Homeಚಳವಳಿರೈತರ ಪ್ರತಿರೋಧದ ಹಿನ್ನೆಲೆ: ಸುಪ್ರೀಂ ಸಮಿತಿಯಿಂದ ಸ್ವಯಂ ಹೊರನಡೆದ ಭೂಪಿಂದರ್‌ ಮನ್

ರೈತರ ಪ್ರತಿರೋಧದ ಹಿನ್ನೆಲೆ: ಸುಪ್ರೀಂ ಸಮಿತಿಯಿಂದ ಸ್ವಯಂ ಹೊರನಡೆದ ಭೂಪಿಂದರ್‌ ಮನ್

2020ರ ಡಿಸೆಂಬರ್‍ 14 ರಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿ ಮಾಡಿ, ವಿರೋಧಗಳಿಗೆ ತಲೆಬಾಗಬೇಡಿ, ಕಾನೂನುಗಳನ್ನು ಜಾರಿಗೆ ತನ್ನಿ‌ ಎಂದು ಭೂಪಿಂದರ್‍ ಸಿಂಗ್ ಮನ್ ಮನವಿ ಪತ್ರ ನೀಡಿದ್ದರು.

- Advertisement -
- Advertisement -

ಕೃಷಿ ಕಾಯ್ದೆಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸುಪ್ರೀಂ ಕೋರ್ಟ್‌ ನೇಮಿಸಿದ್ದ ಸಮಿತಿಯ ನಾಲ್ವರು ಸದಸ್ಯರಲ್ಲೊಬ್ಬರಾದ ಭೂಪಿಂದರ್ ಸಿಂಗ್ ಮನ್ ಸಮಿತಿಯಿಂದ ಸ್ವಯಂ ಹೊರಗುಳಿಯುವುದಾಗಿ ಘೋಷಿಸಿದ್ದಾರೆ.

ಮಾಜಿ ಸಂಸದ ಮತ್ತು ಅಖಿಲ ಭಾರತ ಕಿಸಾನ್ ಸಮನ್ವಯ ಸಮಿತಿಯ ಅಧ್ಯಕ್ಷರರಾಗಿದ್ದ ಅವರು ಸುಪ್ರೀಂ ಕೋರ್ಟ್ ನೇಮಿಸಿದ ಕೃಷಿ ಕಾನೂನು ಸಮಿತಿಯ ನಾಲ್ವರು ಸದಸ್ಯರಲ್ಲಿ ಒಬ್ಬರಾಗಿದ್ದರು. ಇಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, “ನಾನೊಬ್ಬ ರೈತ ಮತ್ತು ರೈತ ಮುಖಂಡನಾಗಿ ರೈತರಲ್ಲಿರುವ ಭಾವನೆಗಳು ಮತ್ತು ಆತಂಕದ ದೃಷ್ಟಿಯಿಂದ ನಾನು ಸಮಿತಿಯಿಂದ ಹೊರಗುಳಿಯುತ್ತಿದ್ದೇನೆ ಮತ್ತು ರೈತರ ಹಿತಾಸಕ್ತಿಗಳಿಗೆ ಧಕ್ಕೆಯುಂಟುಮಾಡುವುದಿಲ್ಲ” ಎಂದು ತಿಳಿಸಿದ್ದಾರೆ.

ಸಮಿತಿಗೆ ನಾಮನಿರ್ದೇಶನ ಮಾಡಿದ್ದಕ್ಕಾಗಿ ಸುಪ್ರೀಂ ಕೋರ್ಟ್‌ಗೆ ಧನ್ಯವಾದ ತಿಳಿಸಿರುವ ಅವರು, ಪಂಜಾಬ್ ಮತ್ತು ದೇಶದ ರೈತರ ಹಿತಾಸಕ್ತಿಗಳಲ್ಲಿ ರಾಜಿ ಮಾಡಿಕೊಳ್ಳಲು ಬಯಸುವುದಿಲ್ಲ. ಹಾಗಾಗಿ ನಾನು ಯಾವಾಗಲೂ ರೈತರು ಮತ್ತು ಪಂಜಾಬ್ ಪರ ನಿಲ್ಲುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

2020ರ ಡಿಸೆಂಬರ್‍ 14 ರಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿ ಮಾಡಿ, ವಿರೋಧಗಳಿಗೆ ತಲೆಬಾಗಬೇಡಿ, ಕಾನೂನುಗಳನ್ನು ಜಾರಿಗೆ ತನ್ನಿ‌ ಎಂದು ಭೂಪಿಂದರ್‍ ಸಿಂಗ್ ಮನ್ ಮನವಿ ಪತ್ರ ನೀಡಿದ್ದರು. ಆ ಮೂಲಕ ಅವರು ಕೃಷಿ ಕಾಯ್ದೆಗಳನ್ನು ಸಂಪೂರ್ಣವಾಗಿ ಬೆಂಬಲಿಸಿದ್ದರು. ಹಾಗಾಗಿ ಸಮಿತಿಯಲ್ಲಿ ಇವರನ್ನು ನೇಮಿಸಿದ್ದಕ್ಕೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಸಮಿತಿಯಲ್ಲಿ ಭೂಪಿಂದರ್ ಸಿಂಗ್ ಮಾನ್ ಜೊತೆಗೆ ಡಾ. ಪ್ರಮೋದ್ ಕುಮಾರ್ ಜೋಷಿ, ಅಶೋಕ್‌ ಗುಲಾಟಿ, ಮತ್ತು ಅನಿಲ್ ಘನ್ವತ್ ಇದ್ದು ಇವರೆಲ್ಲರೂ ಈಗಾಗಲೇ ಒಂದಲ್ಲ ಒಂದು ರೀತಿಯಲ್ಲಿ ಕಾಯ್ದೆಯ ಪರವಾಗಿರುವವರು ಎಂದು ಆರೋಪಿಸಲಾಗಿದೆ. ಇದಕ್ಕೆ ಆಧಾರವೆಂಬುವಂತೆ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡಿರುವ ಇವರ ಹೇಳಿಕೆಗಳು, ಲೇಖನಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.


ಇದನ್ನೂ ಓದಿ: ಸುಪ್ರೀಂ ನೇಮಿಸಿದ ಸಮಿತಿಯಲ್ಲಿನ ಸದಸ್ಯರೆಲ್ಲರೂ ಕೃಷಿ ಕಾಯ್ದೆ ಸಮರ್ಥಕರು!: ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...