Homeಮುಖಪುಟರಷ್ಯಾ ಸೇನಾ ಕಸರತ್ತು: ಉಕ್ರೇನ್‌ ತೊರೆಯುವಂತೆ ಅಮೆರಿಕನ್‌‌ ನಾಗರಿಕರಿಗೆ ಜೋ ಬೈಡನ್‌‌ ಕರೆ

ರಷ್ಯಾ ಸೇನಾ ಕಸರತ್ತು: ಉಕ್ರೇನ್‌ ತೊರೆಯುವಂತೆ ಅಮೆರಿಕನ್‌‌ ನಾಗರಿಕರಿಗೆ ಜೋ ಬೈಡನ್‌‌ ಕರೆ

- Advertisement -
- Advertisement -

ರಷ್ಯಾದ ಸೇನಾ ಬೆದರಿಕೆ ಹೆಚ್ಚಿರುವ ಕಾರಣ ಉಕ್ರೇನ್‌ನಲ್ಲಿ ಉಳಿದಿರುವ ಎಲ್ಲ ಅಮೆರಿಕನ್ ನಾಗರಿಕರು ತಕ್ಷಣವೇ ದೇಶವನ್ನು ತೊರೆಯಬೇಕು ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್‌‌ ಕರೆ ನೀಡಿದ್ದಾರೆ.

ಉಕ್ರೇನ್ ಮೇಲೆ ಮಾಸ್ಕೋ ಆಕ್ರಮಣ ಮಾಡಿದರೆ ಅಮೆರಿಕನ್ನರನ್ನು ರಕ್ಷಿಸಲು ಪಡೆಗಳನ್ನು ಕಳುಹಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಪರಿಸ್ಥಿತಿ ಸ್ಥಿಮಿತ ಕಳೆದುಕೊಳ್ಳಬಹುದು ಎಂದು ಬೈಡನ್‌ ಎಚ್ಚರಿಸಿರುವುದಾಗಿ ಬಿಬಿಸಿ ವರದಿ ಮಾಡಿದೆ.

ಗಡಿಯಲ್ಲಿ 1,00,000ಕ್ಕೂ ಹೆಚ್ಚು ಸೈನಿಕರನ್ನು ಹೊಂದಿದ್ದರೂ ಉಕ್ರೇನ್ ಮೇಲೆ ಆಕ್ರಮಣ ಮಾಡುವ ಯಾವುದೇ ಯೋಜನೆಯನ್ನು ರಷ್ಯಾ ಪದೇ ಪದೇ ನಿರಾಕರಿಸಿದೆ.

PC: BBC

ಮುಂದಿನ ವಾರದಲ್ಲಿ ರಷ್ಯಾ ನೌಕಾ ಸಮರಾಭ್ಯಾಸಕ್ಕೆ ತಯಾರಿ ನಡೆಸುತ್ತಿದ್ದು, ಈ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ರಷ್ಯಾ ಸಮುದ್ರಕ್ಕೆ ತನ್ನ ಪ್ರವೇಶವನ್ನು ನಿರ್ಬಂಧಿಸುತ್ತಿದೆ ಎಂದು ಉಕ್ರೇನ್ ಆರೋಪಿಸಿದೆ.

ಅಜೋವ್ ಸಮುದ್ರಕ್ಕೆ ಪ್ರವೇಶಿಸುವುದನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ. ರಷ್ಯಾದ ಸೇನೆಗಳು ಕಪ್ಪು ಸಮುದ್ರದ ಸಂಪರ್ಕವನ್ನು ಕತ್ತರಿಸಿ ಹಾಕಿವೆ ಎಂದು ಉಕ್ರೇನಿನ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಹೇಳಿದ್ದಾರೆ.

ನೆರೆಯ ಬೆಲಾರಸ್‌ನೊಂದಿಗೆ ಬೃಹತ್ ಮಿಲಿಟರಿ ಕಸರತ್ತುಗಳನ್ನು ರಷ್ಯಾ ಪ್ರಾರಂಭಿಸಿದೆ. ಬೆಲಾರಸ್ ರಷ್ಯಾದ ನಿಕಟ ಮಿತ್ರರಾಷ್ಟ್ರವಾಗಿದೆ. ಉಕ್ರೇನ್‌ನೊಂದಿಗೆ ಸುದೀರ್ಘವಾದ ಗಡಿಯನ್ನು ಹೊಂದಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಾನ್ಸ್, “ಶೀತಲ ಸಮರದ ನಂತರ ಬೆಲಾರಸ್‌ಗೆ ರಷ್ಯಾದ ಅತಿದೊಡ್ಡ ನಿಯೋಜನೆ ಇದೆಂದು ನಂಬಲಾಗಿದೆ. ಇದು ಹಿಂಸೆಯ ಮುನ್ಸೂಚನೆ” ಎಂದಿದೆ. ಈ ಬೆಳವಣಿಗೆಯನ್ನು ಉಕ್ರೇನ್, “ಮಾನಸಿಕ ಒತ್ತಡ” ಎಂದು ಪರಿಗಣಿಸಿದೆ.

ಉಕ್ರೇನ್‌ನ ದಕ್ಷಿಣ ಭಾಗದಲ್ಲಿರುವ ಕಪ್ಪು ಸಮುದ್ರ ಮತ್ತು ಅಜೋವ್ ಸಮುದ್ರದಲ್ಲಿ ಮುಂದಿನ ವಾರ ರಷ್ಯಾದ ನೌಕಾ ಸಮರಾಭ್ಯಾಸ ನಡೆಯಲಿದೆ. ಕ್ಷಿಪಣಿ ಮತ್ತು ಗುಂಡಿನ ದಾಳಿಯ ಕಸರತ್ತುಗಳನ್ನು ಉಲ್ಲೇಖಿಸಿರುವ ರಷ್ಯಾ ಕರಾವಳಿ ಭಾಗದಲ್ಲಿ ಎಚ್ಚರಿಕೆಗಳನ್ನು ನೀಡಿದೆ.

ಉಕ್ರೇನ್‌ನಲ್ಲಿರುವ ಯುಎಸ್ ರಾಯಭಾರ ಕಚೇರಿ ಈ ಬೆಳವಣಿಗೆಗಳ ಕುರಿತು ಆತಂಕ ವ್ಯಕ್ತಪಡಿಸಿದ್ದು, “ಮಿಲಿಟರಿ ಕಸರತ್ತಿನ ನೆಪದಲ್ಲಿ ಉಕ್ರೇನ್‌ನ ಕಡಲ ಸಾರ್ವಭೌಮತ್ವವನ್ನು ರಷ್ಯಾ ನಿರ್ಬಂಧಿಸಲಿದೆ. ಕಪ್ಪು ಸಮುದ್ರ, ಅಜೋವ್ ಸಮುದ್ರದಲ್ಲಿ ನೌಕಾ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಲಿದೆ. ಉಕ್ರೇನ್‌ನ ಆರ್ಥಿಕತೆಗೆ ಅಗತ್ಯವಾದ ಸಮುದ್ರ ಮಾರ್ಗಕ್ಕೆ ಅಡ್ಡಿಪಡಿಸಲಿದೆ” ಎಂದು ಟ್ವೀಟ್ ಮಾಡಿದೆ.


ಇದನ್ನೂ ಓದಿರಿ: ವಿವಾದಕ್ಕೆ ಎಡೆಮಾಡಿಕೊಟ್ಟ ವಿದೇಶಿ ಕಂಪನಿಗಳ ಸಾಮಾಜಿಕ ಜಾಲತಾಣಗಳ ಪೋಸ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...