Homeಅಂತರಾಷ್ಟ್ರೀಯಅಫ್ಘಾನ್ ತಾಲಿಬಾನ್ ಸರ್ಕಾರದ ವಿದೇಶಾಂಗ ಸಚಿವರೊಂದಿಗೆ ಎಸ್‌. ಜೈಶಂಕರ್ ಮಾತುಕತೆ

ಅಫ್ಘಾನ್ ತಾಲಿಬಾನ್ ಸರ್ಕಾರದ ವಿದೇಶಾಂಗ ಸಚಿವರೊಂದಿಗೆ ಎಸ್‌. ಜೈಶಂಕರ್ ಮಾತುಕತೆ

- Advertisement -
- Advertisement -

ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರದ ವಿದೇಶಾಂಗ ಇಲಾಖೆ ಸಚಿವ ಮೌಲವಿ ಅಮೀರ್ ಖಾನ್ ಮುತ್ತಕಿ ಅವರೊಂದಿಗೆ ಭಾರತದ ವಿದೇಶಾಂಗ ಇಲಾಖೆ ಸಚಿವ ಎಸ್‌. ಜೈಶಂಕರ್ ಮಾತುಕತೆ ನಡೆಸಿದ್ದಾರೆ.

ಈ ಬಗ್ಗೆ ಗುರುವಾರ (ಮೇ.15) ರಾತ್ರಿ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿರುವ ಜೈಶಂಕರ್, “ಇಂದು ಸಂಜೆ ಅಫ್ಘಾನ್‌ನ ಹಂಗಾಮಿ ವಿದೇಶಾಂಗ ಸಚಿವ ಮೌಲವಿ ಅಮೀರ್ ಖಾನ್ ಮುತ್ತಕಿ ಅವರೊಂದಿಗೆ ಉತ್ತಮ ಚರ್ಚೆ ನಡೆಯಿತು. ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದಕ್ಕೆ ಅವರಿಗೆ ನಾನು ಹೃತ್ಪೂರ್ವಕವಾಗಿ ಕೃತಜ್ಞತೆ ಸಲ್ಲಿಸುತ್ತೇನೆ. ಸುಳ್ಳು ಮತ್ತು ಆಧಾರರಹಿತ ವರದಿಗಳ ಮೂಲಕ ಭಾರತ ಮತ್ತು ಅಫ್ಘಾನಿಸ್ತಾನದ ನಡುವೆ ಅಪನಂಬಿಕೆಯನ್ನು ಸೃಷ್ಟಿಸುವ ಇತ್ತೀಚಿನ ಪ್ರಯತ್ನಗಳನ್ನು ಅವರು ದೃಢವಾಗಿ ತಿರಸ್ಕರಿಸಿದ್ದನ್ನು ಸ್ವಾಗತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಮುಂದುವರಿದು, “ಅಫ್ಘಾನ್ ಜನರೊಂದಿಗಿನ ನಮ್ಮ ಸಾಂಪ್ರದಾಯಿಕ ಸ್ನೇಹ ಮತ್ತು ಅವರ ಅಭಿವೃದ್ಧಿ ಅಗತ್ಯಗಳಿಗೆ ನಿರಂತರ ಬೆಂಬಲವನ್ನು ಒತ್ತಿ ಹೇಳಲಾಯಿತು. ಸಹಕಾರವನ್ನು ಮುಂದಕ್ಕೆ ಕೊಂಡೊಯ್ಯುವ ಮಾರ್ಗಗಳು ಮತ್ತು ವಿಧಾನಗಳನ್ನು ಚರ್ಚಿಸಲಾಯಿತು” ಎಂದು ತಿಳಿಸಿದ್ದಾರೆ.

ಆಗಸ್ಟ್ 2021ರಲ್ಲಿ ಅಫ್ಘಾನಿಸ್ತಾನದ ಆಡಳಿತವನ್ನು ತಾಲಿಬಾನ್ ತನ್ನ ತೆಕ್ಕೆಗೆ ತೆಗೆದುಕೊಂಡ ಬಳಿಕ ರಾಜಕೀಯ ಮಟ್ಟದ ಮೊದಲ ಮಾತುಕತೆ ಇದಾಗಿದೆ. ಈ ವರ್ಷದ ಜನವರಿಯಲ್ಲಿ, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ದುಬೈನಲ್ಲಿ ಮುತ್ತಕಿ ಅವರನ್ನು ಭೇಟಿಯಾಗಿದ್ದರು.

ಪಹಲ್ಗಾಮ್ ದಾಳಿಯ ನಂತರ, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಫ್ಘಾನಿಸ್ತಾನ, ಇರಾನ್ ಮತ್ತು ಪಾಕಿಸ್ತಾನ ವಿಭಾಗದ ಮಹಾನಿರ್ದೇಶಕರಾದ ಭಾರತದ ವಿಶೇಷ ರಾಯಭಾರಿ ಆನಂದ್ ಪ್ರಕಾಶ್ ಅವರು ತಾಲಿಬಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರನ್ನು ಭೇಟಿ ಮಾಡಲು ಕಾಬೂಲ್‌ಗೆ ತೆರಳಿದ್ದರು. ಅಲ್ಲಿ ಅವರು, ದ್ವಿಪಕ್ಷೀಯ ರಾಜಕೀಯ ಸಂಬಂಧಗಳನ್ನು ಬಲಪಡಿಸುವುದು, ವ್ಯಾಪಾರ ಮತ್ತು ಸಾರಿಗೆ ಸಹಕಾರವನ್ನು ಹೆಚ್ಚಿಸುವುದರ ಕುರಿತು ಚರ್ಚೆ ನಡೆಸಿದ್ದಾರೆ. ಇತ್ತೀಚಿನ ಪ್ರಾದೇಶಿಕ ಬೆಳವಣಿಗೆಗಳ ಕುರಿತು ಅಭಿಪ್ರಾಯ ಹಂಚಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಕೊನೆಯದಾಗಿ ಭಾರತ-ಅಫ್ಘಾನಿಸ್ತಾನ ನಡುವೆ ರಾಜಕೀಯ ಮಟ್ಟದ ಮಾತುಕತೆ ನಡೆದಿರುವುದು 1999–2000ದಲ್ಲಿ. ಆಗ ವಿದೇಶಾಂಗ ಸಚಿವರಾಗಿದ್ದ ಜಸ್ವಂತ್ ಸಿಂಗ್ ಅವರು ಡಿಸೆಂಬರ್ 1999ರಲ್ಲಿ ಕಂದಹಾರ್‌ಗೆ ಇಂಡಿಯನ್ ಏರ್‌ಲೈನ್ಸ್ ವಿಮಾನ IC-814 ಅನ್ನು ಅಪಹರಿಸಿದ ವೇಳೆ ತಾಲಿಬಾನ್ ವಿದೇಶಾಂಗ ಸಚಿವ ವಕೀಲ್ ಅಹ್ಮದ್ ಮುತ್ತವಾಕಿಲ್ ಅವರನ್ನು ಸಂಪರ್ಕಿಸಿದ್ದರು.

‘ನಾವು ಪಾಕಿಸ್ತಾನದ ಭಾಗವಲ್ಲ’: ಸ್ವತಂತ್ರ ರಾಷ್ಟ್ರವೆಂದು ಘೋಷಿಸಿಕೊಂಡ ಬಲೂಚಿಸ್ತಾನ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...