Homeಮುಖಪುಟಜನದ್ರೋಹಿ ಬಿಜೆಪಿ ಸರಕಾರವನ್ನು ಸೋಲಿಸಿ, ಜನಪರ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು: ಸಂವಿಧಾನ ಪರ ಸಂಘಟನೆಗಳ ಒಕ್ಕೂಟ...

ಜನದ್ರೋಹಿ ಬಿಜೆಪಿ ಸರಕಾರವನ್ನು ಸೋಲಿಸಿ, ಜನಪರ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು: ಸಂವಿಧಾನ ಪರ ಸಂಘಟನೆಗಳ ಒಕ್ಕೂಟ ಆಗ್ರಹ

- Advertisement -
- Advertisement -

ಪ್ರಜಾಪ್ರಭುತ್ವ ಹಾಗೂ ಗಣತಂತ್ರದ ಕೊಲೆ ಮಾಡಲು ಹವಣಿಸುತ್ತಿರುವ ಜನದ್ರೋಹಿ ಸರಕಾರವನ್ನು ಸೋಲಿಸಿ, ಜನಪರವಾದ ಪ್ರಗತಿಪರ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು, ಬಸವಣ್ಣನವರು ಹಾಗೂ ಸರ್ವಸಮತೆಯ ಬಂಧುತ್ವದ ಸ್ವಾಭಿಮಾನಿ ದೇಶವನ್ನು ಕಟ್ಟುವ ಅಭಿಲಾಷೆ ಹೊಂದಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ಕನಸಿನ ದೇಶವನ್ನು ನಿರ್ಮಿಸಲು ಜನದ್ರೋಹಿ ಬಿಜೆಪಿಯನ್ನು ಸೋಲಿಸಲು ಎಲ್ಲರೂ ಒಂದಾಗಬೇಕು ಎಂದು ಸಂವಿಧಾನ ಪರ ಸಂಘಟನೆಗಳ ಒಕ್ಕೂಟ ಪ್ರಕಟಣೆಯಲ್ಲಿ ತಿಳಿಸಿದೆ.

2014ರ ಲೋಕಸಭೆಯ ಚುನಾವಣೆಯ ಸಂದರ್ಭದಲ್ಲಿ, ಭಾರೀ ಕಾರ್ಪೊರೇಟ್ ಮತ್ತು ಹಣಬೆಂಬಲ
ಹಾಗೂ ಗುಲಾಮಿ ಸ್ವಭಾವದ ಮಾಧ್ಯಮಗಳ ಸಹಾಯದ ಮೂಲಕ ಮನಮೋಹನ್‌ ಸಿಂಗ್ ನೇತೃತ್ವದ ಮೇಲೆ ಸುಳ್ಳು ಆರೋಪ, ಅಪಪ್ರಚಾರ ಮಾಡಿ, ಸುಳ್ಳು ಆಶ್ವಾಸನೆ ನೀಡಿ ಬಿಜೆಪಿ ಅಧಿಕಾರಕ್ಕೆ ಬಂದಿತು. ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಮೋದಿ ಸರ್ಕಾರ, ಇಡೀ ಭಾರತ ದೇಶವನ್ನು ವಿನಾಶದ ಅಂಚಿಗೆ ತಂದು ನಿಲ್ಲಿಸಿದೆ. ಹಿಂದೆ ಅವರ ಕೈಗೆ ಅಧಿಕಾರ ಕೊಟ್ಟಿದ್ದ ಜನ ಈಗ ಪಶ್ಚಾತಾಪ ಪಡುವಂತಾಗಿದೆ. ಮೋದಿಯ ಕ್ರೂರ, ಭ್ರಷ್ಟ, ಫ್ಯಾಶಿಸ್ಟ್‌ ಸರಕಾರ ಸೋಲಬೇಕೆಂದು ದೇಶದ ಜನರು ಬಯಸುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ದೇಶದ ಸಮಸ್ತ ರೈತರು, ದಲಿತ, ದಮನಿತರು, ಮಧ್ಯಮ ವರ್ಗದವರು, ರಾಷ್ಟ್ರದ ಸಣ್ಣ ಉದ್ದಿಮೆದಾರರು ಮತ್ತು ವ್ಯಾಪಾರಿಗಳು, ಮಹಿಳೆಯರು, ವಿದ್ಯಾರ್ಥಿಗಳು, ಕೃಷಿಕರು, ಜನಸಾಮಾನ್ಯರು ಮೋದಿ ಸೋಲಬೇಕೆಂದು ಬಯಸುತ್ತಿದ್ದಾರೆ.

ಬಿಜೆಪಿ ಒಂದು ಸ್ವತಂತ್ರವಾದ ರಾಜಕೀಯ ಪಕ್ಷವಲ್ಲ. ಅದು ನಿಜವಾಗಿ ಫ್ಯಾಶಿಸ್ಟ್ ಧೋರಣೆಯ
ಆರ್.ಎಸ್.ಎಸ್.ನ ರಾಜಕೀಯ ಶಾಖೆಯಾಗಿದೆ. ಹಾಗಾಗಿ ಅದು, ಸಂಘೀ ಗ್ಯಾಂಗಿನ ವೈದಿಕಶಾಹಿ
ನಿರ್ದೇಶನದಲ್ಲಿಯೇ ನಡೆಯುವ ಕೊಳಕು ಚಿಂತನೆಯ ಕೋಮುವಾದಿ ಪಕ್ಷವಾಗಿದೆ. ಜನರಲ್ಲಿ ಪರಸ್ಪರ
ದ್ವೇಷಭಾವನೆ ಹುಟ್ಟಿಸುವ ವಿಚ್ಛಿದ್ರಕಾರಿ ಒಡಕಿನ ಕುತಂತ್ರವೇ ಅದರ ಜೀವಾಳವಾಗಿದೆ. ನೋಟ್‍ ಬ್ಯಾನ್‌ ಮೂಲಕ ದೇಶದ ಕೋಟ್ಯಾಂತರ ಜನರ ಬದುಕನ್ನು ಬಿಜೆಪಿ ಮೂರಾಬಟ್ಟೆ ಮಾಡಿದ್ದು, ಜಿಎಸ್‌ಟಿ ಮೂಲಕ
ಸಮಸ್ತ ಬಡಜನರನ್ನು ದರೋಡೆ ಮಾಡಿದೆ. ದೇಶದ ಅನ್ನದಾತರಾದ ರೈತರನ್ನು ಕಂಗಾಲಾಗಿಸಿ, ಭಿಕಾರಿಗಳನ್ನಾಗಿ ಮಾಡಿ, ಬಂಡವಾಳಶಾಹಿಗಳ ಸುಲಿಗೆ ತೆಕ್ಕೆಗೆ ನೂಕುವ ಉದ್ದೇಶದಿಂದ ರೈತ ವಿರೋಧಿ ಕಾನೂನು ಜಾರಿಗೆ ತಂದಿದೆ.

ಒಂದೆಡೆ ಭೇಟಿ ಬಚಾವೋ, ಭೇಟಿ ಪಡಾವೋ ಎಂದು ಘೋಷಿಸುತ್ತಲೇ ಮಣಿಪುರದಲ್ಲಿ ಮಹಿಳೆಯರನ್ನು
ಅಮಾನಿಸಿದಾಗ, ದೇಶಕ್ಕೆ ಕೀರ್ತಿ ತಂದ ಒಲಿಂಪಿಕ್ಸ್ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ
ನಡೆದಾಗ, ಬಿಲ್ಕೀಸ್ ಬಾನು ಪ್ರಕರಣದ ಅಪರಾಧಿಗಳನ್ನು ಶಿಕ್ಷೆಯ ಅರ್ಧಾವಧಿಯಲ್ಲಿಯೇ ಬಿಡುಗಡೆ
ಮಾಡಿದ್ದಾಗ ಬಿಜೆಪಿ ಬಾಯಿ ಮುಚ್ಚಿಕೊಂಡಿದೆ. ಬಿಜೆಪಿ ಭ್ರಷ್ಟಾಚಾರವನ್ನು ಕೊನೆಗೊಳಿಸುತ್ತದೆ ಎಂದು ಹೇಳುತ್ತಾ ಬಂದಿತ್ತು, ಇದೀಗ ಭ್ರಷ್ಟರನ್ನೆಲ್ಲ ಪಕ್ಷಕ್ಕೆ ಸೇರಿಸಿಕೊಂಡಿದೆ. ಯುವಕರಿಗೆ 2 ಕೋಟಿ ಉದ್ಯೋಗ ಕೊಡುತ್ತೇವೆಂದು ಸುಳ್ಳು ಹೇಳಿ ಅಧಿಕಾರಕ್ಕೆ ಬಂದು ಪಕೋಡ ಮಾರಿ ಎಂದು ಅವಮಾನಿಸಿದ್ದಾರೆ, ಉದ್ಯೋಗವನ್ನು ಬಿಜೆಪಿ ನಾಶಪಡಿಸಿದೆ. ಬೆಲಯೇರಿಕೆಯಿಂದ ದೇಶದ ಜನರ ಬದುಕನ್ನ ಬರ್ಬರವನ್ನಾಗಿಸಿದೆ. ಕೋಮುವಾದವನ್ನು ಬಿತ್ತುತ್ತ ಅಲ್ಪಸಂಖ್ಯಾತರು, ದಲಿತರ ಬದುಕನ್ನು ನರಕವನ್ನಾಗಿಸಿದೆ.

ವಿದ್ಯಾರ್ಥಿಗಳ ಸ್ಕಾಲರ್‌ ಶಿಪ್‌ ನಿಲ್ಲಿಸಿ ಶಿಕ್ಷಣಕ್ಕೆ ಅಡ್ಡಿಪಡಿಸಿದೆ. ಇಡಿ, ಸಿಬಿಐ ಸೇರಿದಂತೆ ಸರಕಾರಿ ಸಂಸ್ಥೆಗಳನ್ನು ಬಳಸಿಕೊಂಡು ರಾಜಕೀಯ ವಿರೋಧಿಗಳನ್ನು ಜೈಲಿಗೆ ತಳ್ಳಿದೆ. ಚುನಾವಣಾ ಬಾಂಡ್‌ ಇಡೀ ದೇಶವನ್ನು ಕೊಳ್ಳೆ ಹೊಡೆದ ಕೋಟ್ಯಾಂತರ ಹಣವನ್ನು ಕಳ್ಳ ಮಾರ್ಗದ ಮೂಲಕ  ಸಂಗ್ರಹಿಸಿದೆ. ಕಾರ್ಪೋರೇಟರ್ಗಳ ಸಾಲವನ್ನು ಬಿಜೆಪಿ ಸರಕಾರ ಮನ್ನಾ ಮಾಡಿದ್ದು, ಬಡ, ರೈತರ ವಿದ್ಯಾರ್ಥಿಗಳಿಂದ ಬಲವಂತವಾಗಿ ಸಾಲ ವಸೂಲಾತಿಯನ್ನು ಮಾಡುತ್ತಿದೆ, ಆದ್ದರಿಂದ ಎಲ್ಲರೂ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ಚಲಾಯಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನು ಓದಿ: ಅದಾನಿ ಮಾಲಿಕತ್ವದ ಬಂದರಿನ ವಿರುದ್ಧ ಪ್ರತಿಭಟಿಸಿದ ಚರ್ಚ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಮೋದಿ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...