Homeಕರ್ನಾಟಕಎಸ್.ಬಂಗಾರಪ್ಪನವರ 87ನೇ ಜನ್ಮದಿನ: ಆತ್ಮವಿಶ್ವಾಸದ ಪ್ರತೀಕ...

ಎಸ್.ಬಂಗಾರಪ್ಪನವರ 87ನೇ ಜನ್ಮದಿನ: ಆತ್ಮವಿಶ್ವಾಸದ ಪ್ರತೀಕ…

ಇದೆಲ್ಲಾ ನೋಡಿದ ದಾರಿಹೋಕನೊಬ್ಬನ ಬಾಯಿಂದ ಹೊರಬಿದ್ದ ಮಾತೆಂದೆರೆ... "ಬದುಕಿದ್ದಾಗ್ಲೇ ಬಂಗಾರಪ್ಪನ್ನ ಸಮಾಧಿ ಮಾಡಿ ಈಗ ಅವ್ರ ಸ್ಮಾರಕ ಮಾಡೋಕೆ ಕಾಸು ಕೊಟ್ಟವ್ರೆ" ! ಥೂ.....!

- Advertisement -
- Advertisement -

2009 ರ ಲೋಕಸಭಾ ಚುನಾವಣೆಯ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಎಸ್.ಬಂಗಾರಪ್ಪ ಅವರ ಪಾಲಿಗೆ ಈ ಚುನಾವಣೆ “ಮಾಡು ಇಲ್ಲ ಮಡಿ” ಎಂಬ ವಿರೋಚಿತ ಹೋರಾಟವೇ ಆಗಿತ್ತು.

ಮುಖ್ಯಮಂತ್ರಿಯಾಗಿದ್ದ ಬಿ.ಎಸ್ ಯಡಿಯೂರಪ್ಪ ತಮ್ಮ ಮಗ ಬಿ.ವೈ ರಾಘವೇಂದ್ರ ನನ್ನು ಕಣಕ್ಕಿಳಿಸಿದ್ದರು. ದೈತ ಅಧಿಕಾರ ಬಲ, ಹಣ ಬಲ, ಜಾತಿ ಬಲದ ಉತ್ತುಂಗದಲ್ಲಿದ್ದ ಯಡಿಯೂರಪ್ಪ ಅವರ ವಿರುದ್ಧ ಕುಸಿದ ಆರೋಗ್ಯ, ತಮ್ಮವರದ್ದೇ ವಿದ್ರೋಹಗಳಿಗೆ ಸಿಕ್ಕು ಬರಿಗೈ ಆದ ಬಂಗಾರಪ್ಪ ಅವರ ಬಳಿ ಉಳಿದದ್ದು ಅವರು ಜನರ ಮೇಲಿಟ್ಟಿದ್ದ ಅದಮ್ಯ ವಿಶ್ವಾಸ ಮತ್ತು ತಮ್ಮ ಎಂದಿನಂತೆ ಜನ್ಮಜಾತ ಛಲಗುಣ ಮಾತ್ರ.

ಇಡೀ ರಾಜ್ಯ ಇತರೆ ಲೋಕಸಭಾ ಕ್ಷೇತ್ರಗಳ ಚುನಾವಣೆಯೇ ಒಂದು ತೂಕವಾದರೆ, ಶಿವಮೊಗ್ಗ ಕ್ಷೇತ್ರದ ಚುನಾವಣೆಯೇ ಅವುಗಳಿಗೆ ಸರಿಸಮ ತೂಗುವ ಚುನಾವಣೆ ಆಗಿತ್ತು.

ಮತದಾನಕ್ಕೆ ಇನ್ನೂ ಆರು ದಿನ ಉಳಿದಿತ್ತು. ಶಿವಮೊಗ್ಗದ ಬಾಡಿಗೆ ಮನೆಯೊಂದರಲ್ಲಿ ಸೋಪಾ ಮೇಲೆ ದಿವ್ಯ ಮೌನ ಧರಿಸಿ ಕುಳಿತಿದ್ದರು ಬಂಗಾರಪ್ಪ.

ಕಾಗೋಡು ತಿಮ್ಮಪ್ಪ, ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಸೇರಿದಂತೆ ಪ್ರಮುಖ ಮುಖಂಡರು ಬಂಗಾರಪ್ಪ ಅವರ ಮುಂದೆ ಕುಳಿತು  ‘ಸರ್ ಚುನಾವಣೆ ಗೆ ಸ್ವಲ್ಪ ದುಡ್ಡು ಬೇಕು. ಒಂದೆರೆಡು ಕೋಟಿ ಆದರೆ ಗೆಲುವು ನಮ್ಮದೆ’ ಎಂದು ಮನವಿ ಸಲ್ಲಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಚುನಾವಣೆಯ “ತಂತ್ರ” ಗಳಿಗೆ ಮತದಾನಕ್ಕೆ ಮುಂಚೆಯೇ ಕಾಂಗ್ರೆಸ್‌ ಧೂಳಿಪಟವಾಗಿತ್ತು. ಮೌನ ಮುರಿದ ಬಂಗಾರಪ್ಪ ” ನೋ…. ನನ್ನತ್ರ ದುಡ್ಡಿಲ್ಲ, ಇಷ್ಟ‌ಇದ್ರೆ ಪಕ್ಷದಿಂದ ಕೆಲ್ಸ ಮಾಡಿ‌ ಇಲ್ಲವಾದರೆ ಬಿಟ್ಟೋಗಿ” ಎಂದು ಗುಡುಗಿಬಿಟ್ಟರು.

ಹಣ ವ್ಯವಸ್ಥೆಗೆ ಕಾಗೋಡು ತಿಮ್ಮಪ್ಪ ಮಾಡಿದ ಪ್ರಯತ್ನಗಳೆಲ್ಲಾ ಬಂಗಾರಪ್ಪನವರ ಮುಂದೆ ಫಲ ಕೊಡಲಿಲ್ಲ.
ಬಂಗಾರಪ್ಪ ಅಕ್ಷರಶಃ ಬರಿಗೈ ಆಗಿ ಕುಳಿತಿದ್ದರು. ಮಗ ಕುಮಾರ ಬಂಗಾರಪ್ಪ ಅವರಿಂದ ಹಣಸಹಾಯ ಪಡೆಯುವ ಕಾಂಗ್ರೆಸ್‌ ಮುಖಂಡರ ಪ್ರಯತ್ನವು ನೆಗೆದುಬಿತ್ತು. ಕಾಗೋಡು ತಿಮ್ಮಪ್ಪಾದಿಯಾಗಿ ದಿಕ್ಕು ತೋಚದೆ ಎಲ್ಲರೂ ಮನೆಯಿಂದ ಹೊರಬಿದ್ದರು.

ಅದುವರೆಗೂ ಮೂಕಪ್ರೇಕ್ಷಕನಂತೆ ಸಂದರ್ಶನಕ್ಕಾಗಿ‌ ಕಾದು ಕುಳಿತಿದ್ದ ನನ್ನ ಕಡೆ ನೋಡಿದ ಬಂಗಾರಪ್ಪನವರು
ಮಾತು ಶುರುವಿಟ್ಟುಕೊಂಡರು.

ಸಂದರ್ಶನದ ಮುಗಿದ ನಂತರದ ಆಫ್ ದಿ ರೆಕಾರ್ಡ್ ನಲ್ಲಿ…

“ಸರ್, ಚುನಾವಣೆಯ ಕೊನೆಯ ಘಳಿಗೆಯಲ್ಲಿ ದುಡ್ಡಿಲ್ಲ ಅಂದ್ರೆ ಚುನಾವಣೆ ನಿಮಗೆ ಕಷ್ಟ ಆಗೋಲ್ವ”? ಎಂದೆ.

“ಸೀ ಮಿಸ್ಟರ್ ರವಿಕುಮಾರ್, (ಅವರು ವಯಸ್ಸಿನಲ್ಲಿ ಚಿಕ್ಕವರನ್ನೂ ಬಹುವಚನದಿಂದಲೆ ಮಾತಾಡಿಸುವ ವಿವೇಕ ಇಟ್ಟುಕೊಂಡವರು) ನಾನು ಮನಸ್ಸು ಮಾಡಿದರೆ ಒಂದೆರಡು ಕೋಟಿ ತರೋದು ಕಷ್ಟ ಅಲ್ಲ, ಆದರೆ ಈ ಯಡಿಯೂರಪನ ಹಡಬೆ ದುಡ್ಡಿನ ಮುಂದೆ ನನ್ನ ದುಡ್ಡು ನಡೆಯೋಲ್ಲ”

ಒಂದು‌ ಲೋಟ ಮಜ್ಜಿಗೆ ಕುಡಿದು ಸಾವಾರಿಸಿಕೊಂಡು ಮಾತು ಮುಂದುವರೆಸಿದರು…

” ರವಿಕುಮಾರ್, ಈ ಚುನಾವಣೆ ದುಡ್ಡಿನ ಮೇಲೆ ನಡೀತಿದೆ. ಯಡಿಯೂರಪ್ಪನತ್ರ ಅಧಿಕಾರ, ಹಣ, ಸಿಸ್ಟಮ್ ಇದೆ. ನಾನು ಒಂದು ಓಟಿಗೆ 500 ಕೊಟ್ರೆ ಈ ಯಡಿಯೂರಪ್ಪ ಸಾವ್ರ ಕೊಡ್ತಾರೆ, ನಾನು ಸಾವ್ರ ಕೊಟ್ರೆ, ಅವ್ರು ಎರಡ್ಸಾವ್ರ ಕೊಡ್ತಾರೆ, ಒಂದು ಬೂತ್ ಗೆ ನಾನು ಐದು ಸಾವ್ರ ಕೊಟ್ರೆ, ಅವ್ರು ಹತ್ತು‌ಕೊಡ್ತಾರೆ. ಯಡಿಯೂರಪ್ಪನ ದುಡ್ಡಿನ ಮುಂದೆ ನನ್ನ ದುಡ್ಡು ಓಡೋಲ್ಲ. ದುಡ್ಡಿನ ಮೂಲಕ ಯಡಿಯೂರಪ್ಪನನ್ನು ಈಗ ಸೋಲಿಸೋಕೆ ಆಗೋಲ್ಲ,

ಅದ್ಕೆ ನಾನು ದುಡ್ಡಿಲ್ಲದೆ ಜನರ ಮುಂದೆ ಹೋಗ್ತಿನಿ. ಜನ ದುಡ್ಡಿಗೆ ಓಟಾಕ್ತಾರೋ, ನಾನು ಜನರ ಮೇಲಿಟ್ಟಿರುವ ನಂಬಿಕೆಗೆ ಕೈ ಹಿಡಿತಾರೋ ನೋಡೇ ಬಿಡ್ತಿನಿ. It’s one experiment in my life… Mr.Ravikumar ” ನಾನು ಇಂತಹ experiment ಗಳನ್ನೆ ಮಾಡ್ಕೊಂಡ್ ಬಂದಿದಿನಿ. ಈ ಬಂಗಾರಪ್ಪ ಸೋತಿದ್ದೇ ಇಲ್ಲ.

ಈ ಜನಕ್ಕೆ ನಾನು ಬೇಕಾ? ಯಡಿಯೂರಪ್ಪನ ಹಡಬೆ ದುಡ್ಡು ಬೇಕಾ? ನೋಡೋಣ”

ಬಂಗಾರಪ್ಪ ಅವರ ಈ ಆತ್ಮವಿಶ್ವಾಸ ಕಂಡು ನನಗೆ ವಿಸ್ಮಯ ಅನಿಸಿತು. !

ಯಡಿಯೂರಪ್ಪನವರ ಅಬ್ಬರದ ಮುಂದೆ ಚುನಾವಣೆಯನ್ನು ಕಾಂಗ್ರೆಸ್‌ ಕೈ ಚೆಲ್ಲಿತ್ತು. ಅನಾರೋಗ್ಯದ ದೈಹಿಕ ನೋವು ನುಂಗಿಕೊಳ್ಳುತ್ತಲೆ ಬಂಗಾರಪ್ಪ ಏಕಾಂಗಿಯಾಗಿ ಹಳ್ಳಿ ಹಳ್ಳಿ ತಿರುಗಿದರು.

ಬಿ ವೈ ರಾಘವೇಂದ್ರ ಪರ ನಿಂತ ಮಠಗಳ ಜನ್ಮ‌ಜಾಲಾಡಿದರು. ನಾಕು ಗೊಡ್ಡೆಮ್ಮೆ ಸಾಕಿದ ಮಾತ್ರಕ್ಕೆ ಗೋ ರಕ್ಷಕನಾಗೋಲ್ಲ. ನಮ್ಮಂಗೆ ಸಗಣಿ, ಗಂಜಲ ಬಾಚಿ ಬಳಿ ಬೇಕು ಎಂದು ಈ ಭಾಗದ ಸ್ವಾಮಿಯನ್ನು ಬಹಿರಂಗವಾಗಿ ಈಡಾಡಿದರು.

ಮತದಾನದ ದಿನ ಶೇ.90 ರಷ್ಟು ಬೂತ್ ಗಳಲ್ಲಿ ಬಂಗಾರಪ್ಪ ಪರ ಹ್ಯಾಂಡ್ ಬಿಲ್ ಹಿಡಿಯಲು ಒಬ್ಬ ಕಾರ್ಯಕರ್ತ ಕಾಣಲಿಲ್ಲ. ಅವರೇ ಸೃಷ್ಟಿದ ಹಾಲಪ್ಪ, ಗೋಪಾಲಕೃಷ್ಣ ಅವರೆಲ್ಲಾ ಬೆನ್ನಿಗೆ ಇರಿದಿದ್ದರು.

ಯಡಿಯೂರಪ್ಪ ಅವರ “ಪ್ರಭಾವ” ಕ್ಕೆ ಮರುಳಾದ ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ ತನ್ನ ಬೆಂಬಲಿಗರಿಂದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ದಾಂಧಲೆ ನಡೆಸಿದರು. ಬೀಸಿ ಬಂದ ಕಲ್ಲಿಗೆ ಎದ್ದು ನಿಂತು ಎದೆ ಕೊಟ್ಟ ಬಂಗಾರಪ್ಪ ಅವರು ತೋಳೇರಿಸಿ ಅಬ್ಬರಿಸಿದರು.

ಫಲಿತಾಂಶ ಹೊರಬಿದ್ದಾಗ ಯಡಿಯೂರಪ್ಪ ಅವರ ಪುತ್ರರತ್ನ ರಾಘವೇಂದ್ರ ಕೇವಲ 52.893 ಮತಗಳಿಂದ ಗೆಲುವು ಸಾಧಿಸಿದರು.

ಬಂಗಾರಪ್ಪ ಅವರನ್ನು ಠೇವಣಿ ಕಳೆದು ಹೀನಾಯ ಸೋಲಿಗೆ ದೂಡಬೇಕೆಂದು ಸಕಲ ಸಂಪತ್ತು, ದಂಡು- ದಳ, ತಂತ್ರ, ಮಂತ್ರಗಳೊಂದಿಗೆ ಹಠಕ್ಕಿಳಿದಿದ್ದ ಯಡಿಯೂರಪ್ಪ ಫಲಿತಾಂಶದ ಲೀಡ್ ಕೇಳಿ ಕೆರಳಿ‌ ಕೆಂಡವಾದರು. ತಮ್ಮದೇ ಸಂಪುಟ ಸಚಿವ ಈಶ್ವರಪ್ಪ ನವರ ಮೇಲೆ ಹರಿಹಾಯ್ದರು ಕೂಡ. ಮಗನ ವಿಜಯೋತ್ಸವ ಅವರಿಗೆ ಅಪಥ್ಯವಾಗಿತ್ತು.

ಅಕ್ಷರಶಃ ಬರಿಗೈ ನಿರ್ಗತಿಕನಾಗಿ ನಿಂತಿದ್ದ ಬಂಗಾರಪ್ಪ ಅವರು ಕೇವಲ 52 ಸಾವಿರ ಮತಗಳ ಅಂತರದಲ್ಲಿ ತಾಂತ್ರಿಕವಾಗಿ ಸೋತಿದ್ದರು. ಆದರೆ ಜನರ ಮೇಲಿಟ್ಟಿದ್ದ ಅವರ ವಿಶ್ವಾಸ ಯಾವ ಖರೀದಿಗೂ ಒಳಗಾಗದೆ ಅವರನ್ನು ನೈತಿಕವಾಗಿ ಗೆಲ್ಲಿಸಿತ್ತು.

ಈ ಸೋಲು, ತಮ್ಮವರೇ ಎಸಗಿದ ವಿದ್ರೋಹಗಳು ಬಂಗಾರಪ್ಪ ಅವರನ್ನು ಇನ್ನಿಲ್ಲದೆ ಬಾಧಿಸಿಬಿಟ್ಟಿತು…

ಈ ನೋವನ್ನು ನುಂಗಿಕೊಂಡೆ ಅವರು ವಿರೋಚಿತವಾಗಿ ನಿರ್ಗಮಿಸಿದರು.

ಇವತ್ತು ಸೊರಬದಲ್ಲಿ ಬಂಗಾರಪ್ಪ ಅವರ 87 ನೇ ಜನ್ಮದಿನೋತ್ಸವ ಸಮಾರಂಭವನ್ನು ಪುತ್ರ ‌ಕುಮಾರ್ ಬಂಗಾರಪ್ಪ ಆಯೋಜಿಸಿದ್ದು ಇದನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ನವರು ಬಂಗಾರಪ್ಪ ಅವರನ್ನು ಕೊಂಡಾಡಿದರು. ಅವರ ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ ಬಿಡುಗಡೆ ಮಾಡುವುದಾಗಿ ಘೋಷಿಸಿದರು.

ಬದುಕಿದ್ದಾಗ ತನಗೆ ರಾಜಕೀಯ ಅಸ್ತಿತ್ವ ಕೊಟ್ಟ ತನ್ನ ಅಪ್ಪನನ್ನು ಕೌಟುಂಬಿಕವಾಗಿ, ರಾಜಕೀಯವಾಗಿ ಕಾಡಿದ ಕುಮಾರ ಬಂಗಾರಪ್ಪ ಇದ್ದಕ್ಕಿದ್ದಂತೆ ಅಪ್ಪನ ಜನ್ಮದಿನವನ್ನು ಅದ್ಧೂರಿಯಾಗಿ ನಡೆಸಿದರು. ಅದನ್ನು ಯಡಿಯೂರಪ್ಪ ಉದ್ಘಾಟಿಸಿದರು. ಎಂತಹ ವೈರುಧ್ಯ ನೋಡಿ!

ಇದೆಲ್ಲಾ ನೋಡಿದ ದಾರಿಹೋಕನೊಬ್ಬನ ಬಾಯಿಂದ ಹೊರಬಿದ್ದ ಮಾತೆಂದೆರೆ…

“ಬದುಕಿದ್ದಾಗ್ಲೇ ಬಂಗಾರಪ್ಪನ್ನ ಸಮಾಧಿ ಮಾಡಿ ಈಗ ಅವ್ರ ಸ್ಮಾರಕ ಮಾಡೋಕೆ ಕಾಸು ಕೊಟ್ಟವ್ರೆ” ! ಥೂ…..!

ಅದೇನೆ ಇರಲಿ, ಬಂಗಾರಪ್ಪ ಸರ್ ನಿಮಗೆ‌ ಜನ್ಮದಿನದ ಶುಭಾಶಯಗಳು.

  • ಎನ್.ರವಿಕುಮಾರ್ ಟೆಲೆಕ್ಸ್

(ರವಿಕುಮಾರ್ ಪತ್ರಕರ್ತರು ಮತ್ತು ಯುವ ಬರಹಗಾರರು. ಅಭಿಪ್ರಾಯಗಳು ವೈಯಕ್ತಿಕವಾದವುಗಳು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...