Homeಕರ್ನಾಟಕಈ ದೇಶದ ಸಂವಿಧಾನವನ್ನೆ ಒಪ್ಪದ ಮನುವ್ಯಾಧಿಗಳಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

ಈ ದೇಶದ ಸಂವಿಧಾನವನ್ನೆ ಒಪ್ಪದ ಮನುವ್ಯಾಧಿಗಳಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

- Advertisement -
| ಗೌರಿ | ಬೆಂಗಳೂರು.
ನಮ್ಮ ಸಮಾಜದ 90% ಜನವರ್ಗಗಳ ಬೆಳಕಾಗಿ ಸಂವಿಧಾನ ರಚನೆಗೊಂಡಿದೆ. ಈ ಸಂವಿಧಾನ ಜಾರಿಗೊಂಡ ದಿನದಿಂದಲೂ ಸಂಘಪರಿವಾರದ ‘ಬ್ರಾಹ್ಮಣ್ಯ’ವಾದಿಗಳು ಒಂದಲ್ಲಾ ಒಂದು ರೀತಿಯಲ್ಲಿ ಅಪಸ್ವರವನ್ನು ಎತ್ತುತ್ತಾ ಬರುತ್ತಿದ್ದಾರೆ. ಈಗ ಬ್ರಾಹ್ಮಣ್ಯವಾದಿಗಳು ಅಧಿಕಾರದ ಚುಕ್ಕಾಣಿ ಹಿಡಿದಿರುವುದರಿಂದ ಸಂವಿಧಾನವನ್ನು ಸುಡುವ ಮಾತುಗಳನ್ನು ಬಹಿರಂಗವಾಗಿಯೇ ಆಡಲಾಗುತ್ತಿದೆಯಲ್ಲದೇ, ಬದಲಾವಣೆ ಮಾಡಿಯೇ ತೀರುತ್ತೇವೆ ಎಂದು ಹೇಳುತ್ತಿದ್ದಾರೆ. ಆಡಳಿತದಲ್ಲೂ ಸಂವಿಧಾನದ ಆಶಯಗಳಿಗೆ ಧಕ್ಕೆ ತರಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್‍ರವರ ಪ್ರಜಾತಾಂತ್ರಿಕ ಚಿಂತನೆಗೆ ಮಸಿ ಬಳಿಯುವ, ಬುಡಮೇಲು ಮಾಡುವ ಕೃತ್ಯಕ್ಕೇ ಕೈ ಹಾಕಲಾಗುತ್ತಿದೆ. ಇದಕ್ಕೆ ಬೇಕಾದ ಚಿಂತನಾ ತಳಹದಿಯನ್ನು ರೂಪಿಸುವ ಕೆಲಸವನ್ನು ಭೈರಪ್ಪರಂಥವರು ಮಾಡುತ್ತಿದ್ದಾರೆ.
ಇತ್ತೀಚೆಗೆ ಈ ತಲೆಕೆಟ್ಟ ಭೈರಪ್ಪ ತನ್ನ ನಾಲಿಗೆಯನ್ನು ಹರಿಬಿಟ್ಟು ‘ಮಹಿಳೆಯರಿಗೆ ಸ್ವಾತಂತ್ರ ಜಾಸ್ತಿಯಾಯಿತು, ಈ ಸಂವಿಧಾನದಿಂದಲೇ ಮಹಿಳೆಯರಿಗೆ ಈ ರೀತಿಯ ಅವಕಾಶಗಳು ಸಿಗುತ್ತಿವೆ, ಸಂವಿಧಾನ ಮನುವಿನ ಕಾಲದ ಪರಂಪರೆಯನ್ನು ಒಳಗೊಂಡಿಲ್ಲ’ವೆಂದು ತನ್ನ ಬ್ರಾಹ್ಮಣ್ಯ ಮನಸ್ಥಿತಿಯನ್ನು ಹೊರಹಾಕಿದ್ದಾನೆ. ಇವರ ದೃಷ್ಟಿಯಲ್ಲಿ ಹೆಣ್ಣೆಂದರೆ ಭೋಗದ ವಸ್ತು, ಗಂಡಸರ ಸೇವೆಗಾಗಿಯೇ ಇರುವ ಪ್ರಾಣಿಯ ಇನ್ನೊಂದು ರೂಪ, ಮಕ್ಕಳನ್ನು ಹೆರುವ ಯಂತ್ರ,  ಮನೆಗೆಲಸಕ್ಕೆಂದೇ ಇರುವ ಆಳುಗಳು ಬೇಕೆಂದಾಗ ಬಳಸಿ, ಬೇಡವೆಂದಾಗ ಬಿಸಾಡುವ ವಸ್ತು. ಮನೆಯ ಹೊಸ್ತಿಲ ಗೆರೆ ದಾಟಬಾರದ, ಓದಿನಲ್ಲಿ, ಉನ್ನತ ಹುದ್ದೆಯನ್ನು ಪಡೆಯಲು ಅನರ್ಹಳು. ಇದನ್ನೇ ಮನುಧರ್ಮಶಾಸ್ತ್ರ ಹೇಳುತ್ತದೆ. ಇದು ಅವರ ದೃಷ್ಟಿಯಲ್ಲಿ ಹಿಂದೂ ಪರಂಪರೆ, ಸಂಸ್ಕೃತಿ.
ಈ ದೇಶದ ಜಾತಿಯಾಧಾರಿತ ಶೋಷಿತ ಸಮುದಾಯಗಳೂ ಸಹ ಹಿಂದೂ ಧರ್ಮದ ಪ್ರಕಾರ ಪ್ರಾಣಿಗಳಿಗಿಂತ ಕಡೆ. ಬೈರಪ್ಪನವರ ಪರಂಪರೆಯಲ್ಲಿ ಜಾತಿಯೇ ಶ್ರೇಷ್ಠ, ಮಾನವೀಯತೆಯಲ್ಲ. ಮೇಲ್ಜಾತಿಗಳಿಗೆ ಕೆಳ ಜಾತಿಗಳು ಅಧೀನವಾಗಿರಬೇಕು. ಒಬ್ಬ ಮನುಷ್ಯ ಇನ್ನೊಬ್ಬ ಮನುಷ್ಯನನ್ನು ಮನುಷ್ಯನ ರೀತಿ ನೋಡದೇ ಇರುವುದೇ ಅವರ ಹಿಂದೂ ಧರ್ಮ. ಇಂಥಹ ಧರ್ಮವು ಅವರಿಗೆ ಶ್ರೇಷ್ಠ ಹೇಗಾಗುತ್ತದೆಂದು ಸಂವಿಧಾನ ಪ್ರಶ್ನೆ ಮಾಡುತ್ತದೆ, ಮಹಿಳೆಯು ಪುರುಷನಷ್ಟೇ ಸಮಾನಳು ಎಂದು ಪ್ರತಿಪಾದಿಸುತ್ತದೆ, ಸಂವಿಧಾನ ಈ ದೇಶದ ಎಲ್ಲಾ ಜಾತಿಯವರಿಗೂ ಸಮಾನತೆಯನ್ನು ಹೇಳುವುದಲ್ಲದೆ, ಪರಸ್ಪರ ಗೌರವದಿಂದ ಬದುಕಬೇಕೆಂದು ಪ್ರತಿಪಾದಿಸುತ್ತದೆ. ಹಿಂದೂ ಧರ್ಮ, ಮನುಧರ್ಮಶಾಸ್ತ್ರದ ಕಲ್ಮಶವನ್ನು  ತಲೆಯಲ್ಲಿಟ್ಟುಕೊಂಡಿರುವವರಿಗೆ ಈ ಮಾನವೀಯ ನೆಲೆಯ ಸಂವಿಧಾನವನ್ನು ಒಪ್ಪಲು ಸಾದ್ಯವಿಲ್ಲ. ದೇಶ ಧರ್ಮದ ಆಧಾರದಲ್ಲಿ ನಡೆಯಬಾರದೆಂದು ಪ್ರತಿಪಾದಿಸಿದ್ದ ಅಂಬೇಡ್ಕರ್ ಇದನ್ನು ಅರ್ಥ ಮಾಡಿಕೊಂಡು ಸಂವಿಧಾನದಲ್ಲಿ  ಕಡಿವಾಣ ಹಾಕುವ ಪ್ರಯತ್ನ ಮಾಡಿದ್ದಾರೆ. ಹಾಗಾಗಿಯೇ ಈ ಸಂವಿಧಾನವನ್ನು ಅವರು ಒಪ್ಪಲು ಸಾಧ್ಯವಿಲ್ಲ.
ಈ ಸಂವಿಧಾನ ರಚನೆಯೇ ಮನುವಾದಿಗಳಿಗೆ ಮೊದಲ ಸೋಲಾಗಿದೆ. ಸಂವಿಧಾನ ರಚನೆಗೆ ಮುಂಚೆಯೇ ಅದರ ವಿರುದ್ದ ಅಪಸ್ವರ ಎತ್ತಿದ್ದಲ್ಲದೆ, ದೇಶದ 79 ಕಡೆ ಪ್ರತಿಭಟನೆಯನ್ನು ಸಹ ಮಾಡಿದ್ದರು. ಹಿಂದೆ ಬುದ್ದ, ಬಸವಣ್ಣನ ಕಾಲದಲ್ಲಿ ಸೋಲುಂಡವರು, ಪುನಃ ಸಂವಿಧಾನದ ಮೂಲಕ ನಿಯಂತ್ರಣದಲ್ಲಿದ್ದಾರೆ. ಒಂದು ವೇಳೆ ಇದರಲ್ಲಿ ಸಂವಿಧಾನ ಸೋತರೆ ಈ ದೇಶದ ಸಮಸ್ತ ಶೋಷಿತ ಸಮುದಾಯಗಳ, ಮೇಲ್ಜಾತಿ ಮಹಿಳೆಯರೂ ಒಳಗೊಂಡಂತೆ ಎಲ್ಲಾ ಮಹಿಳೆಯರ ಸೋಲಾಗುತ್ತದೆ. ಸ್ವಾತಂತ್ರ್ಯ, ಸಮಾನತೆಯ ಸೋಲಾಗುತ್ತದೆ. ಸಂವಿಧಾನವನ್ನು ಉಳಿಸಿ-ಪೋಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...