Homeಮುಖಪುಟಉಕ್ರೇನ್‌- ರಷ್ಯಾ ವಾರ್‌: ಯುರೋಪ್‌ನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಬೆಂಕಿ

ಉಕ್ರೇನ್‌- ರಷ್ಯಾ ವಾರ್‌: ಯುರೋಪ್‌ನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಬೆಂಕಿ

ಜಪೋರಿಝಿಯಾ ಪರಮಾಣು ಸ್ಥಾವರ ಸ್ಫೋಟಿಸಿದರೆ, ಚೋರ್ನೋಬಿಲ್‌ಗಿಂತ 10 ಪಟ್ಟು ದೊಡ್ಡ ದುರಂತವಾಗುತ್ತದೆ: ಉಕ್ರೇನ್‌

- Advertisement -
- Advertisement -

ಕೀವ್‌: ರಷ್ಯಾ ದಾಳಿಯ ಬಳಿಕ ಉಕ್ರೇನ್‌ನಲ್ಲಿರುವ ಯುರೋಪಿನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಲು ಸಾಧ್ಯವಾಗುತ್ತಿಲ್ಲ. ಏಕೆಂದರೆ ರಷ್ಯಾದ ಪಡೆಗಳು ಅಗ್ನಿಶಾಮಕ ದಳದ ಮೇಲೆ ಗುಂಡಿನ ದಾಳಿ ಮುಂದುವರಿಸಿವೆ ಎಂದು ಜಪೋರಿಝಿಯಾ ಪರಮಾಣು ಸ್ಥಾವರದ ಬಳಿಯ ಪಟ್ಟಣದ ಮೇಯರ್ ತಿಳಿಸಿದ್ದಾರೆ.

“ಝಪೊರಿಝಿಯಾ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ರಷ್ಯಾದ ಪಡೆಗಳು ಕ್ಷಪಣಿ ದಾಳಿ ನಡೆಸಿದ ಪರಿಣಾಮವಾಗಿ ಬೆಂಕಿ ಕಾಣಿಸಿಕೊಂಡಿದೆ” ಎಂದು ಇಲ್ಲಿನ ವಕ್ತಾರ ಆಂಡ್ರೇ ತುಜ್ ವಿಡಿಯೊ ಮೂಲಕ ತಿಳಿಸಿದ್ದಾರೆ. ಯಾವುದೇ ವಿಕಿರಣ ಘಟನೆ ಸಂಭವಿಸಬಹುದೇ ಎಂದು ನಿಕಟವಾಗಿ ಗಮನಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ತಕ್ಷಣದಲ್ಲಿ ವಿಕಿರಣ ಘಟನೆ ವರದಿಯಾಗಿಲ್ಲ. ಅಗತ್ಯ ಉಪಕರಣಗಳು ಬೆಂಕಿಗೆ ಸಿಲುಕಿಲ್ಲ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ. ಆದರೆ ಆಕ್ರಮಣಕಾರಿ ಪಡೆಗಳು ಮುಂದೆ ಏನು ಮಾಡಬಹುದು ಎಂಬುದು ಸ್ಪಷ್ಟವಾಗಿಲ್ಲ.

ಚೆರ್ನೋಬಿಲ್ ಪರಮಾಣು ದುರಂತವನ್ನು “ಪುನರಾವರ್ತನೆ” ಮಾಡಲು ರಷ್ಯಾ ಪ್ರಯತ್ನಿಸುತ್ತಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮರ್ ಝೆಲೆನ್ಸ್ಕಿ ಆರೋಪಿಸಿದ್ದಾರೆ. ಜಪೋರಿಝಿಯಾ ಪರಮಾಣು ಸ್ಥಾವರದಲ್ಲಿನ ಬಿಕ್ಕಟ್ಟಿನ ಬಗ್ಗೆ ಯುಎಸ್ ಅಧ್ಯಕ್ಷ ಜೋ ಬಿಡನ್ ಸೇರಿದಂತೆ ಅಂತಾರಾಷ್ಟ್ರೀಯ ನಾಯಕರೊಂದಿಗೆ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ.

“ರಷ್ಯಾ ಹೊರತುಪಡಿಸಿ ಯಾವುದೇ ದೇಶವು ಪರಮಾಣು ಶಕ್ತಿ ಘಟಕಗಳ ಮೇಲೆ ಗುಂಡು ಹಾರಿಸಿಲ್ಲ” ಎಂದು ಝೆಲೆನ್ಸ್ಕಿ ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ.

ಯುರೋಪಿನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ಬೆಂಕಿ ಕಾಣಿಸಿಕೊಂಡ ನಂತರ ದಾಳಿಯನ್ನು ನಿಲ್ಲಿಸುವಂತೆ ರಷ್ಯಾದ ಪಡೆಗಳಿಗೆ ಉಕ್ರೇನಿಯನ್ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಶುಕ್ರವಾರ ಕರೆ ನೀಡಿದ್ದಾರೆ.

ಆಗ್ನೇಯ ಉಕ್ರೇನ್‌ನ ಕೈಗಾರಿಕಾ ನಗರವಾದ ಜಪೋರಿಝಿಯಾದಲ್ಲಿನ ಈ ಸ್ಥಾವರವು ದೇಶದ ಪರಮಾಣು ಶಕ್ತಿಯ ಅಂದಾಜು 40 ಪ್ರತಿಶತವನ್ನು ಪೂರೈಸುತ್ತದೆ.

“ಜಪೋರಿಝಿಯಾ ಸ್ಥಾವರ ಸ್ಫೋಟಿಸಿದರೆ, ಚೋರ್ನೋಬಿಲ್‌ಗಿಂತ 10 ಪಟ್ಟು ದೊಡ್ಡ ದುರಂತವಾಗುತ್ತದೆ. ರಷ್ಯನ್ನರು ತಕ್ಷಣವೇ ಬೆಂಕಿಯನ್ನು ನಿಲ್ಲಿಸಬೇಕು.  ಅಗ್ನಿಶಾಮಕ ಸಿಬ್ಬಂದಿಗೆ ಅವಕಾಶ ನೀಡಬೇಕು. ಭದ್ರತಾ ವಲಯವನ್ನು ಸ್ಥಾಪಿಸಬೇಕು” ಎಂದು ಕುಲೇಬಾ ಟ್ವೀಟ್ ಮಾಡಿದ್ದಾರೆ.

ರಷ್ಯಾದ ಪಡೆಗಳು “ಎಲ್ಲಾ ಕಡೆಯಿಂದ” ಗುಂಡು ಹಾರಿಸುತ್ತಿವೆ ಎಂದು ಅವರು ಬರೆದಿದ್ದಾರೆ.

1986ರ ಚೆರ್ನೋಬಿಲ್ ದುರಂತದ ಸ್ಥಳವನ್ನು ಒಳಗೊಂಡಂತೆ ಉಕ್ರೇನ್‌ನ ಪರಮಾಣು ಸ್ಥಳಗಳಲ್ಲಿನ ಎಲ್ಲಾ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಯುಎನ್‌ನ ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆಯು ವಿಶ್ವಸಂಸ್ಥೆಯಲ್ಲಿ ಈಗಾಗಲೇ ರಷ್ಯಾವನ್ನು ಒತ್ತಾಯಿಸಿದೆ.


ಇದನ್ನೂ ಓದಿರಿ: ಉಕ್ರೇನ್‌- ರಷ್ಯಾ ಯುದ್ಧ: ಭಾರತೀಯ ವಿದ್ಯಾರ್ಥಿಯ ಮೇಲೆ ಗುಂಡಿನ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....