Homeಕರ್ನಾಟಕಈ ದೇಶದ ಸಂವಿಧಾನವನ್ನೆ ಒಪ್ಪದ ಮನುವ್ಯಾಧಿಗಳಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

ಈ ದೇಶದ ಸಂವಿಧಾನವನ್ನೆ ಒಪ್ಪದ ಮನುವ್ಯಾಧಿಗಳಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

- Advertisement -
| ಗೌರಿ | ಬೆಂಗಳೂರು.
ನಮ್ಮ ಸಮಾಜದ 90% ಜನವರ್ಗಗಳ ಬೆಳಕಾಗಿ ಸಂವಿಧಾನ ರಚನೆಗೊಂಡಿದೆ. ಈ ಸಂವಿಧಾನ ಜಾರಿಗೊಂಡ ದಿನದಿಂದಲೂ ಸಂಘಪರಿವಾರದ ‘ಬ್ರಾಹ್ಮಣ್ಯ’ವಾದಿಗಳು ಒಂದಲ್ಲಾ ಒಂದು ರೀತಿಯಲ್ಲಿ ಅಪಸ್ವರವನ್ನು ಎತ್ತುತ್ತಾ ಬರುತ್ತಿದ್ದಾರೆ. ಈಗ ಬ್ರಾಹ್ಮಣ್ಯವಾದಿಗಳು ಅಧಿಕಾರದ ಚುಕ್ಕಾಣಿ ಹಿಡಿದಿರುವುದರಿಂದ ಸಂವಿಧಾನವನ್ನು ಸುಡುವ ಮಾತುಗಳನ್ನು ಬಹಿರಂಗವಾಗಿಯೇ ಆಡಲಾಗುತ್ತಿದೆಯಲ್ಲದೇ, ಬದಲಾವಣೆ ಮಾಡಿಯೇ ತೀರುತ್ತೇವೆ ಎಂದು ಹೇಳುತ್ತಿದ್ದಾರೆ. ಆಡಳಿತದಲ್ಲೂ ಸಂವಿಧಾನದ ಆಶಯಗಳಿಗೆ ಧಕ್ಕೆ ತರಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್‍ರವರ ಪ್ರಜಾತಾಂತ್ರಿಕ ಚಿಂತನೆಗೆ ಮಸಿ ಬಳಿಯುವ, ಬುಡಮೇಲು ಮಾಡುವ ಕೃತ್ಯಕ್ಕೇ ಕೈ ಹಾಕಲಾಗುತ್ತಿದೆ. ಇದಕ್ಕೆ ಬೇಕಾದ ಚಿಂತನಾ ತಳಹದಿಯನ್ನು ರೂಪಿಸುವ ಕೆಲಸವನ್ನು ಭೈರಪ್ಪರಂಥವರು ಮಾಡುತ್ತಿದ್ದಾರೆ.
ಇತ್ತೀಚೆಗೆ ಈ ತಲೆಕೆಟ್ಟ ಭೈರಪ್ಪ ತನ್ನ ನಾಲಿಗೆಯನ್ನು ಹರಿಬಿಟ್ಟು ‘ಮಹಿಳೆಯರಿಗೆ ಸ್ವಾತಂತ್ರ ಜಾಸ್ತಿಯಾಯಿತು, ಈ ಸಂವಿಧಾನದಿಂದಲೇ ಮಹಿಳೆಯರಿಗೆ ಈ ರೀತಿಯ ಅವಕಾಶಗಳು ಸಿಗುತ್ತಿವೆ, ಸಂವಿಧಾನ ಮನುವಿನ ಕಾಲದ ಪರಂಪರೆಯನ್ನು ಒಳಗೊಂಡಿಲ್ಲ’ವೆಂದು ತನ್ನ ಬ್ರಾಹ್ಮಣ್ಯ ಮನಸ್ಥಿತಿಯನ್ನು ಹೊರಹಾಕಿದ್ದಾನೆ. ಇವರ ದೃಷ್ಟಿಯಲ್ಲಿ ಹೆಣ್ಣೆಂದರೆ ಭೋಗದ ವಸ್ತು, ಗಂಡಸರ ಸೇವೆಗಾಗಿಯೇ ಇರುವ ಪ್ರಾಣಿಯ ಇನ್ನೊಂದು ರೂಪ, ಮಕ್ಕಳನ್ನು ಹೆರುವ ಯಂತ್ರ,  ಮನೆಗೆಲಸಕ್ಕೆಂದೇ ಇರುವ ಆಳುಗಳು ಬೇಕೆಂದಾಗ ಬಳಸಿ, ಬೇಡವೆಂದಾಗ ಬಿಸಾಡುವ ವಸ್ತು. ಮನೆಯ ಹೊಸ್ತಿಲ ಗೆರೆ ದಾಟಬಾರದ, ಓದಿನಲ್ಲಿ, ಉನ್ನತ ಹುದ್ದೆಯನ್ನು ಪಡೆಯಲು ಅನರ್ಹಳು. ಇದನ್ನೇ ಮನುಧರ್ಮಶಾಸ್ತ್ರ ಹೇಳುತ್ತದೆ. ಇದು ಅವರ ದೃಷ್ಟಿಯಲ್ಲಿ ಹಿಂದೂ ಪರಂಪರೆ, ಸಂಸ್ಕೃತಿ.
ಈ ದೇಶದ ಜಾತಿಯಾಧಾರಿತ ಶೋಷಿತ ಸಮುದಾಯಗಳೂ ಸಹ ಹಿಂದೂ ಧರ್ಮದ ಪ್ರಕಾರ ಪ್ರಾಣಿಗಳಿಗಿಂತ ಕಡೆ. ಬೈರಪ್ಪನವರ ಪರಂಪರೆಯಲ್ಲಿ ಜಾತಿಯೇ ಶ್ರೇಷ್ಠ, ಮಾನವೀಯತೆಯಲ್ಲ. ಮೇಲ್ಜಾತಿಗಳಿಗೆ ಕೆಳ ಜಾತಿಗಳು ಅಧೀನವಾಗಿರಬೇಕು. ಒಬ್ಬ ಮನುಷ್ಯ ಇನ್ನೊಬ್ಬ ಮನುಷ್ಯನನ್ನು ಮನುಷ್ಯನ ರೀತಿ ನೋಡದೇ ಇರುವುದೇ ಅವರ ಹಿಂದೂ ಧರ್ಮ. ಇಂಥಹ ಧರ್ಮವು ಅವರಿಗೆ ಶ್ರೇಷ್ಠ ಹೇಗಾಗುತ್ತದೆಂದು ಸಂವಿಧಾನ ಪ್ರಶ್ನೆ ಮಾಡುತ್ತದೆ, ಮಹಿಳೆಯು ಪುರುಷನಷ್ಟೇ ಸಮಾನಳು ಎಂದು ಪ್ರತಿಪಾದಿಸುತ್ತದೆ, ಸಂವಿಧಾನ ಈ ದೇಶದ ಎಲ್ಲಾ ಜಾತಿಯವರಿಗೂ ಸಮಾನತೆಯನ್ನು ಹೇಳುವುದಲ್ಲದೆ, ಪರಸ್ಪರ ಗೌರವದಿಂದ ಬದುಕಬೇಕೆಂದು ಪ್ರತಿಪಾದಿಸುತ್ತದೆ. ಹಿಂದೂ ಧರ್ಮ, ಮನುಧರ್ಮಶಾಸ್ತ್ರದ ಕಲ್ಮಶವನ್ನು  ತಲೆಯಲ್ಲಿಟ್ಟುಕೊಂಡಿರುವವರಿಗೆ ಈ ಮಾನವೀಯ ನೆಲೆಯ ಸಂವಿಧಾನವನ್ನು ಒಪ್ಪಲು ಸಾದ್ಯವಿಲ್ಲ. ದೇಶ ಧರ್ಮದ ಆಧಾರದಲ್ಲಿ ನಡೆಯಬಾರದೆಂದು ಪ್ರತಿಪಾದಿಸಿದ್ದ ಅಂಬೇಡ್ಕರ್ ಇದನ್ನು ಅರ್ಥ ಮಾಡಿಕೊಂಡು ಸಂವಿಧಾನದಲ್ಲಿ  ಕಡಿವಾಣ ಹಾಕುವ ಪ್ರಯತ್ನ ಮಾಡಿದ್ದಾರೆ. ಹಾಗಾಗಿಯೇ ಈ ಸಂವಿಧಾನವನ್ನು ಅವರು ಒಪ್ಪಲು ಸಾಧ್ಯವಿಲ್ಲ.
ಈ ಸಂವಿಧಾನ ರಚನೆಯೇ ಮನುವಾದಿಗಳಿಗೆ ಮೊದಲ ಸೋಲಾಗಿದೆ. ಸಂವಿಧಾನ ರಚನೆಗೆ ಮುಂಚೆಯೇ ಅದರ ವಿರುದ್ದ ಅಪಸ್ವರ ಎತ್ತಿದ್ದಲ್ಲದೆ, ದೇಶದ 79 ಕಡೆ ಪ್ರತಿಭಟನೆಯನ್ನು ಸಹ ಮಾಡಿದ್ದರು. ಹಿಂದೆ ಬುದ್ದ, ಬಸವಣ್ಣನ ಕಾಲದಲ್ಲಿ ಸೋಲುಂಡವರು, ಪುನಃ ಸಂವಿಧಾನದ ಮೂಲಕ ನಿಯಂತ್ರಣದಲ್ಲಿದ್ದಾರೆ. ಒಂದು ವೇಳೆ ಇದರಲ್ಲಿ ಸಂವಿಧಾನ ಸೋತರೆ ಈ ದೇಶದ ಸಮಸ್ತ ಶೋಷಿತ ಸಮುದಾಯಗಳ, ಮೇಲ್ಜಾತಿ ಮಹಿಳೆಯರೂ ಒಳಗೊಂಡಂತೆ ಎಲ್ಲಾ ಮಹಿಳೆಯರ ಸೋಲಾಗುತ್ತದೆ. ಸ್ವಾತಂತ್ರ್ಯ, ಸಮಾನತೆಯ ಸೋಲಾಗುತ್ತದೆ. ಸಂವಿಧಾನವನ್ನು ಉಳಿಸಿ-ಪೋಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...