Homeಮುಖಪುಟಉಕ್ರೇನ್‌- ರಷ್ಯಾ ವಾರ್‌: ಯುರೋಪ್‌ನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಬೆಂಕಿ

ಉಕ್ರೇನ್‌- ರಷ್ಯಾ ವಾರ್‌: ಯುರೋಪ್‌ನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಬೆಂಕಿ

ಜಪೋರಿಝಿಯಾ ಪರಮಾಣು ಸ್ಥಾವರ ಸ್ಫೋಟಿಸಿದರೆ, ಚೋರ್ನೋಬಿಲ್‌ಗಿಂತ 10 ಪಟ್ಟು ದೊಡ್ಡ ದುರಂತವಾಗುತ್ತದೆ: ಉಕ್ರೇನ್‌

- Advertisement -
- Advertisement -

ಕೀವ್‌: ರಷ್ಯಾ ದಾಳಿಯ ಬಳಿಕ ಉಕ್ರೇನ್‌ನಲ್ಲಿರುವ ಯುರೋಪಿನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಲು ಸಾಧ್ಯವಾಗುತ್ತಿಲ್ಲ. ಏಕೆಂದರೆ ರಷ್ಯಾದ ಪಡೆಗಳು ಅಗ್ನಿಶಾಮಕ ದಳದ ಮೇಲೆ ಗುಂಡಿನ ದಾಳಿ ಮುಂದುವರಿಸಿವೆ ಎಂದು ಜಪೋರಿಝಿಯಾ ಪರಮಾಣು ಸ್ಥಾವರದ ಬಳಿಯ ಪಟ್ಟಣದ ಮೇಯರ್ ತಿಳಿಸಿದ್ದಾರೆ.

“ಝಪೊರಿಝಿಯಾ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ರಷ್ಯಾದ ಪಡೆಗಳು ಕ್ಷಪಣಿ ದಾಳಿ ನಡೆಸಿದ ಪರಿಣಾಮವಾಗಿ ಬೆಂಕಿ ಕಾಣಿಸಿಕೊಂಡಿದೆ” ಎಂದು ಇಲ್ಲಿನ ವಕ್ತಾರ ಆಂಡ್ರೇ ತುಜ್ ವಿಡಿಯೊ ಮೂಲಕ ತಿಳಿಸಿದ್ದಾರೆ. ಯಾವುದೇ ವಿಕಿರಣ ಘಟನೆ ಸಂಭವಿಸಬಹುದೇ ಎಂದು ನಿಕಟವಾಗಿ ಗಮನಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ತಕ್ಷಣದಲ್ಲಿ ವಿಕಿರಣ ಘಟನೆ ವರದಿಯಾಗಿಲ್ಲ. ಅಗತ್ಯ ಉಪಕರಣಗಳು ಬೆಂಕಿಗೆ ಸಿಲುಕಿಲ್ಲ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ. ಆದರೆ ಆಕ್ರಮಣಕಾರಿ ಪಡೆಗಳು ಮುಂದೆ ಏನು ಮಾಡಬಹುದು ಎಂಬುದು ಸ್ಪಷ್ಟವಾಗಿಲ್ಲ.

ಚೆರ್ನೋಬಿಲ್ ಪರಮಾಣು ದುರಂತವನ್ನು “ಪುನರಾವರ್ತನೆ” ಮಾಡಲು ರಷ್ಯಾ ಪ್ರಯತ್ನಿಸುತ್ತಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮರ್ ಝೆಲೆನ್ಸ್ಕಿ ಆರೋಪಿಸಿದ್ದಾರೆ. ಜಪೋರಿಝಿಯಾ ಪರಮಾಣು ಸ್ಥಾವರದಲ್ಲಿನ ಬಿಕ್ಕಟ್ಟಿನ ಬಗ್ಗೆ ಯುಎಸ್ ಅಧ್ಯಕ್ಷ ಜೋ ಬಿಡನ್ ಸೇರಿದಂತೆ ಅಂತಾರಾಷ್ಟ್ರೀಯ ನಾಯಕರೊಂದಿಗೆ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ.

“ರಷ್ಯಾ ಹೊರತುಪಡಿಸಿ ಯಾವುದೇ ದೇಶವು ಪರಮಾಣು ಶಕ್ತಿ ಘಟಕಗಳ ಮೇಲೆ ಗುಂಡು ಹಾರಿಸಿಲ್ಲ” ಎಂದು ಝೆಲೆನ್ಸ್ಕಿ ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ.

ಯುರೋಪಿನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ಬೆಂಕಿ ಕಾಣಿಸಿಕೊಂಡ ನಂತರ ದಾಳಿಯನ್ನು ನಿಲ್ಲಿಸುವಂತೆ ರಷ್ಯಾದ ಪಡೆಗಳಿಗೆ ಉಕ್ರೇನಿಯನ್ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಶುಕ್ರವಾರ ಕರೆ ನೀಡಿದ್ದಾರೆ.

ಆಗ್ನೇಯ ಉಕ್ರೇನ್‌ನ ಕೈಗಾರಿಕಾ ನಗರವಾದ ಜಪೋರಿಝಿಯಾದಲ್ಲಿನ ಈ ಸ್ಥಾವರವು ದೇಶದ ಪರಮಾಣು ಶಕ್ತಿಯ ಅಂದಾಜು 40 ಪ್ರತಿಶತವನ್ನು ಪೂರೈಸುತ್ತದೆ.

“ಜಪೋರಿಝಿಯಾ ಸ್ಥಾವರ ಸ್ಫೋಟಿಸಿದರೆ, ಚೋರ್ನೋಬಿಲ್‌ಗಿಂತ 10 ಪಟ್ಟು ದೊಡ್ಡ ದುರಂತವಾಗುತ್ತದೆ. ರಷ್ಯನ್ನರು ತಕ್ಷಣವೇ ಬೆಂಕಿಯನ್ನು ನಿಲ್ಲಿಸಬೇಕು.  ಅಗ್ನಿಶಾಮಕ ಸಿಬ್ಬಂದಿಗೆ ಅವಕಾಶ ನೀಡಬೇಕು. ಭದ್ರತಾ ವಲಯವನ್ನು ಸ್ಥಾಪಿಸಬೇಕು” ಎಂದು ಕುಲೇಬಾ ಟ್ವೀಟ್ ಮಾಡಿದ್ದಾರೆ.

ರಷ್ಯಾದ ಪಡೆಗಳು “ಎಲ್ಲಾ ಕಡೆಯಿಂದ” ಗುಂಡು ಹಾರಿಸುತ್ತಿವೆ ಎಂದು ಅವರು ಬರೆದಿದ್ದಾರೆ.

1986ರ ಚೆರ್ನೋಬಿಲ್ ದುರಂತದ ಸ್ಥಳವನ್ನು ಒಳಗೊಂಡಂತೆ ಉಕ್ರೇನ್‌ನ ಪರಮಾಣು ಸ್ಥಳಗಳಲ್ಲಿನ ಎಲ್ಲಾ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಯುಎನ್‌ನ ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆಯು ವಿಶ್ವಸಂಸ್ಥೆಯಲ್ಲಿ ಈಗಾಗಲೇ ರಷ್ಯಾವನ್ನು ಒತ್ತಾಯಿಸಿದೆ.


ಇದನ್ನೂ ಓದಿರಿ: ಉಕ್ರೇನ್‌- ರಷ್ಯಾ ಯುದ್ಧ: ಭಾರತೀಯ ವಿದ್ಯಾರ್ಥಿಯ ಮೇಲೆ ಗುಂಡಿನ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...