Homeಮುಖಪುಟಜನದ್ರೋಹಿ ಬಿಜೆಪಿ ಸರಕಾರವನ್ನು ಸೋಲಿಸಿ, ಜನಪರ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು: ಸಂವಿಧಾನ ಪರ ಸಂಘಟನೆಗಳ ಒಕ್ಕೂಟ...

ಜನದ್ರೋಹಿ ಬಿಜೆಪಿ ಸರಕಾರವನ್ನು ಸೋಲಿಸಿ, ಜನಪರ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು: ಸಂವಿಧಾನ ಪರ ಸಂಘಟನೆಗಳ ಒಕ್ಕೂಟ ಆಗ್ರಹ

- Advertisement -
- Advertisement -

ಪ್ರಜಾಪ್ರಭುತ್ವ ಹಾಗೂ ಗಣತಂತ್ರದ ಕೊಲೆ ಮಾಡಲು ಹವಣಿಸುತ್ತಿರುವ ಜನದ್ರೋಹಿ ಸರಕಾರವನ್ನು ಸೋಲಿಸಿ, ಜನಪರವಾದ ಪ್ರಗತಿಪರ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು, ಬಸವಣ್ಣನವರು ಹಾಗೂ ಸರ್ವಸಮತೆಯ ಬಂಧುತ್ವದ ಸ್ವಾಭಿಮಾನಿ ದೇಶವನ್ನು ಕಟ್ಟುವ ಅಭಿಲಾಷೆ ಹೊಂದಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ಕನಸಿನ ದೇಶವನ್ನು ನಿರ್ಮಿಸಲು ಜನದ್ರೋಹಿ ಬಿಜೆಪಿಯನ್ನು ಸೋಲಿಸಲು ಎಲ್ಲರೂ ಒಂದಾಗಬೇಕು ಎಂದು ಸಂವಿಧಾನ ಪರ ಸಂಘಟನೆಗಳ ಒಕ್ಕೂಟ ಪ್ರಕಟಣೆಯಲ್ಲಿ ತಿಳಿಸಿದೆ.

2014ರ ಲೋಕಸಭೆಯ ಚುನಾವಣೆಯ ಸಂದರ್ಭದಲ್ಲಿ, ಭಾರೀ ಕಾರ್ಪೊರೇಟ್ ಮತ್ತು ಹಣಬೆಂಬಲ
ಹಾಗೂ ಗುಲಾಮಿ ಸ್ವಭಾವದ ಮಾಧ್ಯಮಗಳ ಸಹಾಯದ ಮೂಲಕ ಮನಮೋಹನ್‌ ಸಿಂಗ್ ನೇತೃತ್ವದ ಮೇಲೆ ಸುಳ್ಳು ಆರೋಪ, ಅಪಪ್ರಚಾರ ಮಾಡಿ, ಸುಳ್ಳು ಆಶ್ವಾಸನೆ ನೀಡಿ ಬಿಜೆಪಿ ಅಧಿಕಾರಕ್ಕೆ ಬಂದಿತು. ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಮೋದಿ ಸರ್ಕಾರ, ಇಡೀ ಭಾರತ ದೇಶವನ್ನು ವಿನಾಶದ ಅಂಚಿಗೆ ತಂದು ನಿಲ್ಲಿಸಿದೆ. ಹಿಂದೆ ಅವರ ಕೈಗೆ ಅಧಿಕಾರ ಕೊಟ್ಟಿದ್ದ ಜನ ಈಗ ಪಶ್ಚಾತಾಪ ಪಡುವಂತಾಗಿದೆ. ಮೋದಿಯ ಕ್ರೂರ, ಭ್ರಷ್ಟ, ಫ್ಯಾಶಿಸ್ಟ್‌ ಸರಕಾರ ಸೋಲಬೇಕೆಂದು ದೇಶದ ಜನರು ಬಯಸುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ದೇಶದ ಸಮಸ್ತ ರೈತರು, ದಲಿತ, ದಮನಿತರು, ಮಧ್ಯಮ ವರ್ಗದವರು, ರಾಷ್ಟ್ರದ ಸಣ್ಣ ಉದ್ದಿಮೆದಾರರು ಮತ್ತು ವ್ಯಾಪಾರಿಗಳು, ಮಹಿಳೆಯರು, ವಿದ್ಯಾರ್ಥಿಗಳು, ಕೃಷಿಕರು, ಜನಸಾಮಾನ್ಯರು ಮೋದಿ ಸೋಲಬೇಕೆಂದು ಬಯಸುತ್ತಿದ್ದಾರೆ.

ಬಿಜೆಪಿ ಒಂದು ಸ್ವತಂತ್ರವಾದ ರಾಜಕೀಯ ಪಕ್ಷವಲ್ಲ. ಅದು ನಿಜವಾಗಿ ಫ್ಯಾಶಿಸ್ಟ್ ಧೋರಣೆಯ
ಆರ್.ಎಸ್.ಎಸ್.ನ ರಾಜಕೀಯ ಶಾಖೆಯಾಗಿದೆ. ಹಾಗಾಗಿ ಅದು, ಸಂಘೀ ಗ್ಯಾಂಗಿನ ವೈದಿಕಶಾಹಿ
ನಿರ್ದೇಶನದಲ್ಲಿಯೇ ನಡೆಯುವ ಕೊಳಕು ಚಿಂತನೆಯ ಕೋಮುವಾದಿ ಪಕ್ಷವಾಗಿದೆ. ಜನರಲ್ಲಿ ಪರಸ್ಪರ
ದ್ವೇಷಭಾವನೆ ಹುಟ್ಟಿಸುವ ವಿಚ್ಛಿದ್ರಕಾರಿ ಒಡಕಿನ ಕುತಂತ್ರವೇ ಅದರ ಜೀವಾಳವಾಗಿದೆ. ನೋಟ್‍ ಬ್ಯಾನ್‌ ಮೂಲಕ ದೇಶದ ಕೋಟ್ಯಾಂತರ ಜನರ ಬದುಕನ್ನು ಬಿಜೆಪಿ ಮೂರಾಬಟ್ಟೆ ಮಾಡಿದ್ದು, ಜಿಎಸ್‌ಟಿ ಮೂಲಕ
ಸಮಸ್ತ ಬಡಜನರನ್ನು ದರೋಡೆ ಮಾಡಿದೆ. ದೇಶದ ಅನ್ನದಾತರಾದ ರೈತರನ್ನು ಕಂಗಾಲಾಗಿಸಿ, ಭಿಕಾರಿಗಳನ್ನಾಗಿ ಮಾಡಿ, ಬಂಡವಾಳಶಾಹಿಗಳ ಸುಲಿಗೆ ತೆಕ್ಕೆಗೆ ನೂಕುವ ಉದ್ದೇಶದಿಂದ ರೈತ ವಿರೋಧಿ ಕಾನೂನು ಜಾರಿಗೆ ತಂದಿದೆ.

ಒಂದೆಡೆ ಭೇಟಿ ಬಚಾವೋ, ಭೇಟಿ ಪಡಾವೋ ಎಂದು ಘೋಷಿಸುತ್ತಲೇ ಮಣಿಪುರದಲ್ಲಿ ಮಹಿಳೆಯರನ್ನು
ಅಮಾನಿಸಿದಾಗ, ದೇಶಕ್ಕೆ ಕೀರ್ತಿ ತಂದ ಒಲಿಂಪಿಕ್ಸ್ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ
ನಡೆದಾಗ, ಬಿಲ್ಕೀಸ್ ಬಾನು ಪ್ರಕರಣದ ಅಪರಾಧಿಗಳನ್ನು ಶಿಕ್ಷೆಯ ಅರ್ಧಾವಧಿಯಲ್ಲಿಯೇ ಬಿಡುಗಡೆ
ಮಾಡಿದ್ದಾಗ ಬಿಜೆಪಿ ಬಾಯಿ ಮುಚ್ಚಿಕೊಂಡಿದೆ. ಬಿಜೆಪಿ ಭ್ರಷ್ಟಾಚಾರವನ್ನು ಕೊನೆಗೊಳಿಸುತ್ತದೆ ಎಂದು ಹೇಳುತ್ತಾ ಬಂದಿತ್ತು, ಇದೀಗ ಭ್ರಷ್ಟರನ್ನೆಲ್ಲ ಪಕ್ಷಕ್ಕೆ ಸೇರಿಸಿಕೊಂಡಿದೆ. ಯುವಕರಿಗೆ 2 ಕೋಟಿ ಉದ್ಯೋಗ ಕೊಡುತ್ತೇವೆಂದು ಸುಳ್ಳು ಹೇಳಿ ಅಧಿಕಾರಕ್ಕೆ ಬಂದು ಪಕೋಡ ಮಾರಿ ಎಂದು ಅವಮಾನಿಸಿದ್ದಾರೆ, ಉದ್ಯೋಗವನ್ನು ಬಿಜೆಪಿ ನಾಶಪಡಿಸಿದೆ. ಬೆಲಯೇರಿಕೆಯಿಂದ ದೇಶದ ಜನರ ಬದುಕನ್ನ ಬರ್ಬರವನ್ನಾಗಿಸಿದೆ. ಕೋಮುವಾದವನ್ನು ಬಿತ್ತುತ್ತ ಅಲ್ಪಸಂಖ್ಯಾತರು, ದಲಿತರ ಬದುಕನ್ನು ನರಕವನ್ನಾಗಿಸಿದೆ.

ವಿದ್ಯಾರ್ಥಿಗಳ ಸ್ಕಾಲರ್‌ ಶಿಪ್‌ ನಿಲ್ಲಿಸಿ ಶಿಕ್ಷಣಕ್ಕೆ ಅಡ್ಡಿಪಡಿಸಿದೆ. ಇಡಿ, ಸಿಬಿಐ ಸೇರಿದಂತೆ ಸರಕಾರಿ ಸಂಸ್ಥೆಗಳನ್ನು ಬಳಸಿಕೊಂಡು ರಾಜಕೀಯ ವಿರೋಧಿಗಳನ್ನು ಜೈಲಿಗೆ ತಳ್ಳಿದೆ. ಚುನಾವಣಾ ಬಾಂಡ್‌ ಇಡೀ ದೇಶವನ್ನು ಕೊಳ್ಳೆ ಹೊಡೆದ ಕೋಟ್ಯಾಂತರ ಹಣವನ್ನು ಕಳ್ಳ ಮಾರ್ಗದ ಮೂಲಕ  ಸಂಗ್ರಹಿಸಿದೆ. ಕಾರ್ಪೋರೇಟರ್ಗಳ ಸಾಲವನ್ನು ಬಿಜೆಪಿ ಸರಕಾರ ಮನ್ನಾ ಮಾಡಿದ್ದು, ಬಡ, ರೈತರ ವಿದ್ಯಾರ್ಥಿಗಳಿಂದ ಬಲವಂತವಾಗಿ ಸಾಲ ವಸೂಲಾತಿಯನ್ನು ಮಾಡುತ್ತಿದೆ, ಆದ್ದರಿಂದ ಎಲ್ಲರೂ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ಚಲಾಯಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನು ಓದಿ: ಅದಾನಿ ಮಾಲಿಕತ್ವದ ಬಂದರಿನ ವಿರುದ್ಧ ಪ್ರತಿಭಟಿಸಿದ ಚರ್ಚ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಮೋದಿ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...