Homeಅಂತರಾಷ್ಟ್ರೀಯಅಫ್ಘಾನ್ ತಾಲಿಬಾನ್ ಸರ್ಕಾರದ ವಿದೇಶಾಂಗ ಸಚಿವರೊಂದಿಗೆ ಎಸ್‌. ಜೈಶಂಕರ್ ಮಾತುಕತೆ

ಅಫ್ಘಾನ್ ತಾಲಿಬಾನ್ ಸರ್ಕಾರದ ವಿದೇಶಾಂಗ ಸಚಿವರೊಂದಿಗೆ ಎಸ್‌. ಜೈಶಂಕರ್ ಮಾತುಕತೆ

- Advertisement -
- Advertisement -

ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರದ ವಿದೇಶಾಂಗ ಇಲಾಖೆ ಸಚಿವ ಮೌಲವಿ ಅಮೀರ್ ಖಾನ್ ಮುತ್ತಕಿ ಅವರೊಂದಿಗೆ ಭಾರತದ ವಿದೇಶಾಂಗ ಇಲಾಖೆ ಸಚಿವ ಎಸ್‌. ಜೈಶಂಕರ್ ಮಾತುಕತೆ ನಡೆಸಿದ್ದಾರೆ.

ಈ ಬಗ್ಗೆ ಗುರುವಾರ (ಮೇ.15) ರಾತ್ರಿ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿರುವ ಜೈಶಂಕರ್, “ಇಂದು ಸಂಜೆ ಅಫ್ಘಾನ್‌ನ ಹಂಗಾಮಿ ವಿದೇಶಾಂಗ ಸಚಿವ ಮೌಲವಿ ಅಮೀರ್ ಖಾನ್ ಮುತ್ತಕಿ ಅವರೊಂದಿಗೆ ಉತ್ತಮ ಚರ್ಚೆ ನಡೆಯಿತು. ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದಕ್ಕೆ ಅವರಿಗೆ ನಾನು ಹೃತ್ಪೂರ್ವಕವಾಗಿ ಕೃತಜ್ಞತೆ ಸಲ್ಲಿಸುತ್ತೇನೆ. ಸುಳ್ಳು ಮತ್ತು ಆಧಾರರಹಿತ ವರದಿಗಳ ಮೂಲಕ ಭಾರತ ಮತ್ತು ಅಫ್ಘಾನಿಸ್ತಾನದ ನಡುವೆ ಅಪನಂಬಿಕೆಯನ್ನು ಸೃಷ್ಟಿಸುವ ಇತ್ತೀಚಿನ ಪ್ರಯತ್ನಗಳನ್ನು ಅವರು ದೃಢವಾಗಿ ತಿರಸ್ಕರಿಸಿದ್ದನ್ನು ಸ್ವಾಗತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಮುಂದುವರಿದು, “ಅಫ್ಘಾನ್ ಜನರೊಂದಿಗಿನ ನಮ್ಮ ಸಾಂಪ್ರದಾಯಿಕ ಸ್ನೇಹ ಮತ್ತು ಅವರ ಅಭಿವೃದ್ಧಿ ಅಗತ್ಯಗಳಿಗೆ ನಿರಂತರ ಬೆಂಬಲವನ್ನು ಒತ್ತಿ ಹೇಳಲಾಯಿತು. ಸಹಕಾರವನ್ನು ಮುಂದಕ್ಕೆ ಕೊಂಡೊಯ್ಯುವ ಮಾರ್ಗಗಳು ಮತ್ತು ವಿಧಾನಗಳನ್ನು ಚರ್ಚಿಸಲಾಯಿತು” ಎಂದು ತಿಳಿಸಿದ್ದಾರೆ.

ಆಗಸ್ಟ್ 2021ರಲ್ಲಿ ಅಫ್ಘಾನಿಸ್ತಾನದ ಆಡಳಿತವನ್ನು ತಾಲಿಬಾನ್ ತನ್ನ ತೆಕ್ಕೆಗೆ ತೆಗೆದುಕೊಂಡ ಬಳಿಕ ರಾಜಕೀಯ ಮಟ್ಟದ ಮೊದಲ ಮಾತುಕತೆ ಇದಾಗಿದೆ. ಈ ವರ್ಷದ ಜನವರಿಯಲ್ಲಿ, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ದುಬೈನಲ್ಲಿ ಮುತ್ತಕಿ ಅವರನ್ನು ಭೇಟಿಯಾಗಿದ್ದರು.

ಪಹಲ್ಗಾಮ್ ದಾಳಿಯ ನಂತರ, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಫ್ಘಾನಿಸ್ತಾನ, ಇರಾನ್ ಮತ್ತು ಪಾಕಿಸ್ತಾನ ವಿಭಾಗದ ಮಹಾನಿರ್ದೇಶಕರಾದ ಭಾರತದ ವಿಶೇಷ ರಾಯಭಾರಿ ಆನಂದ್ ಪ್ರಕಾಶ್ ಅವರು ತಾಲಿಬಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರನ್ನು ಭೇಟಿ ಮಾಡಲು ಕಾಬೂಲ್‌ಗೆ ತೆರಳಿದ್ದರು. ಅಲ್ಲಿ ಅವರು, ದ್ವಿಪಕ್ಷೀಯ ರಾಜಕೀಯ ಸಂಬಂಧಗಳನ್ನು ಬಲಪಡಿಸುವುದು, ವ್ಯಾಪಾರ ಮತ್ತು ಸಾರಿಗೆ ಸಹಕಾರವನ್ನು ಹೆಚ್ಚಿಸುವುದರ ಕುರಿತು ಚರ್ಚೆ ನಡೆಸಿದ್ದಾರೆ. ಇತ್ತೀಚಿನ ಪ್ರಾದೇಶಿಕ ಬೆಳವಣಿಗೆಗಳ ಕುರಿತು ಅಭಿಪ್ರಾಯ ಹಂಚಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಕೊನೆಯದಾಗಿ ಭಾರತ-ಅಫ್ಘಾನಿಸ್ತಾನ ನಡುವೆ ರಾಜಕೀಯ ಮಟ್ಟದ ಮಾತುಕತೆ ನಡೆದಿರುವುದು 1999–2000ದಲ್ಲಿ. ಆಗ ವಿದೇಶಾಂಗ ಸಚಿವರಾಗಿದ್ದ ಜಸ್ವಂತ್ ಸಿಂಗ್ ಅವರು ಡಿಸೆಂಬರ್ 1999ರಲ್ಲಿ ಕಂದಹಾರ್‌ಗೆ ಇಂಡಿಯನ್ ಏರ್‌ಲೈನ್ಸ್ ವಿಮಾನ IC-814 ಅನ್ನು ಅಪಹರಿಸಿದ ವೇಳೆ ತಾಲಿಬಾನ್ ವಿದೇಶಾಂಗ ಸಚಿವ ವಕೀಲ್ ಅಹ್ಮದ್ ಮುತ್ತವಾಕಿಲ್ ಅವರನ್ನು ಸಂಪರ್ಕಿಸಿದ್ದರು.

‘ನಾವು ಪಾಕಿಸ್ತಾನದ ಭಾಗವಲ್ಲ’: ಸ್ವತಂತ್ರ ರಾಷ್ಟ್ರವೆಂದು ಘೋಷಿಸಿಕೊಂಡ ಬಲೂಚಿಸ್ತಾನ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...