Homeಮುಖಪುಟಉಕ್ರೇನ್‌- ರಷ್ಯಾ ವಾರ್‌: ಯುರೋಪ್‌ನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಬೆಂಕಿ

ಉಕ್ರೇನ್‌- ರಷ್ಯಾ ವಾರ್‌: ಯುರೋಪ್‌ನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಬೆಂಕಿ

ಜಪೋರಿಝಿಯಾ ಪರಮಾಣು ಸ್ಥಾವರ ಸ್ಫೋಟಿಸಿದರೆ, ಚೋರ್ನೋಬಿಲ್‌ಗಿಂತ 10 ಪಟ್ಟು ದೊಡ್ಡ ದುರಂತವಾಗುತ್ತದೆ: ಉಕ್ರೇನ್‌

- Advertisement -
- Advertisement -

ಕೀವ್‌: ರಷ್ಯಾ ದಾಳಿಯ ಬಳಿಕ ಉಕ್ರೇನ್‌ನಲ್ಲಿರುವ ಯುರೋಪಿನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಲು ಸಾಧ್ಯವಾಗುತ್ತಿಲ್ಲ. ಏಕೆಂದರೆ ರಷ್ಯಾದ ಪಡೆಗಳು ಅಗ್ನಿಶಾಮಕ ದಳದ ಮೇಲೆ ಗುಂಡಿನ ದಾಳಿ ಮುಂದುವರಿಸಿವೆ ಎಂದು ಜಪೋರಿಝಿಯಾ ಪರಮಾಣು ಸ್ಥಾವರದ ಬಳಿಯ ಪಟ್ಟಣದ ಮೇಯರ್ ತಿಳಿಸಿದ್ದಾರೆ.

“ಝಪೊರಿಝಿಯಾ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ರಷ್ಯಾದ ಪಡೆಗಳು ಕ್ಷಪಣಿ ದಾಳಿ ನಡೆಸಿದ ಪರಿಣಾಮವಾಗಿ ಬೆಂಕಿ ಕಾಣಿಸಿಕೊಂಡಿದೆ” ಎಂದು ಇಲ್ಲಿನ ವಕ್ತಾರ ಆಂಡ್ರೇ ತುಜ್ ವಿಡಿಯೊ ಮೂಲಕ ತಿಳಿಸಿದ್ದಾರೆ. ಯಾವುದೇ ವಿಕಿರಣ ಘಟನೆ ಸಂಭವಿಸಬಹುದೇ ಎಂದು ನಿಕಟವಾಗಿ ಗಮನಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ತಕ್ಷಣದಲ್ಲಿ ವಿಕಿರಣ ಘಟನೆ ವರದಿಯಾಗಿಲ್ಲ. ಅಗತ್ಯ ಉಪಕರಣಗಳು ಬೆಂಕಿಗೆ ಸಿಲುಕಿಲ್ಲ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ. ಆದರೆ ಆಕ್ರಮಣಕಾರಿ ಪಡೆಗಳು ಮುಂದೆ ಏನು ಮಾಡಬಹುದು ಎಂಬುದು ಸ್ಪಷ್ಟವಾಗಿಲ್ಲ.

ಚೆರ್ನೋಬಿಲ್ ಪರಮಾಣು ದುರಂತವನ್ನು “ಪುನರಾವರ್ತನೆ” ಮಾಡಲು ರಷ್ಯಾ ಪ್ರಯತ್ನಿಸುತ್ತಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮರ್ ಝೆಲೆನ್ಸ್ಕಿ ಆರೋಪಿಸಿದ್ದಾರೆ. ಜಪೋರಿಝಿಯಾ ಪರಮಾಣು ಸ್ಥಾವರದಲ್ಲಿನ ಬಿಕ್ಕಟ್ಟಿನ ಬಗ್ಗೆ ಯುಎಸ್ ಅಧ್ಯಕ್ಷ ಜೋ ಬಿಡನ್ ಸೇರಿದಂತೆ ಅಂತಾರಾಷ್ಟ್ರೀಯ ನಾಯಕರೊಂದಿಗೆ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ.

“ರಷ್ಯಾ ಹೊರತುಪಡಿಸಿ ಯಾವುದೇ ದೇಶವು ಪರಮಾಣು ಶಕ್ತಿ ಘಟಕಗಳ ಮೇಲೆ ಗುಂಡು ಹಾರಿಸಿಲ್ಲ” ಎಂದು ಝೆಲೆನ್ಸ್ಕಿ ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ.

ಯುರೋಪಿನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ಬೆಂಕಿ ಕಾಣಿಸಿಕೊಂಡ ನಂತರ ದಾಳಿಯನ್ನು ನಿಲ್ಲಿಸುವಂತೆ ರಷ್ಯಾದ ಪಡೆಗಳಿಗೆ ಉಕ್ರೇನಿಯನ್ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಶುಕ್ರವಾರ ಕರೆ ನೀಡಿದ್ದಾರೆ.

ಆಗ್ನೇಯ ಉಕ್ರೇನ್‌ನ ಕೈಗಾರಿಕಾ ನಗರವಾದ ಜಪೋರಿಝಿಯಾದಲ್ಲಿನ ಈ ಸ್ಥಾವರವು ದೇಶದ ಪರಮಾಣು ಶಕ್ತಿಯ ಅಂದಾಜು 40 ಪ್ರತಿಶತವನ್ನು ಪೂರೈಸುತ್ತದೆ.

“ಜಪೋರಿಝಿಯಾ ಸ್ಥಾವರ ಸ್ಫೋಟಿಸಿದರೆ, ಚೋರ್ನೋಬಿಲ್‌ಗಿಂತ 10 ಪಟ್ಟು ದೊಡ್ಡ ದುರಂತವಾಗುತ್ತದೆ. ರಷ್ಯನ್ನರು ತಕ್ಷಣವೇ ಬೆಂಕಿಯನ್ನು ನಿಲ್ಲಿಸಬೇಕು.  ಅಗ್ನಿಶಾಮಕ ಸಿಬ್ಬಂದಿಗೆ ಅವಕಾಶ ನೀಡಬೇಕು. ಭದ್ರತಾ ವಲಯವನ್ನು ಸ್ಥಾಪಿಸಬೇಕು” ಎಂದು ಕುಲೇಬಾ ಟ್ವೀಟ್ ಮಾಡಿದ್ದಾರೆ.

ರಷ್ಯಾದ ಪಡೆಗಳು “ಎಲ್ಲಾ ಕಡೆಯಿಂದ” ಗುಂಡು ಹಾರಿಸುತ್ತಿವೆ ಎಂದು ಅವರು ಬರೆದಿದ್ದಾರೆ.

1986ರ ಚೆರ್ನೋಬಿಲ್ ದುರಂತದ ಸ್ಥಳವನ್ನು ಒಳಗೊಂಡಂತೆ ಉಕ್ರೇನ್‌ನ ಪರಮಾಣು ಸ್ಥಳಗಳಲ್ಲಿನ ಎಲ್ಲಾ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಯುಎನ್‌ನ ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆಯು ವಿಶ್ವಸಂಸ್ಥೆಯಲ್ಲಿ ಈಗಾಗಲೇ ರಷ್ಯಾವನ್ನು ಒತ್ತಾಯಿಸಿದೆ.


ಇದನ್ನೂ ಓದಿರಿ: ಉಕ್ರೇನ್‌- ರಷ್ಯಾ ಯುದ್ಧ: ಭಾರತೀಯ ವಿದ್ಯಾರ್ಥಿಯ ಮೇಲೆ ಗುಂಡಿನ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...