Homeಮುಖಪುಟಜನದ್ರೋಹಿ ಬಿಜೆಪಿ ಸರಕಾರವನ್ನು ಸೋಲಿಸಿ, ಜನಪರ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು: ಸಂವಿಧಾನ ಪರ ಸಂಘಟನೆಗಳ ಒಕ್ಕೂಟ...

ಜನದ್ರೋಹಿ ಬಿಜೆಪಿ ಸರಕಾರವನ್ನು ಸೋಲಿಸಿ, ಜನಪರ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು: ಸಂವಿಧಾನ ಪರ ಸಂಘಟನೆಗಳ ಒಕ್ಕೂಟ ಆಗ್ರಹ

- Advertisement -
- Advertisement -

ಪ್ರಜಾಪ್ರಭುತ್ವ ಹಾಗೂ ಗಣತಂತ್ರದ ಕೊಲೆ ಮಾಡಲು ಹವಣಿಸುತ್ತಿರುವ ಜನದ್ರೋಹಿ ಸರಕಾರವನ್ನು ಸೋಲಿಸಿ, ಜನಪರವಾದ ಪ್ರಗತಿಪರ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು, ಬಸವಣ್ಣನವರು ಹಾಗೂ ಸರ್ವಸಮತೆಯ ಬಂಧುತ್ವದ ಸ್ವಾಭಿಮಾನಿ ದೇಶವನ್ನು ಕಟ್ಟುವ ಅಭಿಲಾಷೆ ಹೊಂದಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ಕನಸಿನ ದೇಶವನ್ನು ನಿರ್ಮಿಸಲು ಜನದ್ರೋಹಿ ಬಿಜೆಪಿಯನ್ನು ಸೋಲಿಸಲು ಎಲ್ಲರೂ ಒಂದಾಗಬೇಕು ಎಂದು ಸಂವಿಧಾನ ಪರ ಸಂಘಟನೆಗಳ ಒಕ್ಕೂಟ ಪ್ರಕಟಣೆಯಲ್ಲಿ ತಿಳಿಸಿದೆ.

2014ರ ಲೋಕಸಭೆಯ ಚುನಾವಣೆಯ ಸಂದರ್ಭದಲ್ಲಿ, ಭಾರೀ ಕಾರ್ಪೊರೇಟ್ ಮತ್ತು ಹಣಬೆಂಬಲ
ಹಾಗೂ ಗುಲಾಮಿ ಸ್ವಭಾವದ ಮಾಧ್ಯಮಗಳ ಸಹಾಯದ ಮೂಲಕ ಮನಮೋಹನ್‌ ಸಿಂಗ್ ನೇತೃತ್ವದ ಮೇಲೆ ಸುಳ್ಳು ಆರೋಪ, ಅಪಪ್ರಚಾರ ಮಾಡಿ, ಸುಳ್ಳು ಆಶ್ವಾಸನೆ ನೀಡಿ ಬಿಜೆಪಿ ಅಧಿಕಾರಕ್ಕೆ ಬಂದಿತು. ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಮೋದಿ ಸರ್ಕಾರ, ಇಡೀ ಭಾರತ ದೇಶವನ್ನು ವಿನಾಶದ ಅಂಚಿಗೆ ತಂದು ನಿಲ್ಲಿಸಿದೆ. ಹಿಂದೆ ಅವರ ಕೈಗೆ ಅಧಿಕಾರ ಕೊಟ್ಟಿದ್ದ ಜನ ಈಗ ಪಶ್ಚಾತಾಪ ಪಡುವಂತಾಗಿದೆ. ಮೋದಿಯ ಕ್ರೂರ, ಭ್ರಷ್ಟ, ಫ್ಯಾಶಿಸ್ಟ್‌ ಸರಕಾರ ಸೋಲಬೇಕೆಂದು ದೇಶದ ಜನರು ಬಯಸುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ದೇಶದ ಸಮಸ್ತ ರೈತರು, ದಲಿತ, ದಮನಿತರು, ಮಧ್ಯಮ ವರ್ಗದವರು, ರಾಷ್ಟ್ರದ ಸಣ್ಣ ಉದ್ದಿಮೆದಾರರು ಮತ್ತು ವ್ಯಾಪಾರಿಗಳು, ಮಹಿಳೆಯರು, ವಿದ್ಯಾರ್ಥಿಗಳು, ಕೃಷಿಕರು, ಜನಸಾಮಾನ್ಯರು ಮೋದಿ ಸೋಲಬೇಕೆಂದು ಬಯಸುತ್ತಿದ್ದಾರೆ.

ಬಿಜೆಪಿ ಒಂದು ಸ್ವತಂತ್ರವಾದ ರಾಜಕೀಯ ಪಕ್ಷವಲ್ಲ. ಅದು ನಿಜವಾಗಿ ಫ್ಯಾಶಿಸ್ಟ್ ಧೋರಣೆಯ
ಆರ್.ಎಸ್.ಎಸ್.ನ ರಾಜಕೀಯ ಶಾಖೆಯಾಗಿದೆ. ಹಾಗಾಗಿ ಅದು, ಸಂಘೀ ಗ್ಯಾಂಗಿನ ವೈದಿಕಶಾಹಿ
ನಿರ್ದೇಶನದಲ್ಲಿಯೇ ನಡೆಯುವ ಕೊಳಕು ಚಿಂತನೆಯ ಕೋಮುವಾದಿ ಪಕ್ಷವಾಗಿದೆ. ಜನರಲ್ಲಿ ಪರಸ್ಪರ
ದ್ವೇಷಭಾವನೆ ಹುಟ್ಟಿಸುವ ವಿಚ್ಛಿದ್ರಕಾರಿ ಒಡಕಿನ ಕುತಂತ್ರವೇ ಅದರ ಜೀವಾಳವಾಗಿದೆ. ನೋಟ್‍ ಬ್ಯಾನ್‌ ಮೂಲಕ ದೇಶದ ಕೋಟ್ಯಾಂತರ ಜನರ ಬದುಕನ್ನು ಬಿಜೆಪಿ ಮೂರಾಬಟ್ಟೆ ಮಾಡಿದ್ದು, ಜಿಎಸ್‌ಟಿ ಮೂಲಕ
ಸಮಸ್ತ ಬಡಜನರನ್ನು ದರೋಡೆ ಮಾಡಿದೆ. ದೇಶದ ಅನ್ನದಾತರಾದ ರೈತರನ್ನು ಕಂಗಾಲಾಗಿಸಿ, ಭಿಕಾರಿಗಳನ್ನಾಗಿ ಮಾಡಿ, ಬಂಡವಾಳಶಾಹಿಗಳ ಸುಲಿಗೆ ತೆಕ್ಕೆಗೆ ನೂಕುವ ಉದ್ದೇಶದಿಂದ ರೈತ ವಿರೋಧಿ ಕಾನೂನು ಜಾರಿಗೆ ತಂದಿದೆ.

ಒಂದೆಡೆ ಭೇಟಿ ಬಚಾವೋ, ಭೇಟಿ ಪಡಾವೋ ಎಂದು ಘೋಷಿಸುತ್ತಲೇ ಮಣಿಪುರದಲ್ಲಿ ಮಹಿಳೆಯರನ್ನು
ಅಮಾನಿಸಿದಾಗ, ದೇಶಕ್ಕೆ ಕೀರ್ತಿ ತಂದ ಒಲಿಂಪಿಕ್ಸ್ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ
ನಡೆದಾಗ, ಬಿಲ್ಕೀಸ್ ಬಾನು ಪ್ರಕರಣದ ಅಪರಾಧಿಗಳನ್ನು ಶಿಕ್ಷೆಯ ಅರ್ಧಾವಧಿಯಲ್ಲಿಯೇ ಬಿಡುಗಡೆ
ಮಾಡಿದ್ದಾಗ ಬಿಜೆಪಿ ಬಾಯಿ ಮುಚ್ಚಿಕೊಂಡಿದೆ. ಬಿಜೆಪಿ ಭ್ರಷ್ಟಾಚಾರವನ್ನು ಕೊನೆಗೊಳಿಸುತ್ತದೆ ಎಂದು ಹೇಳುತ್ತಾ ಬಂದಿತ್ತು, ಇದೀಗ ಭ್ರಷ್ಟರನ್ನೆಲ್ಲ ಪಕ್ಷಕ್ಕೆ ಸೇರಿಸಿಕೊಂಡಿದೆ. ಯುವಕರಿಗೆ 2 ಕೋಟಿ ಉದ್ಯೋಗ ಕೊಡುತ್ತೇವೆಂದು ಸುಳ್ಳು ಹೇಳಿ ಅಧಿಕಾರಕ್ಕೆ ಬಂದು ಪಕೋಡ ಮಾರಿ ಎಂದು ಅವಮಾನಿಸಿದ್ದಾರೆ, ಉದ್ಯೋಗವನ್ನು ಬಿಜೆಪಿ ನಾಶಪಡಿಸಿದೆ. ಬೆಲಯೇರಿಕೆಯಿಂದ ದೇಶದ ಜನರ ಬದುಕನ್ನ ಬರ್ಬರವನ್ನಾಗಿಸಿದೆ. ಕೋಮುವಾದವನ್ನು ಬಿತ್ತುತ್ತ ಅಲ್ಪಸಂಖ್ಯಾತರು, ದಲಿತರ ಬದುಕನ್ನು ನರಕವನ್ನಾಗಿಸಿದೆ.

ವಿದ್ಯಾರ್ಥಿಗಳ ಸ್ಕಾಲರ್‌ ಶಿಪ್‌ ನಿಲ್ಲಿಸಿ ಶಿಕ್ಷಣಕ್ಕೆ ಅಡ್ಡಿಪಡಿಸಿದೆ. ಇಡಿ, ಸಿಬಿಐ ಸೇರಿದಂತೆ ಸರಕಾರಿ ಸಂಸ್ಥೆಗಳನ್ನು ಬಳಸಿಕೊಂಡು ರಾಜಕೀಯ ವಿರೋಧಿಗಳನ್ನು ಜೈಲಿಗೆ ತಳ್ಳಿದೆ. ಚುನಾವಣಾ ಬಾಂಡ್‌ ಇಡೀ ದೇಶವನ್ನು ಕೊಳ್ಳೆ ಹೊಡೆದ ಕೋಟ್ಯಾಂತರ ಹಣವನ್ನು ಕಳ್ಳ ಮಾರ್ಗದ ಮೂಲಕ  ಸಂಗ್ರಹಿಸಿದೆ. ಕಾರ್ಪೋರೇಟರ್ಗಳ ಸಾಲವನ್ನು ಬಿಜೆಪಿ ಸರಕಾರ ಮನ್ನಾ ಮಾಡಿದ್ದು, ಬಡ, ರೈತರ ವಿದ್ಯಾರ್ಥಿಗಳಿಂದ ಬಲವಂತವಾಗಿ ಸಾಲ ವಸೂಲಾತಿಯನ್ನು ಮಾಡುತ್ತಿದೆ, ಆದ್ದರಿಂದ ಎಲ್ಲರೂ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ಚಲಾಯಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನು ಓದಿ: ಅದಾನಿ ಮಾಲಿಕತ್ವದ ಬಂದರಿನ ವಿರುದ್ಧ ಪ್ರತಿಭಟಿಸಿದ ಚರ್ಚ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಮೋದಿ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...