Homeಕರ್ನಾಟಕಈ ದೇಶದ ಸಂವಿಧಾನವನ್ನೆ ಒಪ್ಪದ ಮನುವ್ಯಾಧಿಗಳಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

ಈ ದೇಶದ ಸಂವಿಧಾನವನ್ನೆ ಒಪ್ಪದ ಮನುವ್ಯಾಧಿಗಳಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

- Advertisement -
| ಗೌರಿ | ಬೆಂಗಳೂರು.
ನಮ್ಮ ಸಮಾಜದ 90% ಜನವರ್ಗಗಳ ಬೆಳಕಾಗಿ ಸಂವಿಧಾನ ರಚನೆಗೊಂಡಿದೆ. ಈ ಸಂವಿಧಾನ ಜಾರಿಗೊಂಡ ದಿನದಿಂದಲೂ ಸಂಘಪರಿವಾರದ ‘ಬ್ರಾಹ್ಮಣ್ಯ’ವಾದಿಗಳು ಒಂದಲ್ಲಾ ಒಂದು ರೀತಿಯಲ್ಲಿ ಅಪಸ್ವರವನ್ನು ಎತ್ತುತ್ತಾ ಬರುತ್ತಿದ್ದಾರೆ. ಈಗ ಬ್ರಾಹ್ಮಣ್ಯವಾದಿಗಳು ಅಧಿಕಾರದ ಚುಕ್ಕಾಣಿ ಹಿಡಿದಿರುವುದರಿಂದ ಸಂವಿಧಾನವನ್ನು ಸುಡುವ ಮಾತುಗಳನ್ನು ಬಹಿರಂಗವಾಗಿಯೇ ಆಡಲಾಗುತ್ತಿದೆಯಲ್ಲದೇ, ಬದಲಾವಣೆ ಮಾಡಿಯೇ ತೀರುತ್ತೇವೆ ಎಂದು ಹೇಳುತ್ತಿದ್ದಾರೆ. ಆಡಳಿತದಲ್ಲೂ ಸಂವಿಧಾನದ ಆಶಯಗಳಿಗೆ ಧಕ್ಕೆ ತರಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್‍ರವರ ಪ್ರಜಾತಾಂತ್ರಿಕ ಚಿಂತನೆಗೆ ಮಸಿ ಬಳಿಯುವ, ಬುಡಮೇಲು ಮಾಡುವ ಕೃತ್ಯಕ್ಕೇ ಕೈ ಹಾಕಲಾಗುತ್ತಿದೆ. ಇದಕ್ಕೆ ಬೇಕಾದ ಚಿಂತನಾ ತಳಹದಿಯನ್ನು ರೂಪಿಸುವ ಕೆಲಸವನ್ನು ಭೈರಪ್ಪರಂಥವರು ಮಾಡುತ್ತಿದ್ದಾರೆ.
ಇತ್ತೀಚೆಗೆ ಈ ತಲೆಕೆಟ್ಟ ಭೈರಪ್ಪ ತನ್ನ ನಾಲಿಗೆಯನ್ನು ಹರಿಬಿಟ್ಟು ‘ಮಹಿಳೆಯರಿಗೆ ಸ್ವಾತಂತ್ರ ಜಾಸ್ತಿಯಾಯಿತು, ಈ ಸಂವಿಧಾನದಿಂದಲೇ ಮಹಿಳೆಯರಿಗೆ ಈ ರೀತಿಯ ಅವಕಾಶಗಳು ಸಿಗುತ್ತಿವೆ, ಸಂವಿಧಾನ ಮನುವಿನ ಕಾಲದ ಪರಂಪರೆಯನ್ನು ಒಳಗೊಂಡಿಲ್ಲ’ವೆಂದು ತನ್ನ ಬ್ರಾಹ್ಮಣ್ಯ ಮನಸ್ಥಿತಿಯನ್ನು ಹೊರಹಾಕಿದ್ದಾನೆ. ಇವರ ದೃಷ್ಟಿಯಲ್ಲಿ ಹೆಣ್ಣೆಂದರೆ ಭೋಗದ ವಸ್ತು, ಗಂಡಸರ ಸೇವೆಗಾಗಿಯೇ ಇರುವ ಪ್ರಾಣಿಯ ಇನ್ನೊಂದು ರೂಪ, ಮಕ್ಕಳನ್ನು ಹೆರುವ ಯಂತ್ರ,  ಮನೆಗೆಲಸಕ್ಕೆಂದೇ ಇರುವ ಆಳುಗಳು ಬೇಕೆಂದಾಗ ಬಳಸಿ, ಬೇಡವೆಂದಾಗ ಬಿಸಾಡುವ ವಸ್ತು. ಮನೆಯ ಹೊಸ್ತಿಲ ಗೆರೆ ದಾಟಬಾರದ, ಓದಿನಲ್ಲಿ, ಉನ್ನತ ಹುದ್ದೆಯನ್ನು ಪಡೆಯಲು ಅನರ್ಹಳು. ಇದನ್ನೇ ಮನುಧರ್ಮಶಾಸ್ತ್ರ ಹೇಳುತ್ತದೆ. ಇದು ಅವರ ದೃಷ್ಟಿಯಲ್ಲಿ ಹಿಂದೂ ಪರಂಪರೆ, ಸಂಸ್ಕೃತಿ.
ಈ ದೇಶದ ಜಾತಿಯಾಧಾರಿತ ಶೋಷಿತ ಸಮುದಾಯಗಳೂ ಸಹ ಹಿಂದೂ ಧರ್ಮದ ಪ್ರಕಾರ ಪ್ರಾಣಿಗಳಿಗಿಂತ ಕಡೆ. ಬೈರಪ್ಪನವರ ಪರಂಪರೆಯಲ್ಲಿ ಜಾತಿಯೇ ಶ್ರೇಷ್ಠ, ಮಾನವೀಯತೆಯಲ್ಲ. ಮೇಲ್ಜಾತಿಗಳಿಗೆ ಕೆಳ ಜಾತಿಗಳು ಅಧೀನವಾಗಿರಬೇಕು. ಒಬ್ಬ ಮನುಷ್ಯ ಇನ್ನೊಬ್ಬ ಮನುಷ್ಯನನ್ನು ಮನುಷ್ಯನ ರೀತಿ ನೋಡದೇ ಇರುವುದೇ ಅವರ ಹಿಂದೂ ಧರ್ಮ. ಇಂಥಹ ಧರ್ಮವು ಅವರಿಗೆ ಶ್ರೇಷ್ಠ ಹೇಗಾಗುತ್ತದೆಂದು ಸಂವಿಧಾನ ಪ್ರಶ್ನೆ ಮಾಡುತ್ತದೆ, ಮಹಿಳೆಯು ಪುರುಷನಷ್ಟೇ ಸಮಾನಳು ಎಂದು ಪ್ರತಿಪಾದಿಸುತ್ತದೆ, ಸಂವಿಧಾನ ಈ ದೇಶದ ಎಲ್ಲಾ ಜಾತಿಯವರಿಗೂ ಸಮಾನತೆಯನ್ನು ಹೇಳುವುದಲ್ಲದೆ, ಪರಸ್ಪರ ಗೌರವದಿಂದ ಬದುಕಬೇಕೆಂದು ಪ್ರತಿಪಾದಿಸುತ್ತದೆ. ಹಿಂದೂ ಧರ್ಮ, ಮನುಧರ್ಮಶಾಸ್ತ್ರದ ಕಲ್ಮಶವನ್ನು  ತಲೆಯಲ್ಲಿಟ್ಟುಕೊಂಡಿರುವವರಿಗೆ ಈ ಮಾನವೀಯ ನೆಲೆಯ ಸಂವಿಧಾನವನ್ನು ಒಪ್ಪಲು ಸಾದ್ಯವಿಲ್ಲ. ದೇಶ ಧರ್ಮದ ಆಧಾರದಲ್ಲಿ ನಡೆಯಬಾರದೆಂದು ಪ್ರತಿಪಾದಿಸಿದ್ದ ಅಂಬೇಡ್ಕರ್ ಇದನ್ನು ಅರ್ಥ ಮಾಡಿಕೊಂಡು ಸಂವಿಧಾನದಲ್ಲಿ  ಕಡಿವಾಣ ಹಾಕುವ ಪ್ರಯತ್ನ ಮಾಡಿದ್ದಾರೆ. ಹಾಗಾಗಿಯೇ ಈ ಸಂವಿಧಾನವನ್ನು ಅವರು ಒಪ್ಪಲು ಸಾಧ್ಯವಿಲ್ಲ.
ಈ ಸಂವಿಧಾನ ರಚನೆಯೇ ಮನುವಾದಿಗಳಿಗೆ ಮೊದಲ ಸೋಲಾಗಿದೆ. ಸಂವಿಧಾನ ರಚನೆಗೆ ಮುಂಚೆಯೇ ಅದರ ವಿರುದ್ದ ಅಪಸ್ವರ ಎತ್ತಿದ್ದಲ್ಲದೆ, ದೇಶದ 79 ಕಡೆ ಪ್ರತಿಭಟನೆಯನ್ನು ಸಹ ಮಾಡಿದ್ದರು. ಹಿಂದೆ ಬುದ್ದ, ಬಸವಣ್ಣನ ಕಾಲದಲ್ಲಿ ಸೋಲುಂಡವರು, ಪುನಃ ಸಂವಿಧಾನದ ಮೂಲಕ ನಿಯಂತ್ರಣದಲ್ಲಿದ್ದಾರೆ. ಒಂದು ವೇಳೆ ಇದರಲ್ಲಿ ಸಂವಿಧಾನ ಸೋತರೆ ಈ ದೇಶದ ಸಮಸ್ತ ಶೋಷಿತ ಸಮುದಾಯಗಳ, ಮೇಲ್ಜಾತಿ ಮಹಿಳೆಯರೂ ಒಳಗೊಂಡಂತೆ ಎಲ್ಲಾ ಮಹಿಳೆಯರ ಸೋಲಾಗುತ್ತದೆ. ಸ್ವಾತಂತ್ರ್ಯ, ಸಮಾನತೆಯ ಸೋಲಾಗುತ್ತದೆ. ಸಂವಿಧಾನವನ್ನು ಉಳಿಸಿ-ಪೋಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...