನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ಬೆಂಕಿ ಕಾಣಿಸಿಕೊಂಡ ನಂತರ ದಾಳಿಯನ್ನು ನಿಲ್ಲಿಸುವಂತೆ ರಷ್ಯಾದ ಪಡೆಗಳಿಗೆ ಉಕ್ರೇನಿಯನ್ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಶುಕ್ರವಾರ ಕರೆ ನೀಡಿದ್ದಾರೆ.

ಆಗ್ನೇಯ ಉಕ್ರೇನ್‌ನ ಕೈಗಾರಿಕಾ ನಗರವಾದ ಜಪೋರಿಝಿಯಾದಲ್ಲಿನ ಈ ಸ್ಥಾವರವು ದೇಶದ ಪರಮಾಣು ಶಕ್ತಿಯ ಅಂದಾಜು 40 ಪ್ರತಿಶತವನ್ನು ಪೂರೈಸುತ್ತದೆ.

“ಜಪೋರಿಝಿಯಾ ಸ್ಥಾವರ ಸ್ಫೋಟಿಸಿದರೆ, ಚೋರ್ನೋಬಿಲ್‌ಗಿಂತ 10 ಪಟ್ಟು ದೊಡ್ಡ ದುರಂತವಾಗುತ್ತದೆ. ರಷ್ಯನ್ನರು ತಕ್ಷಣವೇ ಬೆಂಕಿಯನ್ನು ನಿಲ್ಲಿಸಬೇಕು.  ಅಗ್ನಿಶಾಮಕ ಸಿಬ್ಬಂದಿಗೆ ಅವಕಾಶ ನೀಡಬೇಕು. ಭದ್ರತಾ ವಲಯವನ್ನು ಸ್ಥಾಪಿಸಬೇಕು” ಎಂದು ಕುಲೇಬಾ ಟ್ವೀಟ್ ಮಾಡಿದ್ದಾರೆ.

ರಷ್ಯಾದ ಪಡೆಗಳು “ಎಲ್ಲಾ ಕಡೆಯಿಂದ” ಗುಂಡು ಹಾರಿಸುತ್ತಿವೆ ಎಂದು ಅವರು ಬರೆದಿದ್ದಾರೆ.

1986ರ ಚೆರ್ನೋಬಿಲ್ ದುರಂತದ ಸ್ಥಳವನ್ನು ಒಳಗೊಂಡಂತೆ ಉಕ್ರೇನ್‌ನ ಪರಮಾಣು ಸ್ಥಳಗಳಲ್ಲಿನ ಎಲ್ಲಾ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಯುಎನ್‌ನ ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆಯು ವಿಶ್ವಸಂಸ್ಥೆಯಲ್ಲಿ ಈಗಾಗಲೇ ರಷ್ಯಾವನ್ನು ಒತ್ತಾಯಿಸಿದೆ.


ಇದನ್ನೂ ಓದಿರಿ: ಉಕ್ರೇನ್‌- ರಷ್ಯಾ ಯುದ್ಧ: ಭಾರತೀಯ ವಿದ್ಯಾರ್ಥಿಯ ಮೇಲೆ ಗುಂಡಿನ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...