Homeಕರ್ನಾಟಕಎಸ್.ಬಂಗಾರಪ್ಪನವರ 87ನೇ ಜನ್ಮದಿನ: ಆತ್ಮವಿಶ್ವಾಸದ ಪ್ರತೀಕ...

ಎಸ್.ಬಂಗಾರಪ್ಪನವರ 87ನೇ ಜನ್ಮದಿನ: ಆತ್ಮವಿಶ್ವಾಸದ ಪ್ರತೀಕ…

ಇದೆಲ್ಲಾ ನೋಡಿದ ದಾರಿಹೋಕನೊಬ್ಬನ ಬಾಯಿಂದ ಹೊರಬಿದ್ದ ಮಾತೆಂದೆರೆ... "ಬದುಕಿದ್ದಾಗ್ಲೇ ಬಂಗಾರಪ್ಪನ್ನ ಸಮಾಧಿ ಮಾಡಿ ಈಗ ಅವ್ರ ಸ್ಮಾರಕ ಮಾಡೋಕೆ ಕಾಸು ಕೊಟ್ಟವ್ರೆ" ! ಥೂ.....!

- Advertisement -
- Advertisement -

2009 ರ ಲೋಕಸಭಾ ಚುನಾವಣೆಯ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಎಸ್.ಬಂಗಾರಪ್ಪ ಅವರ ಪಾಲಿಗೆ ಈ ಚುನಾವಣೆ “ಮಾಡು ಇಲ್ಲ ಮಡಿ” ಎಂಬ ವಿರೋಚಿತ ಹೋರಾಟವೇ ಆಗಿತ್ತು.

ಮುಖ್ಯಮಂತ್ರಿಯಾಗಿದ್ದ ಬಿ.ಎಸ್ ಯಡಿಯೂರಪ್ಪ ತಮ್ಮ ಮಗ ಬಿ.ವೈ ರಾಘವೇಂದ್ರ ನನ್ನು ಕಣಕ್ಕಿಳಿಸಿದ್ದರು. ದೈತ ಅಧಿಕಾರ ಬಲ, ಹಣ ಬಲ, ಜಾತಿ ಬಲದ ಉತ್ತುಂಗದಲ್ಲಿದ್ದ ಯಡಿಯೂರಪ್ಪ ಅವರ ವಿರುದ್ಧ ಕುಸಿದ ಆರೋಗ್ಯ, ತಮ್ಮವರದ್ದೇ ವಿದ್ರೋಹಗಳಿಗೆ ಸಿಕ್ಕು ಬರಿಗೈ ಆದ ಬಂಗಾರಪ್ಪ ಅವರ ಬಳಿ ಉಳಿದದ್ದು ಅವರು ಜನರ ಮೇಲಿಟ್ಟಿದ್ದ ಅದಮ್ಯ ವಿಶ್ವಾಸ ಮತ್ತು ತಮ್ಮ ಎಂದಿನಂತೆ ಜನ್ಮಜಾತ ಛಲಗುಣ ಮಾತ್ರ.

ಇಡೀ ರಾಜ್ಯ ಇತರೆ ಲೋಕಸಭಾ ಕ್ಷೇತ್ರಗಳ ಚುನಾವಣೆಯೇ ಒಂದು ತೂಕವಾದರೆ, ಶಿವಮೊಗ್ಗ ಕ್ಷೇತ್ರದ ಚುನಾವಣೆಯೇ ಅವುಗಳಿಗೆ ಸರಿಸಮ ತೂಗುವ ಚುನಾವಣೆ ಆಗಿತ್ತು.

ಮತದಾನಕ್ಕೆ ಇನ್ನೂ ಆರು ದಿನ ಉಳಿದಿತ್ತು. ಶಿವಮೊಗ್ಗದ ಬಾಡಿಗೆ ಮನೆಯೊಂದರಲ್ಲಿ ಸೋಪಾ ಮೇಲೆ ದಿವ್ಯ ಮೌನ ಧರಿಸಿ ಕುಳಿತಿದ್ದರು ಬಂಗಾರಪ್ಪ.

ಕಾಗೋಡು ತಿಮ್ಮಪ್ಪ, ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಸೇರಿದಂತೆ ಪ್ರಮುಖ ಮುಖಂಡರು ಬಂಗಾರಪ್ಪ ಅವರ ಮುಂದೆ ಕುಳಿತು  ‘ಸರ್ ಚುನಾವಣೆ ಗೆ ಸ್ವಲ್ಪ ದುಡ್ಡು ಬೇಕು. ಒಂದೆರೆಡು ಕೋಟಿ ಆದರೆ ಗೆಲುವು ನಮ್ಮದೆ’ ಎಂದು ಮನವಿ ಸಲ್ಲಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಚುನಾವಣೆಯ “ತಂತ್ರ” ಗಳಿಗೆ ಮತದಾನಕ್ಕೆ ಮುಂಚೆಯೇ ಕಾಂಗ್ರೆಸ್‌ ಧೂಳಿಪಟವಾಗಿತ್ತು. ಮೌನ ಮುರಿದ ಬಂಗಾರಪ್ಪ ” ನೋ…. ನನ್ನತ್ರ ದುಡ್ಡಿಲ್ಲ, ಇಷ್ಟ‌ಇದ್ರೆ ಪಕ್ಷದಿಂದ ಕೆಲ್ಸ ಮಾಡಿ‌ ಇಲ್ಲವಾದರೆ ಬಿಟ್ಟೋಗಿ” ಎಂದು ಗುಡುಗಿಬಿಟ್ಟರು.

ಹಣ ವ್ಯವಸ್ಥೆಗೆ ಕಾಗೋಡು ತಿಮ್ಮಪ್ಪ ಮಾಡಿದ ಪ್ರಯತ್ನಗಳೆಲ್ಲಾ ಬಂಗಾರಪ್ಪನವರ ಮುಂದೆ ಫಲ ಕೊಡಲಿಲ್ಲ.
ಬಂಗಾರಪ್ಪ ಅಕ್ಷರಶಃ ಬರಿಗೈ ಆಗಿ ಕುಳಿತಿದ್ದರು. ಮಗ ಕುಮಾರ ಬಂಗಾರಪ್ಪ ಅವರಿಂದ ಹಣಸಹಾಯ ಪಡೆಯುವ ಕಾಂಗ್ರೆಸ್‌ ಮುಖಂಡರ ಪ್ರಯತ್ನವು ನೆಗೆದುಬಿತ್ತು. ಕಾಗೋಡು ತಿಮ್ಮಪ್ಪಾದಿಯಾಗಿ ದಿಕ್ಕು ತೋಚದೆ ಎಲ್ಲರೂ ಮನೆಯಿಂದ ಹೊರಬಿದ್ದರು.

ಅದುವರೆಗೂ ಮೂಕಪ್ರೇಕ್ಷಕನಂತೆ ಸಂದರ್ಶನಕ್ಕಾಗಿ‌ ಕಾದು ಕುಳಿತಿದ್ದ ನನ್ನ ಕಡೆ ನೋಡಿದ ಬಂಗಾರಪ್ಪನವರು
ಮಾತು ಶುರುವಿಟ್ಟುಕೊಂಡರು.

ಸಂದರ್ಶನದ ಮುಗಿದ ನಂತರದ ಆಫ್ ದಿ ರೆಕಾರ್ಡ್ ನಲ್ಲಿ…

“ಸರ್, ಚುನಾವಣೆಯ ಕೊನೆಯ ಘಳಿಗೆಯಲ್ಲಿ ದುಡ್ಡಿಲ್ಲ ಅಂದ್ರೆ ಚುನಾವಣೆ ನಿಮಗೆ ಕಷ್ಟ ಆಗೋಲ್ವ”? ಎಂದೆ.

“ಸೀ ಮಿಸ್ಟರ್ ರವಿಕುಮಾರ್, (ಅವರು ವಯಸ್ಸಿನಲ್ಲಿ ಚಿಕ್ಕವರನ್ನೂ ಬಹುವಚನದಿಂದಲೆ ಮಾತಾಡಿಸುವ ವಿವೇಕ ಇಟ್ಟುಕೊಂಡವರು) ನಾನು ಮನಸ್ಸು ಮಾಡಿದರೆ ಒಂದೆರಡು ಕೋಟಿ ತರೋದು ಕಷ್ಟ ಅಲ್ಲ, ಆದರೆ ಈ ಯಡಿಯೂರಪನ ಹಡಬೆ ದುಡ್ಡಿನ ಮುಂದೆ ನನ್ನ ದುಡ್ಡು ನಡೆಯೋಲ್ಲ”

ಒಂದು‌ ಲೋಟ ಮಜ್ಜಿಗೆ ಕುಡಿದು ಸಾವಾರಿಸಿಕೊಂಡು ಮಾತು ಮುಂದುವರೆಸಿದರು…

” ರವಿಕುಮಾರ್, ಈ ಚುನಾವಣೆ ದುಡ್ಡಿನ ಮೇಲೆ ನಡೀತಿದೆ. ಯಡಿಯೂರಪ್ಪನತ್ರ ಅಧಿಕಾರ, ಹಣ, ಸಿಸ್ಟಮ್ ಇದೆ. ನಾನು ಒಂದು ಓಟಿಗೆ 500 ಕೊಟ್ರೆ ಈ ಯಡಿಯೂರಪ್ಪ ಸಾವ್ರ ಕೊಡ್ತಾರೆ, ನಾನು ಸಾವ್ರ ಕೊಟ್ರೆ, ಅವ್ರು ಎರಡ್ಸಾವ್ರ ಕೊಡ್ತಾರೆ, ಒಂದು ಬೂತ್ ಗೆ ನಾನು ಐದು ಸಾವ್ರ ಕೊಟ್ರೆ, ಅವ್ರು ಹತ್ತು‌ಕೊಡ್ತಾರೆ. ಯಡಿಯೂರಪ್ಪನ ದುಡ್ಡಿನ ಮುಂದೆ ನನ್ನ ದುಡ್ಡು ಓಡೋಲ್ಲ. ದುಡ್ಡಿನ ಮೂಲಕ ಯಡಿಯೂರಪ್ಪನನ್ನು ಈಗ ಸೋಲಿಸೋಕೆ ಆಗೋಲ್ಲ,

ಅದ್ಕೆ ನಾನು ದುಡ್ಡಿಲ್ಲದೆ ಜನರ ಮುಂದೆ ಹೋಗ್ತಿನಿ. ಜನ ದುಡ್ಡಿಗೆ ಓಟಾಕ್ತಾರೋ, ನಾನು ಜನರ ಮೇಲಿಟ್ಟಿರುವ ನಂಬಿಕೆಗೆ ಕೈ ಹಿಡಿತಾರೋ ನೋಡೇ ಬಿಡ್ತಿನಿ. It’s one experiment in my life… Mr.Ravikumar ” ನಾನು ಇಂತಹ experiment ಗಳನ್ನೆ ಮಾಡ್ಕೊಂಡ್ ಬಂದಿದಿನಿ. ಈ ಬಂಗಾರಪ್ಪ ಸೋತಿದ್ದೇ ಇಲ್ಲ.

ಈ ಜನಕ್ಕೆ ನಾನು ಬೇಕಾ? ಯಡಿಯೂರಪ್ಪನ ಹಡಬೆ ದುಡ್ಡು ಬೇಕಾ? ನೋಡೋಣ”

ಬಂಗಾರಪ್ಪ ಅವರ ಈ ಆತ್ಮವಿಶ್ವಾಸ ಕಂಡು ನನಗೆ ವಿಸ್ಮಯ ಅನಿಸಿತು. !

ಯಡಿಯೂರಪ್ಪನವರ ಅಬ್ಬರದ ಮುಂದೆ ಚುನಾವಣೆಯನ್ನು ಕಾಂಗ್ರೆಸ್‌ ಕೈ ಚೆಲ್ಲಿತ್ತು. ಅನಾರೋಗ್ಯದ ದೈಹಿಕ ನೋವು ನುಂಗಿಕೊಳ್ಳುತ್ತಲೆ ಬಂಗಾರಪ್ಪ ಏಕಾಂಗಿಯಾಗಿ ಹಳ್ಳಿ ಹಳ್ಳಿ ತಿರುಗಿದರು.

ಬಿ ವೈ ರಾಘವೇಂದ್ರ ಪರ ನಿಂತ ಮಠಗಳ ಜನ್ಮ‌ಜಾಲಾಡಿದರು. ನಾಕು ಗೊಡ್ಡೆಮ್ಮೆ ಸಾಕಿದ ಮಾತ್ರಕ್ಕೆ ಗೋ ರಕ್ಷಕನಾಗೋಲ್ಲ. ನಮ್ಮಂಗೆ ಸಗಣಿ, ಗಂಜಲ ಬಾಚಿ ಬಳಿ ಬೇಕು ಎಂದು ಈ ಭಾಗದ ಸ್ವಾಮಿಯನ್ನು ಬಹಿರಂಗವಾಗಿ ಈಡಾಡಿದರು.

ಮತದಾನದ ದಿನ ಶೇ.90 ರಷ್ಟು ಬೂತ್ ಗಳಲ್ಲಿ ಬಂಗಾರಪ್ಪ ಪರ ಹ್ಯಾಂಡ್ ಬಿಲ್ ಹಿಡಿಯಲು ಒಬ್ಬ ಕಾರ್ಯಕರ್ತ ಕಾಣಲಿಲ್ಲ. ಅವರೇ ಸೃಷ್ಟಿದ ಹಾಲಪ್ಪ, ಗೋಪಾಲಕೃಷ್ಣ ಅವರೆಲ್ಲಾ ಬೆನ್ನಿಗೆ ಇರಿದಿದ್ದರು.

ಯಡಿಯೂರಪ್ಪ ಅವರ “ಪ್ರಭಾವ” ಕ್ಕೆ ಮರುಳಾದ ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ ತನ್ನ ಬೆಂಬಲಿಗರಿಂದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ದಾಂಧಲೆ ನಡೆಸಿದರು. ಬೀಸಿ ಬಂದ ಕಲ್ಲಿಗೆ ಎದ್ದು ನಿಂತು ಎದೆ ಕೊಟ್ಟ ಬಂಗಾರಪ್ಪ ಅವರು ತೋಳೇರಿಸಿ ಅಬ್ಬರಿಸಿದರು.

ಫಲಿತಾಂಶ ಹೊರಬಿದ್ದಾಗ ಯಡಿಯೂರಪ್ಪ ಅವರ ಪುತ್ರರತ್ನ ರಾಘವೇಂದ್ರ ಕೇವಲ 52.893 ಮತಗಳಿಂದ ಗೆಲುವು ಸಾಧಿಸಿದರು.

ಬಂಗಾರಪ್ಪ ಅವರನ್ನು ಠೇವಣಿ ಕಳೆದು ಹೀನಾಯ ಸೋಲಿಗೆ ದೂಡಬೇಕೆಂದು ಸಕಲ ಸಂಪತ್ತು, ದಂಡು- ದಳ, ತಂತ್ರ, ಮಂತ್ರಗಳೊಂದಿಗೆ ಹಠಕ್ಕಿಳಿದಿದ್ದ ಯಡಿಯೂರಪ್ಪ ಫಲಿತಾಂಶದ ಲೀಡ್ ಕೇಳಿ ಕೆರಳಿ‌ ಕೆಂಡವಾದರು. ತಮ್ಮದೇ ಸಂಪುಟ ಸಚಿವ ಈಶ್ವರಪ್ಪ ನವರ ಮೇಲೆ ಹರಿಹಾಯ್ದರು ಕೂಡ. ಮಗನ ವಿಜಯೋತ್ಸವ ಅವರಿಗೆ ಅಪಥ್ಯವಾಗಿತ್ತು.

ಅಕ್ಷರಶಃ ಬರಿಗೈ ನಿರ್ಗತಿಕನಾಗಿ ನಿಂತಿದ್ದ ಬಂಗಾರಪ್ಪ ಅವರು ಕೇವಲ 52 ಸಾವಿರ ಮತಗಳ ಅಂತರದಲ್ಲಿ ತಾಂತ್ರಿಕವಾಗಿ ಸೋತಿದ್ದರು. ಆದರೆ ಜನರ ಮೇಲಿಟ್ಟಿದ್ದ ಅವರ ವಿಶ್ವಾಸ ಯಾವ ಖರೀದಿಗೂ ಒಳಗಾಗದೆ ಅವರನ್ನು ನೈತಿಕವಾಗಿ ಗೆಲ್ಲಿಸಿತ್ತು.

ಈ ಸೋಲು, ತಮ್ಮವರೇ ಎಸಗಿದ ವಿದ್ರೋಹಗಳು ಬಂಗಾರಪ್ಪ ಅವರನ್ನು ಇನ್ನಿಲ್ಲದೆ ಬಾಧಿಸಿಬಿಟ್ಟಿತು…

ಈ ನೋವನ್ನು ನುಂಗಿಕೊಂಡೆ ಅವರು ವಿರೋಚಿತವಾಗಿ ನಿರ್ಗಮಿಸಿದರು.

ಇವತ್ತು ಸೊರಬದಲ್ಲಿ ಬಂಗಾರಪ್ಪ ಅವರ 87 ನೇ ಜನ್ಮದಿನೋತ್ಸವ ಸಮಾರಂಭವನ್ನು ಪುತ್ರ ‌ಕುಮಾರ್ ಬಂಗಾರಪ್ಪ ಆಯೋಜಿಸಿದ್ದು ಇದನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ನವರು ಬಂಗಾರಪ್ಪ ಅವರನ್ನು ಕೊಂಡಾಡಿದರು. ಅವರ ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ ಬಿಡುಗಡೆ ಮಾಡುವುದಾಗಿ ಘೋಷಿಸಿದರು.

ಬದುಕಿದ್ದಾಗ ತನಗೆ ರಾಜಕೀಯ ಅಸ್ತಿತ್ವ ಕೊಟ್ಟ ತನ್ನ ಅಪ್ಪನನ್ನು ಕೌಟುಂಬಿಕವಾಗಿ, ರಾಜಕೀಯವಾಗಿ ಕಾಡಿದ ಕುಮಾರ ಬಂಗಾರಪ್ಪ ಇದ್ದಕ್ಕಿದ್ದಂತೆ ಅಪ್ಪನ ಜನ್ಮದಿನವನ್ನು ಅದ್ಧೂರಿಯಾಗಿ ನಡೆಸಿದರು. ಅದನ್ನು ಯಡಿಯೂರಪ್ಪ ಉದ್ಘಾಟಿಸಿದರು. ಎಂತಹ ವೈರುಧ್ಯ ನೋಡಿ!

ಇದೆಲ್ಲಾ ನೋಡಿದ ದಾರಿಹೋಕನೊಬ್ಬನ ಬಾಯಿಂದ ಹೊರಬಿದ್ದ ಮಾತೆಂದೆರೆ…

“ಬದುಕಿದ್ದಾಗ್ಲೇ ಬಂಗಾರಪ್ಪನ್ನ ಸಮಾಧಿ ಮಾಡಿ ಈಗ ಅವ್ರ ಸ್ಮಾರಕ ಮಾಡೋಕೆ ಕಾಸು ಕೊಟ್ಟವ್ರೆ” ! ಥೂ…..!

ಅದೇನೆ ಇರಲಿ, ಬಂಗಾರಪ್ಪ ಸರ್ ನಿಮಗೆ‌ ಜನ್ಮದಿನದ ಶುಭಾಶಯಗಳು.

  • ಎನ್.ರವಿಕುಮಾರ್ ಟೆಲೆಕ್ಸ್

(ರವಿಕುಮಾರ್ ಪತ್ರಕರ್ತರು ಮತ್ತು ಯುವ ಬರಹಗಾರರು. ಅಭಿಪ್ರಾಯಗಳು ವೈಯಕ್ತಿಕವಾದವುಗಳು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...