Homeಕರ್ನಾಟಕಈ ದೇಶದ ಸಂವಿಧಾನವನ್ನೆ ಒಪ್ಪದ ಮನುವ್ಯಾಧಿಗಳಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

ಈ ದೇಶದ ಸಂವಿಧಾನವನ್ನೆ ಒಪ್ಪದ ಮನುವ್ಯಾಧಿಗಳಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

- Advertisement -
| ಗೌರಿ | ಬೆಂಗಳೂರು.
ನಮ್ಮ ಸಮಾಜದ 90% ಜನವರ್ಗಗಳ ಬೆಳಕಾಗಿ ಸಂವಿಧಾನ ರಚನೆಗೊಂಡಿದೆ. ಈ ಸಂವಿಧಾನ ಜಾರಿಗೊಂಡ ದಿನದಿಂದಲೂ ಸಂಘಪರಿವಾರದ ‘ಬ್ರಾಹ್ಮಣ್ಯ’ವಾದಿಗಳು ಒಂದಲ್ಲಾ ಒಂದು ರೀತಿಯಲ್ಲಿ ಅಪಸ್ವರವನ್ನು ಎತ್ತುತ್ತಾ ಬರುತ್ತಿದ್ದಾರೆ. ಈಗ ಬ್ರಾಹ್ಮಣ್ಯವಾದಿಗಳು ಅಧಿಕಾರದ ಚುಕ್ಕಾಣಿ ಹಿಡಿದಿರುವುದರಿಂದ ಸಂವಿಧಾನವನ್ನು ಸುಡುವ ಮಾತುಗಳನ್ನು ಬಹಿರಂಗವಾಗಿಯೇ ಆಡಲಾಗುತ್ತಿದೆಯಲ್ಲದೇ, ಬದಲಾವಣೆ ಮಾಡಿಯೇ ತೀರುತ್ತೇವೆ ಎಂದು ಹೇಳುತ್ತಿದ್ದಾರೆ. ಆಡಳಿತದಲ್ಲೂ ಸಂವಿಧಾನದ ಆಶಯಗಳಿಗೆ ಧಕ್ಕೆ ತರಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್‍ರವರ ಪ್ರಜಾತಾಂತ್ರಿಕ ಚಿಂತನೆಗೆ ಮಸಿ ಬಳಿಯುವ, ಬುಡಮೇಲು ಮಾಡುವ ಕೃತ್ಯಕ್ಕೇ ಕೈ ಹಾಕಲಾಗುತ್ತಿದೆ. ಇದಕ್ಕೆ ಬೇಕಾದ ಚಿಂತನಾ ತಳಹದಿಯನ್ನು ರೂಪಿಸುವ ಕೆಲಸವನ್ನು ಭೈರಪ್ಪರಂಥವರು ಮಾಡುತ್ತಿದ್ದಾರೆ.
ಇತ್ತೀಚೆಗೆ ಈ ತಲೆಕೆಟ್ಟ ಭೈರಪ್ಪ ತನ್ನ ನಾಲಿಗೆಯನ್ನು ಹರಿಬಿಟ್ಟು ‘ಮಹಿಳೆಯರಿಗೆ ಸ್ವಾತಂತ್ರ ಜಾಸ್ತಿಯಾಯಿತು, ಈ ಸಂವಿಧಾನದಿಂದಲೇ ಮಹಿಳೆಯರಿಗೆ ಈ ರೀತಿಯ ಅವಕಾಶಗಳು ಸಿಗುತ್ತಿವೆ, ಸಂವಿಧಾನ ಮನುವಿನ ಕಾಲದ ಪರಂಪರೆಯನ್ನು ಒಳಗೊಂಡಿಲ್ಲ’ವೆಂದು ತನ್ನ ಬ್ರಾಹ್ಮಣ್ಯ ಮನಸ್ಥಿತಿಯನ್ನು ಹೊರಹಾಕಿದ್ದಾನೆ. ಇವರ ದೃಷ್ಟಿಯಲ್ಲಿ ಹೆಣ್ಣೆಂದರೆ ಭೋಗದ ವಸ್ತು, ಗಂಡಸರ ಸೇವೆಗಾಗಿಯೇ ಇರುವ ಪ್ರಾಣಿಯ ಇನ್ನೊಂದು ರೂಪ, ಮಕ್ಕಳನ್ನು ಹೆರುವ ಯಂತ್ರ,  ಮನೆಗೆಲಸಕ್ಕೆಂದೇ ಇರುವ ಆಳುಗಳು ಬೇಕೆಂದಾಗ ಬಳಸಿ, ಬೇಡವೆಂದಾಗ ಬಿಸಾಡುವ ವಸ್ತು. ಮನೆಯ ಹೊಸ್ತಿಲ ಗೆರೆ ದಾಟಬಾರದ, ಓದಿನಲ್ಲಿ, ಉನ್ನತ ಹುದ್ದೆಯನ್ನು ಪಡೆಯಲು ಅನರ್ಹಳು. ಇದನ್ನೇ ಮನುಧರ್ಮಶಾಸ್ತ್ರ ಹೇಳುತ್ತದೆ. ಇದು ಅವರ ದೃಷ್ಟಿಯಲ್ಲಿ ಹಿಂದೂ ಪರಂಪರೆ, ಸಂಸ್ಕೃತಿ.
ಈ ದೇಶದ ಜಾತಿಯಾಧಾರಿತ ಶೋಷಿತ ಸಮುದಾಯಗಳೂ ಸಹ ಹಿಂದೂ ಧರ್ಮದ ಪ್ರಕಾರ ಪ್ರಾಣಿಗಳಿಗಿಂತ ಕಡೆ. ಬೈರಪ್ಪನವರ ಪರಂಪರೆಯಲ್ಲಿ ಜಾತಿಯೇ ಶ್ರೇಷ್ಠ, ಮಾನವೀಯತೆಯಲ್ಲ. ಮೇಲ್ಜಾತಿಗಳಿಗೆ ಕೆಳ ಜಾತಿಗಳು ಅಧೀನವಾಗಿರಬೇಕು. ಒಬ್ಬ ಮನುಷ್ಯ ಇನ್ನೊಬ್ಬ ಮನುಷ್ಯನನ್ನು ಮನುಷ್ಯನ ರೀತಿ ನೋಡದೇ ಇರುವುದೇ ಅವರ ಹಿಂದೂ ಧರ್ಮ. ಇಂಥಹ ಧರ್ಮವು ಅವರಿಗೆ ಶ್ರೇಷ್ಠ ಹೇಗಾಗುತ್ತದೆಂದು ಸಂವಿಧಾನ ಪ್ರಶ್ನೆ ಮಾಡುತ್ತದೆ, ಮಹಿಳೆಯು ಪುರುಷನಷ್ಟೇ ಸಮಾನಳು ಎಂದು ಪ್ರತಿಪಾದಿಸುತ್ತದೆ, ಸಂವಿಧಾನ ಈ ದೇಶದ ಎಲ್ಲಾ ಜಾತಿಯವರಿಗೂ ಸಮಾನತೆಯನ್ನು ಹೇಳುವುದಲ್ಲದೆ, ಪರಸ್ಪರ ಗೌರವದಿಂದ ಬದುಕಬೇಕೆಂದು ಪ್ರತಿಪಾದಿಸುತ್ತದೆ. ಹಿಂದೂ ಧರ್ಮ, ಮನುಧರ್ಮಶಾಸ್ತ್ರದ ಕಲ್ಮಶವನ್ನು  ತಲೆಯಲ್ಲಿಟ್ಟುಕೊಂಡಿರುವವರಿಗೆ ಈ ಮಾನವೀಯ ನೆಲೆಯ ಸಂವಿಧಾನವನ್ನು ಒಪ್ಪಲು ಸಾದ್ಯವಿಲ್ಲ. ದೇಶ ಧರ್ಮದ ಆಧಾರದಲ್ಲಿ ನಡೆಯಬಾರದೆಂದು ಪ್ರತಿಪಾದಿಸಿದ್ದ ಅಂಬೇಡ್ಕರ್ ಇದನ್ನು ಅರ್ಥ ಮಾಡಿಕೊಂಡು ಸಂವಿಧಾನದಲ್ಲಿ  ಕಡಿವಾಣ ಹಾಕುವ ಪ್ರಯತ್ನ ಮಾಡಿದ್ದಾರೆ. ಹಾಗಾಗಿಯೇ ಈ ಸಂವಿಧಾನವನ್ನು ಅವರು ಒಪ್ಪಲು ಸಾಧ್ಯವಿಲ್ಲ.
ಈ ಸಂವಿಧಾನ ರಚನೆಯೇ ಮನುವಾದಿಗಳಿಗೆ ಮೊದಲ ಸೋಲಾಗಿದೆ. ಸಂವಿಧಾನ ರಚನೆಗೆ ಮುಂಚೆಯೇ ಅದರ ವಿರುದ್ದ ಅಪಸ್ವರ ಎತ್ತಿದ್ದಲ್ಲದೆ, ದೇಶದ 79 ಕಡೆ ಪ್ರತಿಭಟನೆಯನ್ನು ಸಹ ಮಾಡಿದ್ದರು. ಹಿಂದೆ ಬುದ್ದ, ಬಸವಣ್ಣನ ಕಾಲದಲ್ಲಿ ಸೋಲುಂಡವರು, ಪುನಃ ಸಂವಿಧಾನದ ಮೂಲಕ ನಿಯಂತ್ರಣದಲ್ಲಿದ್ದಾರೆ. ಒಂದು ವೇಳೆ ಇದರಲ್ಲಿ ಸಂವಿಧಾನ ಸೋತರೆ ಈ ದೇಶದ ಸಮಸ್ತ ಶೋಷಿತ ಸಮುದಾಯಗಳ, ಮೇಲ್ಜಾತಿ ಮಹಿಳೆಯರೂ ಒಳಗೊಂಡಂತೆ ಎಲ್ಲಾ ಮಹಿಳೆಯರ ಸೋಲಾಗುತ್ತದೆ. ಸ್ವಾತಂತ್ರ್ಯ, ಸಮಾನತೆಯ ಸೋಲಾಗುತ್ತದೆ. ಸಂವಿಧಾನವನ್ನು ಉಳಿಸಿ-ಪೋಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...